Homeಕರ್ನಾಟಕEXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ:...

EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

- Advertisement -
- Advertisement -

ಕನ್ನಡಿಗರ ಪ್ರೀತಿಯ ‘ಅಪ್ಪು’, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ತೆರೆ ಕಂಡು ಇನ್ನೂ ಒಂದು ವಾರವಾಗಿಲ್ಲ, ಆದರೆ ‘ಕಾಣದ ಕೈಗಳು’ ಜೇಮ್ಸ್‌ ಸಿನಿಮಾ ಪ್ರದರ್ಶನವನ್ನು ಕಡಿತಗೊಳಿಸಿ, ‘ಕಾಶ್ಮೀರ್‌ ಫೈಲ್ಸ್‌’ ತೋರಿಸಲು ಒತ್ತಡ ಹೇರುತ್ತಿರುವ ಸಂಗತಿ ಬಯಲಾಗಿದೆ.

‘ಜೇಮ್ಸ್‌’ ಸಿನಿಮಾ ನಿರ್ಮಾಪಕ ಹಾಗೂ ಹಂಚಿಕೆದಾರರೂ ಆಗಿರುವ ಕಿಶೋರ್ ಪತ್ತಿಕೊಂಡ ಅವರ ಮೇಲೆ ಒತ್ತಡ ತಂದು ಜೇಮ್ಸ್‌ ಸಿನಿಮಾ ಷೋಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಇದೇ ವೇಳೆ ಕಿಶೋರ್‌ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದಕ್ಕೂ ಸಂಬಂಧ ಕಲ್ಪಿಸಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಈ ಸಂಬಂಧ ‘ನಾನುಗೌರಿ.ಕಾಂ’ ನಿರ್ಮಾಪಕ ಕಿಶೋರ್‌ ಪತ್ತಿಕೊಂಡ ಅವರನ್ನು ಸಂಪರ್ಕಿಸಿದ್ದು, ಜೇಮ್ಸ್‌ ಷೋ ಕಡಿತಗೊಳಿಸಲು ಒತ್ತಡಗಳು ಬರುತ್ತಿರುವುದನ್ನು ಉಲ್ಲೇಖಿಸಿದರು.

“ಬಹಳಷ್ಟು ಕಡೆ ಮಾರ್ನಿಂಗ್ ಷೋ, ಸೆಕೆಂಡ್ ಷೋ ತೆಗೆದು ಬೇರೆ ಸಿನಿಮಾ ಹಾಕಲು ಹೋದರು. ನಾನು ಅದನ್ನು ವಿರೋಧಿಸಿದೆ. ನಮ್ಮ ಸಿನಿಮಾ ಚೆನ್ನಾಗಿದೆ. ಪುನೀತ್ ಅವರ ಕೊನೆಯ ಸಿನಿಮಾವನ್ನು ಕನ್ನಡಿಗರು ನೋಡುತ್ತಿದ್ದಾರೆ ಎಂದೆ. ಅದಕ್ಕೆ ಚಿತ್ರಮಂದಿರದವರು- ‘ಇಲ್ಲ ಸರ್‌, ಅವರು ಹೇಳ್ತಾರೆ, ಇವರು ಹೇಳ್ತಾರೆ, ತೆರಿಗೆ ವಿನಾಯಿತಿ ನೀಡಿದ್ದೇವೆ ಹಾಕಿ ಅನ್ನುತ್ತಿದ್ದಾರೆ- ಅಂದರು. ನಾನು ಒಪ್ಪಲಿಲ್ಲ. ನಮ್ಮ ಸಿನಿಮಾದ ನಾಲ್ಕು ಷೋ ಆದ ಮೇಲೆ ಬೇರೆ ಸಿನಿಮಾ ಹಾಕಿಕೊಳ್ಳಲಿ. ಆದರೆ ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ತೊಂದರೆ ಕೊಡಬೇಡಿ ಎಂದು ತಿಳಿಸಿದೆ. ಕಾಶ್ಮೀರ್‌ ಫೈಲ್‌ ಅನ್ನು ಬೆಳಿಗ್ಗೆ ಏಳು ಗಂಟೆಗೆ ಪ್ರದರ್ಶನ ಮಾಡಿಕೊಳ್ಳಲಿ. ಆದರೆ ಆದರೆ ಹತ್ತು ಗಂಟೆಯ ಷೋಗೆ ತೊಂದರೆ ಕೊಡಬೇಡಿ ಎಂದಿದ್ದೇನೆ” ಎಂದರು.

