Homeಮುಖಪುಟ‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

ಇವರ ಕೊಲೆಯು ಸ್ಪಷ್ವವಾಗಿ ಗುಂಪುಹತ್ಯೆಯಾಗಿದ್ದು, ಇದು ಧರ್ಮ ದ್ವೇಷದ ಅಪರಾಧಗಳನ್ನು ಸಂಕೇತಿಸುತ್ತದೆ. ಆದರೆ ಪೊಲೀಸರು ಕೇವಲ ದರೋಡೆ ಪ್ರಕರಣವನ್ನು ಮಾತ್ರ ದಾಖಲಿಸಿದ್ದಾರೆ ಎಂದು ಹಲವರು ದೂರಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದಲ್ಲಿ ಅಫ್ತಾಬ್ ಆಲಮ್ ಎಂಬ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹಿಂದುತ್ವವಾದಿಗಳು ‘ಜೈ ಶ್ರೀರಾಮ್’ ಹೇಳುವಂತೆ ಒತ್ತಾಯಿಸಿ” ಎಂದು ಬರ್ಬರವಾಗಿ ಹಲ್ಲೆ ಮಾಡಿ ಹತ್ಯೆಗೈದಿರುವ ದುರ್ಘಟನೆ ಜರುಗಿದೆ.

ತಡವಾಗಿ ಬೆಳಕಿಗೆ ಬಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ ಆಲಮ್ ಅವರ ಮಗ ಸಬೀರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ಭಾನುವಾರ ರಾತ್ರಿ ನನ್ನ ತಂದೆಯಿಂದ ನಿರೀಕ್ಷಿತವಲ್ಲದ ರೀತಿಯಲ್ಲಿ ಕರೆ ಬಂತು. ಆಗಲೇ ಏನೋ ಸಮಸ್ಯೆಯಾಗಿದೆ ಎಂದು ನನಗೆ ತಿಳಿಯಿತು. ಫೋನ್ ರಿಸೀವ್ ಮಾಡಿದ ನಂತರ, ನನ್ನ ತಂದೆ ಒಂದು ಮಾತನ್ನೂ ಆಡಲಿಲ್ಲ. ಆದರೆ ಅಲ್ಲಿ ಕುಡಿದಿದ್ದ ಜನರ ಗುಂಪೊಂದು ಮಾತನಾಡುತ್ತಿದ್ದುದು ನನಗೆ ಕೇಳಿಸುತ್ತಿತ್ತು. ಅವರು ನನ್ನ ತಂದೆಯನ್ನು ‘ಕುಡಿಯುತ್ತೀಯಾ ಎಂದಾಗ, ನನ್ನ ತಂದೆ ಇಲ್ಲಾ ಎಂದು ಹೇಳಿರುವುದು ಸ್ಪಷ್ಟವಾಗಿ ಕೇಳಿಸುತ್ತಿತ್ತು” ಎಂದು 20 ವರ್ಷದ ಸಬೀರ್ ಪೊಲೀಸರಿಗೆ ತಿಳಿಸಿದ್ದಾನೆ.

ಸಬೀರ್ ತನ್ನ ತಂದೆಯ ಫೋನ್‌ ಕರೆಯನ್ನು ರೆಕಾರ್ಡ್ ಮಾಡಿದ್ದು, ಈ ರೆಕಾರ್ಡಿಂಗ್‌ನ ಸುಮಾರು 8 ನಿಮಿಷ 39 ಸೆಕೆಂಡ್ ನಲ್ಲಿ “ಜೈ ಶ್ರೀರಾಮ್ ಬೋಲ್, ಬೋಲ್ ಜೈ ಶ್ರೀರಾಮ್” ಎಂದು ಒತ್ತಾಯಿಸುತ್ತಿರುವುದು ದಾಖಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಅದಾದ ನಂತರ ಯಾವುದೇ ಸಂಭಾಷಣೆ ಕೇಳಿಸಲಿಲ್ಲ. ಆದರೆ 11 ನಿಮಿಷಗಳ ನಂತರ, 19 ನಿಮಿಷ 41 ಸೆಕೆಂಡಿನಲ್ಲಿ ಆ ಗುಂಪಿನಲ್ಲಿದ್ದ ಒಬ್ಬ, “ಸಾನ್ಸ್ ರುಕ್ ಗೈ (ಅವನ ಉಸಿರಾಟ ನಿಂತಿದೆ)” ಎಂದು ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

