Homeಕರ್ನಾಟಕEXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ:...

EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

- Advertisement -
- Advertisement -

ಕನ್ನಡಿಗರ ಪ್ರೀತಿಯ ‘ಅಪ್ಪು’, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ತೆರೆ ಕಂಡು ಇನ್ನೂ ಒಂದು ವಾರವಾಗಿಲ್ಲ, ಆದರೆ ‘ಕಾಣದ ಕೈಗಳು’ ಜೇಮ್ಸ್‌ ಸಿನಿಮಾ ಪ್ರದರ್ಶನವನ್ನು ಕಡಿತಗೊಳಿಸಿ, ‘ಕಾಶ್ಮೀರ್‌ ಫೈಲ್ಸ್‌’ ತೋರಿಸಲು ಒತ್ತಡ ಹೇರುತ್ತಿರುವ ಸಂಗತಿ ಬಯಲಾಗಿದೆ.

‘ಜೇಮ್ಸ್‌’ ಸಿನಿಮಾ ನಿರ್ಮಾಪಕ ಹಾಗೂ ಹಂಚಿಕೆದಾರರೂ ಆಗಿರುವ ಕಿಶೋರ್ ಪತ್ತಿಕೊಂಡ ಅವರ ಮೇಲೆ ಒತ್ತಡ ತಂದು ಜೇಮ್ಸ್‌ ಸಿನಿಮಾ ಷೋಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಇದೇ ವೇಳೆ ಕಿಶೋರ್‌ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದಕ್ಕೂ ಸಂಬಂಧ ಕಲ್ಪಿಸಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಈ ಸಂಬಂಧ ‘ನಾನುಗೌರಿ.ಕಾಂ’ ನಿರ್ಮಾಪಕ ಕಿಶೋರ್‌ ಪತ್ತಿಕೊಂಡ ಅವರನ್ನು ಸಂಪರ್ಕಿಸಿದ್ದು, ಜೇಮ್ಸ್‌ ಷೋ ಕಡಿತಗೊಳಿಸಲು ಒತ್ತಡಗಳು ಬರುತ್ತಿರುವುದನ್ನು ಉಲ್ಲೇಖಿಸಿದರು.

“ಬಹಳಷ್ಟು ಕಡೆ ಮಾರ್ನಿಂಗ್ ಷೋ, ಸೆಕೆಂಡ್ ಷೋ ತೆಗೆದು ಬೇರೆ ಸಿನಿಮಾ ಹಾಕಲು ಹೋದರು. ನಾನು ಅದನ್ನು ವಿರೋಧಿಸಿದೆ. ನಮ್ಮ ಸಿನಿಮಾ ಚೆನ್ನಾಗಿದೆ. ಪುನೀತ್ ಅವರ ಕೊನೆಯ ಸಿನಿಮಾವನ್ನು ಕನ್ನಡಿಗರು ನೋಡುತ್ತಿದ್ದಾರೆ ಎಂದೆ. ಅದಕ್ಕೆ ಚಿತ್ರಮಂದಿರದವರು- ‘ಇಲ್ಲ ಸರ್‌, ಅವರು ಹೇಳ್ತಾರೆ, ಇವರು ಹೇಳ್ತಾರೆ, ತೆರಿಗೆ ವಿನಾಯಿತಿ ನೀಡಿದ್ದೇವೆ ಹಾಕಿ ಅನ್ನುತ್ತಿದ್ದಾರೆ- ಅಂದರು. ನಾನು ಒಪ್ಪಲಿಲ್ಲ. ನಮ್ಮ ಸಿನಿಮಾದ ನಾಲ್ಕು ಷೋ ಆದ ಮೇಲೆ ಬೇರೆ ಸಿನಿಮಾ ಹಾಕಿಕೊಳ್ಳಲಿ. ಆದರೆ ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ತೊಂದರೆ ಕೊಡಬೇಡಿ ಎಂದು ತಿಳಿಸಿದೆ. ಕಾಶ್ಮೀರ್‌ ಫೈಲ್‌ ಅನ್ನು ಬೆಳಿಗ್ಗೆ ಏಳು ಗಂಟೆಗೆ ಪ್ರದರ್ಶನ ಮಾಡಿಕೊಳ್ಳಲಿ. ಆದರೆ ಆದರೆ ಹತ್ತು ಗಂಟೆಯ ಷೋಗೆ ತೊಂದರೆ ಕೊಡಬೇಡಿ ಎಂದಿದ್ದೇನೆ” ಎಂದರು.