“ಪೂರ್ಣ ಪ್ರಮಾಣದಲ್ಲಿ ಅಲ್ಲವಾದರೂ ಒಂದೊಂದು ಪ್ರದರ್ಶನವನ್ನು ಕಡಿತಗೊಳಿಸಲು ಯತ್ನಿಸಿದರು. ಇನ್ನೂ ಒಂದು ವಾರ ಕಳೆದಿಲ್ಲ. ಆಗಲೇ ಸಿನಿಮಾ ತೆಗೆಯುವುದು ಸರಿಯಲ್ಲ ಎಂದೆ. ವಾರ ಕಳೆದ ಮೇಲೆ ಒಂದು ಊರಲ್ಲಿ ಎರಡು ಚಿತ್ರಮಂದಿರದಲ್ಲಿ ಜೇಮ್ಸ್‌ ಇದ್ದರೆ, ಒಂದು ಚಿತ್ರಮಂದಿರವನ್ನು ಬಿಟ್ಟುಕೊಡಲಾಗುವುದು. ಆದರೆ ಅಭಿಮಾನಿಗಳು ನೋಡುತ್ತಿರುವಾಗ ತೆರವು ಸರಿಯಲ್ಲ ಎಂಬುದಷ್ಟೇ ನಮ್ಮ ಆಕ್ಷೇಪ” ಎಂದು ಸ್ಪಷ್ಟಪಡಿಸಿದರು.

‘ಜೇಮ್ಸ್‌’ಗೆ ಸಿನಿಮಾ ಷೋ ಕಡಿತಗೊಳಿಸಿ, ಕಾಶ್ಮೀರ್‌ ಫೈಲ್ಸ್‌ಗೆ ತೋರಿಸುವಂತೆ ಬಿಜೆಪಿ ಶಾಸಕರು ಒತ್ತಡ ಹೇರುತ್ತಿರುವುದು ನಿಜವೇ ಎಂದು ಕೇಳಿದಾಗ, “ಒಂದು ಷೋಗೆ ಅವಕಾಶ ಕೋರಿದ್ದು ಚಿತ್ರಮಂದಿರದವರು. ಅವರಿಗೆ ಯಾರು ಒತ್ತಡ ಹಾಕುತ್ತಿದ್ದಾರೋ ಗೊತ್ತಿಲ್ಲ. ಶಾಸಕರು ಹೇಳಿದ್ದಾರೋ, ಮತ್ತ್ಯಾರೋ ಹೇಳುತ್ತಿದ್ದಾರೋ ಗೊತ್ತಿಲ್ಲ. ಅವರು ಸಿನಿಮಾ ಫ್ರೀ ತೋರಿಸ್ತಾರಂತೆ, ಅನೌನ್ಸ್‌ ಮಾಡಿದ್ದಾರಂತೆ  ಎಂದು ಚಿತ್ರಮಂದಿರದವರು ನನ್ನ ಬಳಿ ಹೇಳಿದರು. ಫ್ರೀ ತೋರಿಸೋ ಸಿನಿಮಾವನ್ನು ಬೆಳಿಗ್ಗೆ ಹಾಕಿದರೇನೂ ರಾತ್ರಿ ಹಾಕಿದರೇನು? ಜೇಮ್ಸ್‌ ಷೋಗೆ ತೊಂದರೆ ಕೊಡಬೇಡಿ ಎಂದು ತಿಳಿಸಿರುವೆ” ಎಂದು ಹೇಳಿದರು.

