Homeಕರ್ನಾಟಕಬಿಬಿಎಂಪಿಯ ನಿರ್ಲಕ್ಷ್ಯ ಮತ್ತು ಕಳ್ಳಾಟದಿಂದ ಬೆಂಗಳೂರಿನಲ್ಲಿ ಡೆಂಘೀ ಕಾಯಿಲೆ ಹೆಚ್ಚಾಗುತ್ತಿದೆ: ಮೋಹನ್ ದಾಸರಿ

ಬಿಬಿಎಂಪಿಯ ನಿರ್ಲಕ್ಷ್ಯ ಮತ್ತು ಕಳ್ಳಾಟದಿಂದ ಬೆಂಗಳೂರಿನಲ್ಲಿ ಡೆಂಘೀ ಕಾಯಿಲೆ ಹೆಚ್ಚಾಗುತ್ತಿದೆ: ಮೋಹನ್ ದಾಸರಿ

- Advertisement -
- Advertisement -

ಬಿಬಿಎಂಪಿಯ ಕಳ್ಳಾಟ ಮತ್ತು ಕಳಪೆ ಕಾಮಗಾರಿಗಳಿಂದಾಗಿ ರಸ್ತೆಗಳು ಮಳೆನೀರಿನಲ್ಲಿ ತೋಯ್ದು ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಹೆಚ್ಚು ವಾಹನ ದಟ್ಟಣೆ ಇರುವ ನಗರದಲ್ಲಿ ಅಫಘಾತಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿವೆ. ಸಾರ್ವಜನಿಕರು ಅಪಘಾತದ ಭೀತಿಯಿಂದಲೇ ವಾಹನ ಚಲಾಯಿಸುವಂತಹ ಭಯದ ವಾತಾವರಣ ಬೆಂಗಳೂರಿನಲ್ಲಿ ಸೃಷ್ಟಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಜಿಲ್ಲಾಧ್ಯಕ್ಷರಾದ ಮೋಹನ್ ದಾಸರಿ ಆರೋಪಿಸಿದ್ದಾರೆ.

