Homeಮುಖಪುಟ‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

ಇವರ ಕೊಲೆಯು ಸ್ಪಷ್ವವಾಗಿ ಗುಂಪುಹತ್ಯೆಯಾಗಿದ್ದು, ಇದು ಧರ್ಮ ದ್ವೇಷದ ಅಪರಾಧಗಳನ್ನು ಸಂಕೇತಿಸುತ್ತದೆ. ಆದರೆ ಪೊಲೀಸರು ಕೇವಲ ದರೋಡೆ ಪ್ರಕರಣವನ್ನು ಮಾತ್ರ ದಾಖಲಿಸಿದ್ದಾರೆ ಎಂದು ಹಲವರು ದೂರಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದಲ್ಲಿ ಅಫ್ತಾಬ್ ಆಲಮ್ ಎಂಬ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹಿಂದುತ್ವವಾದಿಗಳು ‘ಜೈ ಶ್ರೀರಾಮ್’ ಹೇಳುವಂತೆ ಒತ್ತಾಯಿಸಿ” ಎಂದು ಬರ್ಬರವಾಗಿ ಹಲ್ಲೆ ಮಾಡಿ ಹತ್ಯೆಗೈದಿರುವ ದುರ್ಘಟನೆ ಜರುಗಿದೆ.

ತಡವಾಗಿ ಬೆಳಕಿಗೆ ಬಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ ಆಲಮ್ ಅವರ ಮಗ ಸಬೀರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ಭಾನುವಾರ ರಾತ್ರಿ ನನ್ನ ತಂದೆಯಿಂದ ನಿರೀಕ್ಷಿತವಲ್ಲದ ರೀತಿಯಲ್ಲಿ ಕರೆ ಬಂತು. ಆಗಲೇ ಏನೋ ಸಮಸ್ಯೆಯಾಗಿದೆ ಎಂದು ನನಗೆ ತಿಳಿಯಿತು. ಫೋನ್ ರಿಸೀವ್ ಮಾಡಿದ ನಂತರ, ನನ್ನ ತಂದೆ ಒಂದು ಮಾತನ್ನೂ ಆಡಲಿಲ್ಲ. ಆದರೆ ಅಲ್ಲಿ ಕುಡಿದಿದ್ದ ಜನರ ಗುಂಪೊಂದು ಮಾತನಾಡುತ್ತಿದ್ದುದು ನನಗೆ ಕೇಳಿಸುತ್ತಿತ್ತು. ಅವರು ನನ್ನ ತಂದೆಯನ್ನು ‘ಕುಡಿಯುತ್ತೀಯಾ ಎಂದಾಗ, ನನ್ನ ತಂದೆ ಇಲ್ಲಾ ಎಂದು ಹೇಳಿರುವುದು ಸ್ಪಷ್ಟವಾಗಿ ಕೇಳಿಸುತ್ತಿತ್ತು” ಎಂದು 20 ವರ್ಷದ ಸಬೀರ್ ಪೊಲೀಸರಿಗೆ ತಿಳಿಸಿದ್ದಾನೆ.

ಸಬೀರ್ ತನ್ನ ತಂದೆಯ ಫೋನ್‌ ಕರೆಯನ್ನು ರೆಕಾರ್ಡ್ ಮಾಡಿದ್ದು, ಈ ರೆಕಾರ್ಡಿಂಗ್‌ನ ಸುಮಾರು 8 ನಿಮಿಷ 39 ಸೆಕೆಂಡ್ ನಲ್ಲಿ “ಜೈ ಶ್ರೀರಾಮ್ ಬೋಲ್, ಬೋಲ್ ಜೈ ಶ್ರೀರಾಮ್” ಎಂದು ಒತ್ತಾಯಿಸುತ್ತಿರುವುದು ದಾಖಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಅದಾದ ನಂತರ ಯಾವುದೇ ಸಂಭಾಷಣೆ ಕೇಳಿಸಲಿಲ್ಲ. ಆದರೆ 11 ನಿಮಿಷಗಳ ನಂತರ, 19 ನಿಮಿಷ 41 ಸೆಕೆಂಡಿನಲ್ಲಿ ಆ ಗುಂಪಿನಲ್ಲಿದ್ದ ಒಬ್ಬ, “ಸಾನ್ಸ್ ರುಕ್ ಗೈ (ಅವನ ಉಸಿರಾಟ ನಿಂತಿದೆ)” ಎಂದು ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

