Homeಕರ್ನಾಟಕEXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ:...

EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

- Advertisement -
- Advertisement -

ಕನ್ನಡಿಗರ ಪ್ರೀತಿಯ ‘ಅಪ್ಪು’, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ತೆರೆ ಕಂಡು ಇನ್ನೂ ಒಂದು ವಾರವಾಗಿಲ್ಲ, ಆದರೆ ‘ಕಾಣದ ಕೈಗಳು’ ಜೇಮ್ಸ್‌ ಸಿನಿಮಾ ಪ್ರದರ್ಶನವನ್ನು ಕಡಿತಗೊಳಿಸಿ, ‘ಕಾಶ್ಮೀರ್‌ ಫೈಲ್ಸ್‌’ ತೋರಿಸಲು ಒತ್ತಡ ಹೇರುತ್ತಿರುವ ಸಂಗತಿ ಬಯಲಾಗಿದೆ.

‘ಜೇಮ್ಸ್‌’ ಸಿನಿಮಾ ನಿರ್ಮಾಪಕ ಹಾಗೂ ಹಂಚಿಕೆದಾರರೂ ಆಗಿರುವ ಕಿಶೋರ್ ಪತ್ತಿಕೊಂಡ ಅವರ ಮೇಲೆ ಒತ್ತಡ ತಂದು ಜೇಮ್ಸ್‌ ಸಿನಿಮಾ ಷೋಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಇದೇ ವೇಳೆ ಕಿಶೋರ್‌ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದಕ್ಕೂ ಸಂಬಂಧ ಕಲ್ಪಿಸಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಈ ಸಂಬಂಧ ‘ನಾನುಗೌರಿ.ಕಾಂ’ ನಿರ್ಮಾಪಕ ಕಿಶೋರ್‌ ಪತ್ತಿಕೊಂಡ ಅವರನ್ನು ಸಂಪರ್ಕಿಸಿದ್ದು, ಜೇಮ್ಸ್‌ ಷೋ ಕಡಿತಗೊಳಿಸಲು ಒತ್ತಡಗಳು ಬರುತ್ತಿರುವುದನ್ನು ಉಲ್ಲೇಖಿಸಿದರು.

“ಬಹಳಷ್ಟು ಕಡೆ ಮಾರ್ನಿಂಗ್ ಷೋ, ಸೆಕೆಂಡ್ ಷೋ ತೆಗೆದು ಬೇರೆ ಸಿನಿಮಾ ಹಾಕಲು ಹೋದರು. ನಾನು ಅದನ್ನು ವಿರೋಧಿಸಿದೆ. ನಮ್ಮ ಸಿನಿಮಾ ಚೆನ್ನಾಗಿದೆ. ಪುನೀತ್ ಅವರ ಕೊನೆಯ ಸಿನಿಮಾವನ್ನು ಕನ್ನಡಿಗರು ನೋಡುತ್ತಿದ್ದಾರೆ ಎಂದೆ. ಅದಕ್ಕೆ ಚಿತ್ರಮಂದಿರದವರು- ‘ಇಲ್ಲ ಸರ್‌, ಅವರು ಹೇಳ್ತಾರೆ, ಇವರು ಹೇಳ್ತಾರೆ, ತೆರಿಗೆ ವಿನಾಯಿತಿ ನೀಡಿದ್ದೇವೆ ಹಾಕಿ ಅನ್ನುತ್ತಿದ್ದಾರೆ- ಅಂದರು. ನಾನು ಒಪ್ಪಲಿಲ್ಲ. ನಮ್ಮ ಸಿನಿಮಾದ ನಾಲ್ಕು ಷೋ ಆದ ಮೇಲೆ ಬೇರೆ ಸಿನಿಮಾ ಹಾಕಿಕೊಳ್ಳಲಿ. ಆದರೆ ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ತೊಂದರೆ ಕೊಡಬೇಡಿ ಎಂದು ತಿಳಿಸಿದೆ. ಕಾಶ್ಮೀರ್‌ ಫೈಲ್‌ ಅನ್ನು ಬೆಳಿಗ್ಗೆ ಏಳು ಗಂಟೆಗೆ ಪ್ರದರ್ಶನ ಮಾಡಿಕೊಳ್ಳಲಿ. ಆದರೆ ಆದರೆ ಹತ್ತು ಗಂಟೆಯ ಷೋಗೆ ತೊಂದರೆ ಕೊಡಬೇಡಿ ಎಂದಿದ್ದೇನೆ” ಎಂದರು.

