Homeಮುಖಪುಟ‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

ಇವರ ಕೊಲೆಯು ಸ್ಪಷ್ವವಾಗಿ ಗುಂಪುಹತ್ಯೆಯಾಗಿದ್ದು, ಇದು ಧರ್ಮ ದ್ವೇಷದ ಅಪರಾಧಗಳನ್ನು ಸಂಕೇತಿಸುತ್ತದೆ. ಆದರೆ ಪೊಲೀಸರು ಕೇವಲ ದರೋಡೆ ಪ್ರಕರಣವನ್ನು ಮಾತ್ರ ದಾಖಲಿಸಿದ್ದಾರೆ ಎಂದು ಹಲವರು ದೂರಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದಲ್ಲಿ ಅಫ್ತಾಬ್ ಆಲಮ್ ಎಂಬ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹಿಂದುತ್ವವಾದಿಗಳು ‘ಜೈ ಶ್ರೀರಾಮ್’ ಹೇಳುವಂತೆ ಒತ್ತಾಯಿಸಿ” ಎಂದು ಬರ್ಬರವಾಗಿ ಹಲ್ಲೆ ಮಾಡಿ ಹತ್ಯೆಗೈದಿರುವ ದುರ್ಘಟನೆ ಜರುಗಿದೆ.

ತಡವಾಗಿ ಬೆಳಕಿಗೆ ಬಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ ಆಲಮ್ ಅವರ ಮಗ ಸಬೀರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ಭಾನುವಾರ ರಾತ್ರಿ ನನ್ನ ತಂದೆಯಿಂದ ನಿರೀಕ್ಷಿತವಲ್ಲದ ರೀತಿಯಲ್ಲಿ ಕರೆ ಬಂತು. ಆಗಲೇ ಏನೋ ಸಮಸ್ಯೆಯಾಗಿದೆ ಎಂದು ನನಗೆ ತಿಳಿಯಿತು. ಫೋನ್ ರಿಸೀವ್ ಮಾಡಿದ ನಂತರ, ನನ್ನ ತಂದೆ ಒಂದು ಮಾತನ್ನೂ ಆಡಲಿಲ್ಲ. ಆದರೆ ಅಲ್ಲಿ ಕುಡಿದಿದ್ದ ಜನರ ಗುಂಪೊಂದು ಮಾತನಾಡುತ್ತಿದ್ದುದು ನನಗೆ ಕೇಳಿಸುತ್ತಿತ್ತು. ಅವರು ನನ್ನ ತಂದೆಯನ್ನು ‘ಕುಡಿಯುತ್ತೀಯಾ ಎಂದಾಗ, ನನ್ನ ತಂದೆ ಇಲ್ಲಾ ಎಂದು ಹೇಳಿರುವುದು ಸ್ಪಷ್ಟವಾಗಿ ಕೇಳಿಸುತ್ತಿತ್ತು” ಎಂದು 20 ವರ್ಷದ ಸಬೀರ್ ಪೊಲೀಸರಿಗೆ ತಿಳಿಸಿದ್ದಾನೆ.

ಸಬೀರ್ ತನ್ನ ತಂದೆಯ ಫೋನ್‌ ಕರೆಯನ್ನು ರೆಕಾರ್ಡ್ ಮಾಡಿದ್ದು, ಈ ರೆಕಾರ್ಡಿಂಗ್‌ನ ಸುಮಾರು 8 ನಿಮಿಷ 39 ಸೆಕೆಂಡ್ ನಲ್ಲಿ “ಜೈ ಶ್ರೀರಾಮ್ ಬೋಲ್, ಬೋಲ್ ಜೈ ಶ್ರೀರಾಮ್” ಎಂದು ಒತ್ತಾಯಿಸುತ್ತಿರುವುದು ದಾಖಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಅದಾದ ನಂತರ ಯಾವುದೇ ಸಂಭಾಷಣೆ ಕೇಳಿಸಲಿಲ್ಲ. ಆದರೆ 11 ನಿಮಿಷಗಳ ನಂತರ, 19 ನಿಮಿಷ 41 ಸೆಕೆಂಡಿನಲ್ಲಿ ಆ ಗುಂಪಿನಲ್ಲಿದ್ದ ಒಬ್ಬ, “ಸಾನ್ಸ್ ರುಕ್ ಗೈ (ಅವನ ಉಸಿರಾಟ ನಿಂತಿದೆ)” ಎಂದು ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

