Homeಕರೋನಾ ತಲ್ಲಣಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

- Advertisement -
- Advertisement -

ಭಾರತದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎನ್ನಲಾಗಿರುವ ಕೊರೊನಾ ಲಸಿಕೆ ’ಕೊವಾಕ್ಸಿನ್’‌ ಅನ್ನು ವೈದ್ಯಕೀಯ ಪ್ರಯೋಗಕ್ಕೆ ದೆಹಲಿಯ AIIMS ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿದೆ.

ಕೊರೊನಾ ರೋಗ ನಿವಾರಣೆಗಾಗಿ ಕಂಡುಹಿಡಿದಿದೆ ಎನ್ನಲಾಗಿರುವ ಲಸಿಕೆಯನ್ನು ತ್ವರಿತವಾಗಿ ಪ್ರಯೋಗಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ತನ್ನ ಸ್ಟಡಿ ಪ್ರೊಟೊಕಾಲ್‌ನಲ್ಲಿ ಪ್ರಯೋಗಕ್ಕೆ ಸಂಬಂಧಿಸಿದಂತೆ ಹಲವಾರು ಅಂಶಗಳನ್ನು ಆಕ್ಷೇಪಿಸಿದೆ.

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

ಪ್ರಯೋಗಕ್ಕಾಗಿ ಆಯ್ಕೆಯಾದ ಇತರ ಆಸ್ಪತ್ರೆಗಳು ಕೂಡ ಅಧ್ಯಯನ ವಿನ್ಯಾಸದಲ್ಲಿ ಬದಲಾವಣೆಗಳನ್ನು ಸೂಚಿಸಿರುವ ಅಧ್ಯಯನ ಪ್ರೋಟೋಕಾಲ್ ಅನ್ನು ಅನುಮೋದಿಸಿವೆ.

ಆಸ್ಪತ್ರೆಯ ಸಮಿತಿಯು ಪ್ರಸ್ತಾಪಿಸಿರುವ ಪ್ರೊಟೊಕಾಲ್‌ನಲ್ಲಿ 11 ಅಂಶಗಳಿಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದೆ. ಅವುಗಳನ್ನು ತಿದ್ದುಪಡಿ ಮಾಡಲು ಸೂಚಿಸಿದೆ.

ಅದರಲ್ಲಿ ಪ್ರಮುಖವಾಗಿ, ಮೊದಲ ಮತ್ತು ಎರಡನೇ ಹಂತದ ಪ್ರಯೋಗಗಳಿಗಾಗಿ ಪ್ರಸ್ತಾಪಿಸಲಾಗಿರುವ 1,125 ಆರೋಗ್ಯವಂತ ಸ್ವಯಂಸೇವಕರ ಮಾದರಿ ಗಾತ್ರವನ್ನು ಅಧ್ಯಯನ ವಿನ್ಯಾಸದಲ್ಲಿ ಮಾರ್ಪಾಡು ಮಾಡಲು ನೈತಿಕ ಸಮಿತಿಯು ಒತ್ತಾಯಿಸಿದೆ. ಈ ಕುರಿತು ಮತ್ತೆ ಚರ್ಚಿಸಲಾಗುವುದು ಎಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ AIIMS ಅಧಿಕಾರಿಯೊಬ್ಬರು “ಇದು AIIMS ಮತ್ತು ದೇಶದ ಇತರ ಸಂಸ್ಥೆಗಳ ನಡುವಿನ ವ್ಯತ್ಯಾಸ. ಪ್ರತಿಯೊಂದು ಸಂಶೋಧನಾ ಯೋಜನೆಗೂ ನಾವು ಅನುಸರಿಸುವ ಅತ್ಯುನ್ನತ ನೈತಿಕ ಮಾನದಂಡಗಳು ಮತ್ತು ಕಠಿಣತೆಯ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ” ಎಂದು ಹೇಳಿದ್ದಾರೆ.

