Homeಕರ್ನಾಟಕಬಿಬಿಎಂಪಿಯ ನಿರ್ಲಕ್ಷ್ಯ ಮತ್ತು ಕಳ್ಳಾಟದಿಂದ ಬೆಂಗಳೂರಿನಲ್ಲಿ ಡೆಂಘೀ ಕಾಯಿಲೆ ಹೆಚ್ಚಾಗುತ್ತಿದೆ: ಮೋಹನ್ ದಾಸರಿ

ಬಿಬಿಎಂಪಿಯ ನಿರ್ಲಕ್ಷ್ಯ ಮತ್ತು ಕಳ್ಳಾಟದಿಂದ ಬೆಂಗಳೂರಿನಲ್ಲಿ ಡೆಂಘೀ ಕಾಯಿಲೆ ಹೆಚ್ಚಾಗುತ್ತಿದೆ: ಮೋಹನ್ ದಾಸರಿ

- Advertisement -
- Advertisement -

ಬಿಬಿಎಂಪಿಯ ಕಳ್ಳಾಟ ಮತ್ತು ಕಳಪೆ ಕಾಮಗಾರಿಗಳಿಂದಾಗಿ ರಸ್ತೆಗಳು ಮಳೆನೀರಿನಲ್ಲಿ ತೋಯ್ದು ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಹೆಚ್ಚು ವಾಹನ ದಟ್ಟಣೆ ಇರುವ ನಗರದಲ್ಲಿ ಅಫಘಾತಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿವೆ. ಸಾರ್ವಜನಿಕರು ಅಪಘಾತದ ಭೀತಿಯಿಂದಲೇ ವಾಹನ ಚಲಾಯಿಸುವಂತಹ ಭಯದ ವಾತಾವರಣ ಬೆಂಗಳೂರಿನಲ್ಲಿ ಸೃಷ್ಟಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಜಿಲ್ಲಾಧ್ಯಕ್ಷರಾದ ಮೋಹನ್ ದಾಸರಿ ಆರೋಪಿಸಿದ್ದಾರೆ.