“ನನ್ನ ತಂದೆ, ನಿನ್ನೆ ಮಧ್ಯಾಹ್ನ 3 ಗಂಟೆಗೆ ಬುಲಂದ್‌ಶಹರ್‌ನಲ್ಲಿ ತನ್ನ ಹಳೆಯ ಗ್ರಾಹಕರೊಬ್ಬರನ್ನು ಬಿಡಲು ಹೋಗಿದ್ದರು. ಅವರು ಸುಮಾರು 7 ಗಂಟೆಗೆ ಅವರನ್ನು ಬಿಟ್ಟು ಮನೆಗೆ ತೆರಳಿದ್ದರು. ದಾರಿಯಲ್ಲಿ ಅವರು ನನಗೆ ಕರೆಮಾಡಿ, ತಮ್ಮ ಫಾಸ್ಟ್ ಟ್ಯಾಗ್ ಅನ್ನು ರೀಚಾರ್ಜ್ ಮಾಡಲು ಹೇಳಿದರು. ನಾನು ಸುಮಾರು 7:30ಕ್ಕೆ ರೀಚಾರ್ಜ್ ಮಾಡಿದ್ದೆ. ಆದರೆ, ಸ್ವಲ್ಪ ಸಮಯದ ನಂತರ ನನಗೆ ಮತ್ತೆ ಕರೆ ಬಂತು. ಇದು ಟೋಲ್ ಬೂತ್ ಬಳಿ ಎಂದು ನಾನು ಭಾವಿಸುತ್ತೇನೆ. ತನಗೆ ಎದುರಾದ ಕೆಲವು ಪುರುಷರ ಗುಂಪಿನ ಬಗ್ಗೆ ಅವರಿಗೆ ಅನುಮಾನ ಬಂದು, ಅವರು ನನಗೆ ಕರೆ ಮಾಡಿ, ಮೊಬೈಲ್ ಫೋನ್ ಅನ್ನು ಜೇಬಿನಲ್ಲಿ ಇಟ್ಟುಕೊಂಡಿದ್ದಾರೆ” ಎಂದು ಸಬೀರ್ ಹೇಳಿದ್ದಾನೆ.

ಸಬೀರ್, ತನ್ನ ತಂದೆಯ ಫೋನ್ ಸ್ವಿಚ್ ಆಫ್ ಆಗುವವರೆಗೆ, ಅಂದರೆ ಕರೆ ಬಂದಿದ್ದ ಸಮಯದಿಂದ ಮುಂದಿನ 40 ನಿಮಿಷಗಳ ಕಾಲ ಈ ಕರೆಯನ್ನು ರೆಕಾರ್ಡ್ ಮಾಡಿದ್ದಾನೆ. ನಂತರ ತಕ್ಷಣ ಹತ್ತಿರದ ಪೊಲೀಸ್ ಠಾಣೆ ಮಯೂರ್ ವಿಹಾರ್ 1ನೇ ಹಂತಕ್ಕೆ ಹೋಗಿ ಪೊಲೀಸರಿಗೆ ದೂರು ನೀಡಿ, ರೆಕಾರ್ಡಿಂಗ್ ಸಲ್ಲಿಸಿದ್ದಾರೆ.

“ದೂರಿನ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ಸಂಜಯ್ ತಕ್ಷಣ ನನ್ನ ತಂದೆಯ ಮೊಬೈಲ್ ಫೋನ್ ಅನ್ನು ಟ್ರ್ಯಾಕ್ ಮಾಡಲು ಪ್ರಾರಂಭಿಸಿ, ಅವರಿದ್ದ ಸ್ಥಳವನ್ನು ಪತ್ತೆಹಚ್ಚಿದರು. ಟ್ರಾಕ್ ಮಾಡಲಾದ ಕೊನೆಯ ಸ್ಥಳ ಬಾದಲ್‌ಪುರ ಪೊಲೀಸ್ ಠಾಣೆ ಬಳಿ ಇತ್ತು. ಅಲ್ಲಿ ಪೊಲೀಸರು ನಮ್ಮ ತಂದೆಯ ಶವವನ್ನು ಪತ್ತೆಹಚ್ಚಿದರು. ನಂತರ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾದರೂ ಅಷ್ಟರಲ್ಲಿ ಅವರು ಮೃತರಾಗಿದ್ದರು” ಎಂದು ಸಬೀರ್ ಹೇಳಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

“ಸತ್ತ ತಂದೆಯನ್ನು ನೋಡಿದ ಸಬೀರ್ ಕುಸಿದುಬಿದ್ದ. ಅಫ್ತಾಬ್ ಆಲಮ್ ನಾಲಿಗೆ ಭಾಗಕ್ಕೆ ಬಲವಾದ ಏಟು ಬಿದ್ದಿತ್ತು. ಕಿವಿಗಳಿಂದ ರಕ್ತಸ್ರಾವವಾಗುತ್ತಿತ್ತು. ಅವನ ಮುಖದ ಮೇಲೆ ಕತ್ತರಿಸಿದ ಗುರುತು ಇತ್ತು. ಇದು ಸ್ಪಷ್ಟವಾಗಿ ಗುಂಪೊಂದು ಹತ್ಯೆ ಮಾಡಿರುವ ಪ್ರಕರಣವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಅದೇ ರಾತ್ರಿಯಲ್ಲಿ ನೋಂದಾಯಿಸಲಾದ ಎಫ್‌ಐಆರ್, ಅನಾಮಧೇಯ ಹಲ್ಲೆಕೋರರ ಮೇಲೆ ಐಪಿಸಿ ಸೆಕ್ಷನ್ 394 (ದರೋಡೆ ಮಾಡುವಲ್ಲಿ ಸ್ವಯಂಪ್ರೇರಣೆಯಿಂದ ಗಾಯವನ್ನುಂಟುಮಾಡುವುದು) 302 (ಕೊಲೆಗೆ ಶಿಕ್ಷೆ) ಮತ್ತು 201ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಇವರ ಕೊಲೆಯು ಸ್ಪಷ್ವವಾಗಿ ಗುಂಪುಹತ್ಯೆಯಾಗಿದ್ದು, ಇದು ಧರ್ಮ ದ್ವೇಷದ ಅಪರಾಧಗಳನ್ನು ಸಂಕೇತಿಸುತ್ತದೆ. ಆದರೆ ಪೊಲೀಸರು ಕೇವಲ ದರೋಡೆ ಪ್ರಕರಣವನ್ನು ಮಾತ್ರ ದಾಖಲಿಸಿದ್ದಾರೆ ಎಂದು ಹಲವರು ದೂರಿದ್ದಾರೆ.

