Homeಮುಖಪುಟ‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

‘ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹತ್ಯೆ: ಯುಪಿಯಲ್ಲಿ ಮತ್ತೊಂದು ಲಿಂಚಿಂಗ್?

ಇವರ ಕೊಲೆಯು ಸ್ಪಷ್ವವಾಗಿ ಗುಂಪುಹತ್ಯೆಯಾಗಿದ್ದು, ಇದು ಧರ್ಮ ದ್ವೇಷದ ಅಪರಾಧಗಳನ್ನು ಸಂಕೇತಿಸುತ್ತದೆ. ಆದರೆ ಪೊಲೀಸರು ಕೇವಲ ದರೋಡೆ ಪ್ರಕರಣವನ್ನು ಮಾತ್ರ ದಾಖಲಿಸಿದ್ದಾರೆ ಎಂದು ಹಲವರು ದೂರಿದ್ದಾರೆ.

- Advertisement -
- Advertisement -

ಉತ್ತರಪ್ರದೇಶದಲ್ಲಿ ಅಫ್ತಾಬ್ ಆಲಮ್ ಎಂಬ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಹಿಂದುತ್ವವಾದಿಗಳು ‘ಜೈ ಶ್ರೀರಾಮ್’ ಹೇಳುವಂತೆ ಒತ್ತಾಯಿಸಿ” ಎಂದು ಬರ್ಬರವಾಗಿ ಹಲ್ಲೆ ಮಾಡಿ ಹತ್ಯೆಗೈದಿರುವ ದುರ್ಘಟನೆ ಜರುಗಿದೆ.

ತಡವಾಗಿ ಬೆಳಕಿಗೆ ಬಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ ಆಲಮ್ ಅವರ ಮಗ ಸಬೀರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

“ಭಾನುವಾರ ರಾತ್ರಿ ನನ್ನ ತಂದೆಯಿಂದ ನಿರೀಕ್ಷಿತವಲ್ಲದ ರೀತಿಯಲ್ಲಿ ಕರೆ ಬಂತು. ಆಗಲೇ ಏನೋ ಸಮಸ್ಯೆಯಾಗಿದೆ ಎಂದು ನನಗೆ ತಿಳಿಯಿತು. ಫೋನ್ ರಿಸೀವ್ ಮಾಡಿದ ನಂತರ, ನನ್ನ ತಂದೆ ಒಂದು ಮಾತನ್ನೂ ಆಡಲಿಲ್ಲ. ಆದರೆ ಅಲ್ಲಿ ಕುಡಿದಿದ್ದ ಜನರ ಗುಂಪೊಂದು ಮಾತನಾಡುತ್ತಿದ್ದುದು ನನಗೆ ಕೇಳಿಸುತ್ತಿತ್ತು. ಅವರು ನನ್ನ ತಂದೆಯನ್ನು ‘ಕುಡಿಯುತ್ತೀಯಾ ಎಂದಾಗ, ನನ್ನ ತಂದೆ ಇಲ್ಲಾ ಎಂದು ಹೇಳಿರುವುದು ಸ್ಪಷ್ಟವಾಗಿ ಕೇಳಿಸುತ್ತಿತ್ತು” ಎಂದು 20 ವರ್ಷದ ಸಬೀರ್ ಪೊಲೀಸರಿಗೆ ತಿಳಿಸಿದ್ದಾನೆ.

ಸಬೀರ್ ತನ್ನ ತಂದೆಯ ಫೋನ್‌ ಕರೆಯನ್ನು ರೆಕಾರ್ಡ್ ಮಾಡಿದ್ದು, ಈ ರೆಕಾರ್ಡಿಂಗ್‌ನ ಸುಮಾರು 8 ನಿಮಿಷ 39 ಸೆಕೆಂಡ್ ನಲ್ಲಿ “ಜೈ ಶ್ರೀರಾಮ್ ಬೋಲ್, ಬೋಲ್ ಜೈ ಶ್ರೀರಾಮ್” ಎಂದು ಒತ್ತಾಯಿಸುತ್ತಿರುವುದು ದಾಖಲಾಗಿದೆ ಎಂದು ದಿ ವೈರ್ ವರದಿ ಮಾಡಿದೆ.

