Homeಕರ್ನಾಟಕಮತಾಂತರ ತಡೆಯಿರಿ, ಮೂಲವನ್ನು ಉಳಿಸಿ: ದಲಿತ ಮಠಾಧೀಶರಿಗೆ RSS ಮುಖ್ಯಸ್ಥರ ಸೂಚನೆ

ಮತಾಂತರ ತಡೆಯಿರಿ, ಮೂಲವನ್ನು ಉಳಿಸಿ: ದಲಿತ ಮಠಾಧೀಶರಿಗೆ RSS ಮುಖ್ಯಸ್ಥರ ಸೂಚನೆ

- Advertisement -
- Advertisement -

ಚಿತ್ರದುರ್ಗ: ಧಾರ್ಮಿಕ ಮತಾಂತರಗಳಿಂದಾಗಿ ಜನರು ತಮ್ಮ ಮೂಲದಿಂದ ದೂರವಾಗುತ್ತಾರೆ. ಹೀಗಾಗಿ ಮತಾಂತರವನ್ನು ತಡೆಯಲು ಪ್ರಯತ್ನಿಸಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ದಲಿತ ಮತ್ತು ಹಿಂದುಳಿದ ವರ್ಗಗಳ ಸಮುದಾಯಗಳ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ಹೇಳಿದ್ದಾರೆ.

“ಧಾರ್ಮಿಕ ಪರಿವರ್ತನೆಗಳು ಪ್ರತ್ಯೇಕತೆಗೆ ಕಾರಣವಾಗುತ್ತವೆ. ಜನರನ್ನು ತಮ್ಮ ಬೇರುಗಳು ಮತ್ತು ಮೂಲಗಳಿಂದ ದೂರವಾಗಿಸುತ್ತವೆ. ಆದ್ದರಿಂದ ನಾವು ಮತಾಂತರವನ್ನು ತಡೆಯಲು ಪ್ರಯತ್ನಿಸಬೇಕು” ಎಂದು ಭಾಗವತ್ ಅವರು ಮಂಗಳವಾರ ಸಂಜೆ ಕರ್ನಾಟಕದ ಚಿತ್ರದುರ್ಗದ ಮಾದಾರ ಚೆನ್ನಯ್ಯ ಮಠದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಚ್ಚಿದ ಬಾಗಲಿನ ಈ ಕಾರ್ಯಕ್ರಮದಲ್ಲಿ ಮಾದಾರ ಚೆನ್ನಯ್ಯ ಆಶ್ರಮದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

“ಜನರ ಮನಸ್ಸಿನಲ್ಲಿರುವ ಅಸಮಾನತೆಗಳನ್ನು ಹೋಗಲಾಡಿಸಲು ಹಿಂದೂ ಧರ್ಮ ಪ್ರಯತ್ನಿಸಬೇಕು” ಎಂದು ಭಾಗವತ್ ತಿಳಿಸಿದ್ದಾರೆ.

“ಹಿಂದೂ ಸಮಾಜದ ಮುಖ್ಯ ಸಮಸ್ಯೆಗಳಾದ ಅಸ್ಪೃಶ್ಯತೆ, ವಿಭಿನ್ನತೆ ಮತ್ತು ಅಸಮಾನತೆಗಳು ಮುಖ್ಯವಾಗಿ ಜನರ ಮನಸ್ಸಿನಲ್ಲಿವೆ. ಈ ಸಮಸ್ಯೆಗಳು ಧರ್ಮಗ್ರಂಥಗಳಲ್ಲಿ ಇಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಈ ಸಮಸ್ಯೆಗಳು ಹಲವು ತಲೆಮಾರುಗಳಿಂದ ನಮ್ಮ ಮನಸ್ಸಿನಲ್ಲಿ ಅಸ್ತಿತ್ವದಲ್ಲಿವೆ. ಅವುಗಳ ಪರಿಹರಿಸಲು ಸಹ ಸಮಯ ತೆಗೆದುಕೊಳ್ಳುತ್ತದೆ. ಅವುಗಳನ್ನು ನಮ್ಮ ಮನಸ್ಸಿನಿಂದ ತೆಗೆದುಹಾಕಲು ನಾವು ನಿಧಾನವಾಗಿ ಕೆಲಸ ಮಾಡಬೇಕು” ಎಂದಿದ್ದಾರೆ.

