Homeಕರ್ನಾಟಕಬಿಬಿಎಂಪಿಯ ನಿರ್ಲಕ್ಷ್ಯ ಮತ್ತು ಕಳ್ಳಾಟದಿಂದ ಬೆಂಗಳೂರಿನಲ್ಲಿ ಡೆಂಘೀ ಕಾಯಿಲೆ ಹೆಚ್ಚಾಗುತ್ತಿದೆ: ಮೋಹನ್ ದಾಸರಿ

ಬಿಬಿಎಂಪಿಯ ನಿರ್ಲಕ್ಷ್ಯ ಮತ್ತು ಕಳ್ಳಾಟದಿಂದ ಬೆಂಗಳೂರಿನಲ್ಲಿ ಡೆಂಘೀ ಕಾಯಿಲೆ ಹೆಚ್ಚಾಗುತ್ತಿದೆ: ಮೋಹನ್ ದಾಸರಿ

- Advertisement -
- Advertisement -

ಬಿಬಿಎಂಪಿಯ ಕಳ್ಳಾಟ ಮತ್ತು ಕಳಪೆ ಕಾಮಗಾರಿಗಳಿಂದಾಗಿ ರಸ್ತೆಗಳು ಮಳೆನೀರಿನಲ್ಲಿ ತೋಯ್ದು ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಹೆಚ್ಚು ವಾಹನ ದಟ್ಟಣೆ ಇರುವ ನಗರದಲ್ಲಿ ಅಫಘಾತಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿವೆ. ಸಾರ್ವಜನಿಕರು ಅಪಘಾತದ ಭೀತಿಯಿಂದಲೇ ವಾಹನ ಚಲಾಯಿಸುವಂತಹ ಭಯದ ವಾತಾವರಣ ಬೆಂಗಳೂರಿನಲ್ಲಿ ಸೃಷ್ಟಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಜಿಲ್ಲಾಧ್ಯಕ್ಷರಾದ ಮೋಹನ್ ದಾಸರಿ ಆರೋಪಿಸಿದ್ದಾರೆ.

