Homeಕರ್ನಾಟಕEXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ:...

EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

- Advertisement -
- Advertisement -

ಕನ್ನಡಿಗರ ಪ್ರೀತಿಯ ‘ಅಪ್ಪು’, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ತೆರೆ ಕಂಡು ಇನ್ನೂ ಒಂದು ವಾರವಾಗಿಲ್ಲ, ಆದರೆ ‘ಕಾಣದ ಕೈಗಳು’ ಜೇಮ್ಸ್‌ ಸಿನಿಮಾ ಪ್ರದರ್ಶನವನ್ನು ಕಡಿತಗೊಳಿಸಿ, ‘ಕಾಶ್ಮೀರ್‌ ಫೈಲ್ಸ್‌’ ತೋರಿಸಲು ಒತ್ತಡ ಹೇರುತ್ತಿರುವ ಸಂಗತಿ ಬಯಲಾಗಿದೆ.

‘ಜೇಮ್ಸ್‌’ ಸಿನಿಮಾ ನಿರ್ಮಾಪಕ ಹಾಗೂ ಹಂಚಿಕೆದಾರರೂ ಆಗಿರುವ ಕಿಶೋರ್ ಪತ್ತಿಕೊಂಡ ಅವರ ಮೇಲೆ ಒತ್ತಡ ತಂದು ಜೇಮ್ಸ್‌ ಸಿನಿಮಾ ಷೋಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಇದೇ ವೇಳೆ ಕಿಶೋರ್‌ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದಕ್ಕೂ ಸಂಬಂಧ ಕಲ್ಪಿಸಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಈ ಸಂಬಂಧ ‘ನಾನುಗೌರಿ.ಕಾಂ’ ನಿರ್ಮಾಪಕ ಕಿಶೋರ್‌ ಪತ್ತಿಕೊಂಡ ಅವರನ್ನು ಸಂಪರ್ಕಿಸಿದ್ದು, ಜೇಮ್ಸ್‌ ಷೋ ಕಡಿತಗೊಳಿಸಲು ಒತ್ತಡಗಳು ಬರುತ್ತಿರುವುದನ್ನು ಉಲ್ಲೇಖಿಸಿದರು.

“ಬಹಳಷ್ಟು ಕಡೆ ಮಾರ್ನಿಂಗ್ ಷೋ, ಸೆಕೆಂಡ್ ಷೋ ತೆಗೆದು ಬೇರೆ ಸಿನಿಮಾ ಹಾಕಲು ಹೋದರು. ನಾನು ಅದನ್ನು ವಿರೋಧಿಸಿದೆ. ನಮ್ಮ ಸಿನಿಮಾ ಚೆನ್ನಾಗಿದೆ. ಪುನೀತ್ ಅವರ ಕೊನೆಯ ಸಿನಿಮಾವನ್ನು ಕನ್ನಡಿಗರು ನೋಡುತ್ತಿದ್ದಾರೆ ಎಂದೆ. ಅದಕ್ಕೆ ಚಿತ್ರಮಂದಿರದವರು- ‘ಇಲ್ಲ ಸರ್‌, ಅವರು ಹೇಳ್ತಾರೆ, ಇವರು ಹೇಳ್ತಾರೆ, ತೆರಿಗೆ ವಿನಾಯಿತಿ ನೀಡಿದ್ದೇವೆ ಹಾಕಿ ಅನ್ನುತ್ತಿದ್ದಾರೆ- ಅಂದರು. ನಾನು ಒಪ್ಪಲಿಲ್ಲ. ನಮ್ಮ ಸಿನಿಮಾದ ನಾಲ್ಕು ಷೋ ಆದ ಮೇಲೆ ಬೇರೆ ಸಿನಿಮಾ ಹಾಕಿಕೊಳ್ಳಲಿ. ಆದರೆ ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ತೊಂದರೆ ಕೊಡಬೇಡಿ ಎಂದು ತಿಳಿಸಿದೆ. ಕಾಶ್ಮೀರ್‌ ಫೈಲ್‌ ಅನ್ನು ಬೆಳಿಗ್ಗೆ ಏಳು ಗಂಟೆಗೆ ಪ್ರದರ್ಶನ ಮಾಡಿಕೊಳ್ಳಲಿ. ಆದರೆ ಆದರೆ ಹತ್ತು ಗಂಟೆಯ ಷೋಗೆ ತೊಂದರೆ ಕೊಡಬೇಡಿ ಎಂದಿದ್ದೇನೆ” ಎಂದರು.

