Homeಕರ್ನಾಟಕEXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ:...

EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

- Advertisement -
- Advertisement -

ಕನ್ನಡಿಗರ ಪ್ರೀತಿಯ ‘ಅಪ್ಪು’, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ತೆರೆ ಕಂಡು ಇನ್ನೂ ಒಂದು ವಾರವಾಗಿಲ್ಲ, ಆದರೆ ‘ಕಾಣದ ಕೈಗಳು’ ಜೇಮ್ಸ್‌ ಸಿನಿಮಾ ಪ್ರದರ್ಶನವನ್ನು ಕಡಿತಗೊಳಿಸಿ, ‘ಕಾಶ್ಮೀರ್‌ ಫೈಲ್ಸ್‌’ ತೋರಿಸಲು ಒತ್ತಡ ಹೇರುತ್ತಿರುವ ಸಂಗತಿ ಬಯಲಾಗಿದೆ.

‘ಜೇಮ್ಸ್‌’ ಸಿನಿಮಾ ನಿರ್ಮಾಪಕ ಹಾಗೂ ಹಂಚಿಕೆದಾರರೂ ಆಗಿರುವ ಕಿಶೋರ್ ಪತ್ತಿಕೊಂಡ ಅವರ ಮೇಲೆ ಒತ್ತಡ ತಂದು ಜೇಮ್ಸ್‌ ಸಿನಿಮಾ ಷೋಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಇದೇ ವೇಳೆ ಕಿಶೋರ್‌ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದಕ್ಕೂ ಸಂಬಂಧ ಕಲ್ಪಿಸಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಈ ಸಂಬಂಧ ‘ನಾನುಗೌರಿ.ಕಾಂ’ ನಿರ್ಮಾಪಕ ಕಿಶೋರ್‌ ಪತ್ತಿಕೊಂಡ ಅವರನ್ನು ಸಂಪರ್ಕಿಸಿದ್ದು, ಜೇಮ್ಸ್‌ ಷೋ ಕಡಿತಗೊಳಿಸಲು ಒತ್ತಡಗಳು ಬರುತ್ತಿರುವುದನ್ನು ಉಲ್ಲೇಖಿಸಿದರು.

“ಬಹಳಷ್ಟು ಕಡೆ ಮಾರ್ನಿಂಗ್ ಷೋ, ಸೆಕೆಂಡ್ ಷೋ ತೆಗೆದು ಬೇರೆ ಸಿನಿಮಾ ಹಾಕಲು ಹೋದರು. ನಾನು ಅದನ್ನು ವಿರೋಧಿಸಿದೆ. ನಮ್ಮ ಸಿನಿಮಾ ಚೆನ್ನಾಗಿದೆ. ಪುನೀತ್ ಅವರ ಕೊನೆಯ ಸಿನಿಮಾವನ್ನು ಕನ್ನಡಿಗರು ನೋಡುತ್ತಿದ್ದಾರೆ ಎಂದೆ. ಅದಕ್ಕೆ ಚಿತ್ರಮಂದಿರದವರು- ‘ಇಲ್ಲ ಸರ್‌, ಅವರು ಹೇಳ್ತಾರೆ, ಇವರು ಹೇಳ್ತಾರೆ, ತೆರಿಗೆ ವಿನಾಯಿತಿ ನೀಡಿದ್ದೇವೆ ಹಾಕಿ ಅನ್ನುತ್ತಿದ್ದಾರೆ- ಅಂದರು. ನಾನು ಒಪ್ಪಲಿಲ್ಲ. ನಮ್ಮ ಸಿನಿಮಾದ ನಾಲ್ಕು ಷೋ ಆದ ಮೇಲೆ ಬೇರೆ ಸಿನಿಮಾ ಹಾಕಿಕೊಳ್ಳಲಿ. ಆದರೆ ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ತೊಂದರೆ ಕೊಡಬೇಡಿ ಎಂದು ತಿಳಿಸಿದೆ. ಕಾಶ್ಮೀರ್‌ ಫೈಲ್‌ ಅನ್ನು ಬೆಳಿಗ್ಗೆ ಏಳು ಗಂಟೆಗೆ ಪ್ರದರ್ಶನ ಮಾಡಿಕೊಳ್ಳಲಿ. ಆದರೆ ಆದರೆ ಹತ್ತು ಗಂಟೆಯ ಷೋಗೆ ತೊಂದರೆ ಕೊಡಬೇಡಿ ಎಂದಿದ್ದೇನೆ” ಎಂದರು.