ಈ ಕುರಿತು ಇಂದು ಬೆಂಗಳೂನಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಸ್ತೆಗುಂಡಿಗಳಲ್ಲಿ ನಿಂತ ನೀರು ಕೊಳಚೆಯಾಗಿ, ಕಸವು ರಸ್ತೆ ಬದಿಯೇ ಕೊಳೆತು ಸಾಂಕ್ರಮಿಕ ರೋಗಗಳನ್ನು ಹರಡುವ ವೈರಾಣುಗಳ ಉತ್ಪಾದನಾ ತಾಣವಾಗಿದೆ. ಇದೆಲ್ಲರಿಂದಾಗಿ ಬೆಂಗಳೂರಿನಾದ್ಯಂತ ಡೆಂಘೀ ಜ್ವರ ತಾಂಡವವಾಡುತ್ತಿದ್ದು, ಬೆಂಗಳೂರಿನ 62 ವಾರ್ಡ್ ಗಳು ಡೆಂಘೀ ಪೀಡಿತ ವಾರ್ಡ್ ಗಳಪಟ್ಟಿಯಲ್ಲಿವೆ. 2019ರ ಜನವರಿಯಿಂದ ಇಲ್ಲಿಯವರೆಗೆ 5352 ಡೆಂಘೀ ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ದಾಖಲಾಗಿವೆ. ಒಂದು ಕೋಟಿಗೂ ಅಧಿಕ ಜನರಿರುವ ಬೆಂಗಳೂರಿನಲ್ಲಿ ಜನರ ಆರೋಗ್ಯಕ್ಕಾಗಿ 2018-19ನೇ ಸಾಲಿನಲ್ಲಿ 100 ಕೋಟಿ ರೂಗಳಿಗಿಂತ ಹೆಚ್ಚು ಅನುದಾನವನ್ನು ಮೀಸಲಿಟ್ಟಿದ್ದು ಕೇವಲ 31 ಕೋಟಿ ರೂಗಳನ್ನು ಖರ್ಚುಮಾಡಿದೆ. ಇದರಲ್ಲಿ ಸರಾಸರಿ 29 ರೂಗಳನ್ನಷ್ಟೇ ಒಬ್ಬ ವ್ಯಕ್ತಿಯ ಆರೋಗ್ಯಕ್ಕೆ ಖರ್ಚು ಮಾಡಿದೆ. ಇಂತಹ ನಿರ್ಲಕ್ಷ್ಯವನ್ನು ನೋಡಿದರೆ, ಬಿಬಿಎಂಪಿಯ ಕಾರ್ಪೋರೇಟರ್ ಗಳೇ ಅನಾರೋಗ್ಯಕ್ಕೆ ತುತ್ತಾಗಿ ಕೆಲಸ ಮಾಡಲಾಗದೆ ಸೊರಗಿಹೋಗಿದ್ದಾರೆಯೇ ಎಂದೆನಿಸುತ್ತದೆ ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಎಲ್ಲಿ ನೋಡಿದರೂ ಗುಂಡಿ ಬಿದ್ದ ರಸ್ತೆಗಳು, ಕಸದ ರಾಶಿಗಳಿಂದ ಬೆಂಗಳೂರು ತುಂಬಿಹೋಗಿದೆ. ಮಾರೇನಹಳ್ಳಿ, ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕ್ವಾರಿಗಳು ಭರ್ತಿಯಾಗಿದ್ದು, ಕಸವನ್ನು ವಿಲೇವಾರಿ ಮಾಡಲು ಪರ್ಯಾಯ ಜಾಗವಿಲ್ಲದೆ, ಕಸವನ್ನು ನಗರದ ಬೀದಿ ಬೀದಿಗಳಲ್ಲಿ ಗುಡ್ಡೆ ಹಾಕಲಾಗಿದ್ದು, ಬೀದಿಗಳೇ ಕಸ ವಿಲೇವಾರಿ ಘಟಕಗಳಂತಾಗಿವೆ. NGT (ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ)ಯು ಪ್ರತಿ ವಾರ್ಡ್ ನಲ್ಲಿಯೂ ಜೈವಿಕ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಬೇಕು ಎಂದು ಹೇಳಿತ್ತು. ಆದರೆ ಅದನ್ನು ಪ್ರಾಯೋಗಿಕವಾಗಿ ಜಾರಿ ಮಾಡಲು ಸಾಧ್ಯವಿಲ್ಲ, ಎಲ್ಲಾ ವಾರ್ಡ್ ಗಳಲ್ಲಿಯೂ ನಮ್ಮಲ್ಲಿ ಜಾಗವಿಲ್ಲ ಎಂದು ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬೇಜವಾಬ್ದಾರಿ ಹೇಳಿಕೆಯನ್ನು ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಕ್ಕೊತ್ತಾಯಗಳು
• ರಾಜ್ಯ ಸರ್ಕಾರ ತಡೆಹಿಡಿದಿರುವ ಬಿಬಿಎಂಪಿ ಬಜೆಟನ್ನು ತುರ್ತಾಗಿ ಅನುಷ್ಠಾನ ಮಾಡಬೇಕು.
• ಬೆಂಗಳೂರಿನ ಬಗ್ಗೆ ಕಾಳಜಿ ಇರುವ ನಗರಾಭಿವೃದ್ಧಿ ಸಚಿವರನ್ನು ಕೂಡಲೇ ನೇಮಕ ಮಾಡಿ, ಬೆಂಗಳೂರಿನ ಸಮಸ್ಯೆಗಳನ್ನು ಬಗೆಹರಿಸಲು ಕಾರ್ಯೋನ್ಮುಖರಾಗಬೇಕು.
• ಎಲ್ಲಾ ವಾರ್ಡ್ ಗಳಲ್ಲಿಯೂ ಜೈವಿಕ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿ ವೈಜ್ಞಾನಿಕವಾಗಿ ಕಸ ನಿರ್ವಹಣೆ ಮಾಡಬೇಕು.
• ಕಸ ವಿಲೇವಾರಿಯ ಟೆಂಡರ್ ಪ್ರಕ್ರಿಯೆಯನ್ನು ಇನ್ನೂ ಸಮಯವಿಳಂಬ ಮಾಡದೆ ಪ್ರಕ್ರಿಯೆ ಮುಗಿಸಬೇಕು.
• ಪ್ರತಿ ವಾರ್ಡ್ಗಳಿಗೂ ಅಗತ್ಯವಿರುವಷ್ಟು ಪೌರ ಕಾರ್ಮಿಕರನ್ನು ನೇಮಿಸಬೇಕು. ಅವರು ಸುರಕ್ಷಿತವಾಗಿ ಕೆಲಸ ಮಾಡಲು ಬೇಕಾಗಿರುವ ಸಾಮಗ್ರಿಗಳನ್ನು ಒದಗಿಸಬೇಕು.
• ಬೆಂಗಳೂರು ಜನರ ಆರೋಗ್ಯಕ್ಕೆ ಮೀಸಲಿಟ್ಟಿರುವ ಹಣವನ್ನು ಸಮರ್ಪಕವಾಗಿ ಬಳಸಿ, ಡೆಂಘೀ ನಿಯಂತ್ರಣಕ್ಕೆ ಮುಂದಾಗಬೇಕು.
• ರಸ್ತೆಗಳಲ್ಲಿರುವ ಗುಂಡಿಗಳನ್ನು ತುರ್ತಾಗಿ ಮುಚ್ಚಿಸಬೇಕು. ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರನ್ನು ಮುಂದಿನ ಟೆಂಡರ್ ಗಳಿಗೆ ನಿರ್ಭಂದಿಸಬೇಕು

ಇವಿಷ್ಟು ಹಕ್ಕೊತ್ತಾಯಗಳ ಈಡೇರಿಕೆಗೆ ಆಮ್ ಆದ್ಮಿ ಪಕ್ಷವು ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...