Homeಕರ್ನಾಟಕಮತಾಂತರ ತಡೆಯಿರಿ, ಮೂಲವನ್ನು ಉಳಿಸಿ: ದಲಿತ ಮಠಾಧೀಶರಿಗೆ RSS ಮುಖ್ಯಸ್ಥರ ಸೂಚನೆ

ಮತಾಂತರ ತಡೆಯಿರಿ, ಮೂಲವನ್ನು ಉಳಿಸಿ: ದಲಿತ ಮಠಾಧೀಶರಿಗೆ RSS ಮುಖ್ಯಸ್ಥರ ಸೂಚನೆ

- Advertisement -
- Advertisement -

ಚಿತ್ರದುರ್ಗ: ಧಾರ್ಮಿಕ ಮತಾಂತರಗಳಿಂದಾಗಿ ಜನರು ತಮ್ಮ ಮೂಲದಿಂದ ದೂರವಾಗುತ್ತಾರೆ. ಹೀಗಾಗಿ ಮತಾಂತರವನ್ನು ತಡೆಯಲು ಪ್ರಯತ್ನಿಸಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ದಲಿತ ಮತ್ತು ಹಿಂದುಳಿದ ವರ್ಗಗಳ ಸಮುದಾಯಗಳ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ಹೇಳಿದ್ದಾರೆ.

“ಧಾರ್ಮಿಕ ಪರಿವರ್ತನೆಗಳು ಪ್ರತ್ಯೇಕತೆಗೆ ಕಾರಣವಾಗುತ್ತವೆ. ಜನರನ್ನು ತಮ್ಮ ಬೇರುಗಳು ಮತ್ತು ಮೂಲಗಳಿಂದ ದೂರವಾಗಿಸುತ್ತವೆ. ಆದ್ದರಿಂದ ನಾವು ಮತಾಂತರವನ್ನು ತಡೆಯಲು ಪ್ರಯತ್ನಿಸಬೇಕು” ಎಂದು ಭಾಗವತ್ ಅವರು ಮಂಗಳವಾರ ಸಂಜೆ ಕರ್ನಾಟಕದ ಚಿತ್ರದುರ್ಗದ ಮಾದಾರ ಚೆನ್ನಯ್ಯ ಮಠದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಚ್ಚಿದ ಬಾಗಲಿನ ಈ ಕಾರ್ಯಕ್ರಮದಲ್ಲಿ ಮಾದಾರ ಚೆನ್ನಯ್ಯ ಆಶ್ರಮದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

“ಜನರ ಮನಸ್ಸಿನಲ್ಲಿರುವ ಅಸಮಾನತೆಗಳನ್ನು ಹೋಗಲಾಡಿಸಲು ಹಿಂದೂ ಧರ್ಮ ಪ್ರಯತ್ನಿಸಬೇಕು” ಎಂದು ಭಾಗವತ್ ತಿಳಿಸಿದ್ದಾರೆ.

“ಹಿಂದೂ ಸಮಾಜದ ಮುಖ್ಯ ಸಮಸ್ಯೆಗಳಾದ ಅಸ್ಪೃಶ್ಯತೆ, ವಿಭಿನ್ನತೆ ಮತ್ತು ಅಸಮಾನತೆಗಳು ಮುಖ್ಯವಾಗಿ ಜನರ ಮನಸ್ಸಿನಲ್ಲಿವೆ. ಈ ಸಮಸ್ಯೆಗಳು ಧರ್ಮಗ್ರಂಥಗಳಲ್ಲಿ ಇಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಈ ಸಮಸ್ಯೆಗಳು ಹಲವು ತಲೆಮಾರುಗಳಿಂದ ನಮ್ಮ ಮನಸ್ಸಿನಲ್ಲಿ ಅಸ್ತಿತ್ವದಲ್ಲಿವೆ. ಅವುಗಳ ಪರಿಹರಿಸಲು ಸಹ ಸಮಯ ತೆಗೆದುಕೊಳ್ಳುತ್ತದೆ. ಅವುಗಳನ್ನು ನಮ್ಮ ಮನಸ್ಸಿನಿಂದ ತೆಗೆದುಹಾಕಲು ನಾವು ನಿಧಾನವಾಗಿ ಕೆಲಸ ಮಾಡಬೇಕು” ಎಂದಿದ್ದಾರೆ.

