Homeಮುಖಪುಟಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ಸುಗ್ರಿವಾಜ್ಞೆಗಳನ್ನು ತರುವಂತೆ ರಾಜ್ಯದ ಮೇಲೆ ಒತ್ತಡವೇರಿದ್ದ ಅಮಿತ್‌ ಶಾ ಆಪ್ತ ಸಹಾಯಕ!

ರಾಜ್ಯಪಟ್ಟಿಯಲ್ಲಿರುವ ವಿಷಯಗಳ ಬಗ್ಗೆ ನಮ್ಮ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸುಗ್ರೀವಾಜ್ಞೆ ತನ್ನಿ ಎಂದು ಹೇಳಲು ಗೃಹಮಂತ್ರಿಗಳ ಖಾಸಗಿ ಕಾರ್ಯದರ್ಶಿಗೆ ಅಧಿಕಾರ ಕೊಟ್ಟವರಾರು ಎಂಬ ಪ್ರಶ್ನೆಗಳು ಎದ್ದಿವೆ.

- Advertisement -
- Advertisement -

ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಹೆಚ್ಚಿನ ಅಭಿವೃದ್ಧಿ ಸಾಧ್ಯ ಎಂದು ಬಿಜೆಪಿ ಪಕ್ಷ ಮತ್ತು ಪಕ್ಷದ ಅಭಿಮಾನಿಗಳು ಅವಾಗಾವಾಗ ಹೇಳುತ್ತಿದ್ದರು. ಈಗ ಕರ್ನಾಟಕ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರವಿಡಿದಿದೆ. ಹಾಗಾದರೆ ಈಗ ನಮ್ಮ ರಾಜ್ಯವು ಅಭಿವೃದ್ದಿಯಾಗುತ್ತಿದೆಯೇ? ಇಲ್ಲ ಬದಲಿಗೆ ಬಿಜೆಪಿ ಪಕ್ಷದ ಅಭಿವೃದ್ದಿಯಾಗುತ್ತಿದೆ ಅಷ್ಟೇ ಎಂಬ ಅನುಮಾನಗಳು ಆರಂಭವಾಗಿವೆ.

ಮೇ 04 ರಂದು ಕೊರೊನಾ ಸಾಂಕ್ರಾಮಿಕಗಳ ನಡುವೆ ಕೇಂದ್ರದ ಗೃಹ ಮಂತ್ರಿ ಅಮಿತ್‌ ಶಾರವರ ಖಾಸಗಿ ಕಾರ್ಯದರ್ಶಿ ಕರ್ನಾಟಕ ಮುಖ್ಯಮಂತ್ರಿಯವರ ಪ್ರಿನ್ಸಿಪಲ್ ಸೆಕ್ರಟರಿ ಪಿ.ರವಿ ರಸ್ತೋಗಿ ಅವರಿಗೆ ಪತ್ರ ಬರೆದು, “ಕಾರ್ಮಿಕ ಕಾಯ್ದೆಗಳಿಗೆ ಮತ್ತು ಎಪಿಎಂಸಿ ಕಾಯ್ದೆಗೆ ಆದಷ್ಟು ಬೇಗ ಸುಗ್ರೀವಾಜ್ಞೆಗಳ ಮೂಲಕ ತಿದ್ದುಪಡಿ ತಂದು ಕಟ್ಟುನಿಟ್ಟಾಗಿ ರಾಜ್ಯದಲ್ಲಿ ಜಾರಿಗೊಳಿಸಲು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ” ಎಂದು ಆದೇಶಿಸಿದ್ದಾರೆ.

ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ನಿಮಗೆ ನಿರ್ದೇಶನ ನೀಡುತ್ತದೆ ಎಂದು ಆ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ಭಾಸ್ಕರ್‌ರವರಿಗೂ ಕಳಿಸಲಾಗಿದೆ. ರಾಜ್ಯಪಟ್ಟಿಯಲ್ಲಿರುವ ವಿಷಯಗಳ ಬಗ್ಗೆ ನಮ್ಮ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸುಗ್ರೀವಾಜ್ಞೆ ತನ್ನಿ ಎಂದು ಹೇಳಲು ಗೃಹಮಂತ್ರಿಗಳ ಖಾಸಗಿ ಕಾರ್ಯದರ್ಶಿಗೆ ಅಧಿಕಾರ ಕೊಟ್ಟವರಾರು ಎಂಬ ಪ್ರಶ್ನೆಗಳು ಎದ್ದಿವೆ.