“ನನ್ನ ತಂದೆ, ನಿನ್ನೆ ಮಧ್ಯಾಹ್ನ 3 ಗಂಟೆಗೆ ಬುಲಂದ್‌ಶಹರ್‌ನಲ್ಲಿ ತನ್ನ ಹಳೆಯ ಗ್ರಾಹಕರೊಬ್ಬರನ್ನು ಬಿಡಲು ಹೋಗಿದ್ದರು. ಅವರು ಸುಮಾರು 7 ಗಂಟೆಗೆ ಅವರನ್ನು ಬಿಟ್ಟು ಮನೆಗೆ ತೆರಳಿದ್ದರು. ದಾರಿಯಲ್ಲಿ ಅವರು ನನಗೆ ಕರೆಮಾಡಿ, ತಮ್ಮ ಫಾಸ್ಟ್ ಟ್ಯಾಗ್ ಅನ್ನು ರೀಚಾರ್ಜ್ ಮಾಡಲು ಹೇಳಿದರು. ನಾನು ಸುಮಾರು 7:30ಕ್ಕೆ ರೀಚಾರ್ಜ್ ಮಾಡಿದ್ದೆ. ಆದರೆ, ಸ್ವಲ್ಪ ಸಮಯದ ನಂತರ ನನಗೆ ಮತ್ತೆ ಕರೆ ಬಂತು. ಇದು ಟೋಲ್ ಬೂತ್ ಬಳಿ ಎಂದು ನಾನು ಭಾವಿಸುತ್ತೇನೆ. ತನಗೆ ಎದುರಾದ ಕೆಲವು ಪುರುಷರ ಗುಂಪಿನ ಬಗ್ಗೆ ಅವರಿಗೆ ಅನುಮಾನ ಬಂದು, ಅವರು ನನಗೆ ಕರೆ ಮಾಡಿ, ಮೊಬೈಲ್ ಫೋನ್ ಅನ್ನು ಜೇಬಿನಲ್ಲಿ ಇಟ್ಟುಕೊಂಡಿದ್ದಾರೆ” ಎಂದು ಸಬೀರ್ ಹೇಳಿದ್ದಾನೆ.

ಸಬೀರ್, ತನ್ನ ತಂದೆಯ ಫೋನ್ ಸ್ವಿಚ್ ಆಫ್ ಆಗುವವರೆಗೆ, ಅಂದರೆ ಕರೆ ಬಂದಿದ್ದ ಸಮಯದಿಂದ ಮುಂದಿನ 40 ನಿಮಿಷಗಳ ಕಾಲ ಈ ಕರೆಯನ್ನು ರೆಕಾರ್ಡ್ ಮಾಡಿದ್ದಾನೆ. ನಂತರ ತಕ್ಷಣ ಹತ್ತಿರದ ಪೊಲೀಸ್ ಠಾಣೆ ಮಯೂರ್ ವಿಹಾರ್ 1ನೇ ಹಂತಕ್ಕೆ ಹೋಗಿ ಪೊಲೀಸರಿಗೆ ದೂರು ನೀಡಿ, ರೆಕಾರ್ಡಿಂಗ್ ಸಲ್ಲಿಸಿದ್ದಾರೆ.

“ದೂರಿನ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ಸಂಜಯ್ ತಕ್ಷಣ ನನ್ನ ತಂದೆಯ ಮೊಬೈಲ್ ಫೋನ್ ಅನ್ನು ಟ್ರ್ಯಾಕ್ ಮಾಡಲು ಪ್ರಾರಂಭಿಸಿ, ಅವರಿದ್ದ ಸ್ಥಳವನ್ನು ಪತ್ತೆಹಚ್ಚಿದರು. ಟ್ರಾಕ್ ಮಾಡಲಾದ ಕೊನೆಯ ಸ್ಥಳ ಬಾದಲ್‌ಪುರ ಪೊಲೀಸ್ ಠಾಣೆ ಬಳಿ ಇತ್ತು. ಅಲ್ಲಿ ಪೊಲೀಸರು ನಮ್ಮ ತಂದೆಯ ಶವವನ್ನು ಪತ್ತೆಹಚ್ಚಿದರು. ನಂತರ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾದರೂ ಅಷ್ಟರಲ್ಲಿ ಅವರು ಮೃತರಾಗಿದ್ದರು” ಎಂದು ಸಬೀರ್ ಹೇಳಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

“ಸತ್ತ ತಂದೆಯನ್ನು ನೋಡಿದ ಸಬೀರ್ ಕುಸಿದುಬಿದ್ದ. ಅಫ್ತಾಬ್ ಆಲಮ್ ನಾಲಿಗೆ ಭಾಗಕ್ಕೆ ಬಲವಾದ ಏಟು ಬಿದ್ದಿತ್ತು. ಕಿವಿಗಳಿಂದ ರಕ್ತಸ್ರಾವವಾಗುತ್ತಿತ್ತು. ಅವನ ಮುಖದ ಮೇಲೆ ಕತ್ತರಿಸಿದ ಗುರುತು ಇತ್ತು. ಇದು ಸ್ಪಷ್ಟವಾಗಿ ಗುಂಪೊಂದು ಹತ್ಯೆ ಮಾಡಿರುವ ಪ್ರಕರಣವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಅದೇ ರಾತ್ರಿಯಲ್ಲಿ ನೋಂದಾಯಿಸಲಾದ ಎಫ್‌ಐಆರ್, ಅನಾಮಧೇಯ ಹಲ್ಲೆಕೋರರ ಮೇಲೆ ಐಪಿಸಿ ಸೆಕ್ಷನ್ 394 (ದರೋಡೆ ಮಾಡುವಲ್ಲಿ ಸ್ವಯಂಪ್ರೇರಣೆಯಿಂದ ಗಾಯವನ್ನುಂಟುಮಾಡುವುದು) 302 (ಕೊಲೆಗೆ ಶಿಕ್ಷೆ) ಮತ್ತು 201ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಇವರ ಕೊಲೆಯು ಸ್ಪಷ್ವವಾಗಿ ಗುಂಪುಹತ್ಯೆಯಾಗಿದ್ದು, ಇದು ಧರ್ಮ ದ್ವೇಷದ ಅಪರಾಧಗಳನ್ನು ಸಂಕೇತಿಸುತ್ತದೆ. ಆದರೆ ಪೊಲೀಸರು ಕೇವಲ ದರೋಡೆ ಪ್ರಕರಣವನ್ನು ಮಾತ್ರ ದಾಖಲಿಸಿದ್ದಾರೆ ಎಂದು ಹಲವರು ದೂರಿದ್ದಾರೆ.