“ಪೂರ್ಣ ಪ್ರಮಾಣದಲ್ಲಿ ಅಲ್ಲವಾದರೂ ಒಂದೊಂದು ಪ್ರದರ್ಶನವನ್ನು ಕಡಿತಗೊಳಿಸಲು ಯತ್ನಿಸಿದರು. ಇನ್ನೂ ಒಂದು ವಾರ ಕಳೆದಿಲ್ಲ. ಆಗಲೇ ಸಿನಿಮಾ ತೆಗೆಯುವುದು ಸರಿಯಲ್ಲ ಎಂದೆ. ವಾರ ಕಳೆದ ಮೇಲೆ ಒಂದು ಊರಲ್ಲಿ ಎರಡು ಚಿತ್ರಮಂದಿರದಲ್ಲಿ ಜೇಮ್ಸ್‌ ಇದ್ದರೆ, ಒಂದು ಚಿತ್ರಮಂದಿರವನ್ನು ಬಿಟ್ಟುಕೊಡಲಾಗುವುದು. ಆದರೆ ಅಭಿಮಾನಿಗಳು ನೋಡುತ್ತಿರುವಾಗ ತೆರವು ಸರಿಯಲ್ಲ ಎಂಬುದಷ್ಟೇ ನಮ್ಮ ಆಕ್ಷೇಪ” ಎಂದು ಸ್ಪಷ್ಟಪಡಿಸಿದರು.

‘ಜೇಮ್ಸ್‌’ಗೆ ಸಿನಿಮಾ ಷೋ ಕಡಿತಗೊಳಿಸಿ, ಕಾಶ್ಮೀರ್‌ ಫೈಲ್ಸ್‌ಗೆ ತೋರಿಸುವಂತೆ ಬಿಜೆಪಿ ಶಾಸಕರು ಒತ್ತಡ ಹೇರುತ್ತಿರುವುದು ನಿಜವೇ ಎಂದು ಕೇಳಿದಾಗ, “ಒಂದು ಷೋಗೆ ಅವಕಾಶ ಕೋರಿದ್ದು ಚಿತ್ರಮಂದಿರದವರು. ಅವರಿಗೆ ಯಾರು ಒತ್ತಡ ಹಾಕುತ್ತಿದ್ದಾರೋ ಗೊತ್ತಿಲ್ಲ. ಶಾಸಕರು ಹೇಳಿದ್ದಾರೋ, ಮತ್ತ್ಯಾರೋ ಹೇಳುತ್ತಿದ್ದಾರೋ ಗೊತ್ತಿಲ್ಲ. ಅವರು ಸಿನಿಮಾ ಫ್ರೀ ತೋರಿಸ್ತಾರಂತೆ, ಅನೌನ್ಸ್‌ ಮಾಡಿದ್ದಾರಂತೆ  ಎಂದು ಚಿತ್ರಮಂದಿರದವರು ನನ್ನ ಬಳಿ ಹೇಳಿದರು. ಫ್ರೀ ತೋರಿಸೋ ಸಿನಿಮಾವನ್ನು ಬೆಳಿಗ್ಗೆ ಹಾಕಿದರೇನೂ ರಾತ್ರಿ ಹಾಕಿದರೇನು? ಜೇಮ್ಸ್‌ ಷೋಗೆ ತೊಂದರೆ ಕೊಡಬೇಡಿ ಎಂದು ತಿಳಿಸಿರುವೆ” ಎಂದು ಹೇಳಿದರು.

