Homeಕರ್ನಾಟಕEXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ:...

EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

- Advertisement -
- Advertisement -

ಕನ್ನಡಿಗರ ಪ್ರೀತಿಯ ‘ಅಪ್ಪು’, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ತೆರೆ ಕಂಡು ಇನ್ನೂ ಒಂದು ವಾರವಾಗಿಲ್ಲ, ಆದರೆ ‘ಕಾಣದ ಕೈಗಳು’ ಜೇಮ್ಸ್‌ ಸಿನಿಮಾ ಪ್ರದರ್ಶನವನ್ನು ಕಡಿತಗೊಳಿಸಿ, ‘ಕಾಶ್ಮೀರ್‌ ಫೈಲ್ಸ್‌’ ತೋರಿಸಲು ಒತ್ತಡ ಹೇರುತ್ತಿರುವ ಸಂಗತಿ ಬಯಲಾಗಿದೆ.

‘ಜೇಮ್ಸ್‌’ ಸಿನಿಮಾ ನಿರ್ಮಾಪಕ ಹಾಗೂ ಹಂಚಿಕೆದಾರರೂ ಆಗಿರುವ ಕಿಶೋರ್ ಪತ್ತಿಕೊಂಡ ಅವರ ಮೇಲೆ ಒತ್ತಡ ತಂದು ಜೇಮ್ಸ್‌ ಸಿನಿಮಾ ಷೋಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಇದೇ ವೇಳೆ ಕಿಶೋರ್‌ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದಕ್ಕೂ ಸಂಬಂಧ ಕಲ್ಪಿಸಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಈ ಸಂಬಂಧ ‘ನಾನುಗೌರಿ.ಕಾಂ’ ನಿರ್ಮಾಪಕ ಕಿಶೋರ್‌ ಪತ್ತಿಕೊಂಡ ಅವರನ್ನು ಸಂಪರ್ಕಿಸಿದ್ದು, ಜೇಮ್ಸ್‌ ಷೋ ಕಡಿತಗೊಳಿಸಲು ಒತ್ತಡಗಳು ಬರುತ್ತಿರುವುದನ್ನು ಉಲ್ಲೇಖಿಸಿದರು.

“ಬಹಳಷ್ಟು ಕಡೆ ಮಾರ್ನಿಂಗ್ ಷೋ, ಸೆಕೆಂಡ್ ಷೋ ತೆಗೆದು ಬೇರೆ ಸಿನಿಮಾ ಹಾಕಲು ಹೋದರು. ನಾನು ಅದನ್ನು ವಿರೋಧಿಸಿದೆ. ನಮ್ಮ ಸಿನಿಮಾ ಚೆನ್ನಾಗಿದೆ. ಪುನೀತ್ ಅವರ ಕೊನೆಯ ಸಿನಿಮಾವನ್ನು ಕನ್ನಡಿಗರು ನೋಡುತ್ತಿದ್ದಾರೆ ಎಂದೆ. ಅದಕ್ಕೆ ಚಿತ್ರಮಂದಿರದವರು- ‘ಇಲ್ಲ ಸರ್‌, ಅವರು ಹೇಳ್ತಾರೆ, ಇವರು ಹೇಳ್ತಾರೆ, ತೆರಿಗೆ ವಿನಾಯಿತಿ ನೀಡಿದ್ದೇವೆ ಹಾಕಿ ಅನ್ನುತ್ತಿದ್ದಾರೆ- ಅಂದರು. ನಾನು ಒಪ್ಪಲಿಲ್ಲ. ನಮ್ಮ ಸಿನಿಮಾದ ನಾಲ್ಕು ಷೋ ಆದ ಮೇಲೆ ಬೇರೆ ಸಿನಿಮಾ ಹಾಕಿಕೊಳ್ಳಲಿ. ಆದರೆ ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ತೊಂದರೆ ಕೊಡಬೇಡಿ ಎಂದು ತಿಳಿಸಿದೆ. ಕಾಶ್ಮೀರ್‌ ಫೈಲ್‌ ಅನ್ನು ಬೆಳಿಗ್ಗೆ ಏಳು ಗಂಟೆಗೆ ಪ್ರದರ್ಶನ ಮಾಡಿಕೊಳ್ಳಲಿ. ಆದರೆ ಆದರೆ ಹತ್ತು ಗಂಟೆಯ ಷೋಗೆ ತೊಂದರೆ ಕೊಡಬೇಡಿ ಎಂದಿದ್ದೇನೆ” ಎಂದರು.