“ನನ್ನ ತಂದೆ, ನಿನ್ನೆ ಮಧ್ಯಾಹ್ನ 3 ಗಂಟೆಗೆ ಬುಲಂದ್‌ಶಹರ್‌ನಲ್ಲಿ ತನ್ನ ಹಳೆಯ ಗ್ರಾಹಕರೊಬ್ಬರನ್ನು ಬಿಡಲು ಹೋಗಿದ್ದರು. ಅವರು ಸುಮಾರು 7 ಗಂಟೆಗೆ ಅವರನ್ನು ಬಿಟ್ಟು ಮನೆಗೆ ತೆರಳಿದ್ದರು. ದಾರಿಯಲ್ಲಿ ಅವರು ನನಗೆ ಕರೆಮಾಡಿ, ತಮ್ಮ ಫಾಸ್ಟ್ ಟ್ಯಾಗ್ ಅನ್ನು ರೀಚಾರ್ಜ್ ಮಾಡಲು ಹೇಳಿದರು. ನಾನು ಸುಮಾರು 7:30ಕ್ಕೆ ರೀಚಾರ್ಜ್ ಮಾಡಿದ್ದೆ. ಆದರೆ, ಸ್ವಲ್ಪ ಸಮಯದ ನಂತರ ನನಗೆ ಮತ್ತೆ ಕರೆ ಬಂತು. ಇದು ಟೋಲ್ ಬೂತ್ ಬಳಿ ಎಂದು ನಾನು ಭಾವಿಸುತ್ತೇನೆ. ತನಗೆ ಎದುರಾದ ಕೆಲವು ಪುರುಷರ ಗುಂಪಿನ ಬಗ್ಗೆ ಅವರಿಗೆ ಅನುಮಾನ ಬಂದು, ಅವರು ನನಗೆ ಕರೆ ಮಾಡಿ, ಮೊಬೈಲ್ ಫೋನ್ ಅನ್ನು ಜೇಬಿನಲ್ಲಿ ಇಟ್ಟುಕೊಂಡಿದ್ದಾರೆ” ಎಂದು ಸಬೀರ್ ಹೇಳಿದ್ದಾನೆ.

ಸಬೀರ್, ತನ್ನ ತಂದೆಯ ಫೋನ್ ಸ್ವಿಚ್ ಆಫ್ ಆಗುವವರೆಗೆ, ಅಂದರೆ ಕರೆ ಬಂದಿದ್ದ ಸಮಯದಿಂದ ಮುಂದಿನ 40 ನಿಮಿಷಗಳ ಕಾಲ ಈ ಕರೆಯನ್ನು ರೆಕಾರ್ಡ್ ಮಾಡಿದ್ದಾನೆ. ನಂತರ ತಕ್ಷಣ ಹತ್ತಿರದ ಪೊಲೀಸ್ ಠಾಣೆ ಮಯೂರ್ ವಿಹಾರ್ 1ನೇ ಹಂತಕ್ಕೆ ಹೋಗಿ ಪೊಲೀಸರಿಗೆ ದೂರು ನೀಡಿ, ರೆಕಾರ್ಡಿಂಗ್ ಸಲ್ಲಿಸಿದ್ದಾರೆ.

“ದೂರಿನ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ಸಂಜಯ್ ತಕ್ಷಣ ನನ್ನ ತಂದೆಯ ಮೊಬೈಲ್ ಫೋನ್ ಅನ್ನು ಟ್ರ್ಯಾಕ್ ಮಾಡಲು ಪ್ರಾರಂಭಿಸಿ, ಅವರಿದ್ದ ಸ್ಥಳವನ್ನು ಪತ್ತೆಹಚ್ಚಿದರು. ಟ್ರಾಕ್ ಮಾಡಲಾದ ಕೊನೆಯ ಸ್ಥಳ ಬಾದಲ್‌ಪುರ ಪೊಲೀಸ್ ಠಾಣೆ ಬಳಿ ಇತ್ತು. ಅಲ್ಲಿ ಪೊಲೀಸರು ನಮ್ಮ ತಂದೆಯ ಶವವನ್ನು ಪತ್ತೆಹಚ್ಚಿದರು. ನಂತರ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾದರೂ ಅಷ್ಟರಲ್ಲಿ ಅವರು ಮೃತರಾಗಿದ್ದರು” ಎಂದು ಸಬೀರ್ ಹೇಳಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

“ಸತ್ತ ತಂದೆಯನ್ನು ನೋಡಿದ ಸಬೀರ್ ಕುಸಿದುಬಿದ್ದ. ಅಫ್ತಾಬ್ ಆಲಮ್ ನಾಲಿಗೆ ಭಾಗಕ್ಕೆ ಬಲವಾದ ಏಟು ಬಿದ್ದಿತ್ತು. ಕಿವಿಗಳಿಂದ ರಕ್ತಸ್ರಾವವಾಗುತ್ತಿತ್ತು. ಅವನ ಮುಖದ ಮೇಲೆ ಕತ್ತರಿಸಿದ ಗುರುತು ಇತ್ತು. ಇದು ಸ್ಪಷ್ಟವಾಗಿ ಗುಂಪೊಂದು ಹತ್ಯೆ ಮಾಡಿರುವ ಪ್ರಕರಣವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಅದೇ ರಾತ್ರಿಯಲ್ಲಿ ನೋಂದಾಯಿಸಲಾದ ಎಫ್‌ಐಆರ್, ಅನಾಮಧೇಯ ಹಲ್ಲೆಕೋರರ ಮೇಲೆ ಐಪಿಸಿ ಸೆಕ್ಷನ್ 394 (ದರೋಡೆ ಮಾಡುವಲ್ಲಿ ಸ್ವಯಂಪ್ರೇರಣೆಯಿಂದ ಗಾಯವನ್ನುಂಟುಮಾಡುವುದು) 302 (ಕೊಲೆಗೆ ಶಿಕ್ಷೆ) ಮತ್ತು 201ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಇವರ ಕೊಲೆಯು ಸ್ಪಷ್ವವಾಗಿ ಗುಂಪುಹತ್ಯೆಯಾಗಿದ್ದು, ಇದು ಧರ್ಮ ದ್ವೇಷದ ಅಪರಾಧಗಳನ್ನು ಸಂಕೇತಿಸುತ್ತದೆ. ಆದರೆ ಪೊಲೀಸರು ಕೇವಲ ದರೋಡೆ ಪ್ರಕರಣವನ್ನು ಮಾತ್ರ ದಾಖಲಿಸಿದ್ದಾರೆ ಎಂದು ಹಲವರು ದೂರಿದ್ದಾರೆ.