ಐಸಿಎಂಆರ್‌ ಸಂಸ್ಥೆಯು 12 ಆಸ್ಪತ್ರೆಗಳಿಗೆ  ಜುಲೈ 2ರಂದು ಬರೆದಿದ್ದ ಪತ್ರದಲ್ಲಿ ಪ್ರಯೋಗಗಳನ್ನು ತ್ವರಿತಗತಿಯಲ್ಲಿ ನಡೆಸಬೇಕೆಂದು ಒತ್ತಾಯಿಸಿತ್ತು. ಆಗಸ್ಟ್ 15 ರೊಳಗೆ ಲಸಿಕೆಯನ್ನು ದೇಶಾದ್ಯಂತ ಬಿಡುಗಡೆ ಮಾಡುವ, ಲಸಿಕೆಯ ಮೂಲಕ ಚಿಕಿತ್ಸೆ ಪ್ರಾರಂಭಿಸಲು ಉದ್ದೇಶಿಸಿದ್ದು, ಜುಲೈ 7 ರೊಳಗೆ ಪ್ರಯೋಗದ ವರದಿಯನ್ನು ನೀಡುವಂತೆ ಕೇಳಿತ್ತು.

ಇದಕ್ಕೆ ತಜ್ಞರು ಅವಸರದ ಮತ್ತು ಅವಾಸ್ತವಿಕ ಕಾರ್ಯ ಹೇಳಿದ್ದಾರೆ. ಪ್ರಯೋಗದ ವರದಿಯ ದಾಖಲಾತಿ ಜುಲೈ 7 ರಿಂದ ಪ್ರಾರಂಭವಾಗಬಹುದು; ಅದನ್ನು ಪೂರ್ಣಗೊಳಿಸಲು ಹಲವಾರು ದಿನಗಳು ಬೇಕಾಗುತ್ತದೆ ಎಂದು ದೆಹಲಿಯ AIIMS ಮೂಲಗಳು ತಿಳಿಸಿವೆ.

ಮೂಲ ಪ್ರೋಟೋಕಾಲ್ ಪ್ರಕಾರ, ಮೊದಲ ಹಂತದಲ್ಲಿ ಲಸಿಕೆಯನ್ನು 375 ವ್ಯಕ್ತಿಗಳ ಮೇಲೆ ಪ್ರಯೋಗಿಸಿ ಅಧ್ಯಯನ ಮಾಡಬೇಕಾಗುತ್ತದೆ. ನಂತರ ಎರಡನೇ ಹಂತದಲ್ಲಿ ಅದರ ಸುರಕ್ಷತೆ, ಪ್ರತಿಕ್ರಿಯಾತ್ಮಕತೆ, ಸಹಿಷ್ಣುತೆ ಮತ್ತು ಇಮ್ಯುನೊಜೆನೆಸಿಟಿಯನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಇದಕ್ಕಾಗಿ ಸ್ವಯಂಸೇವಕರಿಗೆ ಎರಡು ಇಂಟ್ರಾಮಸ್ಕುಲರ್ ನೀಡಲಾಗುತ್ತದೆ.

ಪ್ರಯೋಗಗಳಿಗೆ ವಯಸ್ಸಿನ ಆಧಾರದಲ್ಲಿ ಗುಂಪುಗಳನ್ನು ಮಾಡಲಾಗುತ್ತದೆ. ಮೊದಲ ಹಂತಕ್ಕೆ 18-55 ವಯಸ್ಸಿನವರು ಮತ್ತು ಎರಡನೇ ಹಂತಕ್ಕೆ 12-65 ವಯಸ್ಸಿನವರನ್ನು ಆಯ್ಕೆ ಮಾಡಲಾಗುತ್ತದೆ. ಆದಾಗ್ಯೂ,ದೆಹಲಿಯ AIIMS ಸಮಿತಿಯ ಆಕ್ಷೇಪಣೆಗಳ ನಂತರ ಅಧ್ಯಯನದ ವಿನ್ಯಾಸವು ಕೆಲವು ಬದಲಾವಣೆಗಳನ್ನು ಕಾಣಬಹುದು.


ಇದನ್ನೂ ಓದಿ : ಆಗಸ್ಟ್ 15 ರೊಳಗೆ ಕೊರೊನಾ ಲಸಿಕೆ ಬಿಡುಗಡೆ ಮಾಡಲಿರುವ ಐಸಿಎಂಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...