Homeಮುಖಪುಟಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ರಾಜ್ಯಪಟ್ಟಿಯಲ್ಲಿರುವ ವಿಷಯಗಳ ಬಗ್ಗೆ ನಮ್ಮ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸುಗ್ರೀವಾಜ್ಞೆ ತನ್ನಿ ಎಂದು ಹೇಳಲು ಗೃಹಮಂತ್ರಿಗಳ ಖಾಸಗಿ ಕಾರ್ಯದರ್ಶಿಗೆ ಅಧಿಕಾರ ಕೊಟ್ಟವರಾರು ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದು ಬಿಜೆಪಿ ಪಕ್ಷ ಮತ್ತು ಪಕ್ಷದ ಅಭಿಮಾನಿಗಳು ಅವಾಗಾವಾಗ ಹೇಳುತ್ತಿದ್ದರು. ಈಗ ಕರ್ನಾಟಕ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರವಿಡಿದಿದೆ. ಹಾಗಾದರೆ ಈಗ ನಮ್ಮ ರಾಜ್ಯವು ಅಭಿವೃದ್ದಿಯಾಗುತ್ತಿದೆಯೇ? ಇಲ್ಲ ಬದಲಿಗೆ ಬಿಜೆಪಿ ಪಕ್ಷದ ಅಭಿವೃದ್ದಿಯಾಗುತ್ತಿದೆ ಅಷ್ಟೇ ಎಂಬ ಅನುಮಾನಗಳು ಆರಂಭವಾಗಿವೆ.

ಮೇ 04 ರಂದು ಕೊರೊನಾ ಸಾಂಕ್ರಾಮಿಕಗಳ ನಡುವೆ ಕೇಂದ್ರದ ಗೃಹ ಮಂತ್ರಿ ಅಮಿತ್‌ ಶಾರವರ ಖಾಸಗಿ ಕಾರ್ಯದರ್ಶಿ ಕರ್ನಾಟಕ ಮುಖ್ಯಮಂತ್ರಿಯವರ ಪ್ರಿನ್ಸಿಪಲ್ ಸೆಕ್ರಟರಿ ಪಿ.ರವಿ ರಸ್ತೋಗಿ ಅವರಿಗೆ ಪತ್ರ ಬರೆದು, “ಕಾರ್ಮಿಕ ಕಾಯ್ದೆಗಳಿಗೆ ಮತ್ತು ಎಪಿಎಂಸಿ ಕಾಯ್ದೆಗೆ ಆದಷ್ಟು ಬೇಗ ಸುಗ್ರೀವಾಜ್ಞೆಗಳ ಮೂಲಕ ತಿದ್ದುಪಡಿ ತಂದು ಕಟ್ಟುನಿಟ್ಟಾಗಿ ರಾಜ್ಯದಲ್ಲಿ ಜಾರಿಗೊಳಿಸಲು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ” ಎಂದು ಆದೇಶಿಸಿದ್ದಾರೆ.

ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ನಿಮಗೆ ನಿರ್ದೇಶನ ನೀಡುತ್ತದೆ ಎಂದು ಆ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ಭಾಸ್ಕರ್‌ರವರಿಗೂ ಕಳಿಸಲಾಗಿದೆ. ರಾಜ್ಯಪಟ್ಟಿಯಲ್ಲಿರುವ ವಿಷಯಗಳ ಬಗ್ಗೆ ನಮ್ಮ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸುಗ್ರೀವಾಜ್ಞೆ ತನ್ನಿ ಎಂದು ಹೇಳಲು ಗೃಹಮಂತ್ರಿಗಳ ಖಾಸಗಿ ಕಾರ್ಯದರ್ಶಿಗೆ ಅಧಿಕಾರ ಕೊಟ್ಟವರಾರು ಎಂಬ ಪ್ರಶ್ನೆಗಳು ಎದ್ದಿವೆ.

