Homeಮುಖಪುಟಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ರಾಜ್ಯಪಟ್ಟಿಯಲ್ಲಿರುವ ವಿಷಯಗಳ ಬಗ್ಗೆ ನಮ್ಮ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸುಗ್ರೀವಾಜ್ಞೆ ತನ್ನಿ ಎಂದು ಹೇಳಲು ಗೃಹಮಂತ್ರಿಗಳ ಖಾಸಗಿ ಕಾರ್ಯದರ್ಶಿಗೆ ಅಧಿಕಾರ ಕೊಟ್ಟವರಾರು ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದು ಬಿಜೆಪಿ ಪಕ್ಷ ಮತ್ತು ಪಕ್ಷದ ಅಭಿಮಾನಿಗಳು ಅವಾಗಾವಾಗ ಹೇಳುತ್ತಿದ್ದರು. ಈಗ ಕರ್ನಾಟಕ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರವಿಡಿದಿದೆ. ಹಾಗಾದರೆ ಈಗ ನಮ್ಮ ರಾಜ್ಯವು ಅಭಿವೃದ್ದಿಯಾಗುತ್ತಿದೆಯೇ? ಇಲ್ಲ ಬದಲಿಗೆ ಬಿಜೆಪಿ ಪಕ್ಷದ ಅಭಿವೃದ್ದಿಯಾಗುತ್ತಿದೆ ಅಷ್ಟೇ ಎಂಬ ಅನುಮಾನಗಳು ಆರಂಭವಾಗಿವೆ.

ಮೇ 04 ರಂದು ಕೊರೊನಾ ಸಾಂಕ್ರಾಮಿಕಗಳ ನಡುವೆ ಕೇಂದ್ರದ ಗೃಹ ಮಂತ್ರಿ ಅಮಿತ್‌ ಶಾರವರ ಖಾಸಗಿ ಕಾರ್ಯದರ್ಶಿ ಕರ್ನಾಟಕ ಮುಖ್ಯಮಂತ್ರಿಯವರ ಪ್ರಿನ್ಸಿಪಲ್ ಸೆಕ್ರಟರಿ ಪಿ.ರವಿ ರಸ್ತೋಗಿ ಅವರಿಗೆ ಪತ್ರ ಬರೆದು, “ಕಾರ್ಮಿಕ ಕಾಯ್ದೆಗಳಿಗೆ ಮತ್ತು ಎಪಿಎಂಸಿ ಕಾಯ್ದೆಗೆ ಆದಷ್ಟು ಬೇಗ ಸುಗ್ರೀವಾಜ್ಞೆಗಳ ಮೂಲಕ ತಿದ್ದುಪಡಿ ತಂದು ಕಟ್ಟುನಿಟ್ಟಾಗಿ ರಾಜ್ಯದಲ್ಲಿ ಜಾರಿಗೊಳಿಸಲು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ” ಎಂದು ಆದೇಶಿಸಿದ್ದಾರೆ.

ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ನಿಮಗೆ ನಿರ್ದೇಶನ ನೀಡುತ್ತದೆ ಎಂದು ಆ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ಭಾಸ್ಕರ್‌ರವರಿಗೂ ಕಳಿಸಲಾಗಿದೆ. ರಾಜ್ಯಪಟ್ಟಿಯಲ್ಲಿರುವ ವಿಷಯಗಳ ಬಗ್ಗೆ ನಮ್ಮ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸುಗ್ರೀವಾಜ್ಞೆ ತನ್ನಿ ಎಂದು ಹೇಳಲು ಗೃಹಮಂತ್ರಿಗಳ ಖಾಸಗಿ ಕಾರ್ಯದರ್ಶಿಗೆ ಅಧಿಕಾರ ಕೊಟ್ಟವರಾರು ಎಂಬ ಪ್ರಶ್ನೆಗಳು ಎದ್ದಿವೆ.

