Homeಮುಖಪುಟ'ಸೈಕಲ್‌' ಚಿಹ್ನೆಗೆ ಹಾಕಿದ ಮತ 'ಕಮಲ'ಕ್ಕೆ ಬಿದ್ದಿದೆ: ಇವಿಎಂ ವಂಚನೆ ಬಗ್ಗೆ ಗಂಭೀರ ಆರೋಪ ಮಾಡಿದ...

‘ಸೈಕಲ್‌’ ಚಿಹ್ನೆಗೆ ಹಾಕಿದ ಮತ ‘ಕಮಲ’ಕ್ಕೆ ಬಿದ್ದಿದೆ: ಇವಿಎಂ ವಂಚನೆ ಬಗ್ಗೆ ಗಂಭೀರ ಆರೋಪ ಮಾಡಿದ ಮತದಾರರು

- Advertisement -
- Advertisement -

ಉತ್ತರಪ್ರದೇಶದ ಲಕೀಮ್‌ಪುರ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಇವಿಎಂನಲ್ಲಿ ವಂಚನೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಸೈಕಲ್‌ ಚಿಹ್ನೆಗೆ ಮತ ಹಾಕಿದ್ರೆ ವಿವಿಪ್ಯಾಟ್‌ನಲ್ಲಿ ಕಮಲಕ್ಕೆ ಬಿದ್ದಿದೆ ಎಂದು ಮತದಾರರೋರ್ವರು ಆರೋಪಿಸಿದ್ದಾರೆ.

ಈ ಕುರಿತ ಆರೋಪದ ವಿಡಿಯೋ ವೈರಲ್‌ ಆಗಿದ್ದು, ನಾನು ಇವಿಎಂ ಮೆಷಿನ್‌ನಲ್ಲಿ ಸಮಾಜವಾದಿ ಪಕ್ಷದ ಸೈಕಲ್‌ ಚಿಹ್ನೆಗೆ ಮತವನ್ನು ಹಾಕಿದ್ದೇನೆ, ಆದರೆ ವಿವಿ ಪ್ಯಾಟ್‌ನಲ್ಲಿ ಬಿಜೆಪಿಯ ಕಮಲದ ಚಿಹ್ನೆ ತೋರಿಸಿದೆ.  ಯಾವುದೇ ಬಟನ್‌ ಒತ್ತಿದರೂ ವಿವಿಪ್ಯಾಟ್‌ನಲ್ಲಿ ಕಮಲದ ಚಿಹ್ನೆ ತೋರಿಸುತ್ತಿದೆ ಎಂದು ಮತದಾರರೋರ್ವರು ಗಂಭೀರವಾದ ಆರೋಪವನ್ನು ಮಾಡಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ‘ಇವಿಎಂ’ ಯಂತ್ರಗಳ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಇವಿಎಂ ಬಗ್ಗೆ ಜನರಲ್ಲಿ ಭುಗಿಲೆದ್ದಿರುವ ಸಂಶಯದ ಮಧ್ಯೆ ನಡೆದಿರುವ ಈ ಬೆಳವಣಿಗೆ ಇವಿಎಂ ಪಾರದರ್ಶಕತೆ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ವೋಟರ್-ವೆರಿಫೈಡ್ ಪೇಪರ್ ಆಡಿಟ್ ಟ್ರೈಲ್(ವಿವಿಪ್ಯಾಟ್ ) ಮತದಾರ ಪರಿಶೀಲಿಸಬಹುದಾದ ಪೇಪರ್ ಆಡಿಟ್ ಟ್ರಯಲ್ ಅಥವಾ ಪರಿಶೀಲಿಸಬಹುದಾದ ಪೇಪರ್ ರೆಕಾರ್ಡ್(VPR) ಮತದಾನ ವ್ಯವಸ್ಥೆಯನ್ನು ಬಳಸಿಕೊಂಡು (ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್) ಮತದಾರರಿಗೆ ಪ್ರತಿಕ್ರಿಯೆ ನೀಡುವ ಒಂದು ವಿಧಾನವಾಗಿದೆ. ವಿವಿಪ್ಯಾಟ್ ಗಳನ್ನು ಮತಯಂತ್ರಗಳಿಗೆ ಜೋಡಿಸಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್‌ನಲ್ಲಿ ಮತದಾನ ಮಾಡಿದ ತಕ್ಷಣ ಯಾವ ಅಭ್ಯರ್ಥಿಗೆ ಮತ್ತು ಪಕ್ಷಕ್ಕೆ ಮತ ಹಾಕಿದ್ದೇವೆ ಎನ್ನುವುದನ್ನು ತೋರಿಸುವ ಪ್ರಿಂಟ್ ಚೀಟಿಯೊಂದು ವಿವಿಪ್ಯಾಟ್ ಕಿಂಡಿಯಲ್ಲಿ ಕಾಣಿಸಿಕೊಳ್ಳುತ್ತದೆ ಮತ್ತು ಅದರಲ್ಲೇ ಸಂಗ್ರಹವಾಗುತ್ತದೆ.

ಮತ ಎಣಿಕೆ ವೇಳೆ ಮತಯಂತ್ರದಲ್ಲಿ ದೋಷ, ಗೊಂದಲ ಕಂಡು ಬಂದಲ್ಲಿ ವಿವಿಪ್ಯಾಟ್ ಬಾಕ್ಸ್ ನಲ್ಲಿ ದಾಖಲಾದ ಮತಗಳನ್ನು(ಪ್ರಿಂಟ್ )ಎಣಿಕೆ ಮಾಡಬಹುದಾಗಿದೆ. ಚುನಾವಣಾ ವಂಚನೆ ಅಥವಾ ಅಸಮರ್ಪಕ ಕಾರ್ಯಾಚರಣೆಯನ್ನು ಪತ್ತೆಹಚ್ಚಲು ಮತ್ತು ಸಂಗ್ರಹಿಸಿದ ಎಲೆಕ್ಟ್ರಾನಿಕ್ ಫಲಿತಾಂಶಗಳನ್ನು ಆಡಿಟ್ ಮಾಡಲು, ಮತದಾರರು ತಮ್ಮ ಮತವನ್ನು ಸರಿಯಾಗಿ ಚಲಾಯಿಸಿರುವುದನ್ನು ಪರಿಶೀಲಿಸಲು ಮತದಾನ ಮಾಡುವ ಯಂತ್ರಗಳಿಗೆ ಸ್ವತಂತ್ರ ಪರಿಶೀಲನೆ ವ್ಯವಸ್ಥೆಯಾಗಿ ವಿವಿಪ್ಯಾಟ್ ಬಳಸಲಾಗುತ್ತದೆ. ಇದು ಮತಗಳನ್ನು ಬದಲಾಯಿಸುವ ಅಥವಾ ನಾಶಮಾಡುವ ಹೆಚ್ಚುವರಿ ತಡೆಗೋಡೆಯಾಗಿ ಕಾರ್ಯ ನಿರ್ವಹಿಸುತ್ತದೆ.

ಇದನ್ನು ಓದಿ: ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್‌

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...