Homeಕರ್ನಾಟಕಮತಾಂತರ ತಡೆಯಿರಿ, ಮೂಲವನ್ನು ಉಳಿಸಿ: ದಲಿತ ಮಠಾಧೀಶರಿಗೆ RSS ಮುಖ್ಯಸ್ಥರ ಸೂಚನೆ

ಮತಾಂತರ ತಡೆಯಿರಿ, ಮೂಲವನ್ನು ಉಳಿಸಿ: ದಲಿತ ಮಠಾಧೀಶರಿಗೆ RSS ಮುಖ್ಯಸ್ಥರ ಸೂಚನೆ

- Advertisement -
- Advertisement -

ಚಿತ್ರದುರ್ಗ: ಧಾರ್ಮಿಕ ಮತಾಂತರಗಳಿಂದಾಗಿ ಜನರು ತಮ್ಮ ಮೂಲದಿಂದ ದೂರವಾಗುತ್ತಾರೆ. ಹೀಗಾಗಿ ಮತಾಂತರವನ್ನು ತಡೆಯಲು ಪ್ರಯತ್ನಿಸಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ದಲಿತ ಮತ್ತು ಹಿಂದುಳಿದ ವರ್ಗಗಳ ಸಮುದಾಯಗಳ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ಹೇಳಿದ್ದಾರೆ.

“ಧಾರ್ಮಿಕ ಪರಿವರ್ತನೆಗಳು ಪ್ರತ್ಯೇಕತೆಗೆ ಕಾರಣವಾಗುತ್ತವೆ. ಜನರನ್ನು ತಮ್ಮ ಬೇರುಗಳು ಮತ್ತು ಮೂಲಗಳಿಂದ ದೂರವಾಗಿಸುತ್ತವೆ. ಆದ್ದರಿಂದ ನಾವು ಮತಾಂತರವನ್ನು ತಡೆಯಲು ಪ್ರಯತ್ನಿಸಬೇಕು” ಎಂದು ಭಾಗವತ್ ಅವರು ಮಂಗಳವಾರ ಸಂಜೆ ಕರ್ನಾಟಕದ ಚಿತ್ರದುರ್ಗದ ಮಾದಾರ ಚೆನ್ನಯ್ಯ ಮಠದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಚ್ಚಿದ ಬಾಗಲಿನ ಈ ಕಾರ್ಯಕ್ರಮದಲ್ಲಿ ಮಾದಾರ ಚೆನ್ನಯ್ಯ ಆಶ್ರಮದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

“ಜನರ ಮನಸ್ಸಿನಲ್ಲಿರುವ ಅಸಮಾನತೆಗಳನ್ನು ಹೋಗಲಾಡಿಸಲು ಹಿಂದೂ ಧರ್ಮ ಪ್ರಯತ್ನಿಸಬೇಕು” ಎಂದು ಭಾಗವತ್ ತಿಳಿಸಿದ್ದಾರೆ.

“ಹಿಂದೂ ಸಮಾಜದ ಮುಖ್ಯ ಸಮಸ್ಯೆಗಳಾದ ಅಸ್ಪೃಶ್ಯತೆ, ವಿಭಿನ್ನತೆ ಮತ್ತು ಅಸಮಾನತೆಗಳು ಮುಖ್ಯವಾಗಿ ಜನರ ಮನಸ್ಸಿನಲ್ಲಿವೆ. ಈ ಸಮಸ್ಯೆಗಳು ಧರ್ಮಗ್ರಂಥಗಳಲ್ಲಿ ಇಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಈ ಸಮಸ್ಯೆಗಳು ಹಲವು ತಲೆಮಾರುಗಳಿಂದ ನಮ್ಮ ಮನಸ್ಸಿನಲ್ಲಿ ಅಸ್ತಿತ್ವದಲ್ಲಿವೆ. ಅವುಗಳ ಪರಿಹರಿಸಲು ಸಹ ಸಮಯ ತೆಗೆದುಕೊಳ್ಳುತ್ತದೆ. ಅವುಗಳನ್ನು ನಮ್ಮ ಮನಸ್ಸಿನಿಂದ ತೆಗೆದುಹಾಕಲು ನಾವು ನಿಧಾನವಾಗಿ ಕೆಲಸ ಮಾಡಬೇಕು” ಎಂದಿದ್ದಾರೆ.

