Homeಮುಖಪುಟ'ಸೈಕಲ್‌' ಚಿಹ್ನೆಗೆ ಹಾಕಿದ ಮತ 'ಕಮಲ'ಕ್ಕೆ ಬಿದ್ದಿದೆ: ಇವಿಎಂ ವಂಚನೆ ಬಗ್ಗೆ ಗಂಭೀರ ಆರೋಪ ಮಾಡಿದ...

‘ಸೈಕಲ್‌’ ಚಿಹ್ನೆಗೆ ಹಾಕಿದ ಮತ ‘ಕಮಲ’ಕ್ಕೆ ಬಿದ್ದಿದೆ: ಇವಿಎಂ ವಂಚನೆ ಬಗ್ಗೆ ಗಂಭೀರ ಆರೋಪ ಮಾಡಿದ ಮತದಾರರು

- Advertisement -
- Advertisement -

ಉತ್ತರಪ್ರದೇಶದ ಲಕೀಮ್‌ಪುರ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಇವಿಎಂನಲ್ಲಿ ವಂಚನೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಸೈಕಲ್‌ ಚಿಹ್ನೆಗೆ ಮತ ಹಾಕಿದ್ರೆ ವಿವಿಪ್ಯಾಟ್‌ನಲ್ಲಿ ಕಮಲಕ್ಕೆ ಬಿದ್ದಿದೆ ಎಂದು ಮತದಾರರೋರ್ವರು ಆರೋಪಿಸಿದ್ದಾರೆ.

ಈ ಕುರಿತ ಆರೋಪದ ವಿಡಿಯೋ ವೈರಲ್‌ ಆಗಿದ್ದು, ನಾನು ಇವಿಎಂ ಮೆಷಿನ್‌ನಲ್ಲಿ ಸಮಾಜವಾದಿ ಪಕ್ಷದ ಸೈಕಲ್‌ ಚಿಹ್ನೆಗೆ ಮತವನ್ನು ಹಾಕಿದ್ದೇನೆ, ಆದರೆ ವಿವಿ ಪ್ಯಾಟ್‌ನಲ್ಲಿ ಬಿಜೆಪಿಯ ಕಮಲದ ಚಿಹ್ನೆ ತೋರಿಸಿದೆ.  ಯಾವುದೇ ಬಟನ್‌ ಒತ್ತಿದರೂ ವಿವಿಪ್ಯಾಟ್‌ನಲ್ಲಿ ಕಮಲದ ಚಿಹ್ನೆ ತೋರಿಸುತ್ತಿದೆ ಎಂದು ಮತದಾರರೋರ್ವರು ಗಂಭೀರವಾದ ಆರೋಪವನ್ನು ಮಾಡಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ‘ಇವಿಎಂ’ ಯಂತ್ರಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಇವಿಎಂ ಬಗ್ಗೆ ಜನರಲ್ಲಿ ಭುಗಿಲೆದ್ದಿರುವ ಸಂಶಯದ ಮಧ್ಯೆ ನಡೆದಿರುವ ಈ ಬೆಳವಣಿಗೆ ಇವಿಎಂ ಪಾರದರ್ಶಕತೆ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ವೋಟರ್-ವೆರಿಫೈಡ್ ಪೇಪರ್ ಆಡಿಟ್ ಟ್ರೈಲ್(ವಿವಿಪ್ಯಾಟ್ ) ಮತದಾರ ಪರಿಶೀಲಿಸಬಹುದಾದ ಪೇಪರ್ ಆಡಿಟ್ ಟ್ರಯಲ್ ಅಥವಾ ಪರಿಶೀಲಿಸಬಹುದಾದ ಪೇಪರ್ ರೆಕಾರ್ಡ್(VPR) ಮತದಾನ ವ್ಯವಸ್ಥೆಯನ್ನು ಬಳಸಿಕೊಂಡು (ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್) ಮತದಾರರಿಗೆ ಪ್ರತಿಕ್ರಿಯೆ ನೀಡುವ ಒಂದು ವಿಧಾನವಾಗಿದೆ. ವಿವಿಪ್ಯಾಟ್ ಗಳನ್ನು ಮತಯಂತ್ರಗಳಿಗೆ ಜೋಡಿಸಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್‌ನಲ್ಲಿ ಮತದಾನ ಮಾಡಿದ ತಕ್ಷಣ ಯಾವ ಅಭ್ಯರ್ಥಿಗೆ ಮತ್ತು ಪಕ್ಷಕ್ಕೆ ಮತ ಹಾಕಿದ್ದೇವೆ ಎನ್ನುವುದನ್ನು ತೋರಿಸುವ ಪ್ರಿಂಟ್ ಚೀಟಿಯೊಂದು ವಿವಿಪ್ಯಾಟ್ ಕಿಂಡಿಯಲ್ಲಿ ಕಾಣಿಸಿಕೊಳ್ಳುತ್ತದೆ ಮತ್ತು ಅದರಲ್ಲೇ ಸಂಗ್ರಹವಾಗುತ್ತದೆ.

ಮತ ಎಣಿಕೆ ವೇಳೆ ಮತಯಂತ್ರದಲ್ಲಿ ದೋಷ, ಗೊಂದಲ ಕಂಡು ಬಂದಲ್ಲಿ ವಿವಿಪ್ಯಾಟ್ ಬಾಕ್ಸ್ ನಲ್ಲಿ ದಾಖಲಾದ ಮತಗಳನ್ನು(ಪ್ರಿಂಟ್ )ಎಣಿಕೆ ಮಾಡಬಹುದಾಗಿದೆ. ಚುನಾವಣಾ ವಂಚನೆ ಅಥವಾ ಅಸಮರ್ಪಕ ಕಾರ್ಯಾಚರಣೆಯನ್ನು ಪತ್ತೆಹಚ್ಚಲು ಮತ್ತು ಸಂಗ್ರಹಿಸಿದ ಎಲೆಕ್ಟ್ರಾನಿಕ್ ಫಲಿತಾಂಶಗಳನ್ನು ಆಡಿಟ್ ಮಾಡಲು, ಮತದಾರರು ತಮ್ಮ ಮತವನ್ನು ಸರಿಯಾಗಿ ಚಲಾಯಿಸಿರುವುದನ್ನು ಪರಿಶೀಲಿಸಲು ಮತದಾನ ಮಾಡುವ ಯಂತ್ರಗಳಿಗೆ ಸ್ವತಂತ್ರ ಪರಿಶೀಲನೆ ವ್ಯವಸ್ಥೆಯಾಗಿ ವಿವಿಪ್ಯಾಟ್ ಬಳಸಲಾಗುತ್ತದೆ. ಇದು ಮತಗಳನ್ನು ಬದಲಾಯಿಸುವ ಅಥವಾ ನಾಶಮಾಡುವ ಹೆಚ್ಚುವರಿ ತಡೆಗೋಡೆಯಾಗಿ ಕಾರ್ಯ ನಿರ್ವಹಿಸುತ್ತದೆ.

ಇದನ್ನು ಓದಿ: ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...