“ಪೂರ್ಣ ಪ್ರಮಾಣದಲ್ಲಿ ಅಲ್ಲವಾದರೂ ಒಂದೊಂದು ಪ್ರದರ್ಶನವನ್ನು ಕಡಿತಗೊಳಿಸಲು ಯತ್ನಿಸಿದರು. ಇನ್ನೂ ಒಂದು ವಾರ ಕಳೆದಿಲ್ಲ. ಆಗಲೇ ಸಿನಿಮಾ ತೆಗೆಯುವುದು ಸರಿಯಲ್ಲ ಎಂದೆ. ವಾರ ಕಳೆದ ಮೇಲೆ ಒಂದು ಊರಲ್ಲಿ ಎರಡು ಚಿತ್ರಮಂದಿರದಲ್ಲಿ ಜೇಮ್ಸ್‌ ಇದ್ದರೆ, ಒಂದು ಚಿತ್ರಮಂದಿರವನ್ನು ಬಿಟ್ಟುಕೊಡಲಾಗುವುದು. ಆದರೆ ಅಭಿಮಾನಿಗಳು ನೋಡುತ್ತಿರುವಾಗ ತೆರವು ಸರಿಯಲ್ಲ ಎಂಬುದಷ್ಟೇ ನಮ್ಮ ಆಕ್ಷೇಪ” ಎಂದು ಸ್ಪಷ್ಟಪಡಿಸಿದರು.

‘ಜೇಮ್ಸ್‌’ಗೆ ಸಿನಿಮಾ ಷೋ ಕಡಿತಗೊಳಿಸಿ, ಕಾಶ್ಮೀರ್‌ ಫೈಲ್ಸ್‌ಗೆ ತೋರಿಸುವಂತೆ ಬಿಜೆಪಿ ಶಾಸಕರು ಒತ್ತಡ ಹೇರುತ್ತಿರುವುದು ನಿಜವೇ ಎಂದು ಕೇಳಿದಾಗ, “ಒಂದು ಷೋಗೆ ಅವಕಾಶ ಕೋರಿದ್ದು ಚಿತ್ರಮಂದಿರದವರು. ಅವರಿಗೆ ಯಾರು ಒತ್ತಡ ಹಾಕುತ್ತಿದ್ದಾರೋ ಗೊತ್ತಿಲ್ಲ. ಶಾಸಕರು ಹೇಳಿದ್ದಾರೋ, ಮತ್ತ್ಯಾರೋ ಹೇಳುತ್ತಿದ್ದಾರೋ ಗೊತ್ತಿಲ್ಲ. ಅವರು ಸಿನಿಮಾ ಫ್ರೀ ತೋರಿಸ್ತಾರಂತೆ, ಅನೌನ್ಸ್‌ ಮಾಡಿದ್ದಾರಂತೆ  ಎಂದು ಚಿತ್ರಮಂದಿರದವರು ನನ್ನ ಬಳಿ ಹೇಳಿದರು. ಫ್ರೀ ತೋರಿಸೋ ಸಿನಿಮಾವನ್ನು ಬೆಳಿಗ್ಗೆ ಹಾಕಿದರೇನೂ ರಾತ್ರಿ ಹಾಕಿದರೇನು? ಜೇಮ್ಸ್‌ ಷೋಗೆ ತೊಂದರೆ ಕೊಡಬೇಡಿ ಎಂದು ತಿಳಿಸಿರುವೆ” ಎಂದು ಹೇಳಿದರು.

