Homeಕರೋನಾ ತಲ್ಲಣಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

- Advertisement -
- Advertisement -

ಭಾರತದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎನ್ನಲಾಗಿರುವ ಕೊರೊನಾ ಲಸಿಕೆ ’ಕೊವಾಕ್ಸಿನ್’‌ ಅನ್ನು ವೈದ್ಯಕೀಯ ಪ್ರಯೋಗಕ್ಕೆ ದೆಹಲಿಯ AIIMS ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿದೆ.

ಕೊರೊನಾ ರೋಗ ನಿವಾರಣೆಗಾಗಿ ಕಂಡುಹಿಡಿದಿದೆ ಎನ್ನಲಾಗಿರುವ ಲಸಿಕೆಯನ್ನು ತ್ವರಿತವಾಗಿ ಪ್ರಯೋಗಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ತನ್ನ ಸ್ಟಡಿ ಪ್ರೊಟೊಕಾಲ್‌ನಲ್ಲಿ ಪ್ರಯೋಗಕ್ಕೆ ಸಂಬಂಧಿಸಿದಂತೆ ಹಲವಾರು ಅಂಶಗಳನ್ನು ಆಕ್ಷೇಪಿಸಿದೆ.

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

ಪ್ರಯೋಗಕ್ಕಾಗಿ ಆಯ್ಕೆಯಾದ ಇತರ ಆಸ್ಪತ್ರೆಗಳು ಕೂಡ ಅಧ್ಯಯನ ವಿನ್ಯಾಸದಲ್ಲಿ ಬದಲಾವಣೆಗಳನ್ನು ಸೂಚಿಸಿರುವ ಅಧ್ಯಯನ ಪ್ರೋಟೋಕಾಲ್ ಅನ್ನು ಅನುಮೋದಿಸಿವೆ.

ಆಸ್ಪತ್ರೆಯ ಸಮಿತಿಯು ಪ್ರಸ್ತಾಪಿಸಿರುವ ಪ್ರೊಟೊಕಾಲ್‌ನಲ್ಲಿ 11 ಅಂಶಗಳಿಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದೆ. ಅವುಗಳನ್ನು ತಿದ್ದುಪಡಿ ಮಾಡಲು ಸೂಚಿಸಿದೆ.

ಅದರಲ್ಲಿ ಪ್ರಮುಖವಾಗಿ, ಮೊದಲ ಮತ್ತು ಎರಡನೇ ಹಂತದ ಪ್ರಯೋಗಗಳಿಗಾಗಿ ಪ್ರಸ್ತಾಪಿಸಲಾಗಿರುವ 1,125 ಆರೋಗ್ಯವಂತ ಸ್ವಯಂಸೇವಕರ ಮಾದರಿ ಗಾತ್ರವನ್ನು ಅಧ್ಯಯನ ವಿನ್ಯಾಸದಲ್ಲಿ ಮಾರ್ಪಾಡು ಮಾಡಲು ನೈತಿಕ ಸಮಿತಿಯು ಒತ್ತಾಯಿಸಿದೆ. ಈ ಕುರಿತು ಮತ್ತೆ ಚರ್ಚಿಸಲಾಗುವುದು ಎಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ AIIMS ಅಧಿಕಾರಿಯೊಬ್ಬರು “ಇದು AIIMS ಮತ್ತು ದೇಶದ ಇತರ ಸಂಸ್ಥೆಗಳ ನಡುವಿನ ವ್ಯತ್ಯಾಸ. ಪ್ರತಿಯೊಂದು ಸಂಶೋಧನಾ ಯೋಜನೆಗೂ ನಾವು ಅನುಸರಿಸುವ ಅತ್ಯುನ್ನತ ನೈತಿಕ ಮಾನದಂಡಗಳು ಮತ್ತು ಕಠಿಣತೆಯ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ” ಎಂದು ಹೇಳಿದ್ದಾರೆ.