“ಅದು ಒಂದೂವರೆ ತಾಸು ಇರುವ ಸಿನಿಮಾ. ಬೆಳಿಗ್ಗೆ ಎಂಟು ಗಂಟೆಗೆ ಹಾಕಿಕೊಳ್ಳಲಿ. ಹತ್ತೂವರೆಗೆ ಜೇಮ್ಸ್ ಪ್ರದರ್ಶನವಾಗಲಿ. ಹಾಗೆಯೇ ‘ಆರ್‌ಆರ್‌ಆರ್‌‌’ ಬಂತು ಎಂದು ನಮ್ಮ ಸಿನಿಮಾ ತೆಗೆಯಬೇಡಿ ಎಂದೂ ಕೋರಿದ್ದೇನೆ. ಮಂಡ್ಯದಲ್ಲಿ ಐದು ಥೇಟರ್‌‌ ಇವೆ. ಹಾಗೆಂದು ಎಲ್ಲ ಥೇಟರ್‌‌ನಲ್ಲೂ ನಾವು ಸಿನಿಮಾ ಹಾಕಲ್ಲ. ಎರಡು ಉಳಿಸಿಕೊಳ್ಳುತ್ತೇವೆ ಅಷ್ಟೇ ಎಂದಿರುವೆ. ಕೆಲವರು ಸಹಕರಿಸುತ್ತಿದ್ದಾರೆ. ಮತ್ತೆ ಕೆಲವರು ಸಂಜೆ ವೇಳೆಗೆ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

“ಬೆಂಗಳೂರಿನಲ್ಲಿ ತೆಲುಗು ಏರಿಯಾಗಳಿವೆ. ಅಲ್ಲಿ ಒಂದು ವಾರ ನಮ್ಮ ಸಿನಿಮಾ ಹಾಕಿಕೊಟ್ಟಿದ್ದಾರೆ. ಆದರೆ ಕನ್ನಡಿಗರು ಹೆಚ್ಚಿರುವಲ್ಲಿ ನಮ್ಮ ಸಿನಿಮಾ ತೆಗೆಯಬೇಡಿ ಎಂದು ಹೇಳುತ್ತಿದ್ದೇನೆ. ಮಾಗಡಿ ರೋಡ್‌ನಲ್ಲಿ ವೀರೇಶ್‌, ಪ್ರಸನ್ನ ಚಿತ್ರಮಂದಿರದಲ್ಲಿ ಕನ್ನಡ ಸಿನಿಮಾಗಳನ್ನು ಹಾಕುತ್ತಾರೆ. ಅಂಜನ್‌ನಲ್ಲಿ ತೆಲುಗು ಹಾಕುತ್ತಾರೆ. ಆದರೆ ಪುನೀತ್ ಅವರ ಕೊನೆಯ ಸಿನಿಮಾವನ್ನು ಪ್ರದರ್ಶಿಸಬೇಕೆಂದು ಅಂಜನ್‌ನವರೇ ಮುಂದೆ ಬಂದು ಒಂದು ವಾರ ಜೇಮ್ಸ್ ಹಾಕಿದ್ದಾರೆ” ಎಂದು ಹೇಳಿದರು.

ಜೇಮ್ಸ್‌ ನಿರ್ಮಾಪಕರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದು ಏಕೆ?

ಚಿತ್ರಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನ ಕಡಿತಗೊಳಿಸಲು ಮುಂದಾಗಿರುವುದರಿಂದಲೇ ಜೇಮ್ಸ್ ನಿರ್ಮಾಪಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು ಎಂದು ವರದಿಗಳಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕಿಶೋರ್ ಪತ್ತಿಕೊಂಡ ಅವರು ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದರು.

“ಜೇಮ್ಸ್‌ ಸಿನಿಮಾ ನೋಡಲು ಬರುವಂತೆ ಆಹ್ವಾನ ನೀಡುವುದಕ್ಕಾಗಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೆ. ನಿಮಗಾಗಿ ಒಂದು ಷೋ ಅರೆಂಜ್‌ ಮಾಡುತ್ತೇವೆ ಎಂದು ಅವರಿಗೆ ತಿಳಿಸಿದೆ. ಇದಕ್ಕಾಗಿ ಅವರನ್ನು ಭೇಟಿಯಾಗಿದ್ದಷ್ಟೇ. ನಮ್ಮ ಕೋರಿಕೆಯನ್ನು ಸ್ವೀಕರಿಸಿದ ಸಿದ್ದರಾಮಯ್ಯನವರು, ನಿರಂತರವಾಗಿ ಕಾರ್ಯಕ್ರಮಗಳಿವೆ. ಎರಡು ಮೂರು ದಿನಗಳೊಳಗೆ ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ. ಖಂಡಿತ ಸಿನಿಮಾ ನೋಡುತ್ತೇನೆ ಎಂದಿದ್ದಾರೆ” ಎಂದು ಕಿಶೋರ್‌ ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...