Homeಕರೋನಾ ತಲ್ಲಣಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

- Advertisement -
- Advertisement -

ಭಾರತದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎನ್ನಲಾಗಿರುವ ಕೊರೊನಾ ಲಸಿಕೆ ’ಕೊವಾಕ್ಸಿನ್’‌ ಅನ್ನು ವೈದ್ಯಕೀಯ ಪ್ರಯೋಗಕ್ಕೆ ದೆಹಲಿಯ AIIMS ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿದೆ.

ಕೊರೊನಾ ರೋಗ ನಿವಾರಣೆಗಾಗಿ ಕಂಡುಹಿಡಿದಿದೆ ಎನ್ನಲಾಗಿರುವ ಲಸಿಕೆಯನ್ನು ತ್ವರಿತವಾಗಿ ಪ್ರಯೋಗಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ತನ್ನ ಸ್ಟಡಿ ಪ್ರೊಟೊಕಾಲ್‌ನಲ್ಲಿ ಪ್ರಯೋಗಕ್ಕೆ ಸಂಬಂಧಿಸಿದಂತೆ ಹಲವಾರು ಅಂಶಗಳನ್ನು ಆಕ್ಷೇಪಿಸಿದೆ.

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

ಪ್ರಯೋಗಕ್ಕಾಗಿ ಆಯ್ಕೆಯಾದ ಇತರ ಆಸ್ಪತ್ರೆಗಳು ಕೂಡ ಅಧ್ಯಯನ ವಿನ್ಯಾಸದಲ್ಲಿ ಬದಲಾವಣೆಗಳನ್ನು ಸೂಚಿಸಿರುವ ಅಧ್ಯಯನ ಪ್ರೋಟೋಕಾಲ್ ಅನ್ನು ಅನುಮೋದಿಸಿವೆ.

ಆಸ್ಪತ್ರೆಯ ಸಮಿತಿಯು ಪ್ರಸ್ತಾಪಿಸಿರುವ ಪ್ರೊಟೊಕಾಲ್‌ನಲ್ಲಿ 11 ಅಂಶಗಳಿಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದೆ. ಅವುಗಳನ್ನು ತಿದ್ದುಪಡಿ ಮಾಡಲು ಸೂಚಿಸಿದೆ.

ಅದರಲ್ಲಿ ಪ್ರಮುಖವಾಗಿ, ಮೊದಲ ಮತ್ತು ಎರಡನೇ ಹಂತದ ಪ್ರಯೋಗಗಳಿಗಾಗಿ ಪ್ರಸ್ತಾಪಿಸಲಾಗಿರುವ 1,125 ಆರೋಗ್ಯವಂತ ಸ್ವಯಂಸೇವಕರ ಮಾದರಿ ಗಾತ್ರವನ್ನು ಅಧ್ಯಯನ ವಿನ್ಯಾಸದಲ್ಲಿ ಮಾರ್ಪಾಡು ಮಾಡಲು ನೈತಿಕ ಸಮಿತಿಯು ಒತ್ತಾಯಿಸಿದೆ. ಈ ಕುರಿತು ಮತ್ತೆ ಚರ್ಚಿಸಲಾಗುವುದು ಎಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ AIIMS ಅಧಿಕಾರಿಯೊಬ್ಬರು “ಇದು AIIMS ಮತ್ತು ದೇಶದ ಇತರ ಸಂಸ್ಥೆಗಳ ನಡುವಿನ ವ್ಯತ್ಯಾಸ. ಪ್ರತಿಯೊಂದು ಸಂಶೋಧನಾ ಯೋಜನೆಗೂ ನಾವು ಅನುಸರಿಸುವ ಅತ್ಯುನ್ನತ ನೈತಿಕ ಮಾನದಂಡಗಳು ಮತ್ತು ಕಠಿಣತೆಯ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ” ಎಂದು ಹೇಳಿದ್ದಾರೆ.

