Homeಕರ್ನಾಟಕEXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ:...

EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

- Advertisement -
- Advertisement -

ಕನ್ನಡಿಗರ ಪ್ರೀತಿಯ ‘ಅಪ್ಪು’, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ತೆರೆ ಕಂಡು ಇನ್ನೂ ಒಂದು ವಾರವಾಗಿಲ್ಲ, ಆದರೆ ‘ಕಾಣದ ಕೈಗಳು’ ಜೇಮ್ಸ್‌ ಸಿನಿಮಾ ಪ್ರದರ್ಶನವನ್ನು ಕಡಿತಗೊಳಿಸಿ, ‘ಕಾಶ್ಮೀರ್‌ ಫೈಲ್ಸ್‌’ ತೋರಿಸಲು ಒತ್ತಡ ಹೇರುತ್ತಿರುವ ಸಂಗತಿ ಬಯಲಾಗಿದೆ.

‘ಜೇಮ್ಸ್‌’ ಸಿನಿಮಾ ನಿರ್ಮಾಪಕ ಹಾಗೂ ಹಂಚಿಕೆದಾರರೂ ಆಗಿರುವ ಕಿಶೋರ್ ಪತ್ತಿಕೊಂಡ ಅವರ ಮೇಲೆ ಒತ್ತಡ ತಂದು ಜೇಮ್ಸ್‌ ಸಿನಿಮಾ ಷೋಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಇದೇ ವೇಳೆ ಕಿಶೋರ್‌ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದಕ್ಕೂ ಸಂಬಂಧ ಕಲ್ಪಿಸಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಈ ಸಂಬಂಧ ‘ನಾನುಗೌರಿ.ಕಾಂ’ ನಿರ್ಮಾಪಕ ಕಿಶೋರ್‌ ಪತ್ತಿಕೊಂಡ ಅವರನ್ನು ಸಂಪರ್ಕಿಸಿದ್ದು, ಜೇಮ್ಸ್‌ ಷೋ ಕಡಿತಗೊಳಿಸಲು ಒತ್ತಡಗಳು ಬರುತ್ತಿರುವುದನ್ನು ಉಲ್ಲೇಖಿಸಿದರು.

“ಬಹಳಷ್ಟು ಕಡೆ ಮಾರ್ನಿಂಗ್ ಷೋ, ಸೆಕೆಂಡ್ ಷೋ ತೆಗೆದು ಬೇರೆ ಸಿನಿಮಾ ಹಾಕಲು ಹೋದರು. ನಾನು ಅದನ್ನು ವಿರೋಧಿಸಿದೆ. ನಮ್ಮ ಸಿನಿಮಾ ಚೆನ್ನಾಗಿದೆ. ಪುನೀತ್ ಅವರ ಕೊನೆಯ ಸಿನಿಮಾವನ್ನು ಕನ್ನಡಿಗರು ನೋಡುತ್ತಿದ್ದಾರೆ ಎಂದೆ. ಅದಕ್ಕೆ ಚಿತ್ರಮಂದಿರದವರು- ‘ಇಲ್ಲ ಸರ್‌, ಅವರು ಹೇಳ್ತಾರೆ, ಇವರು ಹೇಳ್ತಾರೆ, ತೆರಿಗೆ ವಿನಾಯಿತಿ ನೀಡಿದ್ದೇವೆ ಹಾಕಿ ಅನ್ನುತ್ತಿದ್ದಾರೆ- ಅಂದರು. ನಾನು ಒಪ್ಪಲಿಲ್ಲ. ನಮ್ಮ ಸಿನಿಮಾದ ನಾಲ್ಕು ಷೋ ಆದ ಮೇಲೆ ಬೇರೆ ಸಿನಿಮಾ ಹಾಕಿಕೊಳ್ಳಲಿ. ಆದರೆ ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ತೊಂದರೆ ಕೊಡಬೇಡಿ ಎಂದು ತಿಳಿಸಿದೆ. ಕಾಶ್ಮೀರ್‌ ಫೈಲ್‌ ಅನ್ನು ಬೆಳಿಗ್ಗೆ ಏಳು ಗಂಟೆಗೆ ಪ್ರದರ್ಶನ ಮಾಡಿಕೊಳ್ಳಲಿ. ಆದರೆ ಆದರೆ ಹತ್ತು ಗಂಟೆಯ ಷೋಗೆ ತೊಂದರೆ ಕೊಡಬೇಡಿ ಎಂದಿದ್ದೇನೆ” ಎಂದರು.