ಹಿಂದೂ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಅದು ಹುಟ್ಟಿ ಹಾಕಿರುವ ಅಸಮಾನತೆಯ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿರಂತರ ಮಾತನಾಡುತ್ತಿರುವ ವಿದ್ಯಮಾನದ ನಡುವೆ ದಲಿತ ಸಮುದಾಯದ ಧಾರ್ಮಿಕ ಮುಖಂಡರನ್ನು ಉದ್ದೇಶಿಸಿ ಭಾಗವತ್ ಭಾಷಣ ಮಾಡಿದ್ದಾರೆ.

ಸಂಘವು ರಾಜಕೀಯಕ್ಕಿಂತ ಧರ್ಮ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ ಎಂದು ಭಾಗವತ್ ಹೇಳಿದ್ದಾರೆ. ಧಾರ್ಮಿಕ ಮುಖಂಡರು ರಾಜಕಾರಣಿಗಳಿಗಿಂತ ಆರ್‌ಎಸ್‌ಎಸ್‌ಗೆ ಹೆಚ್ಚು ಹತ್ತಿರವಾಗಿದ್ದಾರೆ ಎಂದು ತಿಳಿಸಿದ್ದಾರೆ.

“ಸಮಾಜದಲ್ಲಿ, ಕೆಲವು ವಿಭಾಗಗಳು ಸಂಪರ್ಕದ ಕೊರತೆಯಿಂದಾಗಿ ಹಿಂದುಳಿದಿವೆ. ಹಿಂದೂ ಸಮಾಜದ ಎಲ್ಲಾ ವಿಭಾಗಗಳನ್ನು ಸಮಗ್ರವಾಗಿ ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ. ಆಗಾಗ್ಗೆ ನಡೆಯುವ ಇಂತಹ ಸಭೆಗಳು ಈ ಪ್ರಯತ್ನವನ್ನು ಸುಗಮಗೊಳಿಸುತ್ತದೆ. ಇದನ್ನೇ ನಾವು ಸೌಹಾರ್ದತೆ ಎಂದು ಕರೆಯುತ್ತೇವೆ. ಸಂಘವು ಈ ಕೆಲಸ ಮಾಡಲು ಪ್ರಯತ್ನಿಸುತ್ತಿದೆ” ಎಂದು ಭಾಗವತ್ ಹೇಳಿದ್ದಾರೆ ಎಂದು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಇದನ್ನೂ ಓದಿರಿ: ಸುಗ್ರೀವಾಜ್ಞೆ ಮೂಲಕ ವಿವಾದಾತ್ಮಕ ‘ಮತಾಂತರ ವಿರೋಧಿ ಮಸೂದೆ’ ಅಂಗೀಕರಿಸಿದ ರಾಜ್ಯ ಸರ್ಕಾರ

ಮತಾಂತರ ತಡೆ ಹುನ್ನಾರದ ಸುತ್ತ ‘ಆರ್‌ಎಸ್‌ಎಸ್‌ ಆಳ ಮತ್ತು ಅಗಲ’

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಬರೆದಿರುವ ‘ಆರ್‌ಎಸ್‌ಎಸ್‌ ಆಳ ಮತ್ತು ಅಗಲ’ ಕೃತಿಯಲ್ಲಿ ‘ಮತಾಂತರ ತಡೆ ಕಾಯ್ದೆ’ಯ ಹುನ್ನಾರದ ಕುರಿತು ವಿಶೇಷವಾಗಿ ಚರ್ಚಿಸಲಾಗಿದೆ. ಈಗ ಭಾರೀ ಚರ್ಚೆಯಲ್ಲಿರುವ ಈ ಕೃತಿಯು, “ಆರ್‌ಎಸ್‌ಎಸ್‌ ಹೇಗೆ ಜಾತಿ ವ್ಯವಸ್ಥೆಯನ್ನು ಪೋಷಿಸುತ್ತದೆ” ಎಂದು ವಿವರಿಸಿದೆ.

“ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣೆ ಹೆಸರಿನಲ್ಲಿ ಜಾರಿಗೊಳಿಸಬೇಕೆಂದಿರುವ ಕಾಯ್ದೆಯಲ್ಲಿ ಸರ್ಕಾರ ಏನೆಲ್ಲ ಅಡೆತಡೆಗಳನ್ನು ಹಾಕಿದೆ ಎಂದರೆ, ಮತಾಂತರವಾಗಲು ಬಯಸುವ ವ್ಯಕ್ತಿ ಏಳು ಕೆರೆ ನೀರು ಕುಡಿಯಬೇಕಾಗುತ್ತದೆ. ಮತಾಂತರವಾಗಲು ಬಯಸುವವರು ಕನಿಷ್ಠ 30 ದಿವಸಗಳ ಮುಂಚಿತವಾಗಿ ಜಿಲ್ಲಾ ದಂಡಾಧಿಕಾರಿಯವರಿಗೆ ‘ನಮೂನೆ-I’ರಲ್ಲಿ ಘೋಷಣೆ ಮಾಡಬೇಕಂತೆ. ಮತಾಂತರದ ವಿಧಿ-ವಿಧಾನಗಳನ್ನು ನೆರವೇರಿಸುವ ಧಾರ್ಮಿಕ ಮುಖಂಡರು ಕೂಡ ‘ನಮೂನೆ-II’ರಲ್ಲಿ ನೋಟೀಸ್ ನೀಡಬೇಕಂತೆ. ಆ ಮೇಲೆ ಆಕ್ಷೇಪಣೆಗಳನ್ನೂ ಆಹ್ವಾನಿಸುತ್ತಾರೆ. ಯಾರಾದರೂ ನೆಂಟರಿಷ್ಟರು, ನೆರೆಹೊರೆಯವರು, ಸಹೋದ್ಯೋಗಿಗಳು ಆಕ್ಷೇಪಣೆ ಸಲ್ಲಿಸಬಹುದಂತೆ! ಇದೇನು ವಿಚಿತ್ರ? ಬಲವಂತವಾಗಿ ಆಮಿಷ ತೋರಿಸಿ ಮತಾಂತರವಾಗಿದ್ದರೆ ಅದಕ್ಕೆ ಆಕ್ಷೇಪಣೆ ಸಲ್ಲಿಸಬೇಕಾದವರು, ಯಾರು ಮತಾಂತರಗೊಂಡಿರುವರೋ ಅವರು ಮಾತ್ರವೇ ಅಲ್ಲವೇ? ಈ ಸರ್ಕಾರ ಜನರ ಜೀವನದ ಜೊತೆ ಹಾಗೂ ಭಾರತದ ಸಂವಿಧಾನದ ಜೊತೆ ಚೆಲ್ಲಾಟವಾಡುತ್ತಿದೆಯೇ ಹೇಗೆ?” ಎಂದು ದೇವನೂರರು ತಮ್ಮ ಕೃತಿಯಲ್ಲಿ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ದಲಿತ ಮಠಗಳ ಒಂದರ ಕೆಲಸ ಅಲ್ಲಾ ಇದು ,ಎಲ್ಲಾ ಮಠಗಳ ಮಠಾದೀಶರ ಕೆಲಸ ,ಹಿಂದೆ ಮಠಾದೀಶರನ್ನ ಗೌರವದಿಂದ ಕಾಣುವ ರೀತಿ ಇತ್ತು ಕಾರಣ ಅವರು ಧರ್ಮ ರಕ್ಷಣೆಗೆ ಸದಾ ಸಿದ್ದರಾಗಿದ್ದರು,ಆದರೆ ಈಗ ಮಠಾದೀಶರ ಸ್ವ ಹಿತಾಸಕ್ತಿ ಕಾರಣ ಮಠಾದೀರನ್ನ ಜನರು ಸಹ ಏಕ ವಚನದಲ್ಲಿ ಮಾತಾಡೋ ಹಾಗೆ ಅವರ ಗುಣ ಸ್ವಭಾವ ಬೆಳೆದಿದೆ ,ಅದಕ್ಕೆ ಅವರೇ ಹೊಣೆಗಾರರು ಈ ರೀತಿಯ ಹೇಳಿಕೆಗಳಿಂದಾಗಿ

  2. It’s good and give and take your higher casts girls with dalits and take their boys for your girls can you do this and first?Find a permanent solution for castism in in India then all are possible.Only meeting and eating food with Dalits doesn’t work out

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...