ಅದಾದ ನಂತರ ಯಾವುದೇ ಸಂಭಾಷಣೆ ಕೇಳಿಸಲಿಲ್ಲ. ಆದರೆ 11 ನಿಮಿಷಗಳ ನಂತರ, 19 ನಿಮಿಷ 41 ಸೆಕೆಂಡಿನಲ್ಲಿ ಆ ಗುಂಪಿನಲ್ಲಿದ್ದ ಒಬ್ಬ, “ಸಾನ್ಸ್ ರುಕ್ ಗೈ (ಅವನ ಉಸಿರಾಟ ನಿಂತಿದೆ)” ಎಂದು ಹೇಳಿರುವುದು ದಾಖಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ದೆಹಲಿಯಲ್ಲಿ ಮುಸ್ಲಿಂ ವೈದ್ಯೆಯ ಮೇಲೆ RSS ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಯೇ?

“ನನ್ನ ತಂದೆ, ನಿನ್ನೆ ಮಧ್ಯಾಹ್ನ 3 ಗಂಟೆಗೆ ಬುಲಂದ್‌ಶಹರ್‌ನಲ್ಲಿ ತನ್ನ ಹಳೆಯ ಗ್ರಾಹಕರೊಬ್ಬರನ್ನು ಬಿಡಲು ಹೋಗಿದ್ದರು. ಅವರು ಸುಮಾರು 7 ಗಂಟೆಗೆ ಅವರನ್ನು ಬಿಟ್ಟು ಮನೆಗೆ ತೆರಳಿದ್ದರು. ದಾರಿಯಲ್ಲಿ ಅವರು ನನಗೆ ಕರೆಮಾಡಿ, ತಮ್ಮ ಫಾಸ್ಟ್ ಟ್ಯಾಗ್ ಅನ್ನು ರೀಚಾರ್ಜ್ ಮಾಡಲು ಹೇಳಿದರು. ನಾನು ಸುಮಾರು 7:30ಕ್ಕೆ ರೀಚಾರ್ಜ್ ಮಾಡಿದ್ದೆ. ಆದರೆ, ಸ್ವಲ್ಪ ಸಮಯದ ನಂತರ ನನಗೆ ಮತ್ತೆ ಕರೆ ಬಂತು. ಇದು ಟೋಲ್ ಬೂತ್ ಬಳಿ ಎಂದು ನಾನು ಭಾವಿಸುತ್ತೇನೆ. ತನಗೆ ಎದುರಾದ ಕೆಲವು ಪುರುಷರ ಗುಂಪಿನ ಬಗ್ಗೆ ಅವರಿಗೆ ಅನುಮಾನ ಬಂದು, ಅವರು ನನಗೆ ಕರೆ ಮಾಡಿ, ಮೊಬೈಲ್ ಫೋನ್ ಅನ್ನು ಜೇಬಿನಲ್ಲಿ ಇಟ್ಟುಕೊಂಡಿದ್ದಾರೆ” ಎಂದು ಸಬೀರ್ ಹೇಳಿದ್ದಾನೆ.

ಸಬೀರ್, ತನ್ನ ತಂದೆಯ ಫೋನ್ ಸ್ವಿಚ್ ಆಫ್ ಆಗುವವರೆಗೆ, ಅಂದರೆ ಕರೆ ಬಂದಿದ್ದ ಸಮಯದಿಂದ ಮುಂದಿನ 40 ನಿಮಿಷಗಳ ಕಾಲ ಈ ಕರೆಯನ್ನು ರೆಕಾರ್ಡ್ ಮಾಡಿದ್ದಾನೆ. ನಂತರ ತಕ್ಷಣ ಹತ್ತಿರದ ಪೊಲೀಸ್ ಠಾಣೆ ಮಯೂರ್ ವಿಹಾರ್ 1ನೇ ಹಂತಕ್ಕೆ ಹೋಗಿ ಪೊಲೀಸರಿಗೆ ದೂರು ನೀಡಿ, ರೆಕಾರ್ಡಿಂಗ್ ಸಲ್ಲಿಸಿದ್ದಾರೆ.

