Homeಮುಖಪುಟಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ರಾಜ್ಯಪಟ್ಟಿಯಲ್ಲಿರುವ ವಿಷಯಗಳ ಬಗ್ಗೆ ನಮ್ಮ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸುಗ್ರೀವಾಜ್ಞೆ ತನ್ನಿ ಎಂದು ಹೇಳಲು ಗೃಹಮಂತ್ರಿಗಳ ಖಾಸಗಿ ಕಾರ್ಯದರ್ಶಿಗೆ ಅಧಿಕಾರ ಕೊಟ್ಟವರಾರು ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದು ಬಿಜೆಪಿ ಪಕ್ಷ ಮತ್ತು ಪಕ್ಷದ ಅಭಿಮಾನಿಗಳು ಅವಾಗಾವಾಗ ಹೇಳುತ್ತಿದ್ದರು. ಈಗ ಕರ್ನಾಟಕ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರವಿಡಿದಿದೆ. ಹಾಗಾದರೆ ಈಗ ನಮ್ಮ ರಾಜ್ಯವು ಅಭಿವೃದ್ದಿಯಾಗುತ್ತಿದೆಯೇ? ಇಲ್ಲ ಬದಲಿಗೆ ಬಿಜೆಪಿ ಪಕ್ಷದ ಅಭಿವೃದ್ದಿಯಾಗುತ್ತಿದೆ ಅಷ್ಟೇ ಎಂಬ ಅನುಮಾನಗಳು ಆರಂಭವಾಗಿವೆ.

ಮೇ 04 ರಂದು ಕೊರೊನಾ ಸಾಂಕ್ರಾಮಿಕಗಳ ನಡುವೆ ಕೇಂದ್ರದ ಗೃಹ ಮಂತ್ರಿ ಅಮಿತ್‌ ಶಾರವರ ಖಾಸಗಿ ಕಾರ್ಯದರ್ಶಿ ಕರ್ನಾಟಕ ಮುಖ್ಯಮಂತ್ರಿಯವರ ಪ್ರಿನ್ಸಿಪಲ್ ಸೆಕ್ರಟರಿ ಪಿ.ರವಿ ರಸ್ತೋಗಿ ಅವರಿಗೆ ಪತ್ರ ಬರೆದು, “ಕಾರ್ಮಿಕ ಕಾಯ್ದೆಗಳಿಗೆ ಮತ್ತು ಎಪಿಎಂಸಿ ಕಾಯ್ದೆಗೆ ಆದಷ್ಟು ಬೇಗ ಸುಗ್ರೀವಾಜ್ಞೆಗಳ ಮೂಲಕ ತಿದ್ದುಪಡಿ ತಂದು ಕಟ್ಟುನಿಟ್ಟಾಗಿ ರಾಜ್ಯದಲ್ಲಿ ಜಾರಿಗೊಳಿಸಲು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ” ಎಂದು ಆದೇಶಿಸಿದ್ದಾರೆ.

ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ನಿಮಗೆ ನಿರ್ದೇಶನ ನೀಡುತ್ತದೆ ಎಂದು ಆ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ಭಾಸ್ಕರ್‌ರವರಿಗೂ ಕಳಿಸಲಾಗಿದೆ. ರಾಜ್ಯಪಟ್ಟಿಯಲ್ಲಿರುವ ವಿಷಯಗಳ ಬಗ್ಗೆ ನಮ್ಮ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸುಗ್ರೀವಾಜ್ಞೆ ತನ್ನಿ ಎಂದು ಹೇಳಲು ಗೃಹಮಂತ್ರಿಗಳ ಖಾಸಗಿ ಕಾರ್ಯದರ್ಶಿಗೆ ಅಧಿಕಾರ ಕೊಟ್ಟವರಾರು ಎಂಬ ಪ್ರಶ್ನೆಗಳು ಎದ್ದಿವೆ.