“ನಾವು ಮುಸ್ಲಿಮರು, ನಮಗೆ ಬದುಕುವ ಹಕ್ಕಿದೆ” ಎಂದು ಸಬೀರ್ ಹೇಳಿದ್ದಾನೆ.

ಅಫ್ತಾಬ್ ಆಲಮ್ ತ್ರಿಲೋಕ್ ಪುರಿಯ ನಿವಾಸಿಯಾಗಿದ್ದು, ನೋಯ್ಡಾದಲ್ಲಿ 1996 ರಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಚಾಲನೆ ಅವನ ಮುಖ್ಯ ಜೀವನೋಪಾಯವಾಗಿತ್ತು. ಅವರಿಗೆ ಹೆಂಡತಿ, ಅವರ ಮೂವರು ಗಂಡು ಮಕ್ಕಳು, ಅನಾರೋಗ್ಯದ ಪೋಷಕರು ಮತ್ತು ಇಬ್ಬರು ಒಡಹುಟ್ಟಿದವರು ಇದ್ದಾರೆ. ಅವರೆಲ್ಲರೂ ಆಲಮ್ ಮತ್ತು ಸಬೀರ್ ಮೇಲೆ ಆರ್ಥಿಕವಾಗಿ ಅವಲಂಬಿಸಿದ್ದಾರೆ.

“ಲಾಕ್ ಡೌನ್ ಸಮಯದಲ್ಲಿ, ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ಆಲಮ್ ಹೊರಬಂದಿರಲಿಲ್ಲ ಎಂದು ಅವರ ಕುಟುಂಬ ತಿಳಿಸಿದೆ. ಆದರೆ ಕುಟುಂಬದ ಸ್ನೇಹಿತ ಮತ್ತು ತನ್ನ ಹಳೆಯ ಗ್ರಾಹಕರು, ‘ಗುರಗಾಂವ್ ನಿಂದ ಉತ್ತರ ಪ್ರದೇಶದ ಬುಲಂದ್‌ಶಹರ್‌ಗೆ ಬಿಡಬಹುದೇ’ ಎಂದು ಕೇಳಲು ಅವರನ್ನು ಕರೆದಾಗ, ಅವರು ನಿರಾಕರಿಸಲಾಗಲಿಲ್ಲ. ಲಾಕ್‌ಡೌನ್ ಸಮಯದಲ್ಲಿ ಆರ್ಥಿಕ ಸಮಸ್ಯೆಗೆ ಒಳಗಾಗಿದ್ದರಿಂದ ಈ ಪ್ರಸ್ತಾವವನ್ನು ಒಪ್ಪಿಕೊಂಡಿದ್ದರು” ಎಂದು ಕುಟುಂಬದವರು ಹೇಳಿದರು.

ಆಲಮ್ ಅವರ ತಂದೆ 65 ವರ್ಷದ ಮೊಹಮ್ಮದ್ ತಾಹಿರ್ ಪ್ರತಿಕ್ರಿಯಿಸಿ, “ಇದು ದರೋಡೆ ಪ್ರಕರಣವಾಗಿದ್ದರೆ, ಅವರು ಕಾರನ್ನು ಏಕೆ ತೆಗೆದುಕೊಂಡಿಲ್ಲ? ಅವರು ಕಾರನ್ನು ಕದ್ದು ಅವನ ದೇಹವನ್ನು ಬೀದಿಗೆ ಎಸೆಯುತ್ತಿದ್ದರು. ಇದು ಸ್ಪಷ್ಟವಾಗಿ ಗುಂಪು ಹತ್ಯೆಯ ಪ್ರಕರಣವಾಗಿದೆ. ಅವರು ಮೊಬೈಲ್ ಫೋನ್ ಮಾತ್ರ ತೆಗೆದುಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಮೋದಿ ಜಿಂದಾಬಾದ್, ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ ಮುಸ್ಲಿಂ ಆಟೋ ಡ್ರೈವರ್ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...