“ಮಾದರಿ ಎಪಿಎಲ್ಎಂ ಕಾಯ್ದೆ 2017 ರಲ್ಲಿ ತಿಳಿಸಿರುವಂತೆ ನಿಮ್ಮ ರಾಜ್ಯವು ಈಗಾಗಲೇ ಸುಧಾರಣೆಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟು ಸುಧಾರಣೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಪ್ರಶಂಸಿಸಲಾಗುತ್ತದೆ. ಆದರೂ ಎಪಿಎಂಸಿಯನ್ನು ಕೇವಲ ಮಂಡಿ ಮಾರುಕಟ್ಟೆಗಳಿಗೆ ಸೀಮಿತಗೊಳಿಸಿರುವುದು ಸರಿಯಿಲ್ಲ. ಈ ನಿಟ್ಟಿನಲ್ಲಿ, ನೀತಿ ಆಯೋಗದ ಕೊನೆಯ ಆಡಳಿತ ಮಂಡಳಿ ಸಭೆಯಲ್ಲಿ, ಭಾರತದ ಗೌರವಾನ್ವಿತ ಪ್ರಧಾನಿ ರಾಜ್ಯಗಳು ಮಾದರಿ ಎಪಿಎಲ್ಎಂ ಕಾಯ್ದೆ 2017 ಅನ್ನು ಅಂಗೀಕರಿಸುವ ಬಗ್ಗೆ ಒತ್ತು ನೀಡಿದ್ದರು. ಆದ್ದರಿಂದ ನಿಮ್ಮ ರಾಜ್ಯವು ರೈತರು ಮತ್ತು ಉತ್ಪಾದಕರ ಹಿತದೃಷ್ಟಿಯಿಂದ ಸುಗ್ರೀವಾಜ್ಞೆ ಮಾರ್ಗದ ಮೂಲಕ ತುರ್ತಾಗಿ ಅಳವಡಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಇದನ್ನು ನಿಮ್ಮ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯ ಗಮನಕ್ಕೆ ತಂದು ಸುಗ್ರೀವಾಜ್ಞೆಯ ನಂತರ ತಿದ್ದುಪಡಿ ಮಾಡಿದ ಕಾಯಿದೆಯ ಪ್ರತಿಯನ್ನು ಸಚಿವಾಲಯಕ್ಕೆ ಬೇಗನೆ ಕಳುಹಿಸಬೇಕು”. ಇದು ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಮೇ 05ರಂದು ಬರೆದ ಪತ್ರ..

ಈ ಮೇಲಿನ ಎರಡು ಪತ್ರಗಳಿಂದ ಸ್ಪಷ್ಟವಾಗುವ ಅಂಶವೇನೆಂದರೆ ಎರಡೂ ಕಡೆ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಜನರಿಗೆ ಉಪಯೋಗವಾಗುವ ಬದಲು ತೊಂದರೆಯೇ ಹೆಚ್ಚು. ಕೇಂದ್ರದ ಬಿಜೆಪಿ ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ರಾಜ್ಯದ ಬಿಜೆಪಿ ಸರ್ಕಾರದ ಮೇಲೆ ಸುಗ್ರೀವಾಜ್ಞೆಗಳನ್ನು ತರುವಂತೆ ಒತ್ತಡ ಹೇರಿದೆ. ಅದನ್ನು ರಾಜ್ಯ ಸರ್ಕಾರ ಚಾಚೂ ತಪ್ಪದೇ ಪಾಲಿಸಿದೆ. ಆ ಸುಗ್ರೀವಾಜ್ಞೆಗಳ ಮೂಲಕ ಬಂದು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರವಾದರೆ ಬಿಜೆಪಿಗೆ ಬಹುಮತವಿಲ್ಲದ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಿಲ್ಲ.

ಇನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಅಂಗೀಕರಿಸಿರುವ ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವು ಕಾರ್ಪೊರೇಟ್ ಸ್ನೇಹಿ, ರೈತ ವಿರೋಧಿ ಎಂದು ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿಯೂ ಕಳೆದ 8 ದಿನಗಳಿಂದ ನಿರಂತರ ಪ್ರತಿಭಟನೆಗಳು ನಡೆದು ಇಂದು ರಾಜ್ಯ ಬಂದ್ ಕೂಡ ಯಶಸ್ವಿಯಾಗಿದೆ.