“ಪೂರ್ಣ ಪ್ರಮಾಣದಲ್ಲಿ ಅಲ್ಲವಾದರೂ ಒಂದೊಂದು ಪ್ರದರ್ಶನವನ್ನು ಕಡಿತಗೊಳಿಸಲು ಯತ್ನಿಸಿದರು. ಇನ್ನೂ ಒಂದು ವಾರ ಕಳೆದಿಲ್ಲ. ಆಗಲೇ ಸಿನಿಮಾ ತೆಗೆಯುವುದು ಸರಿಯಲ್ಲ ಎಂದೆ. ವಾರ ಕಳೆದ ಮೇಲೆ ಒಂದು ಊರಲ್ಲಿ ಎರಡು ಚಿತ್ರಮಂದಿರದಲ್ಲಿ ಜೇಮ್ಸ್‌ ಇದ್ದರೆ, ಒಂದು ಚಿತ್ರಮಂದಿರವನ್ನು ಬಿಟ್ಟುಕೊಡಲಾಗುವುದು. ಆದರೆ ಅಭಿಮಾನಿಗಳು ನೋಡುತ್ತಿರುವಾಗ ತೆರವು ಸರಿಯಲ್ಲ ಎಂಬುದಷ್ಟೇ ನಮ್ಮ ಆಕ್ಷೇಪ” ಎಂದು ಸ್ಪಷ್ಟಪಡಿಸಿದರು.

‘ಜೇಮ್ಸ್‌’ಗೆ ಸಿನಿಮಾ ಷೋ ಕಡಿತಗೊಳಿಸಿ, ಕಾಶ್ಮೀರ್‌ ಫೈಲ್ಸ್‌ಗೆ ತೋರಿಸುವಂತೆ ಬಿಜೆಪಿ ಶಾಸಕರು ಒತ್ತಡ ಹೇರುತ್ತಿರುವುದು ನಿಜವೇ ಎಂದು ಕೇಳಿದಾಗ, “ಒಂದು ಷೋಗೆ ಅವಕಾಶ ಕೋರಿದ್ದು ಚಿತ್ರಮಂದಿರದವರು. ಅವರಿಗೆ ಯಾರು ಒತ್ತಡ ಹಾಕುತ್ತಿದ್ದಾರೋ ಗೊತ್ತಿಲ್ಲ. ಶಾಸಕರು ಹೇಳಿದ್ದಾರೋ, ಮತ್ತ್ಯಾರೋ ಹೇಳುತ್ತಿದ್ದಾರೋ ಗೊತ್ತಿಲ್ಲ. ಅವರು ಸಿನಿಮಾ ಫ್ರೀ ತೋರಿಸ್ತಾರಂತೆ, ಅನೌನ್ಸ್‌ ಮಾಡಿದ್ದಾರಂತೆ  ಎಂದು ಚಿತ್ರಮಂದಿರದವರು ನನ್ನ ಬಳಿ ಹೇಳಿದರು. ಫ್ರೀ ತೋರಿಸೋ ಸಿನಿಮಾವನ್ನು ಬೆಳಿಗ್ಗೆ ಹಾಕಿದರೇನೂ ರಾತ್ರಿ ಹಾಕಿದರೇನು? ಜೇಮ್ಸ್‌ ಷೋಗೆ ತೊಂದರೆ ಕೊಡಬೇಡಿ ಎಂದು ತಿಳಿಸಿರುವೆ” ಎಂದು ಹೇಳಿದರು.