“ಪೂರ್ಣ ಪ್ರಮಾಣದಲ್ಲಿ ಅಲ್ಲವಾದರೂ ಒಂದೊಂದು ಪ್ರದರ್ಶನವನ್ನು ಕಡಿತಗೊಳಿಸಲು ಯತ್ನಿಸಿದರು. ಇನ್ನೂ ಒಂದು ವಾರ ಕಳೆದಿಲ್ಲ. ಆಗಲೇ ಸಿನಿಮಾ ತೆಗೆಯುವುದು ಸರಿಯಲ್ಲ ಎಂದೆ. ವಾರ ಕಳೆದ ಮೇಲೆ ಒಂದು ಊರಲ್ಲಿ ಎರಡು ಚಿತ್ರಮಂದಿರದಲ್ಲಿ ಜೇಮ್ಸ್‌ ಇದ್ದರೆ, ಒಂದು ಚಿತ್ರಮಂದಿರವನ್ನು ಬಿಟ್ಟುಕೊಡಲಾಗುವುದು. ಆದರೆ ಅಭಿಮಾನಿಗಳು ನೋಡುತ್ತಿರುವಾಗ ತೆರವು ಸರಿಯಲ್ಲ ಎಂಬುದಷ್ಟೇ ನಮ್ಮ ಆಕ್ಷೇಪ” ಎಂದು ಸ್ಪಷ್ಟಪಡಿಸಿದರು.

‘ಜೇಮ್ಸ್‌’ಗೆ ಸಿನಿಮಾ ಷೋ ಕಡಿತಗೊಳಿಸಿ, ಕಾಶ್ಮೀರ್‌ ಫೈಲ್ಸ್‌ಗೆ ತೋರಿಸುವಂತೆ ಬಿಜೆಪಿ ಶಾಸಕರು ಒತ್ತಡ ಹೇರುತ್ತಿರುವುದು ನಿಜವೇ ಎಂದು ಕೇಳಿದಾಗ, “ಒಂದು ಷೋಗೆ ಅವಕಾಶ ಕೋರಿದ್ದು ಚಿತ್ರಮಂದಿರದವರು. ಅವರಿಗೆ ಯಾರು ಒತ್ತಡ ಹಾಕುತ್ತಿದ್ದಾರೋ ಗೊತ್ತಿಲ್ಲ. ಶಾಸಕರು ಹೇಳಿದ್ದಾರೋ, ಮತ್ತ್ಯಾರೋ ಹೇಳುತ್ತಿದ್ದಾರೋ ಗೊತ್ತಿಲ್ಲ. ಅವರು ಸಿನಿಮಾ ಫ್ರೀ ತೋರಿಸ್ತಾರಂತೆ, ಅನೌನ್ಸ್‌ ಮಾಡಿದ್ದಾರಂತೆ  ಎಂದು ಚಿತ್ರಮಂದಿರದವರು ನನ್ನ ಬಳಿ ಹೇಳಿದರು. ಫ್ರೀ ತೋರಿಸೋ ಸಿನಿಮಾವನ್ನು ಬೆಳಿಗ್ಗೆ ಹಾಕಿದರೇನೂ ರಾತ್ರಿ ಹಾಕಿದರೇನು? ಜೇಮ್ಸ್‌ ಷೋಗೆ ತೊಂದರೆ ಕೊಡಬೇಡಿ ಎಂದು ತಿಳಿಸಿರುವೆ” ಎಂದು ಹೇಳಿದರು.

