Homeಮುಖಪುಟಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ರಾಜ್ಯಪಟ್ಟಿಯಲ್ಲಿರುವ ವಿಷಯಗಳ ಬಗ್ಗೆ ನಮ್ಮ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸುಗ್ರೀವಾಜ್ಞೆ ತನ್ನಿ ಎಂದು ಹೇಳಲು ಗೃಹಮಂತ್ರಿಗಳ ಖಾಸಗಿ ಕಾರ್ಯದರ್ಶಿಗೆ ಅಧಿಕಾರ ಕೊಟ್ಟವರಾರು ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದು ಬಿಜೆಪಿ ಪಕ್ಷ ಮತ್ತು ಪಕ್ಷದ ಅಭಿಮಾನಿಗಳು ಅವಾಗಾವಾಗ ಹೇಳುತ್ತಿದ್ದರು. ಈಗ ಕರ್ನಾಟಕ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರವಿಡಿದಿದೆ. ಹಾಗಾದರೆ ಈಗ ನಮ್ಮ ರಾಜ್ಯವು ಅಭಿವೃದ್ದಿಯಾಗುತ್ತಿದೆಯೇ? ಇಲ್ಲ ಬದಲಿಗೆ ಬಿಜೆಪಿ ಪಕ್ಷದ ಅಭಿವೃದ್ದಿಯಾಗುತ್ತಿದೆ ಅಷ್ಟೇ ಎಂಬ ಅನುಮಾನಗಳು ಆರಂಭವಾಗಿವೆ.

ಮೇ 04 ರಂದು ಕೊರೊನಾ ಸಾಂಕ್ರಾಮಿಕಗಳ ನಡುವೆ ಕೇಂದ್ರದ ಗೃಹ ಮಂತ್ರಿ ಅಮಿತ್‌ ಶಾರವರ ಖಾಸಗಿ ಕಾರ್ಯದರ್ಶಿ ಕರ್ನಾಟಕ ಮುಖ್ಯಮಂತ್ರಿಯವರ ಪ್ರಿನ್ಸಿಪಲ್ ಸೆಕ್ರಟರಿ ಪಿ.ರವಿ ರಸ್ತೋಗಿ ಅವರಿಗೆ ಪತ್ರ ಬರೆದು, “ಕಾರ್ಮಿಕ ಕಾಯ್ದೆಗಳಿಗೆ ಮತ್ತು ಎಪಿಎಂಸಿ ಕಾಯ್ದೆಗೆ ಆದಷ್ಟು ಬೇಗ ಸುಗ್ರೀವಾಜ್ಞೆಗಳ ಮೂಲಕ ತಿದ್ದುಪಡಿ ತಂದು ಕಟ್ಟುನಿಟ್ಟಾಗಿ ರಾಜ್ಯದಲ್ಲಿ ಜಾರಿಗೊಳಿಸಲು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ” ಎಂದು ಆದೇಶಿಸಿದ್ದಾರೆ.

ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ನಿಮಗೆ ನಿರ್ದೇಶನ ನೀಡುತ್ತದೆ ಎಂದು ಆ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ಭಾಸ್ಕರ್‌ರವರಿಗೂ ಕಳಿಸಲಾಗಿದೆ. ರಾಜ್ಯಪಟ್ಟಿಯಲ್ಲಿರುವ ವಿಷಯಗಳ ಬಗ್ಗೆ ನಮ್ಮ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸುಗ್ರೀವಾಜ್ಞೆ ತನ್ನಿ ಎಂದು ಹೇಳಲು ಗೃಹಮಂತ್ರಿಗಳ ಖಾಸಗಿ ಕಾರ್ಯದರ್ಶಿಗೆ ಅಧಿಕಾರ ಕೊಟ್ಟವರಾರು ಎಂಬ ಪ್ರಶ್ನೆಗಳು ಎದ್ದಿವೆ.

