Homeಕರೋನಾ ತಲ್ಲಣಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

- Advertisement -
- Advertisement -

ಭಾರತದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎನ್ನಲಾಗಿರುವ ಕೊರೊನಾ ಲಸಿಕೆ ’ಕೊವಾಕ್ಸಿನ್’‌ ಅನ್ನು ವೈದ್ಯಕೀಯ ಪ್ರಯೋಗಕ್ಕೆ ದೆಹಲಿಯ AIIMS ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿದೆ.

ಕೊರೊನಾ ರೋಗ ನಿವಾರಣೆಗಾಗಿ ಕಂಡುಹಿಡಿದಿದೆ ಎನ್ನಲಾಗಿರುವ ಲಸಿಕೆಯನ್ನು ತ್ವರಿತವಾಗಿ ಪ್ರಯೋಗಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ತನ್ನ ಸ್ಟಡಿ ಪ್ರೊಟೊಕಾಲ್‌ನಲ್ಲಿ ಪ್ರಯೋಗಕ್ಕೆ ಸಂಬಂಧಿಸಿದಂತೆ ಹಲವಾರು ಅಂಶಗಳನ್ನು ಆಕ್ಷೇಪಿಸಿದೆ.

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

ಪ್ರಯೋಗಕ್ಕಾಗಿ ಆಯ್ಕೆಯಾದ ಇತರ ಆಸ್ಪತ್ರೆಗಳು ಕೂಡ ಅಧ್ಯಯನ ವಿನ್ಯಾಸದಲ್ಲಿ ಬದಲಾವಣೆಗಳನ್ನು ಸೂಚಿಸಿರುವ ಅಧ್ಯಯನ ಪ್ರೋಟೋಕಾಲ್ ಅನ್ನು ಅನುಮೋದಿಸಿವೆ.

ಆಸ್ಪತ್ರೆಯ ಸಮಿತಿಯು ಪ್ರಸ್ತಾಪಿಸಿರುವ ಪ್ರೊಟೊಕಾಲ್‌ನಲ್ಲಿ 11 ಅಂಶಗಳಿಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದೆ. ಅವುಗಳನ್ನು ತಿದ್ದುಪಡಿ ಮಾಡಲು ಸೂಚಿಸಿದೆ.

ಅದರಲ್ಲಿ ಪ್ರಮುಖವಾಗಿ, ಮೊದಲ ಮತ್ತು ಎರಡನೇ ಹಂತದ ಪ್ರಯೋಗಗಳಿಗಾಗಿ ಪ್ರಸ್ತಾಪಿಸಲಾಗಿರುವ 1,125 ಆರೋಗ್ಯವಂತ ಸ್ವಯಂಸೇವಕರ ಮಾದರಿ ಗಾತ್ರವನ್ನು ಅಧ್ಯಯನ ವಿನ್ಯಾಸದಲ್ಲಿ ಮಾರ್ಪಾಡು ಮಾಡಲು ನೈತಿಕ ಸಮಿತಿಯು ಒತ್ತಾಯಿಸಿದೆ. ಈ ಕುರಿತು ಮತ್ತೆ ಚರ್ಚಿಸಲಾಗುವುದು ಎಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ AIIMS ಅಧಿಕಾರಿಯೊಬ್ಬರು “ಇದು AIIMS ಮತ್ತು ದೇಶದ ಇತರ ಸಂಸ್ಥೆಗಳ ನಡುವಿನ ವ್ಯತ್ಯಾಸ. ಪ್ರತಿಯೊಂದು ಸಂಶೋಧನಾ ಯೋಜನೆಗೂ ನಾವು ಅನುಸರಿಸುವ ಅತ್ಯುನ್ನತ ನೈತಿಕ ಮಾನದಂಡಗಳು ಮತ್ತು ಕಠಿಣತೆಯ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ” ಎಂದು ಹೇಳಿದ್ದಾರೆ.

