Homeಮುಖಪುಟಮದುವೆಗೆ ಒತ್ತಡ | ಗರ್ಭಿಣಿ ಯುವತಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ

ಮದುವೆಗೆ ಒತ್ತಡ | ಗರ್ಭಿಣಿ ಯುವತಿಯನ್ನು ಕೊಂದು ಹೂತು ಹಾಕಿದ ಪ್ರಿಯಕರ

- Advertisement -
- Advertisement -

ಗರ್ಭಿಣಿ ಪ್ರೇಯಸಿ ಗರ್ಭಪಾತಕ್ಕೆ ಒಪ್ಪದ ಕಾರಣಕ್ಕೆ ಆಕೆಯ ಪ್ರೇಮಿ ಮತ್ತು ಅವನ ಇಬ್ಬರು ಸಹಾಯಕರು ಕೊಲೆ ಮಾಡಿ ಹೂತು ಹಾಕಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಹದಿಹರೆಯದ ಯುವತಿಯು ತಾನು ಗರ್ಭಿಣಿಯಾಗಿದ್ದು, ಹಾಗಾಗಿ ತನ್ನನ್ನು ಮದುವೆಯಾಗಬೇಕು ಎಂದು ಬಯಸಿದ್ದಕ್ಕೆ ದುರ್ಷರ್ಮಿ ಈ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ. ಮದುವೆಗೆ ಒತ್ತಡ

ಕೊಲೆಯಾದ ಯುವತಿಯನ್ನು 19 ವರ್ಷದ ಸೋನಿಯಾ ಎಂದು ಗುರುತಿಸಲಾಗಿದ್ದು ಪಶ್ಚಿಮ ದೆಹಲಿಯ ನಂಗ್ಲೋಯ್ ನಿವಾಸಿಯಾಗಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದ ಅವರು, ಸುಮಾರು 6,000 ಕ್ಕೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯುವತಿಯು ಸಾಮಾಜಿಕ ಮಾಧ್ಯಮದಲ್ಲಿ ತನ್ನ ಮತ್ತು ತನ್ನ ಪ್ರೇಮಿ ಸಂಜು ಅಲಿಯಾಸ್ ಸಲೀಮ್‌ನ ಅನೇಕ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು. ಆರೋಪಿ ಸಂಜು ಕೂಡಾ ಆಕೆಯ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿಯೂ ಪೋಸ್ಟ್ ಮಾಡಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸೋನಿಯಾ ಅವರ ಕುಟುಂಬ ಸದಸ್ಯರಿಗೆ ಯುವತಿಯು ಹೊಸ ಸ್ನೇಹಿತನ ಜೊತೆಗೆ ಸ್ನೇಹ ಬೆಳೆಸಿರುವುದು ತಿಳಿದಿತ್ತಾದರೂ, ಅವರು ಯಾರೊಂದಿಗೆ ಮಾತನಾಡುತ್ತಿದ್ದಾರೆ ಎಂದು ತಿಳಿದಿರಲಿಲ್ಲ. ಮದುವೆಗೆ ಒತ್ತಡ

ಸೋನಿಯಾ ಏಳು ತಿಂಗಳ ಗರ್ಭಿಣಿಯಾಗಿದ್ದು, ಸಂಜುಗೆ ತನ್ನನ್ನು ಮದುವೆಯಾಗಲು ಒತ್ತಾಯಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಆರೋಪಿ ಸಂಜು ಮದುವೆ ಸಿದ್ದರಿಲ್ಲದ ಕಾರಣ, ಮಗುವನ್ನು ಗರ್ಭಪಾತ ಮಾಡಬೇಕೆಂದು ಬಯಸಿದ್ದನು. ಈ ವಿಷಯವಾಗಿ ಪ್ರೇಮಿಗಳಿಬ್ಬರು ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ವರದಿಯಾಗಿದೆ.

