Homeಮುಖಪುಟ'ಸೈಕಲ್‌' ಚಿಹ್ನೆಗೆ ಹಾಕಿದ ಮತ 'ಕಮಲ'ಕ್ಕೆ ಬಿದ್ದಿದೆ: ಇವಿಎಂ ವಂಚನೆ ಬಗ್ಗೆ ಗಂಭೀರ ಆರೋಪ ಮಾಡಿದ...

‘ಸೈಕಲ್‌’ ಚಿಹ್ನೆಗೆ ಹಾಕಿದ ಮತ ‘ಕಮಲ’ಕ್ಕೆ ಬಿದ್ದಿದೆ: ಇವಿಎಂ ವಂಚನೆ ಬಗ್ಗೆ ಗಂಭೀರ ಆರೋಪ ಮಾಡಿದ ಮತದಾರರು

- Advertisement -
- Advertisement -

ಉತ್ತರಪ್ರದೇಶದ ಲಕೀಮ್‌ಪುರ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಇವಿಎಂನಲ್ಲಿ ವಂಚನೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಸೈಕಲ್‌ ಚಿಹ್ನೆಗೆ ಮತ ಹಾಕಿದ್ರೆ ವಿವಿಪ್ಯಾಟ್‌ನಲ್ಲಿ ಕಮಲಕ್ಕೆ ಬಿದ್ದಿದೆ ಎಂದು ಮತದಾರರೋರ್ವರು ಆರೋಪಿಸಿದ್ದಾರೆ.

ಈ ಕುರಿತ ಆರೋಪದ ವಿಡಿಯೋ ವೈರಲ್‌ ಆಗಿದ್ದು, ನಾನು ಇವಿಎಂ ಮೆಷಿನ್‌ನಲ್ಲಿ ಸಮಾಜವಾದಿ ಪಕ್ಷದ ಸೈಕಲ್‌ ಚಿಹ್ನೆಗೆ ಮತವನ್ನು ಹಾಕಿದ್ದೇನೆ, ಆದರೆ ವಿವಿ ಪ್ಯಾಟ್‌ನಲ್ಲಿ ಬಿಜೆಪಿಯ ಕಮಲದ ಚಿಹ್ನೆ ತೋರಿಸಿದೆ.  ಯಾವುದೇ ಬಟನ್‌ ಒತ್ತಿದರೂ ವಿವಿಪ್ಯಾಟ್‌ನಲ್ಲಿ ಕಮಲದ ಚಿಹ್ನೆ ತೋರಿಸುತ್ತಿದೆ ಎಂದು ಮತದಾರರೋರ್ವರು ಗಂಭೀರವಾದ ಆರೋಪವನ್ನು ಮಾಡಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ‘ಇವಿಎಂ’ ಯಂತ್ರಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಇವಿಎಂ ಬಗ್ಗೆ ಜನರಲ್ಲಿ ಭುಗಿಲೆದ್ದಿರುವ ಸಂಶಯದ ಮಧ್ಯೆ ನಡೆದಿರುವ ಈ ಬೆಳವಣಿಗೆ ಇವಿಎಂ ಪಾರದರ್ಶಕತೆ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ವೋಟರ್-ವೆರಿಫೈಡ್ ಪೇಪರ್ ಆಡಿಟ್ ಟ್ರೈಲ್(ವಿವಿಪ್ಯಾಟ್ ) ಮತದಾರ ಪರಿಶೀಲಿಸಬಹುದಾದ ಪೇಪರ್ ಆಡಿಟ್ ಟ್ರಯಲ್ ಅಥವಾ ಪರಿಶೀಲಿಸಬಹುದಾದ ಪೇಪರ್ ರೆಕಾರ್ಡ್(VPR) ಮತದಾನ ವ್ಯವಸ್ಥೆಯನ್ನು ಬಳಸಿಕೊಂಡು (ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್) ಮತದಾರರಿಗೆ ಪ್ರತಿಕ್ರಿಯೆ ನೀಡುವ ಒಂದು ವಿಧಾನವಾಗಿದೆ. ವಿವಿಪ್ಯಾಟ್ ಗಳನ್ನು ಮತಯಂತ್ರಗಳಿಗೆ ಜೋಡಿಸಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್‌ನಲ್ಲಿ ಮತದಾನ ಮಾಡಿದ ತಕ್ಷಣ ಯಾವ ಅಭ್ಯರ್ಥಿಗೆ ಮತ್ತು ಪಕ್ಷಕ್ಕೆ ಮತ ಹಾಕಿದ್ದೇವೆ ಎನ್ನುವುದನ್ನು ತೋರಿಸುವ ಪ್ರಿಂಟ್ ಚೀಟಿಯೊಂದು ವಿವಿಪ್ಯಾಟ್ ಕಿಂಡಿಯಲ್ಲಿ ಕಾಣಿಸಿಕೊಳ್ಳುತ್ತದೆ ಮತ್ತು ಅದರಲ್ಲೇ ಸಂಗ್ರಹವಾಗುತ್ತದೆ.

ಮತ ಎಣಿಕೆ ವೇಳೆ ಮತಯಂತ್ರದಲ್ಲಿ ದೋಷ, ಗೊಂದಲ ಕಂಡು ಬಂದಲ್ಲಿ ವಿವಿಪ್ಯಾಟ್ ಬಾಕ್ಸ್ ನಲ್ಲಿ ದಾಖಲಾದ ಮತಗಳನ್ನು(ಪ್ರಿಂಟ್ )ಎಣಿಕೆ ಮಾಡಬಹುದಾಗಿದೆ. ಚುನಾವಣಾ ವಂಚನೆ ಅಥವಾ ಅಸಮರ್ಪಕ ಕಾರ್ಯಾಚರಣೆಯನ್ನು ಪತ್ತೆಹಚ್ಚಲು ಮತ್ತು ಸಂಗ್ರಹಿಸಿದ ಎಲೆಕ್ಟ್ರಾನಿಕ್ ಫಲಿತಾಂಶಗಳನ್ನು ಆಡಿಟ್ ಮಾಡಲು, ಮತದಾರರು ತಮ್ಮ ಮತವನ್ನು ಸರಿಯಾಗಿ ಚಲಾಯಿಸಿರುವುದನ್ನು ಪರಿಶೀಲಿಸಲು ಮತದಾನ ಮಾಡುವ ಯಂತ್ರಗಳಿಗೆ ಸ್ವತಂತ್ರ ಪರಿಶೀಲನೆ ವ್ಯವಸ್ಥೆಯಾಗಿ ವಿವಿಪ್ಯಾಟ್ ಬಳಸಲಾಗುತ್ತದೆ. ಇದು ಮತಗಳನ್ನು ಬದಲಾಯಿಸುವ ಅಥವಾ ನಾಶಮಾಡುವ ಹೆಚ್ಚುವರಿ ತಡೆಗೋಡೆಯಾಗಿ ಕಾರ್ಯ ನಿರ್ವಹಿಸುತ್ತದೆ.

ಇದನ್ನು ಓದಿ: ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...