“ಅದು ಒಂದೂವರೆ ತಾಸು ಇರುವ ಸಿನಿಮಾ. ಬೆಳಿಗ್ಗೆ ಎಂಟು ಗಂಟೆಗೆ ಹಾಕಿಕೊಳ್ಳಲಿ. ಹತ್ತೂವರೆಗೆ ಜೇಮ್ಸ್ ಪ್ರದರ್ಶನವಾಗಲಿ. ಹಾಗೆಯೇ ‘ಆರ್‌ಆರ್‌ಆರ್‌‌’ ಬಂತು ಎಂದು ನಮ್ಮ ಸಿನಿಮಾ ತೆಗೆಯಬೇಡಿ ಎಂದೂ ಕೋರಿದ್ದೇನೆ. ಮಂಡ್ಯದಲ್ಲಿ ಐದು ಥೇಟರ್‌‌ ಇವೆ. ಹಾಗೆಂದು ಎಲ್ಲ ಥೇಟರ್‌‌ನಲ್ಲೂ ನಾವು ಸಿನಿಮಾ ಹಾಕಲ್ಲ. ಎರಡು ಉಳಿಸಿಕೊಳ್ಳುತ್ತೇವೆ ಅಷ್ಟೇ ಎಂದಿರುವೆ. ಕೆಲವರು ಸಹಕರಿಸುತ್ತಿದ್ದಾರೆ. ಮತ್ತೆ ಕೆಲವರು ಸಂಜೆ ವೇಳೆಗೆ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

“ಬೆಂಗಳೂರಿನಲ್ಲಿ ತೆಲುಗು ಏರಿಯಾಗಳಿವೆ. ಅಲ್ಲಿ ಒಂದು ವಾರ ನಮ್ಮ ಸಿನಿಮಾ ಹಾಕಿಕೊಟ್ಟಿದ್ದಾರೆ. ಆದರೆ ಕನ್ನಡಿಗರು ಹೆಚ್ಚಿರುವಲ್ಲಿ ನಮ್ಮ ಸಿನಿಮಾ ತೆಗೆಯಬೇಡಿ ಎಂದು ಹೇಳುತ್ತಿದ್ದೇನೆ. ಮಾಗಡಿ ರೋಡ್‌ನಲ್ಲಿ ವೀರೇಶ್‌, ಪ್ರಸನ್ನ ಚಿತ್ರಮಂದಿರದಲ್ಲಿ ಕನ್ನಡ ಸಿನಿಮಾಗಳನ್ನು ಹಾಕುತ್ತಾರೆ. ಅಂಜನ್‌ನಲ್ಲಿ ತೆಲುಗು ಹಾಕುತ್ತಾರೆ. ಆದರೆ ಪುನೀತ್ ಅವರ ಕೊನೆಯ ಸಿನಿಮಾವನ್ನು ಪ್ರದರ್ಶಿಸಬೇಕೆಂದು ಅಂಜನ್‌ನವರೇ ಮುಂದೆ ಬಂದು ಒಂದು ವಾರ ಜೇಮ್ಸ್ ಹಾಕಿದ್ದಾರೆ” ಎಂದು ಹೇಳಿದರು.

ಜೇಮ್ಸ್‌ ನಿರ್ಮಾಪಕರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದು ಏಕೆ?

ಚಿತ್ರಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನ ಕಡಿತಗೊಳಿಸಲು ಮುಂದಾಗಿರುವುದರಿಂದಲೇ ಜೇಮ್ಸ್ ನಿರ್ಮಾಪಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು ಎಂದು ವರದಿಗಳಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕಿಶೋರ್ ಪತ್ತಿಕೊಂಡ ಅವರು ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದರು.

“ಜೇಮ್ಸ್‌ ಸಿನಿಮಾ ನೋಡಲು ಬರುವಂತೆ ಆಹ್ವಾನ ನೀಡುವುದಕ್ಕಾಗಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೆ. ನಿಮಗಾಗಿ ಒಂದು ಷೋ ಅರೆಂಜ್‌ ಮಾಡುತ್ತೇವೆ ಎಂದು ಅವರಿಗೆ ತಿಳಿಸಿದೆ. ಇದಕ್ಕಾಗಿ ಅವರನ್ನು ಭೇಟಿಯಾಗಿದ್ದಷ್ಟೇ. ನಮ್ಮ ಕೋರಿಕೆಯನ್ನು ಸ್ವೀಕರಿಸಿದ ಸಿದ್ದರಾಮಯ್ಯನವರು, ನಿರಂತರವಾಗಿ ಕಾರ್ಯಕ್ರಮಗಳಿವೆ. ಎರಡು ಮೂರು ದಿನಗಳೊಳಗೆ ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ. ಖಂಡಿತ ಸಿನಿಮಾ ನೋಡುತ್ತೇನೆ ಎಂದಿದ್ದಾರೆ” ಎಂದು ಕಿಶೋರ್‌ ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...