“ನಾವು ಮುಸ್ಲಿಮರು, ನಮಗೆ ಬದುಕುವ ಹಕ್ಕಿದೆ” ಎಂದು ಸಬೀರ್ ಹೇಳಿದ್ದಾನೆ.

ಅಫ್ತಾಬ್ ಆಲಮ್ ತ್ರಿಲೋಕ್ ಪುರಿಯ ನಿವಾಸಿಯಾಗಿದ್ದು, ನೋಯ್ಡಾದಲ್ಲಿ 1996 ರಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಚಾಲನೆ ಅವನ ಮುಖ್ಯ ಜೀವನೋಪಾಯವಾಗಿತ್ತು. ಅವರಿಗೆ ಹೆಂಡತಿ, ಅವರ ಮೂವರು ಗಂಡು ಮಕ್ಕಳು, ಅನಾರೋಗ್ಯದ ಪೋಷಕರು ಮತ್ತು ಇಬ್ಬರು ಒಡಹುಟ್ಟಿದವರು ಇದ್ದಾರೆ. ಅವರೆಲ್ಲರೂ ಆಲಮ್ ಮತ್ತು ಸಬೀರ್ ಮೇಲೆ ಆರ್ಥಿಕವಾಗಿ ಅವಲಂಬಿಸಿದ್ದಾರೆ.

“ಲಾಕ್ ಡೌನ್ ಸಮಯದಲ್ಲಿ, ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ಆಲಮ್ ಹೊರಬಂದಿರಲಿಲ್ಲ ಎಂದು ಅವರ ಕುಟುಂಬ ತಿಳಿಸಿದೆ. ಆದರೆ ಕುಟುಂಬದ ಸ್ನೇಹಿತ ಮತ್ತು ತನ್ನ ಹಳೆಯ ಗ್ರಾಹಕರು, ‘ಗುರಗಾಂವ್ ನಿಂದ ಉತ್ತರ ಪ್ರದೇಶದ ಬುಲಂದ್‌ಶಹರ್‌ಗೆ ಬಿಡಬಹುದೇ’ ಎಂದು ಕೇಳಲು ಅವರನ್ನು ಕರೆದಾಗ, ಅವರು ನಿರಾಕರಿಸಲಾಗಲಿಲ್ಲ. ಲಾಕ್‌ಡೌನ್ ಸಮಯದಲ್ಲಿ ಆರ್ಥಿಕ ಸಮಸ್ಯೆಗೆ ಒಳಗಾಗಿದ್ದರಿಂದ ಈ ಪ್ರಸ್ತಾವವನ್ನು ಒಪ್ಪಿಕೊಂಡಿದ್ದರು” ಎಂದು ಕುಟುಂಬದವರು ಹೇಳಿದರು.

ಆಲಮ್ ಅವರ ತಂದೆ 65 ವರ್ಷದ ಮೊಹಮ್ಮದ್ ತಾಹಿರ್ ಪ್ರತಿಕ್ರಿಯಿಸಿ, “ಇದು ದರೋಡೆ ಪ್ರಕರಣವಾಗಿದ್ದರೆ, ಅವರು ಕಾರನ್ನು ಏಕೆ ತೆಗೆದುಕೊಂಡಿಲ್ಲ? ಅವರು ಕಾರನ್ನು ಕದ್ದು ಅವನ ದೇಹವನ್ನು ಬೀದಿಗೆ ಎಸೆಯುತ್ತಿದ್ದರು. ಇದು ಸ್ಪಷ್ಟವಾಗಿ ಗುಂಪು ಹತ್ಯೆಯ ಪ್ರಕರಣವಾಗಿದೆ. ಅವರು ಮೊಬೈಲ್ ಫೋನ್ ಮಾತ್ರ ತೆಗೆದುಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಮೋದಿ ಜಿಂದಾಬಾದ್, ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ ಮುಸ್ಲಿಂ ಆಟೋ ಡ್ರೈವರ್ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...