Homeಕರ್ನಾಟಕEXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ:...

EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

- Advertisement -
- Advertisement -

ಕನ್ನಡಿಗರ ಪ್ರೀತಿಯ ‘ಅಪ್ಪು’, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ತೆರೆ ಕಂಡು ಇನ್ನೂ ಒಂದು ವಾರವಾಗಿಲ್ಲ, ಆದರೆ ‘ಕಾಣದ ಕೈಗಳು’ ಜೇಮ್ಸ್‌ ಸಿನಿಮಾ ಪ್ರದರ್ಶನವನ್ನು ಕಡಿತಗೊಳಿಸಿ, ‘ಕಾಶ್ಮೀರ್‌ ಫೈಲ್ಸ್‌’ ತೋರಿಸಲು ಒತ್ತಡ ಹೇರುತ್ತಿರುವ ಸಂಗತಿ ಬಯಲಾಗಿದೆ.

‘ಜೇಮ್ಸ್‌’ ಸಿನಿಮಾ ನಿರ್ಮಾಪಕ ಹಾಗೂ ಹಂಚಿಕೆದಾರರೂ ಆಗಿರುವ ಕಿಶೋರ್ ಪತ್ತಿಕೊಂಡ ಅವರ ಮೇಲೆ ಒತ್ತಡ ತಂದು ಜೇಮ್ಸ್‌ ಸಿನಿಮಾ ಷೋಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಇದೇ ವೇಳೆ ಕಿಶೋರ್‌ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದಕ್ಕೂ ಸಂಬಂಧ ಕಲ್ಪಿಸಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಈ ಸಂಬಂಧ ‘ನಾನುಗೌರಿ.ಕಾಂ’ ನಿರ್ಮಾಪಕ ಕಿಶೋರ್‌ ಪತ್ತಿಕೊಂಡ ಅವರನ್ನು ಸಂಪರ್ಕಿಸಿದ್ದು, ಜೇಮ್ಸ್‌ ಷೋ ಕಡಿತಗೊಳಿಸಲು ಒತ್ತಡಗಳು ಬರುತ್ತಿರುವುದನ್ನು ಉಲ್ಲೇಖಿಸಿದರು.

“ಬಹಳಷ್ಟು ಕಡೆ ಮಾರ್ನಿಂಗ್ ಷೋ, ಸೆಕೆಂಡ್ ಷೋ ತೆಗೆದು ಬೇರೆ ಸಿನಿಮಾ ಹಾಕಲು ಹೋದರು. ನಾನು ಅದನ್ನು ವಿರೋಧಿಸಿದೆ. ನಮ್ಮ ಸಿನಿಮಾ ಚೆನ್ನಾಗಿದೆ. ಪುನೀತ್ ಅವರ ಕೊನೆಯ ಸಿನಿಮಾವನ್ನು ಕನ್ನಡಿಗರು ನೋಡುತ್ತಿದ್ದಾರೆ ಎಂದೆ. ಅದಕ್ಕೆ ಚಿತ್ರಮಂದಿರದವರು- ‘ಇಲ್ಲ ಸರ್‌, ಅವರು ಹೇಳ್ತಾರೆ, ಇವರು ಹೇಳ್ತಾರೆ, ತೆರಿಗೆ ವಿನಾಯಿತಿ ನೀಡಿದ್ದೇವೆ ಹಾಕಿ ಅನ್ನುತ್ತಿದ್ದಾರೆ- ಅಂದರು. ನಾನು ಒಪ್ಪಲಿಲ್ಲ. ನಮ್ಮ ಸಿನಿಮಾದ ನಾಲ್ಕು ಷೋ ಆದ ಮೇಲೆ ಬೇರೆ ಸಿನಿಮಾ ಹಾಕಿಕೊಳ್ಳಲಿ. ಆದರೆ ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ತೊಂದರೆ ಕೊಡಬೇಡಿ ಎಂದು ತಿಳಿಸಿದೆ. ಕಾಶ್ಮೀರ್‌ ಫೈಲ್‌ ಅನ್ನು ಬೆಳಿಗ್ಗೆ ಏಳು ಗಂಟೆಗೆ ಪ್ರದರ್ಶನ ಮಾಡಿಕೊಳ್ಳಲಿ. ಆದರೆ ಆದರೆ ಹತ್ತು ಗಂಟೆಯ ಷೋಗೆ ತೊಂದರೆ ಕೊಡಬೇಡಿ ಎಂದಿದ್ದೇನೆ” ಎಂದರು.