“ಮಾದರಿ ಎಪಿಎಲ್ಎಂ ಕಾಯ್ದೆ 2017 ರಲ್ಲಿ ತಿಳಿಸಿರುವಂತೆ ನಿಮ್ಮ ರಾಜ್ಯವು ಈಗಾಗಲೇ ಸುಧಾರಣೆಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟು ಸುಧಾರಣೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಪ್ರಶಂಸಿಸಲಾಗುತ್ತದೆ. ಆದರೂ ಎಪಿಎಂಸಿಯನ್ನು ಕೇವಲ ಮಂಡಿ ಮಾರುಕಟ್ಟೆಗಳಿಗೆ ಸೀಮಿತಗೊಳಿಸಿರುವುದು ಸರಿಯಿಲ್ಲ. ಈ ನಿಟ್ಟಿನಲ್ಲಿ, ನೀತಿ ಆಯೋಗದ ಕೊನೆಯ ಆಡಳಿತ ಮಂಡಳಿ ಸಭೆಯಲ್ಲಿ, ಭಾರತದ ಗೌರವಾನ್ವಿತ ಪ್ರಧಾನಿ ರಾಜ್ಯಗಳು ಮಾದರಿ ಎಪಿಎಲ್ಎಂ ಕಾಯ್ದೆ 2017 ಅನ್ನು ಅಂಗೀಕರಿಸುವ ಬಗ್ಗೆ ಒತ್ತು ನೀಡಿದ್ದರು. ಆದ್ದರಿಂದ ನಿಮ್ಮ ರಾಜ್ಯವು ರೈತರು ಮತ್ತು ಉತ್ಪಾದಕರ ಹಿತದೃಷ್ಟಿಯಿಂದ ಸುಗ್ರೀವಾಜ್ಞೆ ಮಾರ್ಗದ ಮೂಲಕ ತುರ್ತಾಗಿ ಅಳವಡಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಇದನ್ನು ನಿಮ್ಮ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯ ಗಮನಕ್ಕೆ ತಂದು ಸುಗ್ರೀವಾಜ್ಞೆಯ ನಂತರ ತಿದ್ದುಪಡಿ ಮಾಡಿದ ಕಾಯಿದೆಯ ಪ್ರತಿಯನ್ನು ಸಚಿವಾಲಯಕ್ಕೆ ಬೇಗನೆ ಕಳುಹಿಸಬೇಕು”. ಇದು ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಮೇ 05ರಂದು ಬರೆದ ಪತ್ರ..

ಈ ಮೇಲಿನ ಎರಡು ಪತ್ರಗಳಿಂದ ಸ್ಪಷ್ಟವಾಗುವ ಅಂಶವೇನೆಂದರೆ ಎರಡೂ ಕಡೆ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಜನರಿಗೆ ಉಪಯೋಗವಾಗುವ ಬದಲು ತೊಂದರೆಯೇ ಹೆಚ್ಚು. ಕೇಂದ್ರದ ಬಿಜೆಪಿ ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ರಾಜ್ಯದ ಬಿಜೆಪಿ ಸರ್ಕಾರದ ಮೇಲೆ ಸುಗ್ರೀವಾಜ್ಞೆಗಳನ್ನು ತರುವಂತೆ ಒತ್ತಡ ಹೇರಿದೆ. ಅದನ್ನು ರಾಜ್ಯ ಸರ್ಕಾರ ಚಾಚೂ ತಪ್ಪದೇ ಪಾಲಿಸಿದೆ. ಆ ಸುಗ್ರೀವಾಜ್ಞೆಗಳ ಮೂಲಕ ಬಂದು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರವಾದರೆ ಬಿಜೆಪಿಗೆ ಬಹುಮತವಿಲ್ಲದ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಿಲ್ಲ.

ಇನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಅಂಗೀಕರಿಸಿರುವ ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವು ಕಾರ್ಪೊರೇಟ್ ಸ್ನೇಹಿ, ರೈತ ವಿರೋಧಿ ಎಂದು ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿಯೂ ಕಳೆದ 8 ದಿನಗಳಿಂದ ನಿರಂತರ ಪ್ರತಿಭಟನೆಗಳು ನಡೆದು ಇಂದು ರಾಜ್ಯ ಬಂದ್ ಕೂಡ ಯಶಸ್ವಿಯಾಗಿದೆ.