ಅದಾಗ್ಯೂ, ಸೋಮವಾರ ಯುವತಿಯು ಸಂಜು ಅವರ ಮನೆಗೆ ಕೆಲವು ವಸ್ತುಗಳನ್ನು ತೆಗೆದುಕೊಂಡು ಭೇಟಿಯಾಗಲು ಹೋಗಿದ್ದರು. ಈ ವೇಳೆ ಸಂಜು ಮತ್ತು ಆತನ ಇಬ್ಬರು ಸಹಾಯಕರು ಸೋನಿಯಾ ಅವರನ್ನು ಹರಿಯಾಣದ ರೋಹ್ಟಕ್‌ಗೆ ಕರೆದೊಯ್ದಿದ್ದಾರೆ.

ಅಲ್ಲಿ ಅವರು ಯುವತಿಯನ್ನು ಕೊಂದು, ಶವವನ್ನು ನಾಲ್ಕು ಅಡಿಯ ಗುಂಡಿ ತೋಡಿ ಹೂಳಿದ್ದಾರೆ. ದೆಹಲಿ ಪೊಲೀಸರು ಅಕ್ಟೋಬರ್ 23 ರಂದು ದೂರು ಸ್ವೀಕರಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ.

ಆರೋಪಿಯು ಕೊಲೆಗೆ ಪೂರ್ವಯೋಜಿತವಾಗಿ ತನ್ನ ಸ್ನೇಹಿತರಾದ ರಿತಿಕ್ ಮತ್ತು ಪಂಕಜ್ ಅವರನ್ನು ಅಪರಾಧದಲ್ಲಿ ತೊಡಗಿಸಿಕೊಂಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಕೃತ್ಯಕ್ಕಾಗಿ ಕರ್ವಾ ಚೌತ್ ದಿನವನ್ನು ಆಯ್ಕೆ ಮಾಡಿದ್ದು, ಸಂದರ್ಭಕ್ಕಾಗಿ ಕಾರನ್ನು ಬಾಡಿಗೆಗೆ ಪಡೆದಿದ್ದರು.

ಆ ರಾತ್ರಿ, ಸೋನಿಯಾ ತನ್ನ ಸಾಮಾನುಗಳೊಂದಿಗೆ ಮನೆಯಿಂದ ಹೊರಟು ನಂಗ್ಲೋಯ್ ಪ್ರದೇಶದಲ್ಲಿ ಆರೋಪಿಯನ್ನು ಭೇಟಿಯಾಗಿದ್ದರು. ನಂತರ ಅವನು ಯುವತಿಯನ್ನು ನೇರವಾಗಿ ರೋಹ್ಟಕ್‌ಗೆ ಕರೆದೊಯ್ದನು, ಅಲ್ಲಿ ಕತ್ತು ಹಿಸುಕಿ ಸಾಯಿಸಿದ್ದಾರೆ. ನಂತರ ಆ ರಾತ್ರಿ ದೆಹಲಿಗೆ ಹಿಂದಿರುಗುವಾಗ ರೋಹ್ಟಕ್‌ನ ಕಾಡುಗಳಲ್ಲಿ ಯುವತಿಯ ದೇಹವನ್ನು ಹೂತುಹಾಕಿದ್ದಾನೆ.

ಘಟನೆಯಲ್ಲಿ ಸಂಜು ಮತ್ತು ಆತನ ಒಬ್ಬ ಸಹಾಯಕನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ಆತನನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಅದಾನಿ ಜೊತೆಗಿನ 736 ಮಿಲಿಯನ್ ಡಾಲರ್ ವಿದ್ಯುತ್ ಒಪ್ಪಂದ ರದ್ದುಗೊಳಿಸಿದ ಕೀನ್ಯಾ ಕೋರ್ಟ್ : ವರದಿ

ಅದಾನಿ ಜೊತೆಗಿನ 736 ಮಿಲಿಯನ್ ಡಾಲರ್ ವಿದ್ಯುತ್ ಒಪ್ಪಂದ ರದ್ದುಗೊಳಿಸಿದ ಕೀನ್ಯಾ ಕೋರ್ಟ್ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...