Homeಕರೋನಾ ತಲ್ಲಣಅಧಿಕಾರಿಗಳ ಒತ್ತಡ: ಅಂಗನವಾಡಿ ಕಾರ್ಯಕರ್ತೆ ಅಸಹಜ ಸಾವು

ಅಧಿಕಾರಿಗಳ ಒತ್ತಡ: ಅಂಗನವಾಡಿ ಕಾರ್ಯಕರ್ತೆ ಅಸಹಜ ಸಾವು

- Advertisement -
- Advertisement -

ತುಮಕೂರು(ಆಗಸ್ಟ್ 26): ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅಂಗನವಾಡಿಯಲ್ಲೆ ಅಸಹಜವಾಗಿ ಸಾವಿಗೀಡಾಗಿದ್ದು ಅಧಿಕಾರಿಗಳ ಒತ್ತಡವೆ ಇದಕ್ಕೆ ಕಾರಣ ಎಂದು ದೂರಲಾಗಿದೆ.

ಸೂಪರ್ ವೈಸರ್ ಕರೆ ಮಾಡಿದ 10 ನಿಮಿಷದಲ್ಲಿ ಅಂಗನವಾಡಿಯಲ್ಲೇ ನೇಣು ಬಿಗಿಡುಕೊಂಡು ಆತ್ಮಕಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಸರಿಯಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಮಕ್ಕಳಿಗೆ ಸಿಗುತ್ತಿಲ್ಲ ಪೌಷ್ಠಿಕ ಆಹಾರ: ಅಂಗನವಾಡಿ, ಬಿಸಿಯೂಟ ನೌಕರರ ಗೋಳು ಕೇಳುವವರಿಲ್ಲ

ಆತ್ಮಹತ್ಯೆ ಮಾಡಿರುವವರನ್ನು ತಿಪಟೂರು ತಾಲೂಕು ಕರಡಾಳುಸಂತೆ ಅಂಗನವಾಡಿ ಕೇಂದ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಂಜುಳ (40) ಎಂದು ಗುರುತಿಸಲಾಗಿದೆ. ಇವರು ದಿಢೀರನೇ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಮಾಸಿಕ ಸಭೆಯ ವರದಿ ಪಡೆಯುವ ಸಂಬಂಧ ಸೂಪರ್ ವೈಸರ್ ಅಂಗನವಾಡಿ ಕಾರ್ಯಕರ್ತೆಗೆ ಕರೆ ಮಾಡಿದ ಕೆಲವೇ ನಿಮಿಷ ಗಳಲ್ಲಿ ಆತ್ಮಹತ್ಯೆಯ ಸುದ್ದಿ ಹೊರಬಿದ್ದಿದೆ.

ಕೊರೊನ ವಾರಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯ ಡಾ.ನಾಗೇಂದ್ರ ಅವರು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದರು. ಈಗ ಅಂಗನವಾಡಿ ಕಾರ್ಯಕರ್ತೆ ಮಂಜುಳ ಕೂಡ ಅಧಿಕಾರಿಯ ಒತ್ತಡದಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ನಿಯಮದಂತೆ ಪ್ರತಿ ಸೋಮವಾರ ಗ್ರಾಮದ ಪ್ರತಿ ಮಗುವಿಗೆ ಎರಡು ಮೊಟ್ಟೆ, ಗರ್ಭಿಣಿಯರಿಗೆ 6 ಮೊಟ್ಟೆ ಕೊಡಬೇಕು. ಆದರೆ ಮಂಜುಳ ಅವರು ತೀವ್ರ ಅನಾರೋಗ್ಯ ಕಾರಣದಿಂದ ಸೋಮವಾರ ಮೊಟ್ಟೆ ವಿತರಿಸಿರಲಿಲ್ಲ. ಬದಲಿಗೆ ಆಗಸ್ಟ್ 26 ರ ಬುಧವಾರ ಬೆಳಗ್ಗೆ ತಮ್ಮ ಮಗ ಮತ್ತು ಸಹಾಯಕರೊಬ್ಬರನ್ನು ಕಳಿಸಿ ಮೊಟ್ಟೆ ತರಿಸಿ ಎಲ್ಲರಿಗೂ ವಿತರಿಸಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಾನ್ವೆಂಟುಗಳಿಗೂ ಸವಾಲೆಸೆದ ಅಂಗನವಾಡಿ ಕಾರ್ಯಕರ್ತೆ ಬಿ.ವಸಂತ

ಈ ವಿಷಯವಾಗಿ ಸೂಪರ್ ವೈಸರ್ ಬೆಳಗ್ಗೆ 11.50 ರ ಸುಮಾರಿಗೆ ಮಂಜುಳ ಅವರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡು, ಅವರನ್ನು ಬೈದರು ಎಂದು ಹೇಳಲಾಗುತ್ತಿದೆ. ಮಂಜುಳ ಅವರು ತನ್ನ ತಾಯಿ ತೀರಿಕೊಂಡ ಒತ್ತಡದಲ್ಲಿದ್ದು, ತಾನೂ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ವಿಷಯವನ್ನು ಸೂಪರ್ ವೈಸರ್ ಲೀಲಾಬಾಯಿ ಅವರಿಗೆ ತಿಳಿಸಿದರೂ ಕೇಳಲಿಲ್ಲ ಎಂದು ಹೇಳಲಾಗಿದೆ.

ಮಂಜುಳ ಕೊರೊನ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದರು. ಮಾಸಾಶನ ಸೇರಿದಂತೆ ಹಲವು ಸರ್ವೇ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದರು. ಕುಟುಂಬದ ಜವಾಬ್ದಾರಿಯನ್ನು ಇವರೇ ನಿರ್ಹಸುತ್ತಿದ್ದರು ಎನ್ನಲಾಗಿದದ್ದು, ಬಡ ಕುಟುಂಬದ ಮಂಜುಳ ಪತಿ, ಪುತ್ರ ಮತ್ತು ಮಗಳನ್ನು ಅಗಲಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಗಳೇನು ಎಂಬ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು, ಸಾಕ್ಷ್ಯ ನಾಶದ ಹಿನ್ನೆಲೆಯಲ್ಲಿ ಸಿಡಿಪಿಓ ಮತ್ತು ಸೂಪರ್ ವೈಸರ್ ಲೀಲಾಬಾಯಿ ಅವರನ್ನು ಅಮಾನತುಪಡಿಸಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಒತ್ತಾಯಿಸಿದೆ.

ಜೀವ ಅಮೂಲ್ಯವಾಗಿದೆ, ಯಾವುದೆ ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ಶಾಲಾ ಮಕ್ಕಳಿಗೆ ಪಡಿತರ ಹಾಗೂ ಹಣ ವರ್ಗಾಯಿಸುವಂತೆ ಬಿಹಾರ ಸರ್ಕಾರದ ಆದೇಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....