“ಅದು ಒಂದೂವರೆ ತಾಸು ಇರುವ ಸಿನಿಮಾ. ಬೆಳಿಗ್ಗೆ ಎಂಟು ಗಂಟೆಗೆ ಹಾಕಿಕೊಳ್ಳಲಿ. ಹತ್ತೂವರೆಗೆ ಜೇಮ್ಸ್ ಪ್ರದರ್ಶನವಾಗಲಿ. ಹಾಗೆಯೇ ‘ಆರ್‌ಆರ್‌ಆರ್‌‌’ ಬಂತು ಎಂದು ನಮ್ಮ ಸಿನಿಮಾ ತೆಗೆಯಬೇಡಿ ಎಂದೂ ಕೋರಿದ್ದೇನೆ. ಮಂಡ್ಯದಲ್ಲಿ ಐದು ಥೇಟರ್‌‌ ಇವೆ. ಹಾಗೆಂದು ಎಲ್ಲ ಥೇಟರ್‌‌ನಲ್ಲೂ ನಾವು ಸಿನಿಮಾ ಹಾಕಲ್ಲ. ಎರಡು ಉಳಿಸಿಕೊಳ್ಳುತ್ತೇವೆ ಅಷ್ಟೇ ಎಂದಿರುವೆ. ಕೆಲವರು ಸಹಕರಿಸುತ್ತಿದ್ದಾರೆ. ಮತ್ತೆ ಕೆಲವರು ಸಂಜೆ ವೇಳೆಗೆ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

“ಬೆಂಗಳೂರಿನಲ್ಲಿ ತೆಲುಗು ಏರಿಯಾಗಳಿವೆ. ಅಲ್ಲಿ ಒಂದು ವಾರ ನಮ್ಮ ಸಿನಿಮಾ ಹಾಕಿಕೊಟ್ಟಿದ್ದಾರೆ. ಆದರೆ ಕನ್ನಡಿಗರು ಹೆಚ್ಚಿರುವಲ್ಲಿ ನಮ್ಮ ಸಿನಿಮಾ ತೆಗೆಯಬೇಡಿ ಎಂದು ಹೇಳುತ್ತಿದ್ದೇನೆ. ಮಾಗಡಿ ರೋಡ್‌ನಲ್ಲಿ ವೀರೇಶ್‌, ಪ್ರಸನ್ನ ಚಿತ್ರಮಂದಿರದಲ್ಲಿ ಕನ್ನಡ ಸಿನಿಮಾಗಳನ್ನು ಹಾಕುತ್ತಾರೆ. ಅಂಜನ್‌ನಲ್ಲಿ ತೆಲುಗು ಹಾಕುತ್ತಾರೆ. ಆದರೆ ಪುನೀತ್ ಅವರ ಕೊನೆಯ ಸಿನಿಮಾವನ್ನು ಪ್ರದರ್ಶಿಸಬೇಕೆಂದು ಅಂಜನ್‌ನವರೇ ಮುಂದೆ ಬಂದು ಒಂದು ವಾರ ಜೇಮ್ಸ್ ಹಾಕಿದ್ದಾರೆ” ಎಂದು ಹೇಳಿದರು.

ಜೇಮ್ಸ್‌ ನಿರ್ಮಾಪಕರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದು ಏಕೆ?

ಚಿತ್ರಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನ ಕಡಿತಗೊಳಿಸಲು ಮುಂದಾಗಿರುವುದರಿಂದಲೇ ಜೇಮ್ಸ್ ನಿರ್ಮಾಪಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು ಎಂದು ವರದಿಗಳಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕಿಶೋರ್ ಪತ್ತಿಕೊಂಡ ಅವರು ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದರು.

“ಜೇಮ್ಸ್‌ ಸಿನಿಮಾ ನೋಡಲು ಬರುವಂತೆ ಆಹ್ವಾನ ನೀಡುವುದಕ್ಕಾಗಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೆ. ನಿಮಗಾಗಿ ಒಂದು ಷೋ ಅರೆಂಜ್‌ ಮಾಡುತ್ತೇವೆ ಎಂದು ಅವರಿಗೆ ತಿಳಿಸಿದೆ. ಇದಕ್ಕಾಗಿ ಅವರನ್ನು ಭೇಟಿಯಾಗಿದ್ದಷ್ಟೇ. ನಮ್ಮ ಕೋರಿಕೆಯನ್ನು ಸ್ವೀಕರಿಸಿದ ಸಿದ್ದರಾಮಯ್ಯನವರು, ನಿರಂತರವಾಗಿ ಕಾರ್ಯಕ್ರಮಗಳಿವೆ. ಎರಡು ಮೂರು ದಿನಗಳೊಳಗೆ ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ. ಖಂಡಿತ ಸಿನಿಮಾ ನೋಡುತ್ತೇನೆ ಎಂದಿದ್ದಾರೆ” ಎಂದು ಕಿಶೋರ್‌ ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...