ಐಸಿಎಂಆರ್‌ ಸಂಸ್ಥೆಯು 12 ಆಸ್ಪತ್ರೆಗಳಿಗೆ  ಜುಲೈ 2ರಂದು ಬರೆದಿದ್ದ ಪತ್ರದಲ್ಲಿ ಪ್ರಯೋಗಗಳನ್ನು ತ್ವರಿತಗತಿಯಲ್ಲಿ ನಡೆಸಬೇಕೆಂದು ಒತ್ತಾಯಿಸಿತ್ತು. ಆಗಸ್ಟ್ 15 ರೊಳಗೆ ಲಸಿಕೆಯನ್ನು ದೇಶಾದ್ಯಂತ ಬಿಡುಗಡೆ ಮಾಡುವ, ಲಸಿಕೆಯ ಮೂಲಕ ಚಿಕಿತ್ಸೆ ಪ್ರಾರಂಭಿಸಲು ಉದ್ದೇಶಿಸಿದ್ದು, ಜುಲೈ 7 ರೊಳಗೆ ಪ್ರಯೋಗದ ವರದಿಯನ್ನು ನೀಡುವಂತೆ ಕೇಳಿತ್ತು.

ಇದಕ್ಕೆ ತಜ್ಞರು ಅವಸರದ ಮತ್ತು ಅವಾಸ್ತವಿಕ ಕಾರ್ಯ ಹೇಳಿದ್ದಾರೆ. ಪ್ರಯೋಗದ ವರದಿಯ ದಾಖಲಾತಿ ಜುಲೈ 7 ರಿಂದ ಪ್ರಾರಂಭವಾಗಬಹುದು; ಅದನ್ನು ಪೂರ್ಣಗೊಳಿಸಲು ಹಲವಾರು ದಿನಗಳು ಬೇಕಾಗುತ್ತದೆ ಎಂದು ದೆಹಲಿಯ AIIMS ಮೂಲಗಳು ತಿಳಿಸಿವೆ.

ಮೂಲ ಪ್ರೋಟೋಕಾಲ್ ಪ್ರಕಾರ, ಮೊದಲ ಹಂತದಲ್ಲಿ ಲಸಿಕೆಯನ್ನು 375 ವ್ಯಕ್ತಿಗಳ ಮೇಲೆ ಪ್ರಯೋಗಿಸಿ ಅಧ್ಯಯನ ಮಾಡಬೇಕಾಗುತ್ತದೆ. ನಂತರ ಎರಡನೇ ಹಂತದಲ್ಲಿ ಅದರ ಸುರಕ್ಷತೆ, ಪ್ರತಿಕ್ರಿಯಾತ್ಮಕತೆ, ಸಹಿಷ್ಣುತೆ ಮತ್ತು ಇಮ್ಯುನೊಜೆನೆಸಿಟಿಯನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಇದಕ್ಕಾಗಿ ಸ್ವಯಂಸೇವಕರಿಗೆ ಎರಡು ಇಂಟ್ರಾಮಸ್ಕುಲರ್ ನೀಡಲಾಗುತ್ತದೆ.

ಪ್ರಯೋಗಗಳಿಗೆ ವಯಸ್ಸಿನ ಆಧಾರದಲ್ಲಿ ಗುಂಪುಗಳನ್ನು ಮಾಡಲಾಗುತ್ತದೆ. ಮೊದಲ ಹಂತಕ್ಕೆ 18-55 ವಯಸ್ಸಿನವರು ಮತ್ತು ಎರಡನೇ ಹಂತಕ್ಕೆ 12-65 ವಯಸ್ಸಿನವರನ್ನು ಆಯ್ಕೆ ಮಾಡಲಾಗುತ್ತದೆ. ಆದಾಗ್ಯೂ,ದೆಹಲಿಯ AIIMS ಸಮಿತಿಯ ಆಕ್ಷೇಪಣೆಗಳ ನಂತರ ಅಧ್ಯಯನದ ವಿನ್ಯಾಸವು ಕೆಲವು ಬದಲಾವಣೆಗಳನ್ನು ಕಾಣಬಹುದು.


ಇದನ್ನೂ ಓದಿ : ಆಗಸ್ಟ್ 15 ರೊಳಗೆ ಕೊರೊನಾ ಲಸಿಕೆ ಬಿಡುಗಡೆ ಮಾಡಲಿರುವ ಐಸಿಎಂಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...