Homeಮುಖಪುಟ‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

ಇವರ ಕೊಲೆಯು ಸ್ಪಷ್ವವಾಗಿ ಗುಂಪುಹತ್ಯೆಯಾಗಿದ್ದು, ಇದು ಧರ್ಮ ದ್ವೇಷದ ಅಪರಾಧಗಳನ್ನು ಸಂಕೇತಿಸುತ್ತದೆ. ಆದರೆ ಪೊಲೀಸರು ಕೇವಲ ದರೋಡೆ ಪ್ರಕರಣವನ್ನು ಮಾತ್ರ ದಾಖಲಿಸಿದ್ದಾರೆ ಎಂದು ಹಲವರು ದೂರಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದಲ್ಲಿ ಅಫ್ತಾಬ್ ಆಲಮ್ ಎಂಬ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹಿಂದುತ್ವವಾದಿಗಳು ‘ಜೈ ಶ್ರೀರಾಮ್’ ಹೇಳುವಂತೆ ಒತ್ತಾಯಿಸಿ” ಎಂದು ಬರ್ಬರವಾಗಿ ಹಲ್ಲೆ ಮಾಡಿ ಹತ್ಯೆಗೈದಿರುವ ದುರ್ಘಟನೆ ಜರುಗಿದೆ.

ತಡವಾಗಿ ಬೆಳಕಿಗೆ ಬಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ ಆಲಮ್ ಅವರ ಮಗ ಸಬೀರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ಭಾನುವಾರ ರಾತ್ರಿ ನನ್ನ ತಂದೆಯಿಂದ ನಿರೀಕ್ಷಿತವಲ್ಲದ ರೀತಿಯಲ್ಲಿ ಕರೆ ಬಂತು. ಆಗಲೇ ಏನೋ ಸಮಸ್ಯೆಯಾಗಿದೆ ಎಂದು ನನಗೆ ತಿಳಿಯಿತು. ಫೋನ್ ರಿಸೀವ್ ಮಾಡಿದ ನಂತರ, ನನ್ನ ತಂದೆ ಒಂದು ಮಾತನ್ನೂ ಆಡಲಿಲ್ಲ. ಆದರೆ ಅಲ್ಲಿ ಕುಡಿದಿದ್ದ ಜನರ ಗುಂಪೊಂದು ಮಾತನಾಡುತ್ತಿದ್ದುದು ನನಗೆ ಕೇಳಿಸುತ್ತಿತ್ತು. ಅವರು ನನ್ನ ತಂದೆಯನ್ನು ‘ಕುಡಿಯುತ್ತೀಯಾ ಎಂದಾಗ, ನನ್ನ ತಂದೆ ಇಲ್ಲಾ ಎಂದು ಹೇಳಿರುವುದು ಸ್ಪಷ್ಟವಾಗಿ ಕೇಳಿಸುತ್ತಿತ್ತು” ಎಂದು 20 ವರ್ಷದ ಸಬೀರ್ ಪೊಲೀಸರಿಗೆ ತಿಳಿಸಿದ್ದಾನೆ.

ಸಬೀರ್ ತನ್ನ ತಂದೆಯ ಫೋನ್‌ ಕರೆಯನ್ನು ರೆಕಾರ್ಡ್ ಮಾಡಿದ್ದು, ಈ ರೆಕಾರ್ಡಿಂಗ್‌ನ ಸುಮಾರು 8 ನಿಮಿಷ 39 ಸೆಕೆಂಡ್ ನಲ್ಲಿ “ಜೈ ಶ್ರೀರಾಮ್ ಬೋಲ್, ಬೋಲ್ ಜೈ ಶ್ರೀರಾಮ್” ಎಂದು ಒತ್ತಾಯಿಸುತ್ತಿರುವುದು ದಾಖಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಅದಾದ ನಂತರ ಯಾವುದೇ ಸಂಭಾಷಣೆ ಕೇಳಿಸಲಿಲ್ಲ. ಆದರೆ 11 ನಿಮಿಷಗಳ ನಂತರ, 19 ನಿಮಿಷ 41 ಸೆಕೆಂಡಿನಲ್ಲಿ ಆ ಗುಂಪಿನಲ್ಲಿದ್ದ ಒಬ್ಬ, “ಸಾನ್ಸ್ ರುಕ್ ಗೈ (ಅವನ ಉಸಿರಾಟ ನಿಂತಿದೆ)” ಎಂದು ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

