Homeಕರೋನಾ ತಲ್ಲಣಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಕೋವಾಕ್ಸಿನ್ ಲಸಿಕೆ ಪ್ರಯೋಗಕ್ಕೆ ICMR ನಿಂದ ಒತ್ತಡ: AIIMS ಆಕ್ಚೇಪ

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

- Advertisement -
- Advertisement -

ಭಾರತದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎನ್ನಲಾಗಿರುವ ಕೊರೊನಾ ಲಸಿಕೆ ’ಕೊವಾಕ್ಸಿನ್’‌ ಅನ್ನು ವೈದ್ಯಕೀಯ ಪ್ರಯೋಗಕ್ಕೆ ದೆಹಲಿಯ AIIMS ಆಸ್ಪತ್ರೆ ಆಕ್ಷೇಪ ವ್ಯಕ್ತಪಡಿಸಿದೆ.

ಕೊರೊನಾ ರೋಗ ನಿವಾರಣೆಗಾಗಿ ಕಂಡುಹಿಡಿದಿದೆ ಎನ್ನಲಾಗಿರುವ ಲಸಿಕೆಯನ್ನು ತ್ವರಿತವಾಗಿ ಪ್ರಯೋಗಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ತನ್ನ ಸ್ಟಡಿ ಪ್ರೊಟೊಕಾಲ್‌ನಲ್ಲಿ ಪ್ರಯೋಗಕ್ಕೆ ಸಂಬಂಧಿಸಿದಂತೆ ಹಲವಾರು ಅಂಶಗಳನ್ನು ಆಕ್ಷೇಪಿಸಿದೆ.

ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊವಾಕ್ಸಿನ್‌ ಲಸಿಕೆಯ ಮಾನವ ಪ್ರಯೋಗಗಳಿಗೆ ಆಯ್ಕೆಯಾದ 10 ರಾಜ್ಯಗಳ 12 ಆಸ್ಪತ್ರೆಗಳಲ್ಲಿ ದೆಹಲಿಯ AIIMS ಆಸ್ಪತ್ರೆಯೂ ಒಂದಾಗಿದೆ.

ಪ್ರಯೋಗಕ್ಕಾಗಿ ಆಯ್ಕೆಯಾದ ಇತರ ಆಸ್ಪತ್ರೆಗಳು ಕೂಡ ಅಧ್ಯಯನ ವಿನ್ಯಾಸದಲ್ಲಿ ಬದಲಾವಣೆಗಳನ್ನು ಸೂಚಿಸಿರುವ ಅಧ್ಯಯನ ಪ್ರೋಟೋಕಾಲ್ ಅನ್ನು ಅನುಮೋದಿಸಿವೆ.

ಆಸ್ಪತ್ರೆಯ ಸಮಿತಿಯು ಪ್ರಸ್ತಾಪಿಸಿರುವ ಪ್ರೊಟೊಕಾಲ್‌ನಲ್ಲಿ 11 ಅಂಶಗಳಿಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸಿದೆ. ಅವುಗಳನ್ನು ತಿದ್ದುಪಡಿ ಮಾಡಲು ಸೂಚಿಸಿದೆ.

ಅದರಲ್ಲಿ ಪ್ರಮುಖವಾಗಿ, ಮೊದಲ ಮತ್ತು ಎರಡನೇ ಹಂತದ ಪ್ರಯೋಗಗಳಿಗಾಗಿ ಪ್ರಸ್ತಾಪಿಸಲಾಗಿರುವ 1,125 ಆರೋಗ್ಯವಂತ ಸ್ವಯಂಸೇವಕರ ಮಾದರಿ ಗಾತ್ರವನ್ನು ಅಧ್ಯಯನ ವಿನ್ಯಾಸದಲ್ಲಿ ಮಾರ್ಪಾಡು ಮಾಡಲು ನೈತಿಕ ಸಮಿತಿಯು ಒತ್ತಾಯಿಸಿದೆ. ಈ ಕುರಿತು ಮತ್ತೆ ಚರ್ಚಿಸಲಾಗುವುದು ಎಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ AIIMS ಅಧಿಕಾರಿಯೊಬ್ಬರು “ಇದು AIIMS ಮತ್ತು ದೇಶದ ಇತರ ಸಂಸ್ಥೆಗಳ ನಡುವಿನ ವ್ಯತ್ಯಾಸ. ಪ್ರತಿಯೊಂದು ಸಂಶೋಧನಾ ಯೋಜನೆಗೂ ನಾವು ಅನುಸರಿಸುವ ಅತ್ಯುನ್ನತ ನೈತಿಕ ಮಾನದಂಡಗಳು ಮತ್ತು ಕಠಿಣತೆಯ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ” ಎಂದು ಹೇಳಿದ್ದಾರೆ.