ಈ ಕುರಿತು ಇಂದು ಬೆಂಗಳೂನಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಸ್ತೆಗುಂಡಿಗಳಲ್ಲಿ ನಿಂತ ನೀರು ಕೊಳಚೆಯಾಗಿ, ಕಸವು ರಸ್ತೆ ಬದಿಯೇ ಕೊಳೆತು ಸಾಂಕ್ರಮಿಕ ರೋಗಗಳನ್ನು ಹರಡುವ ವೈರಾಣುಗಳ ಉತ್ಪಾದನಾ ತಾಣವಾಗಿದೆ. ಇದೆಲ್ಲರಿಂದಾಗಿ ಬೆಂಗಳೂರಿನಾದ್ಯಂತ ಡೆಂಘೀ ಜ್ವರ ತಾಂಡವವಾಡುತ್ತಿದ್ದು, ಬೆಂಗಳೂರಿನ 62 ವಾರ್ಡ್ ಗಳು ಡೆಂಘೀ ಪೀಡಿತ ವಾರ್ಡ್ ಗಳಪಟ್ಟಿಯಲ್ಲಿವೆ. 2019ರ ಜನವರಿಯಿಂದ ಇಲ್ಲಿಯವರೆಗೆ 5352 ಡೆಂಘೀ ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ದಾಖಲಾಗಿವೆ. ಒಂದು ಕೋಟಿಗೂ ಅಧಿಕ ಜನರಿರುವ ಬೆಂಗಳೂರಿನಲ್ಲಿ ಜನರ ಆರೋಗ್ಯಕ್ಕಾಗಿ 2018-19ನೇ ಸಾಲಿನಲ್ಲಿ 100 ಕೋಟಿ ರೂಗಳಿಗಿಂತ ಹೆಚ್ಚು ಅನುದಾನವನ್ನು ಮೀಸಲಿಟ್ಟಿದ್ದು ಕೇವಲ 31 ಕೋಟಿ ರೂಗಳನ್ನು ಖರ್ಚುಮಾಡಿದೆ. ಇದರಲ್ಲಿ ಸರಾಸರಿ 29 ರೂಗಳನ್ನಷ್ಟೇ ಒಬ್ಬ ವ್ಯಕ್ತಿಯ ಆರೋಗ್ಯಕ್ಕೆ ಖರ್ಚು ಮಾಡಿದೆ. ಇಂತಹ ನಿರ್ಲಕ್ಷ್ಯವನ್ನು ನೋಡಿದರೆ, ಬಿಬಿಎಂಪಿಯ ಕಾರ್ಪೋರೇಟರ್ ಗಳೇ ಅನಾರೋಗ್ಯಕ್ಕೆ ತುತ್ತಾಗಿ ಕೆಲಸ ಮಾಡಲಾಗದೆ ಸೊರಗಿಹೋಗಿದ್ದಾರೆಯೇ ಎಂದೆನಿಸುತ್ತದೆ ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಎಲ್ಲಿ ನೋಡಿದರೂ ಗುಂಡಿ ಬಿದ್ದ ರಸ್ತೆಗಳು, ಕಸದ ರಾಶಿಗಳಿಂದ ಬೆಂಗಳೂರು ತುಂಬಿಹೋಗಿದೆ. ಮಾರೇನಹಳ್ಳಿ, ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕ್ವಾರಿಗಳು ಭರ್ತಿಯಾಗಿದ್ದು, ಕಸವನ್ನು ವಿಲೇವಾರಿ ಮಾಡಲು ಪರ್ಯಾಯ ಜಾಗವಿಲ್ಲದೆ, ಕಸವನ್ನು ನಗರದ ಬೀದಿ ಬೀದಿಗಳಲ್ಲಿ ಗುಡ್ಡೆ ಹಾಕಲಾಗಿದ್ದು, ಬೀದಿಗಳೇ ಕಸ ವಿಲೇವಾರಿ ಘಟಕಗಳಂತಾಗಿವೆ. NGT (ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ)ಯು ಪ್ರತಿ ವಾರ್ಡ್ ನಲ್ಲಿಯೂ ಜೈವಿಕ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಬೇಕು ಎಂದು ಹೇಳಿತ್ತು. ಆದರೆ ಅದನ್ನು ಪ್ರಾಯೋಗಿಕವಾಗಿ ಜಾರಿ ಮಾಡಲು ಸಾಧ್ಯವಿಲ್ಲ, ಎಲ್ಲಾ ವಾರ್ಡ್ ಗಳಲ್ಲಿಯೂ ನಮ್ಮಲ್ಲಿ ಜಾಗವಿಲ್ಲ ಎಂದು ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬೇಜವಾಬ್ದಾರಿ ಹೇಳಿಕೆಯನ್ನು ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಕ್ಕೊತ್ತಾಯಗಳು
• ರಾಜ್ಯ ಸರ್ಕಾರ ತಡೆಹಿಡಿದಿರುವ ಬಿಬಿಎಂಪಿ ಬಜೆಟನ್ನು ತುರ್ತಾಗಿ ಅನುಷ್ಠಾನ ಮಾಡಬೇಕು.
• ಬೆಂಗಳೂರಿನ ಬಗ್ಗೆ ಕಾಳಜಿ ಇರುವ ನಗರಾಭಿವೃದ್ಧಿ ಸಚಿವರನ್ನು ಕೂಡಲೇ ನೇಮಕ ಮಾಡಿ, ಬೆಂಗಳೂರಿನ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯೋನ್ಮುಖರಾಗಬೇಕು.
• ಎಲ್ಲಾ ವಾರ್ಡ್ ಗಳಲ್ಲಿಯೂ ಜೈವಿಕ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿ ವೈಜ್ಞಾನಿಕವಾಗಿ ಕಸ ನಿರ್ವಹಣೆ ಮಾಡಬೇಕು.
• ಕಸ ವಿಲೇವಾರಿಯ ಟೆಂಡರ್ ಪ್ರಕ್ರಿಯೆಯನ್ನು ಇನ್ನೂ ಸಮಯವಿಳಂಬ ಮಾಡದೆ ಪ್ರಕ್ರಿಯೆ ಮುಗಿಸಬೇಕು.
• ಪ್ರತಿ ವಾರ್ಡ್ಗಳಿಗೂ ಅಗತ್ಯವಿರುವಷ್ಟು ಪೌರ ಕಾರ್ಮಿಕರನ್ನು ನೇಮಿಸಬೇಕು. ಅವರು ಸುರಕ್ಷಿತವಾಗಿ ಕೆಲಸ ಮಾಡಲು ಬೇಕಾಗಿರುವ ಸಾಮಗ್ರಿಗಳನ್ನು ಒದಗಿಸಬೇಕು.
• ಬೆಂಗಳೂರು ಜನರ ಆರೋಗ್ಯಕ್ಕೆ ಮೀಸಲಿಟ್ಟಿರುವ ಹಣವನ್ನು ಸಮರ್ಪಕವಾಗಿ ಬಳಸಿ, ಡೆಂಘೀ ನಿಯಂತ್ರಣಕ್ಕೆ ಮುಂದಾಗಬೇಕು.
• ರಸ್ತೆಗಳಲ್ಲಿರುವ ಗುಂಡಿಗಳನ್ನು ತುರ್ತಾಗಿ ಮುಚ್ಚಿಸಬೇಕು. ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರನ್ನು ಮುಂದಿನ ಟೆಂಡರ್ ಗಳಿಗೆ ನಿರ್ಭಂದಿಸಬೇಕು

ಇವಿಷ್ಟು ಹಕ್ಕೊತ್ತಾಯಗಳ ಈಡೇರಿಕೆಗೆ ಆಮ್ ಆದ್ಮಿ ಪಕ್ಷವು ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು| ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...