“ಅದು ಒಂದೂವರೆ ತಾಸು ಇರುವ ಸಿನಿಮಾ. ಬೆಳಿಗ್ಗೆ ಎಂಟು ಗಂಟೆಗೆ ಹಾಕಿಕೊಳ್ಳಲಿ. ಹತ್ತೂವರೆಗೆ ಜೇಮ್ಸ್ ಪ್ರದರ್ಶನವಾಗಲಿ. ಹಾಗೆಯೇ ‘ಆರ್‌ಆರ್‌ಆರ್‌‌’ ಬಂತು ಎಂದು ನಮ್ಮ ಸಿನಿಮಾ ತೆಗೆಯಬೇಡಿ ಎಂದೂ ಕೋರಿದ್ದೇನೆ. ಮಂಡ್ಯದಲ್ಲಿ ಐದು ಥೇಟರ್‌‌ ಇವೆ. ಹಾಗೆಂದು ಎಲ್ಲ ಥೇಟರ್‌‌ನಲ್ಲೂ ನಾವು ಸಿನಿಮಾ ಹಾಕಲ್ಲ. ಎರಡು ಉಳಿಸಿಕೊಳ್ಳುತ್ತೇವೆ ಅಷ್ಟೇ ಎಂದಿರುವೆ. ಕೆಲವರು ಸಹಕರಿಸುತ್ತಿದ್ದಾರೆ. ಮತ್ತೆ ಕೆಲವರು ಸಂಜೆ ವೇಳೆಗೆ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

“ಬೆಂಗಳೂರಿನಲ್ಲಿ ತೆಲುಗು ಏರಿಯಾಗಳಿವೆ. ಅಲ್ಲಿ ಒಂದು ವಾರ ನಮ್ಮ ಸಿನಿಮಾ ಹಾಕಿಕೊಟ್ಟಿದ್ದಾರೆ. ಆದರೆ ಕನ್ನಡಿಗರು ಹೆಚ್ಚಿರುವಲ್ಲಿ ನಮ್ಮ ಸಿನಿಮಾ ತೆಗೆಯಬೇಡಿ ಎಂದು ಹೇಳುತ್ತಿದ್ದೇನೆ. ಮಾಗಡಿ ರೋಡ್‌ನಲ್ಲಿ ವೀರೇಶ್‌, ಪ್ರಸನ್ನ ಚಿತ್ರಮಂದಿರದಲ್ಲಿ ಕನ್ನಡ ಸಿನಿಮಾಗಳನ್ನು ಹಾಕುತ್ತಾರೆ. ಅಂಜನ್‌ನಲ್ಲಿ ತೆಲುಗು ಹಾಕುತ್ತಾರೆ. ಆದರೆ ಪುನೀತ್ ಅವರ ಕೊನೆಯ ಸಿನಿಮಾವನ್ನು ಪ್ರದರ್ಶಿಸಬೇಕೆಂದು ಅಂಜನ್‌ನವರೇ ಮುಂದೆ ಬಂದು ಒಂದು ವಾರ ಜೇಮ್ಸ್ ಹಾಕಿದ್ದಾರೆ” ಎಂದು ಹೇಳಿದರು.

ಜೇಮ್ಸ್‌ ನಿರ್ಮಾಪಕರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದು ಏಕೆ?

ಚಿತ್ರಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನ ಕಡಿತಗೊಳಿಸಲು ಮುಂದಾಗಿರುವುದರಿಂದಲೇ ಜೇಮ್ಸ್ ನಿರ್ಮಾಪಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು ಎಂದು ವರದಿಗಳಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕಿಶೋರ್ ಪತ್ತಿಕೊಂಡ ಅವರು ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದರು.

“ಜೇಮ್ಸ್‌ ಸಿನಿಮಾ ನೋಡಲು ಬರುವಂತೆ ಆಹ್ವಾನ ನೀಡುವುದಕ್ಕಾಗಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೆ. ನಿಮಗಾಗಿ ಒಂದು ಷೋ ಅರೆಂಜ್‌ ಮಾಡುತ್ತೇವೆ ಎಂದು ಅವರಿಗೆ ತಿಳಿಸಿದೆ. ಇದಕ್ಕಾಗಿ ಅವರನ್ನು ಭೇಟಿಯಾಗಿದ್ದಷ್ಟೇ. ನಮ್ಮ ಕೋರಿಕೆಯನ್ನು ಸ್ವೀಕರಿಸಿದ ಸಿದ್ದರಾಮಯ್ಯನವರು, ನಿರಂತರವಾಗಿ ಕಾರ್ಯಕ್ರಮಗಳಿವೆ. ಎರಡು ಮೂರು ದಿನಗಳೊಳಗೆ ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ. ಖಂಡಿತ ಸಿನಿಮಾ ನೋಡುತ್ತೇನೆ ಎಂದಿದ್ದಾರೆ” ಎಂದು ಕಿಶೋರ್‌ ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...