“ಪೂರ್ಣ ಪ್ರಮಾಣದಲ್ಲಿ ಅಲ್ಲವಾದರೂ ಒಂದೊಂದು ಪ್ರದರ್ಶನವನ್ನು ಕಡಿತಗೊಳಿಸಲು ಯತ್ನಿಸಿದರು. ಇನ್ನೂ ಒಂದು ವಾರ ಕಳೆದಿಲ್ಲ. ಆಗಲೇ ಸಿನಿಮಾ ತೆಗೆಯುವುದು ಸರಿಯಲ್ಲ ಎಂದೆ. ವಾರ ಕಳೆದ ಮೇಲೆ ಒಂದು ಊರಲ್ಲಿ ಎರಡು ಚಿತ್ರಮಂದಿರದಲ್ಲಿ ಜೇಮ್ಸ್‌ ಇದ್ದರೆ, ಒಂದು ಚಿತ್ರಮಂದಿರವನ್ನು ಬಿಟ್ಟುಕೊಡಲಾಗುವುದು. ಆದರೆ ಅಭಿಮಾನಿಗಳು ನೋಡುತ್ತಿರುವಾಗ ತೆರವು ಸರಿಯಲ್ಲ ಎಂಬುದಷ್ಟೇ ನಮ್ಮ ಆಕ್ಷೇಪ” ಎಂದು ಸ್ಪಷ್ಟಪಡಿಸಿದರು.

‘ಜೇಮ್ಸ್‌’ಗೆ ಸಿನಿಮಾ ಷೋ ಕಡಿತಗೊಳಿಸಿ, ಕಾಶ್ಮೀರ್‌ ಫೈಲ್ಸ್‌ಗೆ ತೋರಿಸುವಂತೆ ಬಿಜೆಪಿ ಶಾಸಕರು ಒತ್ತಡ ಹೇರುತ್ತಿರುವುದು ನಿಜವೇ ಎಂದು ಕೇಳಿದಾಗ, “ಒಂದು ಷೋಗೆ ಅವಕಾಶ ಕೋರಿದ್ದು ಚಿತ್ರಮಂದಿರದವರು. ಅವರಿಗೆ ಯಾರು ಒತ್ತಡ ಹಾಕುತ್ತಿದ್ದಾರೋ ಗೊತ್ತಿಲ್ಲ. ಶಾಸಕರು ಹೇಳಿದ್ದಾರೋ, ಮತ್ತ್ಯಾರೋ ಹೇಳುತ್ತಿದ್ದಾರೋ ಗೊತ್ತಿಲ್ಲ. ಅವರು ಸಿನಿಮಾ ಫ್ರೀ ತೋರಿಸ್ತಾರಂತೆ, ಅನೌನ್ಸ್‌ ಮಾಡಿದ್ದಾರಂತೆ  ಎಂದು ಚಿತ್ರಮಂದಿರದವರು ನನ್ನ ಬಳಿ ಹೇಳಿದರು. ಫ್ರೀ ತೋರಿಸೋ ಸಿನಿಮಾವನ್ನು ಬೆಳಿಗ್ಗೆ ಹಾಕಿದರೇನೂ ರಾತ್ರಿ ಹಾಕಿದರೇನು? ಜೇಮ್ಸ್‌ ಷೋಗೆ ತೊಂದರೆ ಕೊಡಬೇಡಿ ಎಂದು ತಿಳಿಸಿರುವೆ” ಎಂದು ಹೇಳಿದರು.

