Homeಕರೋನಾ ತಲ್ಲಣಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

- Advertisement -
- Advertisement -

ಭಾರತದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎನ್ನಲಾಗಿರುವ ಕೊರೊನಾ ಲಸಿಕೆ ’ಕೊವಾಕ್ಸಿನ್’‌ ಅನ್ನು ವೈದ್ಯಕೀಯ ಪ್ರಯೋಗಕ್ಕೆ ದೆಹಲಿಯ AIIMS ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿದೆ.

ಕೊರೊನಾ ರೋಗ ನಿವಾರಣೆಗಾಗಿ ಕಂಡುಹಿಡಿದಿದೆ ಎನ್ನಲಾಗಿರುವ ಲಸಿಕೆಯನ್ನು ತ್ವರಿತವಾಗಿ ಪ್ರಯೋಗಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ತನ್ನ ಸ್ಟಡಿ ಪ್ರೊಟೊಕಾಲ್‌ನಲ್ಲಿ ಪ್ರಯೋಗಕ್ಕೆ ಸಂಬಂಧಿಸಿದಂತೆ ಹಲವಾರು ಅಂಶಗಳನ್ನು ಆಕ್ಷೇಪಿಸಿದೆ.

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

ಪ್ರಯೋಗಕ್ಕಾಗಿ ಆಯ್ಕೆಯಾದ ಇತರ ಆಸ್ಪತ್ರೆಗಳು ಕೂಡ ಅಧ್ಯಯನ ವಿನ್ಯಾಸದಲ್ಲಿ ಬದಲಾವಣೆಗಳನ್ನು ಸೂಚಿಸಿರುವ ಅಧ್ಯಯನ ಪ್ರೋಟೋಕಾಲ್ ಅನ್ನು ಅನುಮೋದಿಸಿವೆ.

ಆಸ್ಪತ್ರೆಯ ಸಮಿತಿಯು ಪ್ರಸ್ತಾಪಿಸಿರುವ ಪ್ರೊಟೊಕಾಲ್‌ನಲ್ಲಿ 11 ಅಂಶಗಳಿಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದೆ. ಅವುಗಳನ್ನು ತಿದ್ದುಪಡಿ ಮಾಡಲು ಸೂಚಿಸಿದೆ.

ಅದರಲ್ಲಿ ಪ್ರಮುಖವಾಗಿ, ಮೊದಲ ಮತ್ತು ಎರಡನೇ ಹಂತದ ಪ್ರಯೋಗಗಳಿಗಾಗಿ ಪ್ರಸ್ತಾಪಿಸಲಾಗಿರುವ 1,125 ಆರೋಗ್ಯವಂತ ಸ್ವಯಂಸೇವಕರ ಮಾದರಿ ಗಾತ್ರವನ್ನು ಅಧ್ಯಯನ ವಿನ್ಯಾಸದಲ್ಲಿ ಮಾರ್ಪಾಡು ಮಾಡಲು ನೈತಿಕ ಸಮಿತಿಯು ಒತ್ತಾಯಿಸಿದೆ. ಈ ಕುರಿತು ಮತ್ತೆ ಚರ್ಚಿಸಲಾಗುವುದು ಎಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ AIIMS ಅಧಿಕಾರಿಯೊಬ್ಬರು “ಇದು AIIMS ಮತ್ತು ದೇಶದ ಇತರ ಸಂಸ್ಥೆಗಳ ನಡುವಿನ ವ್ಯತ್ಯಾಸ. ಪ್ರತಿಯೊಂದು ಸಂಶೋಧನಾ ಯೋಜನೆಗೂ ನಾವು ಅನುಸರಿಸುವ ಅತ್ಯುನ್ನತ ನೈತಿಕ ಮಾನದಂಡಗಳು ಮತ್ತು ಕಠಿಣತೆಯ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ” ಎಂದು ಹೇಳಿದ್ದಾರೆ.