“ಪೂರ್ಣ ಪ್ರಮಾಣದಲ್ಲಿ ಅಲ್ಲವಾದರೂ ಒಂದೊಂದು ಪ್ರದರ್ಶನವನ್ನು ಕಡಿತಗೊಳಿಸಲು ಯತ್ನಿಸಿದರು. ಇನ್ನೂ ಒಂದು ವಾರ ಕಳೆದಿಲ್ಲ. ಆಗಲೇ ಸಿನಿಮಾ ತೆಗೆಯುವುದು ಸರಿಯಲ್ಲ ಎಂದೆ. ವಾರ ಕಳೆದ ಮೇಲೆ ಒಂದು ಊರಲ್ಲಿ ಎರಡು ಚಿತ್ರಮಂದಿರದಲ್ಲಿ ಜೇಮ್ಸ್‌ ಇದ್ದರೆ, ಒಂದು ಚಿತ್ರಮಂದಿರವನ್ನು ಬಿಟ್ಟುಕೊಡಲಾಗುವುದು. ಆದರೆ ಅಭಿಮಾನಿಗಳು ನೋಡುತ್ತಿರುವಾಗ ತೆರವು ಸರಿಯಲ್ಲ ಎಂಬುದಷ್ಟೇ ನಮ್ಮ ಆಕ್ಷೇಪ” ಎಂದು ಸ್ಪಷ್ಟಪಡಿಸಿದರು.

‘ಜೇಮ್ಸ್‌’ಗೆ ಸಿನಿಮಾ ಷೋ ಕಡಿತಗೊಳಿಸಿ, ಕಾಶ್ಮೀರ್‌ ಫೈಲ್ಸ್‌ಗೆ ತೋರಿಸುವಂತೆ ಬಿಜೆಪಿ ಶಾಸಕರು ಒತ್ತಡ ಹೇರುತ್ತಿರುವುದು ನಿಜವೇ ಎಂದು ಕೇಳಿದಾಗ, “ಒಂದು ಷೋಗೆ ಅವಕಾಶ ಕೋರಿದ್ದು ಚಿತ್ರಮಂದಿರದವರು. ಅವರಿಗೆ ಯಾರು ಒತ್ತಡ ಹಾಕುತ್ತಿದ್ದಾರೋ ಗೊತ್ತಿಲ್ಲ. ಶಾಸಕರು ಹೇಳಿದ್ದಾರೋ, ಮತ್ತ್ಯಾರೋ ಹೇಳುತ್ತಿದ್ದಾರೋ ಗೊತ್ತಿಲ್ಲ. ಅವರು ಸಿನಿಮಾ ಫ್ರೀ ತೋರಿಸ್ತಾರಂತೆ, ಅನೌನ್ಸ್‌ ಮಾಡಿದ್ದಾರಂತೆ  ಎಂದು ಚಿತ್ರಮಂದಿರದವರು ನನ್ನ ಬಳಿ ಹೇಳಿದರು. ಫ್ರೀ ತೋರಿಸೋ ಸಿನಿಮಾವನ್ನು ಬೆಳಿಗ್ಗೆ ಹಾಕಿದರೇನೂ ರಾತ್ರಿ ಹಾಕಿದರೇನು? ಜೇಮ್ಸ್‌ ಷೋಗೆ ತೊಂದರೆ ಕೊಡಬೇಡಿ ಎಂದು ತಿಳಿಸಿರುವೆ” ಎಂದು ಹೇಳಿದರು.

