Homeಕರ್ನಾಟಕಬಿಬಿಎಂಪಿಯ ನಿರ್ಲಕ್ಷ್ಯ ಮತ್ತು ಕಳ್ಳಾಟದಿಂದ ಬೆಂಗಳೂರಿನಲ್ಲಿ ಡೆಂಘೀ ಕಾಯಿಲೆ ಹೆಚ್ಚಾಗುತ್ತಿದೆ: ಮೋಹನ್ ದಾಸರಿ

ಬಿಬಿಎಂಪಿಯ ನಿರ್ಲಕ್ಷ್ಯ ಮತ್ತು ಕಳ್ಳಾಟದಿಂದ ಬೆಂಗಳೂರಿನಲ್ಲಿ ಡೆಂಘೀ ಕಾಯಿಲೆ ಹೆಚ್ಚಾಗುತ್ತಿದೆ: ಮೋಹನ್ ದಾಸರಿ

- Advertisement -
- Advertisement -

ಬಿಬಿಎಂಪಿಯ ಕಳ್ಳಾಟ ಮತ್ತು ಕಳಪೆ ಕಾಮಗಾರಿಗಳಿಂದಾಗಿ ರಸ್ತೆಗಳು ಮಳೆನೀರಿನಲ್ಲಿ ತೋಯ್ದು ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಹೆಚ್ಚು ವಾಹನ ದಟ್ಟಣೆ ಇರುವ ನಗರದಲ್ಲಿ ಅಫಘಾತಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿವೆ. ಸಾರ್ವಜನಿಕರು ಅಪಘಾತದ ಭೀತಿಯಿಂದಲೇ ವಾಹನ ಚಲಾಯಿಸುವಂತಹ ಭಯದ ವಾತಾವರಣ ಬೆಂಗಳೂರಿನಲ್ಲಿ ಸೃಷ್ಟಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಜಿಲ್ಲಾಧ್ಯಕ್ಷರಾದ ಮೋಹನ್ ದಾಸರಿ ಆರೋಪಿಸಿದ್ದಾರೆ.