“ಪೂರ್ಣ ಪ್ರಮಾಣದಲ್ಲಿ ಅಲ್ಲವಾದರೂ ಒಂದೊಂದು ಪ್ರದರ್ಶನವನ್ನು ಕಡಿತಗೊಳಿಸಲು ಯತ್ನಿಸಿದರು. ಇನ್ನೂ ಒಂದು ವಾರ ಕಳೆದಿಲ್ಲ. ಆಗಲೇ ಸಿನಿಮಾ ತೆಗೆಯುವುದು ಸರಿಯಲ್ಲ ಎಂದೆ. ವಾರ ಕಳೆದ ಮೇಲೆ ಒಂದು ಊರಲ್ಲಿ ಎರಡು ಚಿತ್ರಮಂದಿರದಲ್ಲಿ ಜೇಮ್ಸ್‌ ಇದ್ದರೆ, ಒಂದು ಚಿತ್ರಮಂದಿರವನ್ನು ಬಿಟ್ಟುಕೊಡಲಾಗುವುದು. ಆದರೆ ಅಭಿಮಾನಿಗಳು ನೋಡುತ್ತಿರುವಾಗ ತೆರವು ಸರಿಯಲ್ಲ ಎಂಬುದಷ್ಟೇ ನಮ್ಮ ಆಕ್ಷೇಪ” ಎಂದು ಸ್ಪಷ್ಟಪಡಿಸಿದರು.

‘ಜೇಮ್ಸ್‌’ಗೆ ಸಿನಿಮಾ ಷೋ ಕಡಿತಗೊಳಿಸಿ, ಕಾಶ್ಮೀರ್‌ ಫೈಲ್ಸ್‌ಗೆ ತೋರಿಸುವಂತೆ ಬಿಜೆಪಿ ಶಾಸಕರು ಒತ್ತಡ ಹೇರುತ್ತಿರುವುದು ನಿಜವೇ ಎಂದು ಕೇಳಿದಾಗ, “ಒಂದು ಷೋಗೆ ಅವಕಾಶ ಕೋರಿದ್ದು ಚಿತ್ರಮಂದಿರದವರು. ಅವರಿಗೆ ಯಾರು ಒತ್ತಡ ಹಾಕುತ್ತಿದ್ದಾರೋ ಗೊತ್ತಿಲ್ಲ. ಶಾಸಕರು ಹೇಳಿದ್ದಾರೋ, ಮತ್ತ್ಯಾರೋ ಹೇಳುತ್ತಿದ್ದಾರೋ ಗೊತ್ತಿಲ್ಲ. ಅವರು ಸಿನಿಮಾ ಫ್ರೀ ತೋರಿಸ್ತಾರಂತೆ, ಅನೌನ್ಸ್‌ ಮಾಡಿದ್ದಾರಂತೆ  ಎಂದು ಚಿತ್ರಮಂದಿರದವರು ನನ್ನ ಬಳಿ ಹೇಳಿದರು. ಫ್ರೀ ತೋರಿಸೋ ಸಿನಿಮಾವನ್ನು ಬೆಳಿಗ್ಗೆ ಹಾಕಿದರೇನೂ ರಾತ್ರಿ ಹಾಕಿದರೇನು? ಜೇಮ್ಸ್‌ ಷೋಗೆ ತೊಂದರೆ ಕೊಡಬೇಡಿ ಎಂದು ತಿಳಿಸಿರುವೆ” ಎಂದು ಹೇಳಿದರು.