“ನನ್ನ ತಂದೆ, ನಿನ್ನೆ ಮಧ್ಯಾಹ್ನ 3 ಗಂಟೆಗೆ ಬುಲಂದ್‌ಶಹರ್‌ನಲ್ಲಿ ತನ್ನ ಹಳೆಯ ಗ್ರಾಹಕರೊಬ್ಬರನ್ನು ಬಿಡಲು ಹೋಗಿದ್ದರು. ಅವರು ಸುಮಾರು 7 ಗಂಟೆಗೆ ಅವರನ್ನು ಬಿಟ್ಟು ಮನೆಗೆ ತೆರಳಿದ್ದರು. ದಾರಿಯಲ್ಲಿ ಅವರು ನನಗೆ ಕರೆಮಾಡಿ, ತಮ್ಮ ಫಾಸ್ಟ್ ಟ್ಯಾಗ್ ಅನ್ನು ರೀಚಾರ್ಜ್ ಮಾಡಲು ಹೇಳಿದರು. ನಾನು ಸುಮಾರು 7:30ಕ್ಕೆ ರೀಚಾರ್ಜ್ ಮಾಡಿದ್ದೆ. ಆದರೆ, ಸ್ವಲ್ಪ ಸಮಯದ ನಂತರ ನನಗೆ ಮತ್ತೆ ಕರೆ ಬಂತು. ಇದು ಟೋಲ್ ಬೂತ್ ಬಳಿ ಎಂದು ನಾನು ಭಾವಿಸುತ್ತೇನೆ. ತನಗೆ ಎದುರಾದ ಕೆಲವು ಪುರುಷರ ಗುಂಪಿನ ಬಗ್ಗೆ ಅವರಿಗೆ ಅನುಮಾನ ಬಂದು, ಅವರು ನನಗೆ ಕರೆ ಮಾಡಿ, ಮೊಬೈಲ್ ಫೋನ್ ಅನ್ನು ಜೇಬಿನಲ್ಲಿ ಇಟ್ಟುಕೊಂಡಿದ್ದಾರೆ” ಎಂದು ಸಬೀರ್ ಹೇಳಿದ್ದಾನೆ.

ಸಬೀರ್, ತನ್ನ ತಂದೆಯ ಫೋನ್ ಸ್ವಿಚ್ ಆಫ್ ಆಗುವವರೆಗೆ, ಅಂದರೆ ಕರೆ ಬಂದಿದ್ದ ಸಮಯದಿಂದ ಮುಂದಿನ 40 ನಿಮಿಷಗಳ ಕಾಲ ಈ ಕರೆಯನ್ನು ರೆಕಾರ್ಡ್ ಮಾಡಿದ್ದಾನೆ. ನಂತರ ತಕ್ಷಣ ಹತ್ತಿರದ ಪೊಲೀಸ್ ಠಾಣೆ ಮಯೂರ್ ವಿಹಾರ್ 1ನೇ ಹಂತಕ್ಕೆ ಹೋಗಿ ಪೊಲೀಸರಿಗೆ ದೂರು ನೀಡಿ, ರೆಕಾರ್ಡಿಂಗ್ ಸಲ್ಲಿಸಿದ್ದಾರೆ.

“ದೂರಿನ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ಸಂಜಯ್ ತಕ್ಷಣ ನನ್ನ ತಂದೆಯ ಮೊಬೈಲ್ ಫೋನ್ ಅನ್ನು ಟ್ರ್ಯಾಕ್ ಮಾಡಲು ಪ್ರಾರಂಭಿಸಿ, ಅವರಿದ್ದ ಸ್ಥಳವನ್ನು ಪತ್ತೆಹಚ್ಚಿದರು. ಟ್ರಾಕ್ ಮಾಡಲಾದ ಕೊನೆಯ ಸ್ಥಳ ಬಾದಲ್‌ಪುರ ಪೊಲೀಸ್ ಠಾಣೆ ಬಳಿ ಇತ್ತು. ಅಲ್ಲಿ ಪೊಲೀಸರು ನಮ್ಮ ತಂದೆಯ ಶವವನ್ನು ಪತ್ತೆಹಚ್ಚಿದರು. ನಂತರ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾದರೂ ಅಷ್ಟರಲ್ಲಿ ಅವರು ಮೃತರಾಗಿದ್ದರು” ಎಂದು ಸಬೀರ್ ಹೇಳಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

“ಸತ್ತ ತಂದೆಯನ್ನು ನೋಡಿದ ಸಬೀರ್ ಕುಸಿದುಬಿದ್ದ. ಅಫ್ತಾಬ್ ಆಲಮ್ ನಾಲಿಗೆ ಭಾಗಕ್ಕೆ ಬಲವಾದ ಏಟು ಬಿದ್ದಿತ್ತು. ಕಿವಿಗಳಿಂದ ರಕ್ತಸ್ರಾವವಾಗುತ್ತಿತ್ತು. ಅವನ ಮುಖದ ಮೇಲೆ ಕತ್ತರಿಸಿದ ಗುರುತು ಇತ್ತು. ಇದು ಸ್ಪಷ್ಟವಾಗಿ ಗುಂಪೊಂದು ಹತ್ಯೆ ಮಾಡಿರುವ ಪ್ರಕರಣವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಅದೇ ರಾತ್ರಿಯಲ್ಲಿ ನೋಂದಾಯಿಸಲಾದ ಎಫ್‌ಐಆರ್, ಅನಾಮಧೇಯ ಹಲ್ಲೆಕೋರರ ಮೇಲೆ ಐಪಿಸಿ ಸೆಕ್ಷನ್ 394 (ದರೋಡೆ ಮಾಡುವಲ್ಲಿ ಸ್ವಯಂಪ್ರೇರಣೆಯಿಂದ ಗಾಯವನ್ನುಂಟುಮಾಡುವುದು) 302 (ಕೊಲೆಗೆ ಶಿಕ್ಷೆ) ಮತ್ತು 201ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಇವರ ಕೊಲೆಯು ಸ್ಪಷ್ವವಾಗಿ ಗುಂಪುಹತ್ಯೆಯಾಗಿದ್ದು, ಇದು ಧರ್ಮ ದ್ವೇಷದ ಅಪರಾಧಗಳನ್ನು ಸಂಕೇತಿಸುತ್ತದೆ. ಆದರೆ ಪೊಲೀಸರು ಕೇವಲ ದರೋಡೆ ಪ್ರಕರಣವನ್ನು ಮಾತ್ರ ದಾಖಲಿಸಿದ್ದಾರೆ ಎಂದು ಹಲವರು ದೂರಿದ್ದಾರೆ.