2 ದಿನಗಳ ಅಂತರದಲ್ಲಿಯೇ 2 ಸಚಿವಾಲಯಗಳಿಂದ ರಾಜ್ಯಗಳಿಗೆ ಸುತ್ತೊಲೆ ಬಂದು ಒತ್ತಡ ಹೇರಿರುವುದು ಈ ಪತ್ರಗಳು ಸಾಬೀತು ಪಡಿಸುತ್ತವೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಮತ್ತು ಕೇಂದ್ರ ಗೃಹ ಸಚಿವಾಲಯ ಎರಡೂ ಕಡೆಯಿಂದ ಸುಗ್ರೀವಾಜ್ಞೆಗಳ ಜಾರಿಗೆ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲಾಗಿದೆ. ರೈತರ ಮೇಲಿನ ಕಾಳಜಿಗಾಗಿಯೇ ಮಸೂದೆಗಳನ್ನು ಜಾರಿಗೊಳಿಸುವ ಹಾಗಿದ್ದರೇ ಅವರ ರೈತರ ಅಭಿಪ್ರಾಯ ಗಣನೆಗೆ ತೆಗೆದುಕೊಳ್ಳಬೇಕಿತ್ತು. ಆದರೆ ಇಲ್ಲಿ ಯಾರ ಒಪ್ಪಿಗೆ, ಚರ್ಚೆಗಳಿಗೂ ಅವಕಾಶ ನೀಡದೇ, ಸುಗ್ರೀವಾಜ್ಞೆಗಳ ಮೂಲಕ ಮಸೂದೆಗಳನ್ನು ಜಾರಿಗೆ ತಂದಿದ್ದು ರೈತ ಸಮುದಾಯ ಮತ್ತು ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

 

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ

 

ಕಾಯ್ದೆಗಳ ತಿದ್ದುಪಡಿಗಳನ್ನು ಆದಷ್ಟು ಬೇಗ ಮಾಡಬೇಕು ಎಂಬ ಆತುರ ಕೇಂದ್ರ ಸರ್ಕಾರಕ್ಕೆ ಇತ್ತು. ಇದರ ಹಿಂದೆ ಕಾಪೋರೇಟ್‌ ಕಂಪನಿಗಳ ಹಿತಾಸಕ್ತಿ ಅಡಗಿದೆ ಎಂದು ರೈತ ಮುಖಂಡರು ಆರೋಪಿಸಿ, ಆಕ್ರೋಶ ಹೊರಹಾಕಿದ್ದಾರೆ. ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಇಲ್ಲದ ವಿಷಯಗಳಲ್ಲೂ ಮೂಗುತೂರಿಸಿ ಸರ್ವಾಧಿಕಾರ ತೋರಿಸುತ್ತಿರುವ ಕೇಂದ್ರದ ವಿರುದ್ದ ರೈತ ಹೋರಾಟಗಾರರು ಹಾಗೂ ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಜಿಎಸ್‌ಟಿ ಪಾಲನ್ನು ಕೇಂದ್ರ ಕೊಟ್ಟಿಲ್ಲ. ಪೂರ್ಣ ಪ್ರಮಾಣದಲ್ಲಿ ಪ್ರವಾಹ ಪರಿಹಾರದ ಹಣ ಬಂದಿಲ್ಲ. ಬದಲಿಗೆ ರೈತರ ತೀವ್ರ ವಿರೋಧದ ಮಸೂದೆಗಳನ್ನಷ್ಟೇ ಕೇಂದ್ರ ಜಾರಿಗೊಳಿಸುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಕುರಿತು ಇದೇ ನಿಲುವು ಮುಂದುವರೆಸಿದರೆ ಒಕ್ಕೂಟ ಸರ್ಕಾರ ಮತ್ತು ರಾಜ್ಯದ ನಡುವೆ ತಿಕ್ಕಾಟ ಹೆಚ್ಚಾಗುವುದರಲ್ಲಿ ಸಂಶಯವಿಲ್ಲ.


ಇದನ್ನೂ ಓದಿ:  Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...