“ದೂರಿನ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ಸಂಜಯ್ ತಕ್ಷಣ ನನ್ನ ತಂದೆಯ ಮೊಬೈಲ್ ಫೋನ್ ಅನ್ನು ಟ್ರ್ಯಾಕ್ ಮಾಡಲು ಪ್ರಾರಂಭಿಸಿ, ಅವರಿದ್ದ ಸ್ಥಳವನ್ನು ಪತ್ತೆಹಚ್ಚಿದರು. ಟ್ರಾಕ್ ಮಾಡಲಾದ ಕೊನೆಯ ಸ್ಥಳ ಬಾದಲ್‌ಪುರ ಪೊಲೀಸ್ ಠಾಣೆ ಬಳಿ ಇತ್ತು. ಅಲ್ಲಿ ಪೊಲೀಸರು ನಮ್ಮ ತಂದೆಯ ಶವವನ್ನು ಪತ್ತೆಹಚ್ಚಿದರು. ನಂತರ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾದರೂ ಅಷ್ಟರಲ್ಲಿ ಅವರು ಮೃತರಾಗಿದ್ದರು” ಎಂದು ಸಬೀರ್ ಹೇಳಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

“ಸತ್ತ ತಂದೆಯನ್ನು ನೋಡಿದ ಸಬೀರ್ ಕುಸಿದುಬಿದ್ದ. ಅಫ್ತಾಬ್ ಆಲಮ್ ನಾಲಿಗೆ ಭಾಗಕ್ಕೆ ಬಲವಾದ ಏಟು ಬಿದ್ದಿತ್ತು. ಕಿವಿಗಳಿಂದ ರಕ್ತಸ್ರಾವವಾಗುತ್ತಿತ್ತು. ಅವನ ಮುಖದ ಮೇಲೆ ಕತ್ತರಿಸಿದ ಗುರುತು ಇತ್ತು. ಇದು ಸ್ಪಷ್ಟವಾಗಿ ಗುಂಪೊಂದು ಹತ್ಯೆ ಮಾಡಿರುವ ಪ್ರಕರಣವಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಅದೇ ರಾತ್ರಿಯಲ್ಲಿ ನೋಂದಾಯಿಸಲಾದ ಎಫ್‌ಐಆರ್, ಅನಾಮಧೇಯ ಹಲ್ಲೆಕೋರರ ಮೇಲೆ ಐಪಿಸಿ ಸೆಕ್ಷನ್ 394 (ದರೋಡೆ ಮಾಡುವಲ್ಲಿ ಸ್ವಯಂಪ್ರೇರಣೆಯಿಂದ ಗಾಯವನ್ನುಂಟುಮಾಡುವುದು) 302 (ಕೊಲೆಗೆ ಶಿಕ್ಷೆ) ಮತ್ತು 201ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಇವರ ಕೊಲೆಯು ಸ್ಪಷ್ವವಾಗಿ ಗುಂಪುಹತ್ಯೆಯಾಗಿದ್ದು, ಇದು ಧರ್ಮ ದ್ವೇಷದ ಅಪರಾಧಗಳನ್ನು ಸಂಕೇತಿಸುತ್ತದೆ. ಆದರೆ ಪೊಲೀಸರು ಕೇವಲ ದರೋಡೆ ಪ್ರಕರಣವನ್ನು ಮಾತ್ರ ದಾಖಲಿಸಿದ್ದಾರೆ ಎಂದು ಹಲವರು ದೂರಿದ್ದಾರೆ.