“ನಾವು ಮುಸ್ಲಿಮರು, ನಮಗೆ ಬದುಕುವ ಹಕ್ಕಿದೆ” ಎಂದು ಸಬೀರ್ ಹೇಳಿದ್ದಾನೆ.

ಅಫ್ತಾಬ್ ಆಲಮ್ ತ್ರಿಲೋಕ್ ಪುರಿಯ ನಿವಾಸಿಯಾಗಿದ್ದು, ನೋಯ್ಡಾದಲ್ಲಿ 1996 ರಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಚಾಲನೆ ಅವನ ಮುಖ್ಯ ಜೀವನೋಪಾಯವಾಗಿತ್ತು. ಅವರಿಗೆ ಹೆಂಡತಿ, ಅವರ ಮೂವರು ಗಂಡು ಮಕ್ಕಳು, ಅನಾರೋಗ್ಯದ ಪೋಷಕರು ಮತ್ತು ಇಬ್ಬರು ಒಡಹುಟ್ಟಿದವರು ಇದ್ದಾರೆ. ಅವರೆಲ್ಲರೂ ಆಲಮ್ ಮತ್ತು ಸಬೀರ್ ಮೇಲೆ ಆರ್ಥಿಕವಾಗಿ ಅವಲಂಬಿಸಿದ್ದಾರೆ.

“ಲಾಕ್ ಡೌನ್ ಸಮಯದಲ್ಲಿ, ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ಆಲಮ್ ಹೊರಬಂದಿರಲಿಲ್ಲ ಎಂದು ಅವರ ಕುಟುಂಬ ತಿಳಿಸಿದೆ. ಆದರೆ ಕುಟುಂಬದ ಸ್ನೇಹಿತ ಮತ್ತು ತನ್ನ ಹಳೆಯ ಗ್ರಾಹಕರು, ‘ಗುರಗಾಂವ್ ನಿಂದ ಉತ್ತರ ಪ್ರದೇಶದ ಬುಲಂದ್‌ಶಹರ್‌ಗೆ ಬಿಡಬಹುದೇ’ ಎಂದು ಕೇಳಲು ಅವರನ್ನು ಕರೆದಾಗ, ಅವರು ನಿರಾಕರಿಸಲಾಗಲಿಲ್ಲ. ಲಾಕ್‌ಡೌನ್ ಸಮಯದಲ್ಲಿ ಆರ್ಥಿಕ ಸಮಸ್ಯೆಗೆ ಒಳಗಾಗಿದ್ದರಿಂದ ಈ ಪ್ರಸ್ತಾವವನ್ನು ಒಪ್ಪಿಕೊಂಡಿದ್ದರು” ಎಂದು ಕುಟುಂಬದವರು ಹೇಳಿದರು.

ಆಲಮ್ ಅವರ ತಂದೆ 65 ವರ್ಷದ ಮೊಹಮ್ಮದ್ ತಾಹಿರ್ ಪ್ರತಿಕ್ರಿಯಿಸಿ, “ಇದು ದರೋಡೆ ಪ್ರಕರಣವಾಗಿದ್ದರೆ, ಅವರು ಕಾರನ್ನು ಏಕೆ ತೆಗೆದುಕೊಂಡಿಲ್ಲ? ಅವರು ಕಾರನ್ನು ಕದ್ದು ಅವನ ದೇಹವನ್ನು ಬೀದಿಗೆ ಎಸೆಯುತ್ತಿದ್ದರು. ಇದು ಸ್ಪಷ್ಟವಾಗಿ ಗುಂಪು ಹತ್ಯೆಯ ಪ್ರಕರಣವಾಗಿದೆ. ಅವರು ಮೊಬೈಲ್ ಫೋನ್ ಮಾತ್ರ ತೆಗೆದುಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಮೋದಿ ಜಿಂದಾಬಾದ್, ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ ಮುಸ್ಲಿಂ ಆಟೋ ಡ್ರೈವರ್ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...