Homeಕರೋನಾ ತಲ್ಲಣಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

- Advertisement -
- Advertisement -

ಭಾರತದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎನ್ನಲಾಗಿರುವ ಕೊರೊನಾ ಲಸಿಕೆ ’ಕೊವಾಕ್ಸಿನ್’‌ ಅನ್ನು ವೈದ್ಯಕೀಯ ಪ್ರಯೋಗಕ್ಕೆ ದೆಹಲಿಯ AIIMS ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿದೆ.

ಕೊರೊನಾ ರೋಗ ನಿವಾರಣೆಗಾಗಿ ಕಂಡುಹಿಡಿದಿದೆ ಎನ್ನಲಾಗಿರುವ ಲಸಿಕೆಯನ್ನು ತ್ವರಿತವಾಗಿ ಪ್ರಯೋಗಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ತನ್ನ ಸ್ಟಡಿ ಪ್ರೊಟೊಕಾಲ್‌ನಲ್ಲಿ ಪ್ರಯೋಗಕ್ಕೆ ಸಂಬಂಧಿಸಿದಂತೆ ಹಲವಾರು ಅಂಶಗಳನ್ನು ಆಕ್ಷೇಪಿಸಿದೆ.

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

ಪ್ರಯೋಗಕ್ಕಾಗಿ ಆಯ್ಕೆಯಾದ ಇತರ ಆಸ್ಪತ್ರೆಗಳು ಕೂಡ ಅಧ್ಯಯನ ವಿನ್ಯಾಸದಲ್ಲಿ ಬದಲಾವಣೆಗಳನ್ನು ಸೂಚಿಸಿರುವ ಅಧ್ಯಯನ ಪ್ರೋಟೋಕಾಲ್ ಅನ್ನು ಅನುಮೋದಿಸಿವೆ.

ಆಸ್ಪತ್ರೆಯ ಸಮಿತಿಯು ಪ್ರಸ್ತಾಪಿಸಿರುವ ಪ್ರೊಟೊಕಾಲ್‌ನಲ್ಲಿ 11 ಅಂಶಗಳಿಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದೆ. ಅವುಗಳನ್ನು ತಿದ್ದುಪಡಿ ಮಾಡಲು ಸೂಚಿಸಿದೆ.

ಅದರಲ್ಲಿ ಪ್ರಮುಖವಾಗಿ, ಮೊದಲ ಮತ್ತು ಎರಡನೇ ಹಂತದ ಪ್ರಯೋಗಗಳಿಗಾಗಿ ಪ್ರಸ್ತಾಪಿಸಲಾಗಿರುವ 1,125 ಆರೋಗ್ಯವಂತ ಸ್ವಯಂಸೇವಕರ ಮಾದರಿ ಗಾತ್ರವನ್ನು ಅಧ್ಯಯನ ವಿನ್ಯಾಸದಲ್ಲಿ ಮಾರ್ಪಾಡು ಮಾಡಲು ನೈತಿಕ ಸಮಿತಿಯು ಒತ್ತಾಯಿಸಿದೆ. ಈ ಕುರಿತು ಮತ್ತೆ ಚರ್ಚಿಸಲಾಗುವುದು ಎಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ AIIMS ಅಧಿಕಾರಿಯೊಬ್ಬರು “ಇದು AIIMS ಮತ್ತು ದೇಶದ ಇತರ ಸಂಸ್ಥೆಗಳ ನಡುವಿನ ವ್ಯತ್ಯಾಸ. ಪ್ರತಿಯೊಂದು ಸಂಶೋಧನಾ ಯೋಜನೆಗೂ ನಾವು ಅನುಸರಿಸುವ ಅತ್ಯುನ್ನತ ನೈತಿಕ ಮಾನದಂಡಗಳು ಮತ್ತು ಕಠಿಣತೆಯ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ” ಎಂದು ಹೇಳಿದ್ದಾರೆ.