“ನಾವು ಮುಸ್ಲಿಮರು, ನಮಗೆ ಬದುಕುವ ಹಕ್ಕಿದೆ” ಎಂದು ಸಬೀರ್ ಹೇಳಿದ್ದಾನೆ.

ಅಫ್ತಾಬ್ ಆಲಮ್ ತ್ರಿಲೋಕ್ ಪುರಿಯ ನಿವಾಸಿಯಾಗಿದ್ದು, ನೋಯ್ಡಾದಲ್ಲಿ 1996 ರಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಚಾಲನೆ ಅವನ ಮುಖ್ಯ ಜೀವನೋಪಾಯವಾಗಿತ್ತು. ಅವರಿಗೆ ಹೆಂಡತಿ, ಅವರ ಮೂವರು ಗಂಡು ಮಕ್ಕಳು, ಅನಾರೋಗ್ಯದ ಪೋಷಕರು ಮತ್ತು ಇಬ್ಬರು ಒಡಹುಟ್ಟಿದವರು ಇದ್ದಾರೆ. ಅವರೆಲ್ಲರೂ ಆಲಮ್ ಮತ್ತು ಸಬೀರ್ ಮೇಲೆ ಆರ್ಥಿಕವಾಗಿ ಅವಲಂಬಿಸಿದ್ದಾರೆ.

“ಲಾಕ್ ಡೌನ್ ಸಮಯದಲ್ಲಿ, ಕೊರೊನಾ ವೈರಸ್ ಹರಡಬಹುದೆಂಬ ಭಯದಿಂದ ಆಲಮ್ ಹೊರಬಂದಿರಲಿಲ್ಲ ಎಂದು ಅವರ ಕುಟುಂಬ ತಿಳಿಸಿದೆ. ಆದರೆ ಕುಟುಂಬದ ಸ್ನೇಹಿತ ಮತ್ತು ತನ್ನ ಹಳೆಯ ಗ್ರಾಹಕರು, ‘ಗುರಗಾಂವ್ ನಿಂದ ಉತ್ತರ ಪ್ರದೇಶದ ಬುಲಂದ್‌ಶಹರ್‌ಗೆ ಬಿಡಬಹುದೇ’ ಎಂದು ಕೇಳಲು ಅವರನ್ನು ಕರೆದಾಗ, ಅವರು ನಿರಾಕರಿಸಲಾಗಲಿಲ್ಲ. ಲಾಕ್‌ಡೌನ್ ಸಮಯದಲ್ಲಿ ಆರ್ಥಿಕ ಸಮಸ್ಯೆಗೆ ಒಳಗಾಗಿದ್ದರಿಂದ ಈ ಪ್ರಸ್ತಾವವನ್ನು ಒಪ್ಪಿಕೊಂಡಿದ್ದರು” ಎಂದು ಕುಟುಂಬದವರು ಹೇಳಿದರು.

ಆಲಮ್ ಅವರ ತಂದೆ 65 ವರ್ಷದ ಮೊಹಮ್ಮದ್ ತಾಹಿರ್ ಪ್ರತಿಕ್ರಿಯಿಸಿ, “ಇದು ದರೋಡೆ ಪ್ರಕರಣವಾಗಿದ್ದರೆ, ಅವರು ಕಾರನ್ನು ಏಕೆ ತೆಗೆದುಕೊಂಡಿಲ್ಲ? ಅವರು ಕಾರನ್ನು ಕದ್ದು ಅವನ ದೇಹವನ್ನು ಬೀದಿಗೆ ಎಸೆಯುತ್ತಿದ್ದರು. ಇದು ಸ್ಪಷ್ಟವಾಗಿ ಗುಂಪು ಹತ್ಯೆಯ ಪ್ರಕರಣವಾಗಿದೆ. ಅವರು ಮೊಬೈಲ್ ಫೋನ್ ಮಾತ್ರ ತೆಗೆದುಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಮೋದಿ ಜಿಂದಾಬಾದ್, ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ ಮುಸ್ಲಿಂ ಆಟೋ ಡ್ರೈವರ್ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...