“ಮಾದರಿ ಎಪಿಎಲ್ಎಂ ಕಾಯ್ದೆ 2017 ರಲ್ಲಿ ತಿಳಿಸಿರುವಂತೆ ನಿಮ್ಮ ರಾಜ್ಯವು ಈಗಾಗಲೇ ಸುಧಾರಣೆಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟು ಸುಧಾರಣೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಪ್ರಶಂಸಿಸಲಾಗುತ್ತದೆ. ಆದರೂ ಎಪಿಎಂಸಿಯನ್ನು ಕೇವಲ ಮಂಡಿ ಮಾರುಕಟ್ಟೆಗಳಿಗೆ ಸೀಮಿತಗೊಳಿಸಿರುವುದು ಸರಿಯಿಲ್ಲ. ಈ ನಿಟ್ಟಿನಲ್ಲಿ, ನೀತಿ ಆಯೋಗದ ಕೊನೆಯ ಆಡಳಿತ ಮಂಡಳಿ ಸಭೆಯಲ್ಲಿ, ಭಾರತದ ಗೌರವಾನ್ವಿತ ಪ್ರಧಾನಿ ರಾಜ್ಯಗಳು ಮಾದರಿ ಎಪಿಎಲ್ಎಂ ಕಾಯ್ದೆ 2017 ಅನ್ನು ಅಂಗೀಕರಿಸುವ ಬಗ್ಗೆ ಒತ್ತು ನೀಡಿದ್ದರು. ಆದ್ದರಿಂದ ನಿಮ್ಮ ರಾಜ್ಯವು ರೈತರು ಮತ್ತು ಉತ್ಪಾದಕರ ಹಿತದೃಷ್ಟಿಯಿಂದ ಸುಗ್ರೀವಾಜ್ಞೆ ಮಾರ್ಗದ ಮೂಲಕ ತುರ್ತಾಗಿ ಅಳವಡಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಇದನ್ನು ನಿಮ್ಮ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯ ಗಮನಕ್ಕೆ ತಂದು ಸುಗ್ರೀವಾಜ್ಞೆಯ ನಂತರ ತಿದ್ದುಪಡಿ ಮಾಡಿದ ಕಾಯಿದೆಯ ಪ್ರತಿಯನ್ನು ಸಚಿವಾಲಯಕ್ಕೆ ಬೇಗನೆ ಕಳುಹಿಸಬೇಕು”. ಇದು ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಮೇ 05ರಂದು ಬರೆದ ಪತ್ರ..

ಈ ಮೇಲಿನ ಎರಡು ಪತ್ರಗಳಿಂದ ಸ್ಪಷ್ಟವಾಗುವ ಅಂಶವೇನೆಂದರೆ ಎರಡೂ ಕಡೆ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಜನರಿಗೆ ಉಪಯೋಗವಾಗುವ ಬದಲು ತೊಂದರೆಯೇ ಹೆಚ್ಚು. ಕೇಂದ್ರದ ಬಿಜೆಪಿ ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ರಾಜ್ಯದ ಬಿಜೆಪಿ ಸರ್ಕಾರದ ಮೇಲೆ ಸುಗ್ರೀವಾಜ್ಞೆಗಳನ್ನು ತರುವಂತೆ ಒತ್ತಡ ಹೇರಿದೆ. ಅದನ್ನು ರಾಜ್ಯ ಸರ್ಕಾರ ಚಾಚೂ ತಪ್ಪದೇ ಪಾಲಿಸಿದೆ. ಆ ಸುಗ್ರೀವಾಜ್ಞೆಗಳ ಮೂಲಕ ಬಂದು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರವಾದರೆ ಬಿಜೆಪಿಗೆ ಬಹುಮತವಿಲ್ಲದ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಿಲ್ಲ.

ಇನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಅಂಗೀಕರಿಸಿರುವ ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವು ಕಾರ್ಪೊರೇಟ್ ಸ್ನೇಹಿ, ರೈತ ವಿರೋಧಿ ಎಂದು ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿಯೂ ಕಳೆದ 8 ದಿನಗಳಿಂದ ನಿರಂತರ ಪ್ರತಿಭಟನೆಗಳು ನಡೆದು ಇಂದು ರಾಜ್ಯ ಬಂದ್ ಕೂಡ ಯಶಸ್ವಿಯಾಗಿದೆ.

