Homeಮುಖಪುಟಮದುವೆಗೆ ಒತ್ತಡ | ಗರ್ಭಿಣಿ ಯುವತಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ

ಮದುವೆಗೆ ಒತ್ತಡ | ಗರ್ಭಿಣಿ ಯುವತಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ

- Advertisement -
- Advertisement -

ಗರ್ಭಿಣಿ ಪ್ರೇಯಸಿ ಗರ್ಭಪಾತಕ್ಕೆ ಒಪ್ಪದ ಕಾರಣಕ್ಕೆ ಆಕೆಯ ಪ್ರೇಮಿ ಮತ್ತು ಅವನ ಇಬ್ಬರು ಸಹಾಯಕರು ಕೊಲೆ ಮಾಡಿ ಹೂತು ಹಾಕಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಹದಿಹರೆಯದ ಯುವತಿಯು ತಾನು ಗರ್ಭಿಣಿಯಾಗಿದ್ದು, ಹಾಗಾಗಿ ತನ್ನನ್ನು ಮದುವೆಯಾಗಬೇಕು ಎಂದು ಬಯಸಿದ್ದಕ್ಕೆ ದುರ್ಷರ್ಮಿ ಈ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ. ಮದುವೆಗೆ ಒತ್ತಡ

ಕೊಲೆಯಾದ ಯುವತಿಯನ್ನು 19 ವರ್ಷದ ಸೋನಿಯಾ ಎಂದು ಗುರುತಿಸಲಾಗಿದ್ದು ಪಶ್ಚಿಮ ದೆಹಲಿಯ ನಂಗ್ಲೋಯ್ ನಿವಾಸಿಯಾಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದ ಅವರು, ಸುಮಾರು 6,000 ಕ್ಕೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯುವತಿಯು ಸಾಮಾಜಿಕ ಮಾಧ್ಯಮದಲ್ಲಿ ತನ್ನ ಮತ್ತು ತನ್ನ ಪ್ರೇಮಿ ಸಂಜು ಅಲಿಯಾಸ್ ಸಲೀಮ್‌ನ ಅನೇಕ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು. ಆರೋಪಿ ಸಂಜು ಕೂಡಾ ಆಕೆಯ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿಯೂ ಪೋಸ್ಟ್ ಮಾಡಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸೋನಿಯಾ ಅವರ ಕುಟುಂಬ ಸದಸ್ಯರಿಗೆ ಯುವತಿಯು ಹೊಸ ಸ್ನೇಹಿತನ ಜೊತೆಗೆ ಸ್ನೇಹ ಬೆಳೆಸಿರುವುದು ತಿಳಿದಿತ್ತಾದರೂ, ಅವರು ಯಾರೊಂದಿಗೆ ಮಾತನಾಡುತ್ತಿದ್ದಾರೆ ಎಂದು ತಿಳಿದಿರಲಿಲ್ಲ. ಮದುವೆಗೆ ಒತ್ತಡ

ಸೋನಿಯಾ ಏಳು ತಿಂಗಳ ಗರ್ಭಿಣಿಯಾಗಿದ್ದು, ಸಂಜುಗೆ ತನ್ನನ್ನು ಮದುವೆಯಾಗಲು ಒತ್ತಾಯಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಆರೋಪಿ ಸಂಜು ಮದುವೆ ಸಿದ್ದರಿಲ್ಲದ ಕಾರಣ, ಮಗುವನ್ನು ಗರ್ಭಪಾತ ಮಾಡಬೇಕೆಂದು ಬಯಸಿದ್ದನು. ಈ ವಿಷಯವಾಗಿ ಪ್ರೇಮಿಗಳಿಬ್ಬರು ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ವರದಿಯಾಗಿದೆ.