“ಅದು ಒಂದೂವರೆ ತಾಸು ಇರುವ ಸಿನಿಮಾ. ಬೆಳಿಗ್ಗೆ ಎಂಟು ಗಂಟೆಗೆ ಹಾಕಿಕೊಳ್ಳಲಿ. ಹತ್ತೂವರೆಗೆ ಜೇಮ್ಸ್ ಪ್ರದರ್ಶನವಾಗಲಿ. ಹಾಗೆಯೇ ‘ಆರ್‌ಆರ್‌ಆರ್‌‌’ ಬಂತು ಎಂದು ನಮ್ಮ ಸಿನಿಮಾ ತೆಗೆಯಬೇಡಿ ಎಂದೂ ಕೋರಿದ್ದೇನೆ. ಮಂಡ್ಯದಲ್ಲಿ ಐದು ಥೇಟರ್‌‌ ಇವೆ. ಹಾಗೆಂದು ಎಲ್ಲ ಥೇಟರ್‌‌ನಲ್ಲೂ ನಾವು ಸಿನಿಮಾ ಹಾಕಲ್ಲ. ಎರಡು ಉಳಿಸಿಕೊಳ್ಳುತ್ತೇವೆ ಅಷ್ಟೇ ಎಂದಿರುವೆ. ಕೆಲವರು ಸಹಕರಿಸುತ್ತಿದ್ದಾರೆ. ಮತ್ತೆ ಕೆಲವರು ಸಂಜೆ ವೇಳೆಗೆ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

“ಬೆಂಗಳೂರಿನಲ್ಲಿ ತೆಲುಗು ಏರಿಯಾಗಳಿವೆ. ಅಲ್ಲಿ ಒಂದು ವಾರ ನಮ್ಮ ಸಿನಿಮಾ ಹಾಕಿಕೊಟ್ಟಿದ್ದಾರೆ. ಆದರೆ ಕನ್ನಡಿಗರು ಹೆಚ್ಚಿರುವಲ್ಲಿ ನಮ್ಮ ಸಿನಿಮಾ ತೆಗೆಯಬೇಡಿ ಎಂದು ಹೇಳುತ್ತಿದ್ದೇನೆ. ಮಾಗಡಿ ರೋಡ್‌ನಲ್ಲಿ ವೀರೇಶ್‌, ಪ್ರಸನ್ನ ಚಿತ್ರಮಂದಿರದಲ್ಲಿ ಕನ್ನಡ ಸಿನಿಮಾಗಳನ್ನು ಹಾಕುತ್ತಾರೆ. ಅಂಜನ್‌ನಲ್ಲಿ ತೆಲುಗು ಹಾಕುತ್ತಾರೆ. ಆದರೆ ಪುನೀತ್ ಅವರ ಕೊನೆಯ ಸಿನಿಮಾವನ್ನು ಪ್ರದರ್ಶಿಸಬೇಕೆಂದು ಅಂಜನ್‌ನವರೇ ಮುಂದೆ ಬಂದು ಒಂದು ವಾರ ಜೇಮ್ಸ್ ಹಾಕಿದ್ದಾರೆ” ಎಂದು ಹೇಳಿದರು.

ಜೇಮ್ಸ್‌ ನಿರ್ಮಾಪಕರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದು ಏಕೆ?

ಚಿತ್ರಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನ ಕಡಿತಗೊಳಿಸಲು ಮುಂದಾಗಿರುವುದರಿಂದಲೇ ಜೇಮ್ಸ್ ನಿರ್ಮಾಪಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು ಎಂದು ವರದಿಗಳಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕಿಶೋರ್ ಪತ್ತಿಕೊಂಡ ಅವರು ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದರು.

“ಜೇಮ್ಸ್‌ ಸಿನಿಮಾ ನೋಡಲು ಬರುವಂತೆ ಆಹ್ವಾನ ನೀಡುವುದಕ್ಕಾಗಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೆ. ನಿಮಗಾಗಿ ಒಂದು ಷೋ ಅರೆಂಜ್‌ ಮಾಡುತ್ತೇವೆ ಎಂದು ಅವರಿಗೆ ತಿಳಿಸಿದೆ. ಇದಕ್ಕಾಗಿ ಅವರನ್ನು ಭೇಟಿಯಾಗಿದ್ದಷ್ಟೇ. ನಮ್ಮ ಕೋರಿಕೆಯನ್ನು ಸ್ವೀಕರಿಸಿದ ಸಿದ್ದರಾಮಯ್ಯನವರು, ನಿರಂತರವಾಗಿ ಕಾರ್ಯಕ್ರಮಗಳಿವೆ. ಎರಡು ಮೂರು ದಿನಗಳೊಳಗೆ ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ. ಖಂಡಿತ ಸಿನಿಮಾ ನೋಡುತ್ತೇನೆ ಎಂದಿದ್ದಾರೆ” ಎಂದು ಕಿಶೋರ್‌ ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...