“ಅದು ಒಂದೂವರೆ ತಾಸು ಇರುವ ಸಿನಿಮಾ. ಬೆಳಿಗ್ಗೆ ಎಂಟು ಗಂಟೆಗೆ ಹಾಕಿಕೊಳ್ಳಲಿ. ಹತ್ತೂವರೆಗೆ ಜೇಮ್ಸ್ ಪ್ರದರ್ಶನವಾಗಲಿ. ಹಾಗೆಯೇ ‘ಆರ್‌ಆರ್‌ಆರ್‌‌’ ಬಂತು ಎಂದು ನಮ್ಮ ಸಿನಿಮಾ ತೆಗೆಯಬೇಡಿ ಎಂದೂ ಕೋರಿದ್ದೇನೆ. ಮಂಡ್ಯದಲ್ಲಿ ಐದು ಥೇಟರ್‌‌ ಇವೆ. ಹಾಗೆಂದು ಎಲ್ಲ ಥೇಟರ್‌‌ನಲ್ಲೂ ನಾವು ಸಿನಿಮಾ ಹಾಕಲ್ಲ. ಎರಡು ಉಳಿಸಿಕೊಳ್ಳುತ್ತೇವೆ ಅಷ್ಟೇ ಎಂದಿರುವೆ. ಕೆಲವರು ಸಹಕರಿಸುತ್ತಿದ್ದಾರೆ. ಮತ್ತೆ ಕೆಲವರು ಸಂಜೆ ವೇಳೆಗೆ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

“ಬೆಂಗಳೂರಿನಲ್ಲಿ ತೆಲುಗು ಏರಿಯಾಗಳಿವೆ. ಅಲ್ಲಿ ಒಂದು ವಾರ ನಮ್ಮ ಸಿನಿಮಾ ಹಾಕಿಕೊಟ್ಟಿದ್ದಾರೆ. ಆದರೆ ಕನ್ನಡಿಗರು ಹೆಚ್ಚಿರುವಲ್ಲಿ ನಮ್ಮ ಸಿನಿಮಾ ತೆಗೆಯಬೇಡಿ ಎಂದು ಹೇಳುತ್ತಿದ್ದೇನೆ. ಮಾಗಡಿ ರೋಡ್‌ನಲ್ಲಿ ವೀರೇಶ್‌, ಪ್ರಸನ್ನ ಚಿತ್ರಮಂದಿರದಲ್ಲಿ ಕನ್ನಡ ಸಿನಿಮಾಗಳನ್ನು ಹಾಕುತ್ತಾರೆ. ಅಂಜನ್‌ನಲ್ಲಿ ತೆಲುಗು ಹಾಕುತ್ತಾರೆ. ಆದರೆ ಪುನೀತ್ ಅವರ ಕೊನೆಯ ಸಿನಿಮಾವನ್ನು ಪ್ರದರ್ಶಿಸಬೇಕೆಂದು ಅಂಜನ್‌ನವರೇ ಮುಂದೆ ಬಂದು ಒಂದು ವಾರ ಜೇಮ್ಸ್ ಹಾಕಿದ್ದಾರೆ” ಎಂದು ಹೇಳಿದರು.

ಜೇಮ್ಸ್‌ ನಿರ್ಮಾಪಕರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದು ಏಕೆ?

ಚಿತ್ರಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನ ಕಡಿತಗೊಳಿಸಲು ಮುಂದಾಗಿರುವುದರಿಂದಲೇ ಜೇಮ್ಸ್ ನಿರ್ಮಾಪಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು ಎಂದು ವರದಿಗಳಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕಿಶೋರ್ ಪತ್ತಿಕೊಂಡ ಅವರು ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದರು.

“ಜೇಮ್ಸ್‌ ಸಿನಿಮಾ ನೋಡಲು ಬರುವಂತೆ ಆಹ್ವಾನ ನೀಡುವುದಕ್ಕಾಗಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೆ. ನಿಮಗಾಗಿ ಒಂದು ಷೋ ಅರೆಂಜ್‌ ಮಾಡುತ್ತೇವೆ ಎಂದು ಅವರಿಗೆ ತಿಳಿಸಿದೆ. ಇದಕ್ಕಾಗಿ ಅವರನ್ನು ಭೇಟಿಯಾಗಿದ್ದಷ್ಟೇ. ನಮ್ಮ ಕೋರಿಕೆಯನ್ನು ಸ್ವೀಕರಿಸಿದ ಸಿದ್ದರಾಮಯ್ಯನವರು, ನಿರಂತರವಾಗಿ ಕಾರ್ಯಕ್ರಮಗಳಿವೆ. ಎರಡು ಮೂರು ದಿನಗಳೊಳಗೆ ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ. ಖಂಡಿತ ಸಿನಿಮಾ ನೋಡುತ್ತೇನೆ ಎಂದಿದ್ದಾರೆ” ಎಂದು ಕಿಶೋರ್‌ ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...