“ನಾವು ಮುಸ್ಲಿಮರು, ನಮಗೆ ಬದುಕುವ ಹಕ್ಕಿದೆ” ಎಂದು ಸಬೀರ್ ಹೇಳಿದ್ದಾನೆ.

ಅಫ್ತಾಬ್ ಆಲಮ್ ತ್ರಿಲೋಕ್ ಪುರಿಯ ನಿವಾಸಿಯಾಗಿದ್ದು, ನೋಯ್ಡಾದಲ್ಲಿ 1996 ರಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಚಾಲನೆ ಅವನ ಮುಖ್ಯ ಜೀವನೋಪಾಯವಾಗಿತ್ತು. ಅವರಿಗೆ ಹೆಂಡತಿ, ಅವರ ಮೂವರು ಗಂಡು ಮಕ್ಕಳು, ಅನಾರೋಗ್ಯದ ಪೋಷಕರು ಮತ್ತು ಇಬ್ಬರು ಒಡಹುಟ್ಟಿದವರು ಇದ್ದಾರೆ. ಅವರೆಲ್ಲರೂ ಆಲಮ್ ಮತ್ತು ಸಬೀರ್ ಮೇಲೆ ಆರ್ಥಿಕವಾಗಿ ಅವಲಂಬಿಸಿದ್ದಾರೆ.

“ಲಾಕ್ ಡೌನ್ ಸಮಯದಲ್ಲಿ, ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ಆಲಮ್ ಹೊರಬಂದಿರಲಿಲ್ಲ ಎಂದು ಅವರ ಕುಟುಂಬ ತಿಳಿಸಿದೆ. ಆದರೆ ಕುಟುಂಬದ ಸ್ನೇಹಿತ ಮತ್ತು ತನ್ನ ಹಳೆಯ ಗ್ರಾಹಕರು, ‘ಗುರಗಾಂವ್ ನಿಂದ ಉತ್ತರ ಪ್ರದೇಶದ ಬುಲಂದ್‌ಶಹರ್‌ಗೆ ಬಿಡಬಹುದೇ’ ಎಂದು ಕೇಳಲು ಅವರನ್ನು ಕರೆದಾಗ, ಅವರು ನಿರಾಕರಿಸಲಾಗಲಿಲ್ಲ. ಲಾಕ್‌ಡೌನ್ ಸಮಯದಲ್ಲಿ ಆರ್ಥಿಕ ಸಮಸ್ಯೆಗೆ ಒಳಗಾಗಿದ್ದರಿಂದ ಈ ಪ್ರಸ್ತಾವವನ್ನು ಒಪ್ಪಿಕೊಂಡಿದ್ದರು” ಎಂದು ಕುಟುಂಬದವರು ಹೇಳಿದರು.

ಆಲಮ್ ಅವರ ತಂದೆ 65 ವರ್ಷದ ಮೊಹಮ್ಮದ್ ತಾಹಿರ್ ಪ್ರತಿಕ್ರಿಯಿಸಿ, “ಇದು ದರೋಡೆ ಪ್ರಕರಣವಾಗಿದ್ದರೆ, ಅವರು ಕಾರನ್ನು ಏಕೆ ತೆಗೆದುಕೊಂಡಿಲ್ಲ? ಅವರು ಕಾರನ್ನು ಕದ್ದು ಅವನ ದೇಹವನ್ನು ಬೀದಿಗೆ ಎಸೆಯುತ್ತಿದ್ದರು. ಇದು ಸ್ಪಷ್ಟವಾಗಿ ಗುಂಪು ಹತ್ಯೆಯ ಪ್ರಕರಣವಾಗಿದೆ. ಅವರು ಮೊಬೈಲ್ ಫೋನ್ ಮಾತ್ರ ತೆಗೆದುಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಮೋದಿ ಜಿಂದಾಬಾದ್, ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ ಮುಸ್ಲಿಂ ಆಟೋ ಡ್ರೈವರ್ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...