Homeಕರೋನಾ ತಲ್ಲಣಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

- Advertisement -
- Advertisement -

ಭಾರತದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎನ್ನಲಾಗಿರುವ ಕೊರೊನಾ ಲಸಿಕೆ ’ಕೊವಾಕ್ಸಿನ್’‌ ಅನ್ನು ವೈದ್ಯಕೀಯ ಪ್ರಯೋಗಕ್ಕೆ ದೆಹಲಿಯ AIIMS ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿದೆ.

ಕೊರೊನಾ ರೋಗ ನಿವಾರಣೆಗಾಗಿ ಕಂಡುಹಿಡಿದಿದೆ ಎನ್ನಲಾಗಿರುವ ಲಸಿಕೆಯನ್ನು ತ್ವರಿತವಾಗಿ ಪ್ರಯೋಗಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ತನ್ನ ಸ್ಟಡಿ ಪ್ರೊಟೊಕಾಲ್‌ನಲ್ಲಿ ಪ್ರಯೋಗಕ್ಕೆ ಸಂಬಂಧಿಸಿದಂತೆ ಹಲವಾರು ಅಂಶಗಳನ್ನು ಆಕ್ಷೇಪಿಸಿದೆ.

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

ಪ್ರಯೋಗಕ್ಕಾಗಿ ಆಯ್ಕೆಯಾದ ಇತರ ಆಸ್ಪತ್ರೆಗಳು ಕೂಡ ಅಧ್ಯಯನ ವಿನ್ಯಾಸದಲ್ಲಿ ಬದಲಾವಣೆಗಳನ್ನು ಸೂಚಿಸಿರುವ ಅಧ್ಯಯನ ಪ್ರೋಟೋಕಾಲ್ ಅನ್ನು ಅನುಮೋದಿಸಿವೆ.

ಆಸ್ಪತ್ರೆಯ ಸಮಿತಿಯು ಪ್ರಸ್ತಾಪಿಸಿರುವ ಪ್ರೊಟೊಕಾಲ್‌ನಲ್ಲಿ 11 ಅಂಶಗಳಿಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದೆ. ಅವುಗಳನ್ನು ತಿದ್ದುಪಡಿ ಮಾಡಲು ಸೂಚಿಸಿದೆ.

ಅದರಲ್ಲಿ ಪ್ರಮುಖವಾಗಿ, ಮೊದಲ ಮತ್ತು ಎರಡನೇ ಹಂತದ ಪ್ರಯೋಗಗಳಿಗಾಗಿ ಪ್ರಸ್ತಾಪಿಸಲಾಗಿರುವ 1,125 ಆರೋಗ್ಯವಂತ ಸ್ವಯಂಸೇವಕರ ಮಾದರಿ ಗಾತ್ರವನ್ನು ಅಧ್ಯಯನ ವಿನ್ಯಾಸದಲ್ಲಿ ಮಾರ್ಪಾಡು ಮಾಡಲು ನೈತಿಕ ಸಮಿತಿಯು ಒತ್ತಾಯಿಸಿದೆ. ಈ ಕುರಿತು ಮತ್ತೆ ಚರ್ಚಿಸಲಾಗುವುದು ಎಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ AIIMS ಅಧಿಕಾರಿಯೊಬ್ಬರು “ಇದು AIIMS ಮತ್ತು ದೇಶದ ಇತರ ಸಂಸ್ಥೆಗಳ ನಡುವಿನ ವ್ಯತ್ಯಾಸ. ಪ್ರತಿಯೊಂದು ಸಂಶೋಧನಾ ಯೋಜನೆಗೂ ನಾವು ಅನುಸರಿಸುವ ಅತ್ಯುನ್ನತ ನೈತಿಕ ಮಾನದಂಡಗಳು ಮತ್ತು ಕಠಿಣತೆಯ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ” ಎಂದು ಹೇಳಿದ್ದಾರೆ.