ಐಸಿಎಂಆರ್‌ ಸಂಸ್ಥೆಯು 12 ಆಸ್ಪತ್ರೆಗಳಿಗೆ  ಜುಲೈ 2ರಂದು ಬರೆದಿದ್ದ ಪತ್ರದಲ್ಲಿ ಪ್ರಯೋಗಗಳನ್ನು ತ್ವರಿತಗತಿಯಲ್ಲಿ ನಡೆಸಬೇಕೆಂದು ಒತ್ತಾಯಿಸಿತ್ತು. ಆಗಸ್ಟ್ 15 ರೊಳಗೆ ಲಸಿಕೆಯನ್ನು ದೇಶಾದ್ಯಂತ ಬಿಡುಗಡೆ ಮಾಡುವ, ಲಸಿಕೆಯ ಮೂಲಕ ಚಿಕಿತ್ಸೆ ಪ್ರಾರಂಭಿಸಲು ಉದ್ದೇಶಿಸಿದ್ದು, ಜುಲೈ 7 ರೊಳಗೆ ಪ್ರಯೋಗದ ವರದಿಯನ್ನು ನೀಡುವಂತೆ ಕೇಳಿತ್ತು.

ಇದಕ್ಕೆ ತಜ್ಞರು ಅವಸರದ ಮತ್ತು ಅವಾಸ್ತವಿಕ ಕಾರ್ಯ ಹೇಳಿದ್ದಾರೆ. ಪ್ರಯೋಗದ ವರದಿಯ ದಾಖಲಾತಿ ಜುಲೈ 7 ರಿಂದ ಪ್ರಾರಂಭವಾಗಬಹುದು; ಅದನ್ನು ಪೂರ್ಣಗೊಳಿಸಲು ಹಲವಾರು ದಿನಗಳು ಬೇಕಾಗುತ್ತದೆ ಎಂದು ದೆಹಲಿಯ AIIMS ಮೂಲಗಳು ತಿಳಿಸಿವೆ.

ಮೂಲ ಪ್ರೋಟೋಕಾಲ್ ಪ್ರಕಾರ, ಮೊದಲ ಹಂತದಲ್ಲಿ ಲಸಿಕೆಯನ್ನು 375 ವ್ಯಕ್ತಿಗಳ ಮೇಲೆ ಪ್ರಯೋಗಿಸಿ ಅಧ್ಯಯನ ಮಾಡಬೇಕಾಗುತ್ತದೆ. ನಂತರ ಎರಡನೇ ಹಂತದಲ್ಲಿ ಅದರ ಸುರಕ್ಷತೆ, ಪ್ರತಿಕ್ರಿಯಾತ್ಮಕತೆ, ಸಹಿಷ್ಣುತೆ ಮತ್ತು ಇಮ್ಯುನೊಜೆನೆಸಿಟಿಯನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಇದಕ್ಕಾಗಿ ಸ್ವಯಂಸೇವಕರಿಗೆ ಎರಡು ಇಂಟ್ರಾಮಸ್ಕುಲರ್ ನೀಡಲಾಗುತ್ತದೆ.

ಪ್ರಯೋಗಗಳಿಗೆ ವಯಸ್ಸಿನ ಆಧಾರದಲ್ಲಿ ಗುಂಪುಗಳನ್ನು ಮಾಡಲಾಗುತ್ತದೆ. ಮೊದಲ ಹಂತಕ್ಕೆ 18-55 ವಯಸ್ಸಿನವರು ಮತ್ತು ಎರಡನೇ ಹಂತಕ್ಕೆ 12-65 ವಯಸ್ಸಿನವರನ್ನು ಆಯ್ಕೆ ಮಾಡಲಾಗುತ್ತದೆ. ಆದಾಗ್ಯೂ,ದೆಹಲಿಯ AIIMS ಸಮಿತಿಯ ಆಕ್ಷೇಪಣೆಗಳ ನಂತರ ಅಧ್ಯಯನದ ವಿನ್ಯಾಸವು ಕೆಲವು ಬದಲಾವಣೆಗಳನ್ನು ಕಾಣಬಹುದು.


ಇದನ್ನೂ ಓದಿ : ಆಗಸ್ಟ್ 15 ರೊಳಗೆ ಕೊರೊನಾ ಲಸಿಕೆ ಬಿಡುಗಡೆ ಮಾಡಲಿರುವ ಐಸಿಎಂಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...