Homeಮುಖಪುಟ'ಸೈಕಲ್‌' ಚಿಹ್ನೆಗೆ ಹಾಕಿದ ಮತ 'ಕಮಲ'ಕ್ಕೆ ಬಿದ್ದಿದೆ: ಇವಿಎಂ ವಂಚನೆ ಬಗ್ಗೆ ಗಂಭೀರ ಆರೋಪ ಮಾಡಿದ...

‘ಸೈಕಲ್‌’ ಚಿಹ್ನೆಗೆ ಹಾಕಿದ ಮತ ‘ಕಮಲ’ಕ್ಕೆ ಬಿದ್ದಿದೆ: ಇವಿಎಂ ವಂಚನೆ ಬಗ್ಗೆ ಗಂಭೀರ ಆರೋಪ ಮಾಡಿದ ಮತದಾರರು

- Advertisement -
- Advertisement -

ಉತ್ತರಪ್ರದೇಶದ ಲಕೀಮ್‌ಪುರ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಇವಿಎಂನಲ್ಲಿ ವಂಚನೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಸೈಕಲ್‌ ಚಿಹ್ನೆಗೆ ಮತ ಹಾಕಿದ್ರೆ ವಿವಿಪ್ಯಾಟ್‌ನಲ್ಲಿ ಕಮಲಕ್ಕೆ ಬಿದ್ದಿದೆ ಎಂದು ಮತದಾರರೋರ್ವರು ಆರೋಪಿಸಿದ್ದಾರೆ.

ಈ ಕುರಿತ ಆರೋಪದ ವಿಡಿಯೋ ವೈರಲ್‌ ಆಗಿದ್ದು, ನಾನು ಇವಿಎಂ ಮೆಷಿನ್‌ನಲ್ಲಿ ಸಮಾಜವಾದಿ ಪಕ್ಷದ ಸೈಕಲ್‌ ಚಿಹ್ನೆಗೆ ಮತವನ್ನು ಹಾಕಿದ್ದೇನೆ, ಆದರೆ ವಿವಿ ಪ್ಯಾಟ್‌ನಲ್ಲಿ ಬಿಜೆಪಿಯ ಕಮಲದ ಚಿಹ್ನೆ ತೋರಿಸಿದೆ.  ಯಾವುದೇ ಬಟನ್‌ ಒತ್ತಿದರೂ ವಿವಿಪ್ಯಾಟ್‌ನಲ್ಲಿ ಕಮಲದ ಚಿಹ್ನೆ ತೋರಿಸುತ್ತಿದೆ ಎಂದು ಮತದಾರರೋರ್ವರು ಗಂಭೀರವಾದ ಆರೋಪವನ್ನು ಮಾಡಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ‘ಇವಿಎಂ’ ಯಂತ್ರಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಇವಿಎಂ ಬಗ್ಗೆ ಜನರಲ್ಲಿ ಭುಗಿಲೆದ್ದಿರುವ ಸಂಶಯದ ಮಧ್ಯೆ ನಡೆದಿರುವ ಈ ಬೆಳವಣಿಗೆ ಇವಿಎಂ ಪಾರದರ್ಶಕತೆ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ವೋಟರ್-ವೆರಿಫೈಡ್ ಪೇಪರ್ ಆಡಿಟ್ ಟ್ರೈಲ್(ವಿವಿಪ್ಯಾಟ್ ) ಮತದಾರ ಪರಿಶೀಲಿಸಬಹುದಾದ ಪೇಪರ್ ಆಡಿಟ್ ಟ್ರಯಲ್ ಅಥವಾ ಪರಿಶೀಲಿಸಬಹುದಾದ ಪೇಪರ್ ರೆಕಾರ್ಡ್(VPR) ಮತದಾನ ವ್ಯವಸ್ಥೆಯನ್ನು ಬಳಸಿಕೊಂಡು (ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್) ಮತದಾರರಿಗೆ ಪ್ರತಿಕ್ರಿಯೆ ನೀಡುವ ಒಂದು ವಿಧಾನವಾಗಿದೆ. ವಿವಿಪ್ಯಾಟ್ ಗಳನ್ನು ಮತಯಂತ್ರಗಳಿಗೆ ಜೋಡಿಸಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್‌ನಲ್ಲಿ ಮತದಾನ ಮಾಡಿದ ತಕ್ಷಣ ಯಾವ ಅಭ್ಯರ್ಥಿಗೆ ಮತ್ತು ಪಕ್ಷಕ್ಕೆ ಮತ ಹಾಕಿದ್ದೇವೆ ಎನ್ನುವುದನ್ನು ತೋರಿಸುವ ಪ್ರಿಂಟ್ ಚೀಟಿಯೊಂದು ವಿವಿಪ್ಯಾಟ್ ಕಿಂಡಿಯಲ್ಲಿ ಕಾಣಿಸಿಕೊಳ್ಳುತ್ತದೆ ಮತ್ತು ಅದರಲ್ಲೇ ಸಂಗ್ರಹವಾಗುತ್ತದೆ.

ಮತ ಎಣಿಕೆ ವೇಳೆ ಮತಯಂತ್ರದಲ್ಲಿ ದೋಷ, ಗೊಂದಲ ಕಂಡು ಬಂದಲ್ಲಿ ವಿವಿಪ್ಯಾಟ್ ಬಾಕ್ಸ್ ನಲ್ಲಿ ದಾಖಲಾದ ಮತಗಳನ್ನು(ಪ್ರಿಂಟ್ )ಎಣಿಕೆ ಮಾಡಬಹುದಾಗಿದೆ. ಚುನಾವಣಾ ವಂಚನೆ ಅಥವಾ ಅಸಮರ್ಪಕ ಕಾರ್ಯಾಚರಣೆಯನ್ನು ಪತ್ತೆಹಚ್ಚಲು ಮತ್ತು ಸಂಗ್ರಹಿಸಿದ ಎಲೆಕ್ಟ್ರಾನಿಕ್ ಫಲಿತಾಂಶಗಳನ್ನು ಆಡಿಟ್ ಮಾಡಲು, ಮತದಾರರು ತಮ್ಮ ಮತವನ್ನು ಸರಿಯಾಗಿ ಚಲಾಯಿಸಿರುವುದನ್ನು ಪರಿಶೀಲಿಸಲು ಮತದಾನ ಮಾಡುವ ಯಂತ್ರಗಳಿಗೆ ಸ್ವತಂತ್ರ ಪರಿಶೀಲನೆ ವ್ಯವಸ್ಥೆಯಾಗಿ ವಿವಿಪ್ಯಾಟ್ ಬಳಸಲಾಗುತ್ತದೆ. ಇದು ಮತಗಳನ್ನು ಬದಲಾಯಿಸುವ ಅಥವಾ ನಾಶಮಾಡುವ ಹೆಚ್ಚುವರಿ ತಡೆಗೋಡೆಯಾಗಿ ಕಾರ್ಯ ನಿರ್ವಹಿಸುತ್ತದೆ.

ಇದನ್ನು ಓದಿ: ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...