ಐಸಿಎಂಆರ್‌ ಸಂಸ್ಥೆಯು 12 ಆಸ್ಪತ್ರೆಗಳಿಗೆ  ಜುಲೈ 2ರಂದು ಬರೆದಿದ್ದ ಪತ್ರದಲ್ಲಿ ಪ್ರಯೋಗಗಳನ್ನು ತ್ವರಿತಗತಿಯಲ್ಲಿ ನಡೆಸಬೇಕೆಂದು ಒತ್ತಾಯಿಸಿತ್ತು. ಆಗಸ್ಟ್ 15 ರೊಳಗೆ ಲಸಿಕೆಯನ್ನು ದೇಶಾದ್ಯಂತ ಬಿಡುಗಡೆ ಮಾಡುವ, ಲಸಿಕೆಯ ಮೂಲಕ ಚಿಕಿತ್ಸೆ ಪ್ರಾರಂಭಿಸಲು ಉದ್ದೇಶಿಸಿದ್ದು, ಜುಲೈ 7 ರೊಳಗೆ ಪ್ರಯೋಗದ ವರದಿಯನ್ನು ನೀಡುವಂತೆ ಕೇಳಿತ್ತು.

ಇದಕ್ಕೆ ತಜ್ಞರು ಅವಸರದ ಮತ್ತು ಅವಾಸ್ತವಿಕ ಕಾರ್ಯ ಹೇಳಿದ್ದಾರೆ. ಪ್ರಯೋಗದ ವರದಿಯ ದಾಖಲಾತಿ ಜುಲೈ 7 ರಿಂದ ಪ್ರಾರಂಭವಾಗಬಹುದು; ಅದನ್ನು ಪೂರ್ಣಗೊಳಿಸಲು ಹಲವಾರು ದಿನಗಳು ಬೇಕಾಗುತ್ತದೆ ಎಂದು ದೆಹಲಿಯ AIIMS ಮೂಲಗಳು ತಿಳಿಸಿವೆ.

ಮೂಲ ಪ್ರೋಟೋಕಾಲ್ ಪ್ರಕಾರ, ಮೊದಲ ಹಂತದಲ್ಲಿ ಲಸಿಕೆಯನ್ನು 375 ವ್ಯಕ್ತಿಗಳ ಮೇಲೆ ಪ್ರಯೋಗಿಸಿ ಅಧ್ಯಯನ ಮಾಡಬೇಕಾಗುತ್ತದೆ. ನಂತರ ಎರಡನೇ ಹಂತದಲ್ಲಿ ಅದರ ಸುರಕ್ಷತೆ, ಪ್ರತಿಕ್ರಿಯಾತ್ಮಕತೆ, ಸಹಿಷ್ಣುತೆ ಮತ್ತು ಇಮ್ಯುನೊಜೆನೆಸಿಟಿಯನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಇದಕ್ಕಾಗಿ ಸ್ವಯಂಸೇವಕರಿಗೆ ಎರಡು ಇಂಟ್ರಾಮಸ್ಕುಲರ್ ನೀಡಲಾಗುತ್ತದೆ.

ಪ್ರಯೋಗಗಳಿಗೆ ವಯಸ್ಸಿನ ಆಧಾರದಲ್ಲಿ ಗುಂಪುಗಳನ್ನು ಮಾಡಲಾಗುತ್ತದೆ. ಮೊದಲ ಹಂತಕ್ಕೆ 18-55 ವಯಸ್ಸಿನವರು ಮತ್ತು ಎರಡನೇ ಹಂತಕ್ಕೆ 12-65 ವಯಸ್ಸಿನವರನ್ನು ಆಯ್ಕೆ ಮಾಡಲಾಗುತ್ತದೆ. ಆದಾಗ್ಯೂ,ದೆಹಲಿಯ AIIMS ಸಮಿತಿಯ ಆಕ್ಷೇಪಣೆಗಳ ನಂತರ ಅಧ್ಯಯನದ ವಿನ್ಯಾಸವು ಕೆಲವು ಬದಲಾವಣೆಗಳನ್ನು ಕಾಣಬಹುದು.


ಇದನ್ನೂ ಓದಿ : ಆಗಸ್ಟ್ 15 ರೊಳಗೆ ಕೊರೊನಾ ಲಸಿಕೆ ಬಿಡುಗಡೆ ಮಾಡಲಿರುವ ಐಸಿಎಂಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...