ಐಸಿಎಂಆರ್‌ ಸಂಸ್ಥೆಯು 12 ಆಸ್ಪತ್ರೆಗಳಿಗೆ  ಜುಲೈ 2ರಂದು ಬರೆದಿದ್ದ ಪತ್ರದಲ್ಲಿ ಪ್ರಯೋಗಗಳನ್ನು ತ್ವರಿತಗತಿಯಲ್ಲಿ ನಡೆಸಬೇಕೆಂದು ಒತ್ತಾಯಿಸಿತ್ತು. ಆಗಸ್ಟ್ 15 ರೊಳಗೆ ಲಸಿಕೆಯನ್ನು ದೇಶಾದ್ಯಂತ ಬಿಡುಗಡೆ ಮಾಡುವ, ಲಸಿಕೆಯ ಮೂಲಕ ಚಿಕಿತ್ಸೆ ಪ್ರಾರಂಭಿಸಲು ಉದ್ದೇಶಿಸಿದ್ದು, ಜುಲೈ 7 ರೊಳಗೆ ಪ್ರಯೋಗದ ವರದಿಯನ್ನು ನೀಡುವಂತೆ ಕೇಳಿತ್ತು.

ಇದಕ್ಕೆ ತಜ್ಞರು ಅವಸರದ ಮತ್ತು ಅವಾಸ್ತವಿಕ ಕಾರ್ಯ ಹೇಳಿದ್ದಾರೆ. ಪ್ರಯೋಗದ ವರದಿಯ ದಾಖಲಾತಿ ಜುಲೈ 7 ರಿಂದ ಪ್ರಾರಂಭವಾಗಬಹುದು; ಅದನ್ನು ಪೂರ್ಣಗೊಳಿಸಲು ಹಲವಾರು ದಿನಗಳು ಬೇಕಾಗುತ್ತದೆ ಎಂದು ದೆಹಲಿಯ AIIMS ಮೂಲಗಳು ತಿಳಿಸಿವೆ.

ಮೂಲ ಪ್ರೋಟೋಕಾಲ್ ಪ್ರಕಾರ, ಮೊದಲ ಹಂತದಲ್ಲಿ ಲಸಿಕೆಯನ್ನು 375 ವ್ಯಕ್ತಿಗಳ ಮೇಲೆ ಪ್ರಯೋಗಿಸಿ ಅಧ್ಯಯನ ಮಾಡಬೇಕಾಗುತ್ತದೆ. ನಂತರ ಎರಡನೇ ಹಂತದಲ್ಲಿ ಅದರ ಸುರಕ್ಷತೆ, ಪ್ರತಿಕ್ರಿಯಾತ್ಮಕತೆ, ಸಹಿಷ್ಣುತೆ ಮತ್ತು ಇಮ್ಯುನೊಜೆನೆಸಿಟಿಯನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಇದಕ್ಕಾಗಿ ಸ್ವಯಂಸೇವಕರಿಗೆ ಎರಡು ಇಂಟ್ರಾಮಸ್ಕುಲರ್ ನೀಡಲಾಗುತ್ತದೆ.

ಪ್ರಯೋಗಗಳಿಗೆ ವಯಸ್ಸಿನ ಆಧಾರದಲ್ಲಿ ಗುಂಪುಗಳನ್ನು ಮಾಡಲಾಗುತ್ತದೆ. ಮೊದಲ ಹಂತಕ್ಕೆ 18-55 ವಯಸ್ಸಿನವರು ಮತ್ತು ಎರಡನೇ ಹಂತಕ್ಕೆ 12-65 ವಯಸ್ಸಿನವರನ್ನು ಆಯ್ಕೆ ಮಾಡಲಾಗುತ್ತದೆ. ಆದಾಗ್ಯೂ,ದೆಹಲಿಯ AIIMS ಸಮಿತಿಯ ಆಕ್ಷೇಪಣೆಗಳ ನಂತರ ಅಧ್ಯಯನದ ವಿನ್ಯಾಸವು ಕೆಲವು ಬದಲಾವಣೆಗಳನ್ನು ಕಾಣಬಹುದು.


ಇದನ್ನೂ ಓದಿ : ಆಗಸ್ಟ್ 15 ರೊಳಗೆ ಕೊರೊನಾ ಲಸಿಕೆ ಬಿಡುಗಡೆ ಮಾಡಲಿರುವ ಐಸಿಎಂಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...