ಈ ಕುರಿತು ಇಂದು ಬೆಂಗಳೂನಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಸ್ತೆಗುಂಡಿಗಳಲ್ಲಿ ನಿಂತ ನೀರು ಕೊಳಚೆಯಾಗಿ, ಕಸವು ರಸ್ತೆ ಬದಿಯೇ ಕೊಳೆತು ಸಾಂಕ್ರಮಿಕ ರೋಗಗಳನ್ನು ಹರಡುವ ವೈರಾಣುಗಳ ಉತ್ಪಾದನಾ ತಾಣವಾಗಿದೆ. ಇದೆಲ್ಲರಿಂದಾಗಿ ಬೆಂಗಳೂರಿನಾದ್ಯಂತ ಡೆಂಘೀ ಜ್ವರ ತಾಂಡವವಾಡುತ್ತಿದ್ದು, ಬೆಂಗಳೂರಿನ 62 ವಾರ್ಡ್ ಗಳು ಡೆಂಘೀ ಪೀಡಿತ ವಾರ್ಡ್ ಗಳಪಟ್ಟಿಯಲ್ಲಿವೆ. 2019ರ ಜನವರಿಯಿಂದ ಇಲ್ಲಿಯವರೆಗೆ 5352 ಡೆಂಘೀ ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ದಾಖಲಾಗಿವೆ. ಒಂದು ಕೋಟಿಗೂ ಅಧಿಕ ಜನರಿರುವ ಬೆಂಗಳೂರಿನಲ್ಲಿ ಜನರ ಆರೋಗ್ಯಕ್ಕಾಗಿ 2018-19ನೇ ಸಾಲಿನಲ್ಲಿ 100 ಕೋಟಿ ರೂಗಳಿಗಿಂತ ಹೆಚ್ಚು ಅನುದಾನವನ್ನು ಮೀಸಲಿಟ್ಟಿದ್ದು ಕೇವಲ 31 ಕೋಟಿ ರೂಗಳನ್ನು ಖರ್ಚುಮಾಡಿದೆ. ಇದರಲ್ಲಿ ಸರಾಸರಿ 29 ರೂಗಳನ್ನಷ್ಟೇ ಒಬ್ಬ ವ್ಯಕ್ತಿಯ ಆರೋಗ್ಯಕ್ಕೆ ಖರ್ಚು ಮಾಡಿದೆ. ಇಂತಹ ನಿರ್ಲಕ್ಷ್ಯವನ್ನು ನೋಡಿದರೆ, ಬಿಬಿಎಂಪಿಯ ಕಾರ್ಪೋರೇಟರ್ ಗಳೇ ಅನಾರೋಗ್ಯಕ್ಕೆ ತುತ್ತಾಗಿ ಕೆಲಸ ಮಾಡಲಾಗದೆ ಸೊರಗಿಹೋಗಿದ್ದಾರೆಯೇ ಎಂದೆನಿಸುತ್ತದೆ ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಎಲ್ಲಿ ನೋಡಿದರೂ ಗುಂಡಿ ಬಿದ್ದ ರಸ್ತೆಗಳು, ಕಸದ ರಾಶಿಗಳಿಂದ ಬೆಂಗಳೂರು ತುಂಬಿಹೋಗಿದೆ. ಮಾರೇನಹಳ್ಳಿ, ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕ್ವಾರಿಗಳು ಭರ್ತಿಯಾಗಿದ್ದು, ಕಸವನ್ನು ವಿಲೇವಾರಿ ಮಾಡಲು ಪರ್ಯಾಯ ಜಾಗವಿಲ್ಲದೆ, ಕಸವನ್ನು ನಗರದ ಬೀದಿ ಬೀದಿಗಳಲ್ಲಿ ಗುಡ್ಡೆ ಹಾಕಲಾಗಿದ್ದು, ಬೀದಿಗಳೇ ಕಸ ವಿಲೇವಾರಿ ಘಟಕಗಳಂತಾಗಿವೆ. NGT (ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ)ಯು ಪ್ರತಿ ವಾರ್ಡ್ ನಲ್ಲಿಯೂ ಜೈವಿಕ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಬೇಕು ಎಂದು ಹೇಳಿತ್ತು. ಆದರೆ ಅದನ್ನು ಪ್ರಾಯೋಗಿಕವಾಗಿ ಜಾರಿ ಮಾಡಲು ಸಾಧ್ಯವಿಲ್ಲ, ಎಲ್ಲಾ ವಾರ್ಡ್ ಗಳಲ್ಲಿಯೂ ನಮ್ಮಲ್ಲಿ ಜಾಗವಿಲ್ಲ ಎಂದು ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬೇಜವಾಬ್ದಾರಿ ಹೇಳಿಕೆಯನ್ನು ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಕ್ಕೊತ್ತಾಯಗಳು
• ರಾಜ್ಯ ಸರ್ಕಾರ ತಡೆಹಿಡಿದಿರುವ ಬಿಬಿಎಂಪಿ ಬಜೆಟನ್ನು ತುರ್ತಾಗಿ ಅನುಷ್ಠಾನ ಮಾಡಬೇಕು.
• ಬೆಂಗಳೂರಿನ ಬಗ್ಗೆ ಕಾಳಜಿ ಇರುವ ನಗರಾಭಿವೃದ್ಧಿ ಸಚಿವರನ್ನು ಕೂಡಲೇ ನೇಮಕ ಮಾಡಿ, ಬೆಂಗಳೂರಿನ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯೋನ್ಮುಖರಾಗಬೇಕು.
• ಎಲ್ಲಾ ವಾರ್ಡ್ ಗಳಲ್ಲಿಯೂ ಜೈವಿಕ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿ ವೈಜ್ಞಾನಿಕವಾಗಿ ಕಸ ನಿರ್ವಹಣೆ ಮಾಡಬೇಕು.
• ಕಸ ವಿಲೇವಾರಿಯ ಟೆಂಡರ್ ಪ್ರಕ್ರಿಯೆಯನ್ನು ಇನ್ನೂ ಸಮಯವಿಳಂಬ ಮಾಡದೆ ಪ್ರಕ್ರಿಯೆ ಮುಗಿಸಬೇಕು.
• ಪ್ರತಿ ವಾರ್ಡ್ಗಳಿಗೂ ಅಗತ್ಯವಿರುವಷ್ಟು ಪೌರ ಕಾರ್ಮಿಕರನ್ನು ನೇಮಿಸಬೇಕು. ಅವರು ಸುರಕ್ಷಿತವಾಗಿ ಕೆಲಸ ಮಾಡಲು ಬೇಕಾಗಿರುವ ಸಾಮಗ್ರಿಗಳನ್ನು ಒದಗಿಸಬೇಕು.
• ಬೆಂಗಳೂರು ಜನರ ಆರೋಗ್ಯಕ್ಕೆ ಮೀಸಲಿಟ್ಟಿರುವ ಹಣವನ್ನು ಸಮರ್ಪಕವಾಗಿ ಬಳಸಿ, ಡೆಂಘೀ ನಿಯಂತ್ರಣಕ್ಕೆ ಮುಂದಾಗಬೇಕು.
• ರಸ್ತೆಗಳಲ್ಲಿರುವ ಗುಂಡಿಗಳನ್ನು ತುರ್ತಾಗಿ ಮುಚ್ಚಿಸಬೇಕು. ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರನ್ನು ಮುಂದಿನ ಟೆಂಡರ್ ಗಳಿಗೆ ನಿರ್ಭಂದಿಸಬೇಕು

ಇವಿಷ್ಟು ಹಕ್ಕೊತ್ತಾಯಗಳ ಈಡೇರಿಕೆಗೆ ಆಮ್ ಆದ್ಮಿ ಪಕ್ಷವು ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...