“ಮಾದರಿ ಎಪಿಎಲ್ಎಂ ಕಾಯ್ದೆ 2017 ರಲ್ಲಿ ತಿಳಿಸಿರುವಂತೆ ನಿಮ್ಮ ರಾಜ್ಯವು ಈಗಾಗಲೇ ಸುಧಾರಣೆಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟು ಸುಧಾರಣೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಪ್ರಶಂಸಿಸಲಾಗುತ್ತದೆ. ಆದರೂ ಎಪಿಎಂಸಿಯನ್ನು ಕೇವಲ ಮಂಡಿ ಮಾರುಕಟ್ಟೆಗಳಿಗೆ ಸೀಮಿತಗೊಳಿಸಿರುವುದು ಸರಿಯಿಲ್ಲ. ಈ ನಿಟ್ಟಿನಲ್ಲಿ, ನೀತಿ ಆಯೋಗದ ಕೊನೆಯ ಆಡಳಿತ ಮಂಡಳಿ ಸಭೆಯಲ್ಲಿ, ಭಾರತದ ಗೌರವಾನ್ವಿತ ಪ್ರಧಾನಿ ರಾಜ್ಯಗಳು ಮಾದರಿ ಎಪಿಎಲ್ಎಂ ಕಾಯ್ದೆ 2017 ಅನ್ನು ಅಂಗೀಕರಿಸುವ ಬಗ್ಗೆ ಒತ್ತು ನೀಡಿದ್ದರು. ಆದ್ದರಿಂದ ನಿಮ್ಮ ರಾಜ್ಯವು ರೈತರು ಮತ್ತು ಉತ್ಪಾದಕರ ಹಿತದೃಷ್ಟಿಯಿಂದ ಸುಗ್ರೀವಾಜ್ಞೆ ಮಾರ್ಗದ ಮೂಲಕ ತುರ್ತಾಗಿ ಅಳವಡಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಇದನ್ನು ನಿಮ್ಮ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯ ಗಮನಕ್ಕೆ ತಂದು ಸುಗ್ರೀವಾಜ್ಞೆಯ ನಂತರ ತಿದ್ದುಪಡಿ ಮಾಡಿದ ಕಾಯಿದೆಯ ಪ್ರತಿಯನ್ನು ಸಚಿವಾಲಯಕ್ಕೆ ಬೇಗನೆ ಕಳುಹಿಸಬೇಕು”. ಇದು ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಮೇ 05ರಂದು ಬರೆದ ಪತ್ರ..

ಈ ಮೇಲಿನ ಎರಡು ಪತ್ರಗಳಿಂದ ಸ್ಪಷ್ಟವಾಗುವ ಅಂಶವೇನೆಂದರೆ ಎರಡೂ ಕಡೆ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಜನರಿಗೆ ಉಪಯೋಗವಾಗುವ ಬದಲು ತೊಂದರೆಯೇ ಹೆಚ್ಚು. ಕೇಂದ್ರದ ಬಿಜೆಪಿ ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ರಾಜ್ಯದ ಬಿಜೆಪಿ ಸರ್ಕಾರದ ಮೇಲೆ ಸುಗ್ರೀವಾಜ್ಞೆಗಳನ್ನು ತರುವಂತೆ ಒತ್ತಡ ಹೇರಿದೆ. ಅದನ್ನು ರಾಜ್ಯ ಸರ್ಕಾರ ಚಾಚೂ ತಪ್ಪದೇ ಪಾಲಿಸಿದೆ. ಆ ಸುಗ್ರೀವಾಜ್ಞೆಗಳ ಮೂಲಕ ಬಂದು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರವಾದರೆ ಬಿಜೆಪಿಗೆ ಬಹುಮತವಿಲ್ಲದ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಿಲ್ಲ.

ಇನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಅಂಗೀಕರಿಸಿರುವ ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವು ಕಾರ್ಪೊರೇಟ್ ಸ್ನೇಹಿ, ರೈತ ವಿರೋಧಿ ಎಂದು ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿಯೂ ಕಳೆದ 8 ದಿನಗಳಿಂದ ನಿರಂತರ ಪ್ರತಿಭಟನೆಗಳು ನಡೆದು ಇಂದು ರಾಜ್ಯ ಬಂದ್ ಕೂಡ ಯಶಸ್ವಿಯಾಗಿದೆ.