ಈ ಕುರಿತು ಇಂದು ಬೆಂಗಳೂನಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಸ್ತೆಗುಂಡಿಗಳಲ್ಲಿ ನಿಂತ ನೀರು ಕೊಳಚೆಯಾಗಿ, ಕಸವು ರಸ್ತೆ ಬದಿಯೇ ಕೊಳೆತು ಸಾಂಕ್ರಮಿಕ ರೋಗಗಳನ್ನು ಹರಡುವ ವೈರಾಣುಗಳ ಉತ್ಪಾದನಾ ತಾಣವಾಗಿದೆ. ಇದೆಲ್ಲರಿಂದಾಗಿ ಬೆಂಗಳೂರಿನಾದ್ಯಂತ ಡೆಂಘೀ ಜ್ವರ ತಾಂಡವವಾಡುತ್ತಿದ್ದು, ಬೆಂಗಳೂರಿನ 62 ವಾರ್ಡ್ ಗಳು ಡೆಂಘೀ ಪೀಡಿತ ವಾರ್ಡ್ ಗಳಪಟ್ಟಿಯಲ್ಲಿವೆ. 2019ರ ಜನವರಿಯಿಂದ ಇಲ್ಲಿಯವರೆಗೆ 5352 ಡೆಂಘೀ ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ದಾಖಲಾಗಿವೆ. ಒಂದು ಕೋಟಿಗೂ ಅಧಿಕ ಜನರಿರುವ ಬೆಂಗಳೂರಿನಲ್ಲಿ ಜನರ ಆರೋಗ್ಯಕ್ಕಾಗಿ 2018-19ನೇ ಸಾಲಿನಲ್ಲಿ 100 ಕೋಟಿ ರೂಗಳಿಗಿಂತ ಹೆಚ್ಚು ಅನುದಾನವನ್ನು ಮೀಸಲಿಟ್ಟಿದ್ದು ಕೇವಲ 31 ಕೋಟಿ ರೂಗಳನ್ನು ಖರ್ಚುಮಾಡಿದೆ. ಇದರಲ್ಲಿ ಸರಾಸರಿ 29 ರೂಗಳನ್ನಷ್ಟೇ ಒಬ್ಬ ವ್ಯಕ್ತಿಯ ಆರೋಗ್ಯಕ್ಕೆ ಖರ್ಚು ಮಾಡಿದೆ. ಇಂತಹ ನಿರ್ಲಕ್ಷ್ಯವನ್ನು ನೋಡಿದರೆ, ಬಿಬಿಎಂಪಿಯ ಕಾರ್ಪೋರೇಟರ್ ಗಳೇ ಅನಾರೋಗ್ಯಕ್ಕೆ ತುತ್ತಾಗಿ ಕೆಲಸ ಮಾಡಲಾಗದೆ ಸೊರಗಿಹೋಗಿದ್ದಾರೆಯೇ ಎಂದೆನಿಸುತ್ತದೆ ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಎಲ್ಲಿ ನೋಡಿದರೂ ಗುಂಡಿ ಬಿದ್ದ ರಸ್ತೆಗಳು, ಕಸದ ರಾಶಿಗಳಿಂದ ಬೆಂಗಳೂರು ತುಂಬಿಹೋಗಿದೆ. ಮಾರೇನಹಳ್ಳಿ, ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕ್ವಾರಿಗಳು ಭರ್ತಿಯಾಗಿದ್ದು, ಕಸವನ್ನು ವಿಲೇವಾರಿ ಮಾಡಲು ಪರ್ಯಾಯ ಜಾಗವಿಲ್ಲದೆ, ಕಸವನ್ನು ನಗರದ ಬೀದಿ ಬೀದಿಗಳಲ್ಲಿ ಗುಡ್ಡೆ ಹಾಕಲಾಗಿದ್ದು, ಬೀದಿಗಳೇ ಕಸ ವಿಲೇವಾರಿ ಘಟಕಗಳಂತಾಗಿವೆ. NGT (ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ)ಯು ಪ್ರತಿ ವಾರ್ಡ್ ನಲ್ಲಿಯೂ ಜೈವಿಕ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಬೇಕು ಎಂದು ಹೇಳಿತ್ತು. ಆದರೆ ಅದನ್ನು ಪ್ರಾಯೋಗಿಕವಾಗಿ ಜಾರಿ ಮಾಡಲು ಸಾಧ್ಯವಿಲ್ಲ, ಎಲ್ಲಾ ವಾರ್ಡ್ ಗಳಲ್ಲಿಯೂ ನಮ್ಮಲ್ಲಿ ಜಾಗವಿಲ್ಲ ಎಂದು ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬೇಜವಾಬ್ದಾರಿ ಹೇಳಿಕೆಯನ್ನು ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಕ್ಕೊತ್ತಾಯಗಳು
• ರಾಜ್ಯ ಸರ್ಕಾರ ತಡೆಹಿಡಿದಿರುವ ಬಿಬಿಎಂಪಿ ಬಜೆಟನ್ನು ತುರ್ತಾಗಿ ಅನುಷ್ಠಾನ ಮಾಡಬೇಕು.
• ಬೆಂಗಳೂರಿನ ಬಗ್ಗೆ ಕಾಳಜಿ ಇರುವ ನಗರಾಭಿವೃದ್ಧಿ ಸಚಿವರನ್ನು ಕೂಡಲೇ ನೇಮಕ ಮಾಡಿ, ಬೆಂಗಳೂರಿನ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯೋನ್ಮುಖರಾಗಬೇಕು.
• ಎಲ್ಲಾ ವಾರ್ಡ್ ಗಳಲ್ಲಿಯೂ ಜೈವಿಕ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿ ವೈಜ್ಞಾನಿಕವಾಗಿ ಕಸ ನಿರ್ವಹಣೆ ಮಾಡಬೇಕು.
• ಕಸ ವಿಲೇವಾರಿಯ ಟೆಂಡರ್ ಪ್ರಕ್ರಿಯೆಯನ್ನು ಇನ್ನೂ ಸಮಯವಿಳಂಬ ಮಾಡದೆ ಪ್ರಕ್ರಿಯೆ ಮುಗಿಸಬೇಕು.
• ಪ್ರತಿ ವಾರ್ಡ್ಗಳಿಗೂ ಅಗತ್ಯವಿರುವಷ್ಟು ಪೌರ ಕಾರ್ಮಿಕರನ್ನು ನೇಮಿಸಬೇಕು. ಅವರು ಸುರಕ್ಷಿತವಾಗಿ ಕೆಲಸ ಮಾಡಲು ಬೇಕಾಗಿರುವ ಸಾಮಗ್ರಿಗಳನ್ನು ಒದಗಿಸಬೇಕು.
• ಬೆಂಗಳೂರು ಜನರ ಆರೋಗ್ಯಕ್ಕೆ ಮೀಸಲಿಟ್ಟಿರುವ ಹಣವನ್ನು ಸಮರ್ಪಕವಾಗಿ ಬಳಸಿ, ಡೆಂಘೀ ನಿಯಂತ್ರಣಕ್ಕೆ ಮುಂದಾಗಬೇಕು.
• ರಸ್ತೆಗಳಲ್ಲಿರುವ ಗುಂಡಿಗಳನ್ನು ತುರ್ತಾಗಿ ಮುಚ್ಚಿಸಬೇಕು. ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರನ್ನು ಮುಂದಿನ ಟೆಂಡರ್ ಗಳಿಗೆ ನಿರ್ಭಂದಿಸಬೇಕು

ಇವಿಷ್ಟು ಹಕ್ಕೊತ್ತಾಯಗಳ ಈಡೇರಿಕೆಗೆ ಆಮ್ ಆದ್ಮಿ ಪಕ್ಷವು ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...