ಐಸಿಎಂಆರ್‌ ಸಂಸ್ಥೆಯು 12 ಆಸ್ಪತ್ರೆಗಳಿಗೆ  ಜುಲೈ 2ರಂದು ಬರೆದಿದ್ದ ಪತ್ರದಲ್ಲಿ ಪ್ರಯೋಗಗಳನ್ನು ತ್ವರಿತಗತಿಯಲ್ಲಿ ನಡೆಸಬೇಕೆಂದು ಒತ್ತಾಯಿಸಿತ್ತು. ಆಗಸ್ಟ್ 15 ರೊಳಗೆ ಲಸಿಕೆಯನ್ನು ದೇಶಾದ್ಯಂತ ಬಿಡುಗಡೆ ಮಾಡುವ, ಲಸಿಕೆಯ ಮೂಲಕ ಚಿಕಿತ್ಸೆ ಪ್ರಾರಂಭಿಸಲು ಉದ್ದೇಶಿಸಿದ್ದು, ಜುಲೈ 7 ರೊಳಗೆ ಪ್ರಯೋಗದ ವರದಿಯನ್ನು ನೀಡುವಂತೆ ಕೇಳಿತ್ತು.

ಇದಕ್ಕೆ ತಜ್ಞರು ಅವಸರದ ಮತ್ತು ಅವಾಸ್ತವಿಕ ಕಾರ್ಯ ಹೇಳಿದ್ದಾರೆ. ಪ್ರಯೋಗದ ವರದಿಯ ದಾಖಲಾತಿ ಜುಲೈ 7 ರಿಂದ ಪ್ರಾರಂಭವಾಗಬಹುದು; ಅದನ್ನು ಪೂರ್ಣಗೊಳಿಸಲು ಹಲವಾರು ದಿನಗಳು ಬೇಕಾಗುತ್ತದೆ ಎಂದು ದೆಹಲಿಯ AIIMS ಮೂಲಗಳು ತಿಳಿಸಿವೆ.

ಮೂಲ ಪ್ರೋಟೋಕಾಲ್ ಪ್ರಕಾರ, ಮೊದಲ ಹಂತದಲ್ಲಿ ಲಸಿಕೆಯನ್ನು 375 ವ್ಯಕ್ತಿಗಳ ಮೇಲೆ ಪ್ರಯೋಗಿಸಿ ಅಧ್ಯಯನ ಮಾಡಬೇಕಾಗುತ್ತದೆ. ನಂತರ ಎರಡನೇ ಹಂತದಲ್ಲಿ ಅದರ ಸುರಕ್ಷತೆ, ಪ್ರತಿಕ್ರಿಯಾತ್ಮಕತೆ, ಸಹಿಷ್ಣುತೆ ಮತ್ತು ಇಮ್ಯುನೊಜೆನೆಸಿಟಿಯನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಇದಕ್ಕಾಗಿ ಸ್ವಯಂಸೇವಕರಿಗೆ ಎರಡು ಇಂಟ್ರಾಮಸ್ಕುಲರ್ ನೀಡಲಾಗುತ್ತದೆ.

ಪ್ರಯೋಗಗಳಿಗೆ ವಯಸ್ಸಿನ ಆಧಾರದಲ್ಲಿ ಗುಂಪುಗಳನ್ನು ಮಾಡಲಾಗುತ್ತದೆ. ಮೊದಲ ಹಂತಕ್ಕೆ 18-55 ವಯಸ್ಸಿನವರು ಮತ್ತು ಎರಡನೇ ಹಂತಕ್ಕೆ 12-65 ವಯಸ್ಸಿನವರನ್ನು ಆಯ್ಕೆ ಮಾಡಲಾಗುತ್ತದೆ. ಆದಾಗ್ಯೂ,ದೆಹಲಿಯ AIIMS ಸಮಿತಿಯ ಆಕ್ಷೇಪಣೆಗಳ ನಂತರ ಅಧ್ಯಯನದ ವಿನ್ಯಾಸವು ಕೆಲವು ಬದಲಾವಣೆಗಳನ್ನು ಕಾಣಬಹುದು.


ಇದನ್ನೂ ಓದಿ : ಆಗಸ್ಟ್ 15 ರೊಳಗೆ ಕೊರೊನಾ ಲಸಿಕೆ ಬಿಡುಗಡೆ ಮಾಡಲಿರುವ ಐಸಿಎಂಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...