ಹಿಂದೂ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಅದು ಹುಟ್ಟಿ ಹಾಕಿರುವ ಅಸಮಾನತೆಯ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿರಂತರ ಮಾತನಾಡುತ್ತಿರುವ ವಿದ್ಯಮಾನದ ನಡುವೆ ದಲಿತ ಸಮುದಾಯದ ಧಾರ್ಮಿಕ ಮುಖಂಡರನ್ನು ಉದ್ದೇಶಿಸಿ ಭಾಗವತ್ ಭಾಷಣ ಮಾಡಿದ್ದಾರೆ.

ಸಂಘವು ರಾಜಕೀಯಕ್ಕಿಂತ ಧರ್ಮ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ ಎಂದು ಭಾಗವತ್ ಹೇಳಿದ್ದಾರೆ. ಧಾರ್ಮಿಕ ಮುಖಂಡರು ರಾಜಕಾರಣಿಗಳಿಗಿಂತ ಆರ್‌ಎಸ್‌ಎಸ್‌ಗೆ ಹೆಚ್ಚು ಹತ್ತಿರವಾಗಿದ್ದಾರೆ ಎಂದು ತಿಳಿಸಿದ್ದಾರೆ.

“ಸಮಾಜದಲ್ಲಿ, ಕೆಲವು ವಿಭಾಗಗಳು ಸಂಪರ್ಕದ ಕೊರತೆಯಿಂದಾಗಿ ಹಿಂದುಳಿದಿವೆ. ಹಿಂದೂ ಸಮಾಜದ ಎಲ್ಲಾ ವಿಭಾಗಗಳನ್ನು ಸಮಗ್ರವಾಗಿ ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ. ಆಗಾಗ್ಗೆ ನಡೆಯುವ ಇಂತಹ ಸಭೆಗಳು ಈ ಪ್ರಯತ್ನವನ್ನು ಸುಗಮಗೊಳಿಸುತ್ತದೆ. ಇದನ್ನೇ ನಾವು ಸೌಹಾರ್ದತೆ ಎಂದು ಕರೆಯುತ್ತೇವೆ. ಸಂಘವು ಈ ಕೆಲಸ ಮಾಡಲು ಪ್ರಯತ್ನಿಸುತ್ತಿದೆ” ಎಂದು ಭಾಗವತ್ ಹೇಳಿದ್ದಾರೆ ಎಂದು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಇದನ್ನೂ ಓದಿರಿ: ಸುಗ್ರೀವಾಜ್ಞೆ ಮೂಲಕ ವಿವಾದಾತ್ಮಕ ‘ಮತಾಂತರ ವಿರೋಧಿ ಮಸೂದೆ’ ಅಂಗೀಕರಿಸಿದ ರಾಜ್ಯ ಸರ್ಕಾರ

ಮತಾಂತರ ತಡೆ ಹುನ್ನಾರದ ಸುತ್ತ ‘ಆರ್‌ಎಸ್‌ಎಸ್‌ ಆಳ ಮತ್ತು ಅಗಲ’

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಬರೆದಿರುವ ‘ಆರ್‌ಎಸ್‌ಎಸ್‌ ಆಳ ಮತ್ತು ಅಗಲ’ ಕೃತಿಯಲ್ಲಿ ‘ಮತಾಂತರ ತಡೆ ಕಾಯ್ದೆ’ಯ ಹುನ್ನಾರದ ಕುರಿತು ವಿಶೇಷವಾಗಿ ಚರ್ಚಿಸಲಾಗಿದೆ. ಈಗ ಭಾರೀ ಚರ್ಚೆಯಲ್ಲಿರುವ ಈ ಕೃತಿಯು, “ಆರ್‌ಎಸ್‌ಎಸ್‌ ಹೇಗೆ ಜಾತಿ ವ್ಯವಸ್ಥೆಯನ್ನು ಪೋಷಿಸುತ್ತದೆ” ಎಂದು ವಿವರಿಸಿದೆ.

“ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣೆ ಹೆಸರಿನಲ್ಲಿ ಜಾರಿಗೊಳಿಸಬೇಕೆಂದಿರುವ ಕಾಯ್ದೆಯಲ್ಲಿ ಸರ್ಕಾರ ಏನೆಲ್ಲ ಅಡೆತಡೆಗಳನ್ನು ಹಾಕಿದೆ ಎಂದರೆ, ಮತಾಂತರವಾಗಲು ಬಯಸುವ ವ್ಯಕ್ತಿ ಏಳು ಕೆರೆ ನೀರು ಕುಡಿಯಬೇಕಾಗುತ್ತದೆ. ಮತಾಂತರವಾಗಲು ಬಯಸುವವರು ಕನಿಷ್ಠ 30 ದಿವಸಗಳ ಮುಂಚಿತವಾಗಿ ಜಿಲ್ಲಾ ದಂಡಾಧಿಕಾರಿಯವರಿಗೆ ‘ನಮೂನೆ-I’ರಲ್ಲಿ ಘೋಷಣೆ ಮಾಡಬೇಕಂತೆ. ಮತಾಂತರದ ವಿಧಿ-ವಿಧಾನಗಳನ್ನು ನೆರವೇರಿಸುವ ಧಾರ್ಮಿಕ ಮುಖಂಡರು ಕೂಡ ‘ನಮೂನೆ-II’ರಲ್ಲಿ ನೋಟೀಸ್ ನೀಡಬೇಕಂತೆ. ಆ ಮೇಲೆ ಆಕ್ಷೇಪಣೆಗಳನ್ನೂ ಆಹ್ವಾನಿಸುತ್ತಾರೆ. ಯಾರಾದರೂ ನೆಂಟರಿಷ್ಟರು, ನೆರೆಹೊರೆಯವರು, ಸಹೋದ್ಯೋಗಿಗಳು ಆಕ್ಷೇಪಣೆ ಸಲ್ಲಿಸಬಹುದಂತೆ! ಇದೇನು ವಿಚಿತ್ರ? ಬಲವಂತವಾಗಿ ಆಮಿಷ ತೋರಿಸಿ ಮತಾಂತರವಾಗಿದ್ದರೆ ಅದಕ್ಕೆ ಆಕ್ಷೇಪಣೆ ಸಲ್ಲಿಸಬೇಕಾದವರು, ಯಾರು ಮತಾಂತರಗೊಂಡಿರುವರೋ ಅವರು ಮಾತ್ರವೇ ಅಲ್ಲವೇ? ಈ ಸರ್ಕಾರ ಜನರ ಜೀವನದ ಜೊತೆ ಹಾಗೂ ಭಾರತದ ಸಂವಿಧಾನದ ಜೊತೆ ಚೆಲ್ಲಾಟವಾಡುತ್ತಿದೆಯೇ ಹೇಗೆ?” ಎಂದು ದೇವನೂರರು ತಮ್ಮ ಕೃತಿಯಲ್ಲಿ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ದಲಿತ ಮಠಗಳ ಒಂದರ ಕೆಲಸ ಅಲ್ಲಾ ಇದು ,ಎಲ್ಲಾ ಮಠಗಳ ಮಠಾದೀಶರ ಕೆಲಸ ,ಹಿಂದೆ ಮಠಾದೀಶರನ್ನ ಗೌರವದಿಂದ ಕಾಣುವ ರೀತಿ ಇತ್ತು ಕಾರಣ ಅವರು ಧರ್ಮ ರಕ್ಷಣೆಗೆ ಸದಾ ಸಿದ್ದರಾಗಿದ್ದರು,ಆದರೆ ಈಗ ಮಠಾದೀಶರ ಸ್ವ ಹಿತಾಸಕ್ತಿ ಕಾರಣ ಮಠಾದೀರನ್ನ ಜನರು ಸಹ ಏಕ ವಚನದಲ್ಲಿ ಮಾತಾಡೋ ಹಾಗೆ ಅವರ ಗುಣ ಸ್ವಭಾವ ಬೆಳೆದಿದೆ ,ಅದಕ್ಕೆ ಅವರೇ ಹೊಣೆಗಾರರು ಈ ರೀತಿಯ ಹೇಳಿಕೆಗಳಿಂದಾಗಿ

  2. It’s good and give and take your higher casts girls with dalits and take their boys for your girls can you do this and first?Find a permanent solution for castism in in India then all are possible.Only meeting and eating food with Dalits doesn’t work out

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...