“ಅದು ಒಂದೂವರೆ ತಾಸು ಇರುವ ಸಿನಿಮಾ. ಬೆಳಿಗ್ಗೆ ಎಂಟು ಗಂಟೆಗೆ ಹಾಕಿಕೊಳ್ಳಲಿ. ಹತ್ತೂವರೆಗೆ ಜೇಮ್ಸ್ ಪ್ರದರ್ಶನವಾಗಲಿ. ಹಾಗೆಯೇ ‘ಆರ್‌ಆರ್‌ಆರ್‌‌’ ಬಂತು ಎಂದು ನಮ್ಮ ಸಿನಿಮಾ ತೆಗೆಯಬೇಡಿ ಎಂದೂ ಕೋರಿದ್ದೇನೆ. ಮಂಡ್ಯದಲ್ಲಿ ಐದು ಥೇಟರ್‌‌ ಇವೆ. ಹಾಗೆಂದು ಎಲ್ಲ ಥೇಟರ್‌‌ನಲ್ಲೂ ನಾವು ಸಿನಿಮಾ ಹಾಕಲ್ಲ. ಎರಡು ಉಳಿಸಿಕೊಳ್ಳುತ್ತೇವೆ ಅಷ್ಟೇ ಎಂದಿರುವೆ. ಕೆಲವರು ಸಹಕರಿಸುತ್ತಿದ್ದಾರೆ. ಮತ್ತೆ ಕೆಲವರು ಸಂಜೆ ವೇಳೆಗೆ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

“ಬೆಂಗಳೂರಿನಲ್ಲಿ ತೆಲುಗು ಏರಿಯಾಗಳಿವೆ. ಅಲ್ಲಿ ಒಂದು ವಾರ ನಮ್ಮ ಸಿನಿಮಾ ಹಾಕಿಕೊಟ್ಟಿದ್ದಾರೆ. ಆದರೆ ಕನ್ನಡಿಗರು ಹೆಚ್ಚಿರುವಲ್ಲಿ ನಮ್ಮ ಸಿನಿಮಾ ತೆಗೆಯಬೇಡಿ ಎಂದು ಹೇಳುತ್ತಿದ್ದೇನೆ. ಮಾಗಡಿ ರೋಡ್‌ನಲ್ಲಿ ವೀರೇಶ್‌, ಪ್ರಸನ್ನ ಚಿತ್ರಮಂದಿರದಲ್ಲಿ ಕನ್ನಡ ಸಿನಿಮಾಗಳನ್ನು ಹಾಕುತ್ತಾರೆ. ಅಂಜನ್‌ನಲ್ಲಿ ತೆಲುಗು ಹಾಕುತ್ತಾರೆ. ಆದರೆ ಪುನೀತ್ ಅವರ ಕೊನೆಯ ಸಿನಿಮಾವನ್ನು ಪ್ರದರ್ಶಿಸಬೇಕೆಂದು ಅಂಜನ್‌ನವರೇ ಮುಂದೆ ಬಂದು ಒಂದು ವಾರ ಜೇಮ್ಸ್ ಹಾಕಿದ್ದಾರೆ” ಎಂದು ಹೇಳಿದರು.

ಜೇಮ್ಸ್‌ ನಿರ್ಮಾಪಕರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದು ಏಕೆ?

ಚಿತ್ರಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನ ಕಡಿತಗೊಳಿಸಲು ಮುಂದಾಗಿರುವುದರಿಂದಲೇ ಜೇಮ್ಸ್ ನಿರ್ಮಾಪಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು ಎಂದು ವರದಿಗಳಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕಿಶೋರ್ ಪತ್ತಿಕೊಂಡ ಅವರು ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದರು.

“ಜೇಮ್ಸ್‌ ಸಿನಿಮಾ ನೋಡಲು ಬರುವಂತೆ ಆಹ್ವಾನ ನೀಡುವುದಕ್ಕಾಗಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೆ. ನಿಮಗಾಗಿ ಒಂದು ಷೋ ಅರೆಂಜ್‌ ಮಾಡುತ್ತೇವೆ ಎಂದು ಅವರಿಗೆ ತಿಳಿಸಿದೆ. ಇದಕ್ಕಾಗಿ ಅವರನ್ನು ಭೇಟಿಯಾಗಿದ್ದಷ್ಟೇ. ನಮ್ಮ ಕೋರಿಕೆಯನ್ನು ಸ್ವೀಕರಿಸಿದ ಸಿದ್ದರಾಮಯ್ಯನವರು, ನಿರಂತರವಾಗಿ ಕಾರ್ಯಕ್ರಮಗಳಿವೆ. ಎರಡು ಮೂರು ದಿನಗಳೊಳಗೆ ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ. ಖಂಡಿತ ಸಿನಿಮಾ ನೋಡುತ್ತೇನೆ ಎಂದಿದ್ದಾರೆ” ಎಂದು ಕಿಶೋರ್‌ ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...