Homeಮುಖಪುಟ'ಸೈಕಲ್‌' ಚಿಹ್ನೆಗೆ ಹಾಕಿದ ಮತ 'ಕಮಲ'ಕ್ಕೆ ಬಿದ್ದಿದೆ: ಇವಿಎಂ ವಂಚನೆ ಬಗ್ಗೆ ಗಂಭೀರ ಆರೋಪ ಮಾಡಿದ...

‘ಸೈಕಲ್‌’ ಚಿಹ್ನೆಗೆ ಹಾಕಿದ ಮತ ‘ಕಮಲ’ಕ್ಕೆ ಬಿದ್ದಿದೆ: ಇವಿಎಂ ವಂಚನೆ ಬಗ್ಗೆ ಗಂಭೀರ ಆರೋಪ ಮಾಡಿದ ಮತದಾರರು

- Advertisement -
- Advertisement -

ಉತ್ತರಪ್ರದೇಶದ ಲಕೀಮ್‌ಪುರ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಇವಿಎಂನಲ್ಲಿ ವಂಚನೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಸೈಕಲ್‌ ಚಿಹ್ನೆಗೆ ಮತ ಹಾಕಿದ್ರೆ ವಿವಿಪ್ಯಾಟ್‌ನಲ್ಲಿ ಕಮಲಕ್ಕೆ ಬಿದ್ದಿದೆ ಎಂದು ಮತದಾರರೋರ್ವರು ಆರೋಪಿಸಿದ್ದಾರೆ.

ಈ ಕುರಿತ ಆರೋಪದ ವಿಡಿಯೋ ವೈರಲ್‌ ಆಗಿದ್ದು, ನಾನು ಇವಿಎಂ ಮೆಷಿನ್‌ನಲ್ಲಿ ಸಮಾಜವಾದಿ ಪಕ್ಷದ ಸೈಕಲ್‌ ಚಿಹ್ನೆಗೆ ಮತವನ್ನು ಹಾಕಿದ್ದೇನೆ, ಆದರೆ ವಿವಿ ಪ್ಯಾಟ್‌ನಲ್ಲಿ ಬಿಜೆಪಿಯ ಕಮಲದ ಚಿಹ್ನೆ ತೋರಿಸಿದೆ.  ಯಾವುದೇ ಬಟನ್‌ ಒತ್ತಿದರೂ ವಿವಿಪ್ಯಾಟ್‌ನಲ್ಲಿ ಕಮಲದ ಚಿಹ್ನೆ ತೋರಿಸುತ್ತಿದೆ ಎಂದು ಮತದಾರರೋರ್ವರು ಗಂಭೀರವಾದ ಆರೋಪವನ್ನು ಮಾಡಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ‘ಇವಿಎಂ’ ಯಂತ್ರಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಇವಿಎಂ ಬಗ್ಗೆ ಜನರಲ್ಲಿ ಭುಗಿಲೆದ್ದಿರುವ ಸಂಶಯದ ಮಧ್ಯೆ ನಡೆದಿರುವ ಈ ಬೆಳವಣಿಗೆ ಇವಿಎಂ ಪಾರದರ್ಶಕತೆ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ವೋಟರ್-ವೆರಿಫೈಡ್ ಪೇಪರ್ ಆಡಿಟ್ ಟ್ರೈಲ್(ವಿವಿಪ್ಯಾಟ್ ) ಮತದಾರ ಪರಿಶೀಲಿಸಬಹುದಾದ ಪೇಪರ್ ಆಡಿಟ್ ಟ್ರಯಲ್ ಅಥವಾ ಪರಿಶೀಲಿಸಬಹುದಾದ ಪೇಪರ್ ರೆಕಾರ್ಡ್(VPR) ಮತದಾನ ವ್ಯವಸ್ಥೆಯನ್ನು ಬಳಸಿಕೊಂಡು (ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್) ಮತದಾರರಿಗೆ ಪ್ರತಿಕ್ರಿಯೆ ನೀಡುವ ಒಂದು ವಿಧಾನವಾಗಿದೆ. ವಿವಿಪ್ಯಾಟ್ ಗಳನ್ನು ಮತಯಂತ್ರಗಳಿಗೆ ಜೋಡಿಸಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್‌ನಲ್ಲಿ ಮತದಾನ ಮಾಡಿದ ತಕ್ಷಣ ಯಾವ ಅಭ್ಯರ್ಥಿಗೆ ಮತ್ತು ಪಕ್ಷಕ್ಕೆ ಮತ ಹಾಕಿದ್ದೇವೆ ಎನ್ನುವುದನ್ನು ತೋರಿಸುವ ಪ್ರಿಂಟ್ ಚೀಟಿಯೊಂದು ವಿವಿಪ್ಯಾಟ್ ಕಿಂಡಿಯಲ್ಲಿ ಕಾಣಿಸಿಕೊಳ್ಳುತ್ತದೆ ಮತ್ತು ಅದರಲ್ಲೇ ಸಂಗ್ರಹವಾಗುತ್ತದೆ.

ಮತ ಎಣಿಕೆ ವೇಳೆ ಮತಯಂತ್ರದಲ್ಲಿ ದೋಷ, ಗೊಂದಲ ಕಂಡು ಬಂದಲ್ಲಿ ವಿವಿಪ್ಯಾಟ್ ಬಾಕ್ಸ್ ನಲ್ಲಿ ದಾಖಲಾದ ಮತಗಳನ್ನು(ಪ್ರಿಂಟ್ )ಎಣಿಕೆ ಮಾಡಬಹುದಾಗಿದೆ. ಚುನಾವಣಾ ವಂಚನೆ ಅಥವಾ ಅಸಮರ್ಪಕ ಕಾರ್ಯಾಚರಣೆಯನ್ನು ಪತ್ತೆಹಚ್ಚಲು ಮತ್ತು ಸಂಗ್ರಹಿಸಿದ ಎಲೆಕ್ಟ್ರಾನಿಕ್ ಫಲಿತಾಂಶಗಳನ್ನು ಆಡಿಟ್ ಮಾಡಲು, ಮತದಾರರು ತಮ್ಮ ಮತವನ್ನು ಸರಿಯಾಗಿ ಚಲಾಯಿಸಿರುವುದನ್ನು ಪರಿಶೀಲಿಸಲು ಮತದಾನ ಮಾಡುವ ಯಂತ್ರಗಳಿಗೆ ಸ್ವತಂತ್ರ ಪರಿಶೀಲನೆ ವ್ಯವಸ್ಥೆಯಾಗಿ ವಿವಿಪ್ಯಾಟ್ ಬಳಸಲಾಗುತ್ತದೆ. ಇದು ಮತಗಳನ್ನು ಬದಲಾಯಿಸುವ ಅಥವಾ ನಾಶಮಾಡುವ ಹೆಚ್ಚುವರಿ ತಡೆಗೋಡೆಯಾಗಿ ಕಾರ್ಯ ನಿರ್ವಹಿಸುತ್ತದೆ.

ಇದನ್ನು ಓದಿ: ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...