ಐಸಿಎಂಆರ್‌ ಸಂಸ್ಥೆಯು 12 ಆಸ್ಪತ್ರೆಗಳಿಗೆ  ಜುಲೈ 2ರಂದು ಬರೆದಿದ್ದ ಪತ್ರದಲ್ಲಿ ಪ್ರಯೋಗಗಳನ್ನು ತ್ವರಿತಗತಿಯಲ್ಲಿ ನಡೆಸಬೇಕೆಂದು ಒತ್ತಾಯಿಸಿತ್ತು. ಆಗಸ್ಟ್ 15 ರೊಳಗೆ ಲಸಿಕೆಯನ್ನು ದೇಶಾದ್ಯಂತ ಬಿಡುಗಡೆ ಮಾಡುವ, ಲಸಿಕೆಯ ಮೂಲಕ ಚಿಕಿತ್ಸೆ ಪ್ರಾರಂಭಿಸಲು ಉದ್ದೇಶಿಸಿದ್ದು, ಜುಲೈ 7 ರೊಳಗೆ ಪ್ರಯೋಗದ ವರದಿಯನ್ನು ನೀಡುವಂತೆ ಕೇಳಿತ್ತು.

ಇದಕ್ಕೆ ತಜ್ಞರು ಅವಸರದ ಮತ್ತು ಅವಾಸ್ತವಿಕ ಕಾರ್ಯ ಹೇಳಿದ್ದಾರೆ. ಪ್ರಯೋಗದ ವರದಿಯ ದಾಖಲಾತಿ ಜುಲೈ 7 ರಿಂದ ಪ್ರಾರಂಭವಾಗಬಹುದು; ಅದನ್ನು ಪೂರ್ಣಗೊಳಿಸಲು ಹಲವಾರು ದಿನಗಳು ಬೇಕಾಗುತ್ತದೆ ಎಂದು ದೆಹಲಿಯ AIIMS ಮೂಲಗಳು ತಿಳಿಸಿವೆ.

ಮೂಲ ಪ್ರೋಟೋಕಾಲ್ ಪ್ರಕಾರ, ಮೊದಲ ಹಂತದಲ್ಲಿ ಲಸಿಕೆಯನ್ನು 375 ವ್ಯಕ್ತಿಗಳ ಮೇಲೆ ಪ್ರಯೋಗಿಸಿ ಅಧ್ಯಯನ ಮಾಡಬೇಕಾಗುತ್ತದೆ. ನಂತರ ಎರಡನೇ ಹಂತದಲ್ಲಿ ಅದರ ಸುರಕ್ಷತೆ, ಪ್ರತಿಕ್ರಿಯಾತ್ಮಕತೆ, ಸಹಿಷ್ಣುತೆ ಮತ್ತು ಇಮ್ಯುನೊಜೆನೆಸಿಟಿಯನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಇದಕ್ಕಾಗಿ ಸ್ವಯಂಸೇವಕರಿಗೆ ಎರಡು ಇಂಟ್ರಾಮಸ್ಕುಲರ್ ನೀಡಲಾಗುತ್ತದೆ.

ಪ್ರಯೋಗಗಳಿಗೆ ವಯಸ್ಸಿನ ಆಧಾರದಲ್ಲಿ ಗುಂಪುಗಳನ್ನು ಮಾಡಲಾಗುತ್ತದೆ. ಮೊದಲ ಹಂತಕ್ಕೆ 18-55 ವಯಸ್ಸಿನವರು ಮತ್ತು ಎರಡನೇ ಹಂತಕ್ಕೆ 12-65 ವಯಸ್ಸಿನವರನ್ನು ಆಯ್ಕೆ ಮಾಡಲಾಗುತ್ತದೆ. ಆದಾಗ್ಯೂ,ದೆಹಲಿಯ AIIMS ಸಮಿತಿಯ ಆಕ್ಷೇಪಣೆಗಳ ನಂತರ ಅಧ್ಯಯನದ ವಿನ್ಯಾಸವು ಕೆಲವು ಬದಲಾವಣೆಗಳನ್ನು ಕಾಣಬಹುದು.


ಇದನ್ನೂ ಓದಿ : ಆಗಸ್ಟ್ 15 ರೊಳಗೆ ಕೊರೊನಾ ಲಸಿಕೆ ಬಿಡುಗಡೆ ಮಾಡಲಿರುವ ಐಸಿಎಂಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...