“ಮಾದರಿ ಎಪಿಎಲ್ಎಂ ಕಾಯ್ದೆ 2017 ರಲ್ಲಿ ತಿಳಿಸಿರುವಂತೆ ನಿಮ್ಮ ರಾಜ್ಯವು ಈಗಾಗಲೇ ಸುಧಾರಣೆಯ ಒಂಬತ್ತು ಕ್ಷೇತ್ರಗಳಲ್ಲಿ ಎಂಟು ಸುಧಾರಣೆಗಳನ್ನು ಅಳವಡಿಸಿಕೊಂಡಿರುವುದಕ್ಕೆ ಪ್ರಶಂಸಿಸಲಾಗುತ್ತದೆ. ಆದರೂ ಎಪಿಎಂಸಿಯನ್ನು ಕೇವಲ ಮಂಡಿ ಮಾರುಕಟ್ಟೆಗಳಿಗೆ ಸೀಮಿತಗೊಳಿಸಿರುವುದು ಸರಿಯಿಲ್ಲ. ಈ ನಿಟ್ಟಿನಲ್ಲಿ, ನೀತಿ ಆಯೋಗದ ಕೊನೆಯ ಆಡಳಿತ ಮಂಡಳಿ ಸಭೆಯಲ್ಲಿ, ಭಾರತದ ಗೌರವಾನ್ವಿತ ಪ್ರಧಾನಿ ರಾಜ್ಯಗಳು ಮಾದರಿ ಎಪಿಎಲ್ಎಂ ಕಾಯ್ದೆ 2017 ಅನ್ನು ಅಂಗೀಕರಿಸುವ ಬಗ್ಗೆ ಒತ್ತು ನೀಡಿದ್ದರು. ಆದ್ದರಿಂದ ನಿಮ್ಮ ರಾಜ್ಯವು ರೈತರು ಮತ್ತು ಉತ್ಪಾದಕರ ಹಿತದೃಷ್ಟಿಯಿಂದ ಸುಗ್ರೀವಾಜ್ಞೆ ಮಾರ್ಗದ ಮೂಲಕ ತುರ್ತಾಗಿ ಅಳವಡಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಇದನ್ನು ನಿಮ್ಮ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಯ ಗಮನಕ್ಕೆ ತಂದು ಸುಗ್ರೀವಾಜ್ಞೆಯ ನಂತರ ತಿದ್ದುಪಡಿ ಮಾಡಿದ ಕಾಯಿದೆಯ ಪ್ರತಿಯನ್ನು ಸಚಿವಾಲಯಕ್ಕೆ ಬೇಗನೆ ಕಳುಹಿಸಬೇಕು”. ಇದು ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಕರ್ನಾಟಕ ಸರ್ಕಾರದ ಅಡಿಷನಲ್‌ ಚೀಫ್ ಸೆಕ್ರಟರಿ ಡಾ.ನಾಗಾಂಬಿಕಾ ದೇವಿಯವರಿಗೆ ಮೇ 05ರಂದು ಬರೆದ ಪತ್ರ..

ಈ ಮೇಲಿನ ಎರಡು ಪತ್ರಗಳಿಂದ ಸ್ಪಷ್ಟವಾಗುವ ಅಂಶವೇನೆಂದರೆ ಎರಡೂ ಕಡೆ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಜನರಿಗೆ ಉಪಯೋಗವಾಗುವ ಬದಲು ತೊಂದರೆಯೇ ಹೆಚ್ಚು. ಕೇಂದ್ರದ ಬಿಜೆಪಿ ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ರಾಜ್ಯದ ಬಿಜೆಪಿ ಸರ್ಕಾರದ ಮೇಲೆ ಸುಗ್ರೀವಾಜ್ಞೆಗಳನ್ನು ತರುವಂತೆ ಒತ್ತಡ ಹೇರಿದೆ. ಅದನ್ನು ರಾಜ್ಯ ಸರ್ಕಾರ ಚಾಚೂ ತಪ್ಪದೇ ಪಾಲಿಸಿದೆ. ಆ ಸುಗ್ರೀವಾಜ್ಞೆಗಳ ಮೂಲಕ ಬಂದು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರವಾದರೆ ಬಿಜೆಪಿಗೆ ಬಹುಮತವಿಲ್ಲದ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಿಲ್ಲ.

ಇನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಅಂಗೀಕರಿಸಿರುವ ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವು ಕಾರ್ಪೊರೇಟ್ ಸ್ನೇಹಿ, ರೈತ ವಿರೋಧಿ ಎಂದು ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ರಾಜ್ಯದಲ್ಲಿಯೂ ಕಳೆದ 8 ದಿನಗಳಿಂದ ನಿರಂತರ ಪ್ರತಿಭಟನೆಗಳು ನಡೆದು ಇಂದು ರಾಜ್ಯ ಬಂದ್ ಕೂಡ ಯಶಸ್ವಿಯಾಗಿದೆ.

2 ದಿನಗಳ ಅಂತರದಲ್ಲಿಯೇ 2 ಸಚಿವಾಲಯಗಳಿಂದ ರಾಜ್ಯಗಳಿಗೆ ಸುತ್ತೊಲೆ ಬಂದು ಒತ್ತಡ ಹೇರಿರುವುದು ಈ ಪತ್ರಗಳು ಸಾಬೀತು ಪಡಿಸುತ್ತವೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಮತ್ತು ಕೇಂದ್ರ ಗೃಹ ಸಚಿವಾಲಯ ಎರಡೂ ಕಡೆಯಿಂದ ಸುಗ್ರೀವಾಜ್ಞೆಗಳ ಜಾರಿಗೆ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಲಾಗಿದೆ. ರೈತರ ಮೇಲಿನ ಕಾಳಜಿಗಾಗಿಯೇ ಮಸೂದೆಗಳನ್ನು ಜಾರಿಗೊಳಿಸುವ ಹಾಗಿದ್ದರೇ ಅವರ ರೈತರ ಅಭಿಪ್ರಾಯ ಗಣನೆಗೆ ತೆಗೆದುಕೊಳ್ಳಬೇಕಿತ್ತು. ಆದರೆ ಇಲ್ಲಿ ಯಾರ ಒಪ್ಪಿಗೆ, ಚರ್ಚೆಗಳಿಗೂ ಅವಕಾಶ ನೀಡದೇ, ಸುಗ್ರೀವಾಜ್ಞೆಗಳ ಮೂಲಕ ಮಸೂದೆಗಳನ್ನು ಜಾರಿಗೆ ತಂದಿದ್ದು ರೈತ ಸಮುದಾಯ ಮತ್ತು ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

 

ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ

 

ಕಾಯ್ದೆಗಳ ತಿದ್ದುಪಡಿಗಳನ್ನು ಆದಷ್ಟು ಬೇಗ ಮಾಡಬೇಕು ಎಂಬ ಆತುರ ಕೇಂದ್ರ ಸರ್ಕಾರಕ್ಕೆ ಇತ್ತು. ಇದರ ಹಿಂದೆ ಕಾಪೋರೇಟ್‌ ಕಂಪನಿಗಳ ಹಿತಾಸಕ್ತಿ ಅಡಗಿದೆ ಎಂದು ರೈತ ಮುಖಂಡರು ಆರೋಪಿಸಿ, ಆಕ್ರೋಶ ಹೊರಹಾಕಿದ್ದಾರೆ. ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಇಲ್ಲದ ವಿಷಯಗಳಲ್ಲೂ ಮೂಗುತೂರಿಸಿ ಸರ್ವಾಧಿಕಾರ ತೋರಿಸುತ್ತಿರುವ ಕೇಂದ್ರದ ವಿರುದ್ದ ರೈತ ಹೋರಾಟಗಾರರು ಹಾಗೂ ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಜಿಎಸ್‌ಟಿ ಪಾಲನ್ನು ಕೇಂದ್ರ ಕೊಟ್ಟಿಲ್ಲ. ಪೂರ್ಣ ಪ್ರಮಾಣದಲ್ಲಿ ಪ್ರವಾಹ ಪರಿಹಾರದ ಹಣ ಬಂದಿಲ್ಲ. ಬದಲಿಗೆ ರೈತರ ತೀವ್ರ ವಿರೋಧದ ಮಸೂದೆಗಳನ್ನಷ್ಟೇ ಕೇಂದ್ರ ಜಾರಿಗೊಳಿಸುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಕುರಿತು ಇದೇ ನಿಲುವು ಮುಂದುವರೆಸಿದರೆ ಒಕ್ಕೂಟ ಸರ್ಕಾರ ಮತ್ತು ರಾಜ್ಯದ ನಡುವೆ ತಿಕ್ಕಾಟ ಹೆಚ್ಚಾಗುವುದರಲ್ಲಿ ಸಂಶಯವಿಲ್ಲ.


ಇದನ್ನೂ ಓದಿ:  Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...