ಐಸಿಎಂಆರ್‌ ಸಂಸ್ಥೆಯು 12 ಆಸ್ಪತ್ರೆಗಳಿಗೆ  ಜುಲೈ 2ರಂದು ಬರೆದಿದ್ದ ಪತ್ರದಲ್ಲಿ ಪ್ರಯೋಗಗಳನ್ನು ತ್ವರಿತಗತಿಯಲ್ಲಿ ನಡೆಸಬೇಕೆಂದು ಒತ್ತಾಯಿಸಿತ್ತು. ಆಗಸ್ಟ್ 15 ರೊಳಗೆ ಲಸಿಕೆಯನ್ನು ದೇಶಾದ್ಯಂತ ಬಿಡುಗಡೆ ಮಾಡುವ, ಲಸಿಕೆಯ ಮೂಲಕ ಚಿಕಿತ್ಸೆ ಪ್ರಾರಂಭಿಸಲು ಉದ್ದೇಶಿಸಿದ್ದು, ಜುಲೈ 7 ರೊಳಗೆ ಪ್ರಯೋಗದ ವರದಿಯನ್ನು ನೀಡುವಂತೆ ಕೇಳಿತ್ತು.

ಇದಕ್ಕೆ ತಜ್ಞರು ಅವಸರದ ಮತ್ತು ಅವಾಸ್ತವಿಕ ಕಾರ್ಯ ಹೇಳಿದ್ದಾರೆ. ಪ್ರಯೋಗದ ವರದಿಯ ದಾಖಲಾತಿ ಜುಲೈ 7 ರಿಂದ ಪ್ರಾರಂಭವಾಗಬಹುದು; ಅದನ್ನು ಪೂರ್ಣಗೊಳಿಸಲು ಹಲವಾರು ದಿನಗಳು ಬೇಕಾಗುತ್ತದೆ ಎಂದು ದೆಹಲಿಯ AIIMS ಮೂಲಗಳು ತಿಳಿಸಿವೆ.

ಮೂಲ ಪ್ರೋಟೋಕಾಲ್ ಪ್ರಕಾರ, ಮೊದಲ ಹಂತದಲ್ಲಿ ಲಸಿಕೆಯನ್ನು 375 ವ್ಯಕ್ತಿಗಳ ಮೇಲೆ ಪ್ರಯೋಗಿಸಿ ಅಧ್ಯಯನ ಮಾಡಬೇಕಾಗುತ್ತದೆ. ನಂತರ ಎರಡನೇ ಹಂತದಲ್ಲಿ ಅದರ ಸುರಕ್ಷತೆ, ಪ್ರತಿಕ್ರಿಯಾತ್ಮಕತೆ, ಸಹಿಷ್ಣುತೆ ಮತ್ತು ಇಮ್ಯುನೊಜೆನೆಸಿಟಿಯನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಇದಕ್ಕಾಗಿ ಸ್ವಯಂಸೇವಕರಿಗೆ ಎರಡು ಇಂಟ್ರಾಮಸ್ಕುಲರ್ ನೀಡಲಾಗುತ್ತದೆ.

ಪ್ರಯೋಗಗಳಿಗೆ ವಯಸ್ಸಿನ ಆಧಾರದಲ್ಲಿ ಗುಂಪುಗಳನ್ನು ಮಾಡಲಾಗುತ್ತದೆ. ಮೊದಲ ಹಂತಕ್ಕೆ 18-55 ವಯಸ್ಸಿನವರು ಮತ್ತು ಎರಡನೇ ಹಂತಕ್ಕೆ 12-65 ವಯಸ್ಸಿನವರನ್ನು ಆಯ್ಕೆ ಮಾಡಲಾಗುತ್ತದೆ. ಆದಾಗ್ಯೂ,ದೆಹಲಿಯ AIIMS ಸಮಿತಿಯ ಆಕ್ಷೇಪಣೆಗಳ ನಂತರ ಅಧ್ಯಯನದ ವಿನ್ಯಾಸವು ಕೆಲವು ಬದಲಾವಣೆಗಳನ್ನು ಕಾಣಬಹುದು.


ಇದನ್ನೂ ಓದಿ : ಆಗಸ್ಟ್ 15 ರೊಳಗೆ ಕೊರೊನಾ ಲಸಿಕೆ ಬಿಡುಗಡೆ ಮಾಡಲಿರುವ ಐಸಿಎಂಆರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...