2 ದಿನಗಳ ಅಂತರದಲ್ಲಿಯೇ 2 ಸಚಿವಾಲಯಗಳಿಂದ ರಾಜ್ಯಗಳಿಗೆ ಸುತ್ತೊಲೆ ಬಂದು ಒತ್ತಡ ಹೇರಿರುವುದು ಈ ಪತ್ರಗಳು ಸಾಬೀತು ಪಡಿಸುತ್ತವೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಮತ್ತು ಕೇಂದ್ರ ಗೃಹ ಸಚಿವಾಲಯ ಎರಡೂ ಕಡೆಯಿಂದ ಸುಗ್ರೀವಾಜ್ಞೆಗಳ ಜಾರಿಗೆ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲಾಗಿದೆ. ರೈತರ ಮೇಲಿನ ಕಾಳಜಿಗಾಗಿಯೇ ಮಸೂದೆಗಳನ್ನು ಜಾರಿಗೊಳಿಸುವ ಹಾಗಿದ್ದರೇ ಅವರ ರೈತರ ಅಭಿಪ್ರಾಯ ಗಣನೆಗೆ ತೆಗೆದುಕೊಳ್ಳಬೇಕಿತ್ತು. ಆದರೆ ಇಲ್ಲಿ ಯಾರ ಒಪ್ಪಿಗೆ, ಚರ್ಚೆಗಳಿಗೂ ಅವಕಾಶ ನೀಡದೇ, ಸುಗ್ರೀವಾಜ್ಞೆಗಳ ಮೂಲಕ ಮಸೂದೆಗಳನ್ನು ಜಾರಿಗೆ ತಂದಿದ್ದು ರೈತ ಸಮುದಾಯ ಮತ್ತು ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

 

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ

 

ಕಾಯ್ದೆಗಳ ತಿದ್ದುಪಡಿಗಳನ್ನು ಆದಷ್ಟು ಬೇಗ ಮಾಡಬೇಕು ಎಂಬ ಆತುರ ಕೇಂದ್ರ ಸರ್ಕಾರಕ್ಕೆ ಇತ್ತು. ಇದರ ಹಿಂದೆ ಕಾಪೋರೇಟ್‌ ಕಂಪನಿಗಳ ಹಿತಾಸಕ್ತಿ ಅಡಗಿದೆ ಎಂದು ರೈತ ಮುಖಂಡರು ಆರೋಪಿಸಿ, ಆಕ್ರೋಶ ಹೊರಹಾಕಿದ್ದಾರೆ. ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಇಲ್ಲದ ವಿಷಯಗಳಲ್ಲೂ ಮೂಗುತೂರಿಸಿ ಸರ್ವಾಧಿಕಾರ ತೋರಿಸುತ್ತಿರುವ ಕೇಂದ್ರದ ವಿರುದ್ದ ರೈತ ಹೋರಾಟಗಾರರು ಹಾಗೂ ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಜಿಎಸ್‌ಟಿ ಪಾಲನ್ನು ಕೇಂದ್ರ ಕೊಟ್ಟಿಲ್ಲ. ಪೂರ್ಣ ಪ್ರಮಾಣದಲ್ಲಿ ಪ್ರವಾಹ ಪರಿಹಾರದ ಹಣ ಬಂದಿಲ್ಲ. ಬದಲಿಗೆ ರೈತರ ತೀವ್ರ ವಿರೋಧದ ಮಸೂದೆಗಳನ್ನಷ್ಟೇ ಕೇಂದ್ರ ಜಾರಿಗೊಳಿಸುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಕುರಿತು ಇದೇ ನಿಲುವು ಮುಂದುವರೆಸಿದರೆ ಒಕ್ಕೂಟ ಸರ್ಕಾರ ಮತ್ತು ರಾಜ್ಯದ ನಡುವೆ ತಿಕ್ಕಾಟ ಹೆಚ್ಚಾಗುವುದರಲ್ಲಿ ಸಂಶಯವಿಲ್ಲ.


ಇದನ್ನೂ ಓದಿ:  Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...