Homeಕರ್ನಾಟಕಬಿಬಿಎಂಪಿಯ ನಿರ್ಲಕ್ಷ್ಯ ಮತ್ತು ಕಳ್ಳಾಟದಿಂದ ಬೆಂಗಳೂರಿನಲ್ಲಿ ಡೆಂಘೀ ಕಾಯಿಲೆ ಹೆಚ್ಚಾಗುತ್ತಿದೆ: ಮೋಹನ್ ದಾಸರಿ

ಬಿಬಿಎಂಪಿಯ ನಿರ್ಲಕ್ಷ್ಯ ಮತ್ತು ಕಳ್ಳಾಟದಿಂದ ಬೆಂಗಳೂರಿನಲ್ಲಿ ಡೆಂಘೀ ಕಾಯಿಲೆ ಹೆಚ್ಚಾಗುತ್ತಿದೆ: ಮೋಹನ್ ದಾಸರಿ

- Advertisement -
- Advertisement -

ಬಿಬಿಎಂಪಿಯ ಕಳ್ಳಾಟ ಮತ್ತು ಕಳಪೆ ಕಾಮಗಾರಿಗಳಿಂದಾಗಿ ರಸ್ತೆಗಳು ಮಳೆನೀರಿನಲ್ಲಿ ತೋಯ್ದು ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಹೆಚ್ಚು ವಾಹನ ದಟ್ಟಣೆ ಇರುವ ನಗರದಲ್ಲಿ ಅಫಘಾತಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿವೆ. ಸಾರ್ವಜನಿಕರು ಅಪಘಾತದ ಭೀತಿಯಿಂದಲೇ ವಾಹನ ಚಲಾಯಿಸುವಂತಹ ಭಯದ ವಾತಾವರಣ ಬೆಂಗಳೂರಿನಲ್ಲಿ ಸೃಷ್ಟಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಜಿಲ್ಲಾಧ್ಯಕ್ಷರಾದ ಮೋಹನ್ ದಾಸರಿ ಆರೋಪಿಸಿದ್ದಾರೆ.