ಅದಾಗ್ಯೂ, ಸೋಮವಾರ ಯುವತಿಯು ಸಂಜು ಅವರ ಮನೆಗೆ ಕೆಲವು ವಸ್ತುಗಳನ್ನು ತೆಗೆದುಕೊಂಡು ಭೇಟಿಯಾಗಲು ಹೋಗಿದ್ದರು. ಈ ವೇಳೆ ಸಂಜು ಮತ್ತು ಆತನ ಇಬ್ಬರು ಸಹಾಯಕರು ಸೋನಿಯಾ ಅವರನ್ನು ಹರಿಯಾಣದ ರೋಹ್ಟಕ್‌ಗೆ ಕರೆದೊಯ್ದಿದ್ದಾರೆ.

ಅಲ್ಲಿ ಅವರು ಯುವತಿಯನ್ನು ಕೊಂದು, ಶವವನ್ನು ನಾಲ್ಕು ಅಡಿಯ ಗುಂಡಿ ತೋಡಿ ಹೂಳಿದ್ದಾರೆ. ದೆಹಲಿ ಪೊಲೀಸರು ಅಕ್ಟೋಬರ್ 23 ರಂದು ದೂರು ಸ್ವೀಕರಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ.

ಆರೋಪಿಯು ಕೊಲೆಗೆ ಪೂರ್ವಯೋಜಿತವಾಗಿ ತನ್ನ ಸ್ನೇಹಿತರಾದ ರಿತಿಕ್ ಮತ್ತು ಪಂಕಜ್ ಅವರನ್ನು ಅಪರಾಧದಲ್ಲಿ ತೊಡಗಿಸಿಕೊಂಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಕೃತ್ಯಕ್ಕಾಗಿ ಕರ್ವಾ ಚೌತ್ ದಿನವನ್ನು ಆಯ್ಕೆ ಮಾಡಿದ್ದು, ಸಂದರ್ಭಕ್ಕಾಗಿ ಕಾರನ್ನು ಬಾಡಿಗೆಗೆ ಪಡೆದಿದ್ದರು.

ಆ ರಾತ್ರಿ, ಸೋನಿಯಾ ತನ್ನ ಸಾಮಾನುಗಳೊಂದಿಗೆ ಮನೆಯಿಂದ ಹೊರಟು ನಂಗ್ಲೋಯ್ ಪ್ರದೇಶದಲ್ಲಿ ಆರೋಪಿಯನ್ನು ಭೇಟಿಯಾಗಿದ್ದರು. ನಂತರ ಅವನು ಯುವತಿಯನ್ನು ನೇರವಾಗಿ ರೋಹ್ಟಕ್‌ಗೆ ಕರೆದೊಯ್ದನು, ಅಲ್ಲಿ ಕತ್ತು ಹಿಸುಕಿ ಸಾಯಿಸಿದ್ದಾರೆ. ನಂತರ ಆ ರಾತ್ರಿ ದೆಹಲಿಗೆ ಹಿಂದಿರುಗುವಾಗ ರೋಹ್ಟಕ್‌ನ ಕಾಡುಗಳಲ್ಲಿ ಯುವತಿಯ ದೇಹವನ್ನು ಹೂತುಹಾಕಿದ್ದಾನೆ.

ಘಟನೆಯಲ್ಲಿ ಸಂಜು ಮತ್ತು ಆತನ ಒಬ್ಬ ಸಹಾಯಕನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಆತನನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಅದಾನಿ ಜೊತೆಗಿನ 736 ಮಿಲಿಯನ್ ಡಾಲರ್ ವಿದ್ಯುತ್ ಒಪ್ಪಂದ ರದ್ದುಗೊಳಿಸಿದ ಕೀನ್ಯಾ ಕೋರ್ಟ್ : ವರದಿ

ಅದಾನಿ ಜೊತೆಗಿನ 736 ಮಿಲಿಯನ್ ಡಾಲರ್ ವಿದ್ಯುತ್ ಒಪ್ಪಂದ ರದ್ದುಗೊಳಿಸಿದ ಕೀನ್ಯಾ ಕೋರ್ಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...