“ಅದು ಒಂದೂವರೆ ತಾಸು ಇರುವ ಸಿನಿಮಾ. ಬೆಳಿಗ್ಗೆ ಎಂಟು ಗಂಟೆಗೆ ಹಾಕಿಕೊಳ್ಳಲಿ. ಹತ್ತೂವರೆಗೆ ಜೇಮ್ಸ್ ಪ್ರದರ್ಶನವಾಗಲಿ. ಹಾಗೆಯೇ ‘ಆರ್‌ಆರ್‌ಆರ್‌‌’ ಬಂತು ಎಂದು ನಮ್ಮ ಸಿನಿಮಾ ತೆಗೆಯಬೇಡಿ ಎಂದೂ ಕೋರಿದ್ದೇನೆ. ಮಂಡ್ಯದಲ್ಲಿ ಐದು ಥೇಟರ್‌‌ ಇವೆ. ಹಾಗೆಂದು ಎಲ್ಲ ಥೇಟರ್‌‌ನಲ್ಲೂ ನಾವು ಸಿನಿಮಾ ಹಾಕಲ್ಲ. ಎರಡು ಉಳಿಸಿಕೊಳ್ಳುತ್ತೇವೆ ಅಷ್ಟೇ ಎಂದಿರುವೆ. ಕೆಲವರು ಸಹಕರಿಸುತ್ತಿದ್ದಾರೆ. ಮತ್ತೆ ಕೆಲವರು ಸಂಜೆ ವೇಳೆಗೆ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

“ಬೆಂಗಳೂರಿನಲ್ಲಿ ತೆಲುಗು ಏರಿಯಾಗಳಿವೆ. ಅಲ್ಲಿ ಒಂದು ವಾರ ನಮ್ಮ ಸಿನಿಮಾ ಹಾಕಿಕೊಟ್ಟಿದ್ದಾರೆ. ಆದರೆ ಕನ್ನಡಿಗರು ಹೆಚ್ಚಿರುವಲ್ಲಿ ನಮ್ಮ ಸಿನಿಮಾ ತೆಗೆಯಬೇಡಿ ಎಂದು ಹೇಳುತ್ತಿದ್ದೇನೆ. ಮಾಗಡಿ ರೋಡ್‌ನಲ್ಲಿ ವೀರೇಶ್‌, ಪ್ರಸನ್ನ ಚಿತ್ರಮಂದಿರದಲ್ಲಿ ಕನ್ನಡ ಸಿನಿಮಾಗಳನ್ನು ಹಾಕುತ್ತಾರೆ. ಅಂಜನ್‌ನಲ್ಲಿ ತೆಲುಗು ಹಾಕುತ್ತಾರೆ. ಆದರೆ ಪುನೀತ್ ಅವರ ಕೊನೆಯ ಸಿನಿಮಾವನ್ನು ಪ್ರದರ್ಶಿಸಬೇಕೆಂದು ಅಂಜನ್‌ನವರೇ ಮುಂದೆ ಬಂದು ಒಂದು ವಾರ ಜೇಮ್ಸ್ ಹಾಕಿದ್ದಾರೆ” ಎಂದು ಹೇಳಿದರು.

ಜೇಮ್ಸ್‌ ನಿರ್ಮಾಪಕರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದು ಏಕೆ?

ಚಿತ್ರಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನ ಕಡಿತಗೊಳಿಸಲು ಮುಂದಾಗಿರುವುದರಿಂದಲೇ ಜೇಮ್ಸ್ ನಿರ್ಮಾಪಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು ಎಂದು ವರದಿಗಳಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕಿಶೋರ್ ಪತ್ತಿಕೊಂಡ ಅವರು ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದರು.

“ಜೇಮ್ಸ್‌ ಸಿನಿಮಾ ನೋಡಲು ಬರುವಂತೆ ಆಹ್ವಾನ ನೀಡುವುದಕ್ಕಾಗಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೆ. ನಿಮಗಾಗಿ ಒಂದು ಷೋ ಅರೆಂಜ್‌ ಮಾಡುತ್ತೇವೆ ಎಂದು ಅವರಿಗೆ ತಿಳಿಸಿದೆ. ಇದಕ್ಕಾಗಿ ಅವರನ್ನು ಭೇಟಿಯಾಗಿದ್ದಷ್ಟೇ. ನಮ್ಮ ಕೋರಿಕೆಯನ್ನು ಸ್ವೀಕರಿಸಿದ ಸಿದ್ದರಾಮಯ್ಯನವರು, ನಿರಂತರವಾಗಿ ಕಾರ್ಯಕ್ರಮಗಳಿವೆ. ಎರಡು ಮೂರು ದಿನಗಳೊಳಗೆ ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ. ಖಂಡಿತ ಸಿನಿಮಾ ನೋಡುತ್ತೇನೆ ಎಂದಿದ್ದಾರೆ” ಎಂದು ಕಿಶೋರ್‌ ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...