2 ದಿನಗಳ ಅಂತರದಲ್ಲಿಯೇ 2 ಸಚಿವಾಲಯಗಳಿಂದ ರಾಜ್ಯಗಳಿಗೆ ಸುತ್ತೊಲೆ ಬಂದು ಒತ್ತಡ ಹೇರಿರುವುದು ಈ ಪತ್ರಗಳು ಸಾಬೀತು ಪಡಿಸುತ್ತವೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಮತ್ತು ಕೇಂದ್ರ ಗೃಹ ಸಚಿವಾಲಯ ಎರಡೂ ಕಡೆಯಿಂದ ಸುಗ್ರೀವಾಜ್ಞೆಗಳ ಜಾರಿಗೆ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲಾಗಿದೆ. ರೈತರ ಮೇಲಿನ ಕಾಳಜಿಗಾಗಿಯೇ ಮಸೂದೆಗಳನ್ನು ಜಾರಿಗೊಳಿಸುವ ಹಾಗಿದ್ದರೇ ಅವರ ರೈತರ ಅಭಿಪ್ರಾಯ ಗಣನೆಗೆ ತೆಗೆದುಕೊಳ್ಳಬೇಕಿತ್ತು. ಆದರೆ ಇಲ್ಲಿ ಯಾರ ಒಪ್ಪಿಗೆ, ಚರ್ಚೆಗಳಿಗೂ ಅವಕಾಶ ನೀಡದೇ, ಸುಗ್ರೀವಾಜ್ಞೆಗಳ ಮೂಲಕ ಮಸೂದೆಗಳನ್ನು ಜಾರಿಗೆ ತಂದಿದ್ದು ರೈತ ಸಮುದಾಯ ಮತ್ತು ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

 

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ

 

ಕಾಯ್ದೆಗಳ ತಿದ್ದುಪಡಿಗಳನ್ನು ಆದಷ್ಟು ಬೇಗ ಮಾಡಬೇಕು ಎಂಬ ಆತುರ ಕೇಂದ್ರ ಸರ್ಕಾರಕ್ಕೆ ಇತ್ತು. ಇದರ ಹಿಂದೆ ಕಾಪೋರೇಟ್‌ ಕಂಪನಿಗಳ ಹಿತಾಸಕ್ತಿ ಅಡಗಿದೆ ಎಂದು ರೈತ ಮುಖಂಡರು ಆರೋಪಿಸಿ, ಆಕ್ರೋಶ ಹೊರಹಾಕಿದ್ದಾರೆ. ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಇಲ್ಲದ ವಿಷಯಗಳಲ್ಲೂ ಮೂಗುತೂರಿಸಿ ಸರ್ವಾಧಿಕಾರ ತೋರಿಸುತ್ತಿರುವ ಕೇಂದ್ರದ ವಿರುದ್ದ ರೈತ ಹೋರಾಟಗಾರರು ಹಾಗೂ ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಜಿಎಸ್‌ಟಿ ಪಾಲನ್ನು ಕೇಂದ್ರ ಕೊಟ್ಟಿಲ್ಲ. ಪೂರ್ಣ ಪ್ರಮಾಣದಲ್ಲಿ ಪ್ರವಾಹ ಪರಿಹಾರದ ಹಣ ಬಂದಿಲ್ಲ. ಬದಲಿಗೆ ರೈತರ ತೀವ್ರ ವಿರೋಧದ ಮಸೂದೆಗಳನ್ನಷ್ಟೇ ಕೇಂದ್ರ ಜಾರಿಗೊಳಿಸುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಕುರಿತು ಇದೇ ನಿಲುವು ಮುಂದುವರೆಸಿದರೆ ಒಕ್ಕೂಟ ಸರ್ಕಾರ ಮತ್ತು ರಾಜ್ಯದ ನಡುವೆ ತಿಕ್ಕಾಟ ಹೆಚ್ಚಾಗುವುದರಲ್ಲಿ ಸಂಶಯವಿಲ್ಲ.


ಇದನ್ನೂ ಓದಿ:  Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...