ಈ ಕುರಿತು ಇಂದು ಬೆಂಗಳೂನಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಸ್ತೆಗುಂಡಿಗಳಲ್ಲಿ ನಿಂತ ನೀರು ಕೊಳಚೆಯಾಗಿ, ಕಸವು ರಸ್ತೆ ಬದಿಯೇ ಕೊಳೆತು ಸಾಂಕ್ರಮಿಕ ರೋಗಗಳನ್ನು ಹರಡುವ ವೈರಾಣುಗಳ ಉತ್ಪಾದನಾ ತಾಣವಾಗಿದೆ. ಇದೆಲ್ಲರಿಂದಾಗಿ ಬೆಂಗಳೂರಿನಾದ್ಯಂತ ಡೆಂಘೀ ಜ್ವರ ತಾಂಡವವಾಡುತ್ತಿದ್ದು, ಬೆಂಗಳೂರಿನ 62 ವಾರ್ಡ್ ಗಳು ಡೆಂಘೀ ಪೀಡಿತ ವಾರ್ಡ್ ಗಳಪಟ್ಟಿಯಲ್ಲಿವೆ. 2019ರ ಜನವರಿಯಿಂದ ಇಲ್ಲಿಯವರೆಗೆ 5352 ಡೆಂಘೀ ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ದಾಖಲಾಗಿವೆ. ಒಂದು ಕೋಟಿಗೂ ಅಧಿಕ ಜನರಿರುವ ಬೆಂಗಳೂರಿನಲ್ಲಿ ಜನರ ಆರೋಗ್ಯಕ್ಕಾಗಿ 2018-19ನೇ ಸಾಲಿನಲ್ಲಿ 100 ಕೋಟಿ ರೂಗಳಿಗಿಂತ ಹೆಚ್ಚು ಅನುದಾನವನ್ನು ಮೀಸಲಿಟ್ಟಿದ್ದು ಕೇವಲ 31 ಕೋಟಿ ರೂಗಳನ್ನು ಖರ್ಚುಮಾಡಿದೆ. ಇದರಲ್ಲಿ ಸರಾಸರಿ 29 ರೂಗಳನ್ನಷ್ಟೇ ಒಬ್ಬ ವ್ಯಕ್ತಿಯ ಆರೋಗ್ಯಕ್ಕೆ ಖರ್ಚು ಮಾಡಿದೆ. ಇಂತಹ ನಿರ್ಲಕ್ಷ್ಯವನ್ನು ನೋಡಿದರೆ, ಬಿಬಿಎಂಪಿಯ ಕಾರ್ಪೋರೇಟರ್ ಗಳೇ ಅನಾರೋಗ್ಯಕ್ಕೆ ತುತ್ತಾಗಿ ಕೆಲಸ ಮಾಡಲಾಗದೆ ಸೊರಗಿಹೋಗಿದ್ದಾರೆಯೇ ಎಂದೆನಿಸುತ್ತದೆ ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಎಲ್ಲಿ ನೋಡಿದರೂ ಗುಂಡಿ ಬಿದ್ದ ರಸ್ತೆಗಳು, ಕಸದ ರಾಶಿಗಳಿಂದ ಬೆಂಗಳೂರು ತುಂಬಿಹೋಗಿದೆ. ಮಾರೇನಹಳ್ಳಿ, ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕ್ವಾರಿಗಳು ಭರ್ತಿಯಾಗಿದ್ದು, ಕಸವನ್ನು ವಿಲೇವಾರಿ ಮಾಡಲು ಪರ್ಯಾಯ ಜಾಗವಿಲ್ಲದೆ, ಕಸವನ್ನು ನಗರದ ಬೀದಿ ಬೀದಿಗಳಲ್ಲಿ ಗುಡ್ಡೆ ಹಾಕಲಾಗಿದ್ದು, ಬೀದಿಗಳೇ ಕಸ ವಿಲೇವಾರಿ ಘಟಕಗಳಂತಾಗಿವೆ. NGT (ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ)ಯು ಪ್ರತಿ ವಾರ್ಡ್ ನಲ್ಲಿಯೂ ಜೈವಿಕ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಬೇಕು ಎಂದು ಹೇಳಿತ್ತು. ಆದರೆ ಅದನ್ನು ಪ್ರಾಯೋಗಿಕವಾಗಿ ಜಾರಿ ಮಾಡಲು ಸಾಧ್ಯವಿಲ್ಲ, ಎಲ್ಲಾ ವಾರ್ಡ್ ಗಳಲ್ಲಿಯೂ ನಮ್ಮಲ್ಲಿ ಜಾಗವಿಲ್ಲ ಎಂದು ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬೇಜವಾಬ್ದಾರಿ ಹೇಳಿಕೆಯನ್ನು ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಕ್ಕೊತ್ತಾಯಗಳು
• ರಾಜ್ಯ ಸರ್ಕಾರ ತಡೆಹಿಡಿದಿರುವ ಬಿಬಿಎಂಪಿ ಬಜೆಟನ್ನು ತುರ್ತಾಗಿ ಅನುಷ್ಠಾನ ಮಾಡಬೇಕು.
• ಬೆಂಗಳೂರಿನ ಬಗ್ಗೆ ಕಾಳಜಿ ಇರುವ ನಗರಾಭಿವೃದ್ಧಿ ಸಚಿವರನ್ನು ಕೂಡಲೇ ನೇಮಕ ಮಾಡಿ, ಬೆಂಗಳೂರಿನ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯೋನ್ಮುಖರಾಗಬೇಕು.
• ಎಲ್ಲಾ ವಾರ್ಡ್ ಗಳಲ್ಲಿಯೂ ಜೈವಿಕ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿ ವೈಜ್ಞಾನಿಕವಾಗಿ ಕಸ ನಿರ್ವಹಣೆ ಮಾಡಬೇಕು.
• ಕಸ ವಿಲೇವಾರಿಯ ಟೆಂಡರ್ ಪ್ರಕ್ರಿಯೆಯನ್ನು ಇನ್ನೂ ಸಮಯವಿಳಂಬ ಮಾಡದೆ ಪ್ರಕ್ರಿಯೆ ಮುಗಿಸಬೇಕು.
• ಪ್ರತಿ ವಾರ್ಡ್ಗಳಿಗೂ ಅಗತ್ಯವಿರುವಷ್ಟು ಪೌರ ಕಾರ್ಮಿಕರನ್ನು ನೇಮಿಸಬೇಕು. ಅವರು ಸುರಕ್ಷಿತವಾಗಿ ಕೆಲಸ ಮಾಡಲು ಬೇಕಾಗಿರುವ ಸಾಮಗ್ರಿಗಳನ್ನು ಒದಗಿಸಬೇಕು.
• ಬೆಂಗಳೂರು ಜನರ ಆರೋಗ್ಯಕ್ಕೆ ಮೀಸಲಿಟ್ಟಿರುವ ಹಣವನ್ನು ಸಮರ್ಪಕವಾಗಿ ಬಳಸಿ, ಡೆಂಘೀ ನಿಯಂತ್ರಣಕ್ಕೆ ಮುಂದಾಗಬೇಕು.
• ರಸ್ತೆಗಳಲ್ಲಿರುವ ಗುಂಡಿಗಳನ್ನು ತುರ್ತಾಗಿ ಮುಚ್ಚಿಸಬೇಕು. ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರನ್ನು ಮುಂದಿನ ಟೆಂಡರ್ ಗಳಿಗೆ ನಿರ್ಭಂದಿಸಬೇಕು

ಇವಿಷ್ಟು ಹಕ್ಕೊತ್ತಾಯಗಳ ಈಡೇರಿಕೆಗೆ ಆಮ್ ಆದ್ಮಿ ಪಕ್ಷವು ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...