2 ದಿನಗಳ ಅಂತರದಲ್ಲಿಯೇ 2 ಸಚಿವಾಲಯಗಳಿಂದ ರಾಜ್ಯಗಳಿಗೆ ಸುತ್ತೊಲೆ ಬಂದು ಒತ್ತಡ ಹೇರಿರುವುದು ಈ ಪತ್ರಗಳು ಸಾಬೀತು ಪಡಿಸುತ್ತವೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಮತ್ತು ಕೇಂದ್ರ ಗೃಹ ಸಚಿವಾಲಯ ಎರಡೂ ಕಡೆಯಿಂದ ಸುಗ್ರೀವಾಜ್ಞೆಗಳ ಜಾರಿಗೆ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲಾಗಿದೆ. ರೈತರ ಮೇಲಿನ ಕಾಳಜಿಗಾಗಿಯೇ ಮಸೂದೆಗಳನ್ನು ಜಾರಿಗೊಳಿಸುವ ಹಾಗಿದ್ದರೇ ಅವರ ರೈತರ ಅಭಿಪ್ರಾಯ ಗಣನೆಗೆ ತೆಗೆದುಕೊಳ್ಳಬೇಕಿತ್ತು. ಆದರೆ ಇಲ್ಲಿ ಯಾರ ಒಪ್ಪಿಗೆ, ಚರ್ಚೆಗಳಿಗೂ ಅವಕಾಶ ನೀಡದೇ, ಸುಗ್ರೀವಾಜ್ಞೆಗಳ ಮೂಲಕ ಮಸೂದೆಗಳನ್ನು ಜಾರಿಗೆ ತಂದಿದ್ದು ರೈತ ಸಮುದಾಯ ಮತ್ತು ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

 

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ

 

ಕಾಯ್ದೆಗಳ ತಿದ್ದುಪಡಿಗಳನ್ನು ಆದಷ್ಟು ಬೇಗ ಮಾಡಬೇಕು ಎಂಬ ಆತುರ ಕೇಂದ್ರ ಸರ್ಕಾರಕ್ಕೆ ಇತ್ತು. ಇದರ ಹಿಂದೆ ಕಾಪೋರೇಟ್‌ ಕಂಪನಿಗಳ ಹಿತಾಸಕ್ತಿ ಅಡಗಿದೆ ಎಂದು ರೈತ ಮುಖಂಡರು ಆರೋಪಿಸಿ, ಆಕ್ರೋಶ ಹೊರಹಾಕಿದ್ದಾರೆ. ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಇಲ್ಲದ ವಿಷಯಗಳಲ್ಲೂ ಮೂಗುತೂರಿಸಿ ಸರ್ವಾಧಿಕಾರ ತೋರಿಸುತ್ತಿರುವ ಕೇಂದ್ರದ ವಿರುದ್ದ ರೈತ ಹೋರಾಟಗಾರರು ಹಾಗೂ ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಜಿಎಸ್‌ಟಿ ಪಾಲನ್ನು ಕೇಂದ್ರ ಕೊಟ್ಟಿಲ್ಲ. ಪೂರ್ಣ ಪ್ರಮಾಣದಲ್ಲಿ ಪ್ರವಾಹ ಪರಿಹಾರದ ಹಣ ಬಂದಿಲ್ಲ. ಬದಲಿಗೆ ರೈತರ ತೀವ್ರ ವಿರೋಧದ ಮಸೂದೆಗಳನ್ನಷ್ಟೇ ಕೇಂದ್ರ ಜಾರಿಗೊಳಿಸುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಕುರಿತು ಇದೇ ನಿಲುವು ಮುಂದುವರೆಸಿದರೆ ಒಕ್ಕೂಟ ಸರ್ಕಾರ ಮತ್ತು ರಾಜ್ಯದ ನಡುವೆ ತಿಕ್ಕಾಟ ಹೆಚ್ಚಾಗುವುದರಲ್ಲಿ ಸಂಶಯವಿಲ್ಲ.


ಇದನ್ನೂ ಓದಿ:  Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...