ಹಿಂದೂ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಅದು ಹುಟ್ಟಿ ಹಾಕಿರುವ ಅಸಮಾನತೆಯ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿರಂತರ ಮಾತನಾಡುತ್ತಿರುವ ವಿದ್ಯಮಾನದ ನಡುವೆ ದಲಿತ ಸಮುದಾಯದ ಧಾರ್ಮಿಕ ಮುಖಂಡರನ್ನು ಉದ್ದೇಶಿಸಿ ಭಾಗವತ್ ಭಾಷಣ ಮಾಡಿದ್ದಾರೆ.

ಸಂಘವು ರಾಜಕೀಯಕ್ಕಿಂತ ಧರ್ಮ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ ಎಂದು ಭಾಗವತ್ ಹೇಳಿದ್ದಾರೆ. ಧಾರ್ಮಿಕ ಮುಖಂಡರು ರಾಜಕಾರಣಿಗಳಿಗಿಂತ ಆರ್‌ಎಸ್‌ಎಸ್‌ಗೆ ಹೆಚ್ಚು ಹತ್ತಿರವಾಗಿದ್ದಾರೆ ಎಂದು ತಿಳಿಸಿದ್ದಾರೆ.

“ಸಮಾಜದಲ್ಲಿ, ಕೆಲವು ವಿಭಾಗಗಳು ಸಂಪರ್ಕದ ಕೊರತೆಯಿಂದಾಗಿ ಹಿಂದುಳಿದಿವೆ. ಹಿಂದೂ ಸಮಾಜದ ಎಲ್ಲಾ ವಿಭಾಗಗಳನ್ನು ಸಮಗ್ರವಾಗಿ ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ. ಆಗಾಗ್ಗೆ ನಡೆಯುವ ಇಂತಹ ಸಭೆಗಳು ಈ ಪ್ರಯತ್ನವನ್ನು ಸುಗಮಗೊಳಿಸುತ್ತದೆ. ಇದನ್ನೇ ನಾವು ಸೌಹಾರ್ದತೆ ಎಂದು ಕರೆಯುತ್ತೇವೆ. ಸಂಘವು ಈ ಕೆಲಸ ಮಾಡಲು ಪ್ರಯತ್ನಿಸುತ್ತಿದೆ” ಎಂದು ಭಾಗವತ್ ಹೇಳಿದ್ದಾರೆ ಎಂದು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಇದನ್ನೂ ಓದಿರಿ: ಸುಗ್ರೀವಾಜ್ಞೆ ಮೂಲಕ ವಿವಾದಾತ್ಮಕ ‘ಮತಾಂತರ ವಿರೋಧಿ ಮಸೂದೆ’ ಅಂಗೀಕರಿಸಿದ ರಾಜ್ಯ ಸರ್ಕಾರ

ಮತಾಂತರ ತಡೆ ಹುನ್ನಾರದ ಸುತ್ತ ‘ಆರ್‌ಎಸ್‌ಎಸ್‌ ಆಳ ಮತ್ತು ಅಗಲ’

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಬರೆದಿರುವ ‘ಆರ್‌ಎಸ್‌ಎಸ್‌ ಆಳ ಮತ್ತು ಅಗಲ’ ಕೃತಿಯಲ್ಲಿ ‘ಮತಾಂತರ ತಡೆ ಕಾಯ್ದೆ’ಯ ಹುನ್ನಾರದ ಕುರಿತು ವಿಶೇಷವಾಗಿ ಚರ್ಚಿಸಲಾಗಿದೆ. ಈಗ ಭಾರೀ ಚರ್ಚೆಯಲ್ಲಿರುವ ಈ ಕೃತಿಯು, “ಆರ್‌ಎಸ್‌ಎಸ್‌ ಹೇಗೆ ಜಾತಿ ವ್ಯವಸ್ಥೆಯನ್ನು ಪೋಷಿಸುತ್ತದೆ” ಎಂದು ವಿವರಿಸಿದೆ.

“ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣೆ ಹೆಸರಿನಲ್ಲಿ ಜಾರಿಗೊಳಿಸಬೇಕೆಂದಿರುವ ಕಾಯ್ದೆಯಲ್ಲಿ ಸರ್ಕಾರ ಏನೆಲ್ಲ ಅಡೆತಡೆಗಳನ್ನು ಹಾಕಿದೆ ಎಂದರೆ, ಮತಾಂತರವಾಗಲು ಬಯಸುವ ವ್ಯಕ್ತಿ ಏಳು ಕೆರೆ ನೀರು ಕುಡಿಯಬೇಕಾಗುತ್ತದೆ. ಮತಾಂತರವಾಗಲು ಬಯಸುವವರು ಕನಿಷ್ಠ 30 ದಿವಸಗಳ ಮುಂಚಿತವಾಗಿ ಜಿಲ್ಲಾ ದಂಡಾಧಿಕಾರಿಯವರಿಗೆ ‘ನಮೂನೆ-I’ರಲ್ಲಿ ಘೋಷಣೆ ಮಾಡಬೇಕಂತೆ. ಮತಾಂತರದ ವಿಧಿ-ವಿಧಾನಗಳನ್ನು ನೆರವೇರಿಸುವ ಧಾರ್ಮಿಕ ಮುಖಂಡರು ಕೂಡ ‘ನಮೂನೆ-II’ರಲ್ಲಿ ನೋಟೀಸ್ ನೀಡಬೇಕಂತೆ. ಆ ಮೇಲೆ ಆಕ್ಷೇಪಣೆಗಳನ್ನೂ ಆಹ್ವಾನಿಸುತ್ತಾರೆ. ಯಾರಾದರೂ ನೆಂಟರಿಷ್ಟರು, ನೆರೆಹೊರೆಯವರು, ಸಹೋದ್ಯೋಗಿಗಳು ಆಕ್ಷೇಪಣೆ ಸಲ್ಲಿಸಬಹುದಂತೆ! ಇದೇನು ವಿಚಿತ್ರ? ಬಲವಂತವಾಗಿ ಆಮಿಷ ತೋರಿಸಿ ಮತಾಂತರವಾಗಿದ್ದರೆ ಅದಕ್ಕೆ ಆಕ್ಷೇಪಣೆ ಸಲ್ಲಿಸಬೇಕಾದವರು, ಯಾರು ಮತಾಂತರಗೊಂಡಿರುವರೋ ಅವರು ಮಾತ್ರವೇ ಅಲ್ಲವೇ? ಈ ಸರ್ಕಾರ ಜನರ ಜೀವನದ ಜೊತೆ ಹಾಗೂ ಭಾರತದ ಸಂವಿಧಾನದ ಜೊತೆ ಚೆಲ್ಲಾಟವಾಡುತ್ತಿದೆಯೇ ಹೇಗೆ?” ಎಂದು ದೇವನೂರರು ತಮ್ಮ ಕೃತಿಯಲ್ಲಿ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ದಲಿತ ಮಠಗಳ ಒಂದರ ಕೆಲಸ ಅಲ್ಲಾ ಇದು ,ಎಲ್ಲಾ ಮಠಗಳ ಮಠಾದೀಶರ ಕೆಲಸ ,ಹಿಂದೆ ಮಠಾದೀಶರನ್ನ ಗೌರವದಿಂದ ಕಾಣುವ ರೀತಿ ಇತ್ತು ಕಾರಣ ಅವರು ಧರ್ಮ ರಕ್ಷಣೆಗೆ ಸದಾ ಸಿದ್ದರಾಗಿದ್ದರು,ಆದರೆ ಈಗ ಮಠಾದೀಶರ ಸ್ವ ಹಿತಾಸಕ್ತಿ ಕಾರಣ ಮಠಾದೀರನ್ನ ಜನರು ಸಹ ಏಕ ವಚನದಲ್ಲಿ ಮಾತಾಡೋ ಹಾಗೆ ಅವರ ಗುಣ ಸ್ವಭಾವ ಬೆಳೆದಿದೆ ,ಅದಕ್ಕೆ ಅವರೇ ಹೊಣೆಗಾರರು ಈ ರೀತಿಯ ಹೇಳಿಕೆಗಳಿಂದಾಗಿ

  2. It’s good and give and take your higher casts girls with dalits and take their boys for your girls can you do this and first?Find a permanent solution for castism in in India then all are possible.Only meeting and eating food with Dalits doesn’t work out

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...