Homeಕರ್ನಾಟಕಮತಾಂತರ ತಡೆಯಿರಿ, ಮೂಲವನ್ನು ಉಳಿಸಿ: ದಲಿತ ಮಠಾಧೀಶರಿಗೆ RSS ಮುಖ್ಯಸ್ಥರ ಸೂಚನೆ

ಮತಾಂತರ ತಡೆಯಿರಿ, ಮೂಲವನ್ನು ಉಳಿಸಿ: ದಲಿತ ಮಠಾಧೀಶರಿಗೆ RSS ಮುಖ್ಯಸ್ಥರ ಸೂಚನೆ

- Advertisement -
- Advertisement -

ಚಿತ್ರದುರ್ಗ: ಧಾರ್ಮಿಕ ಮತಾಂತರಗಳಿಂದಾಗಿ ಜನರು ತಮ್ಮ ಮೂಲದಿಂದ ದೂರವಾಗುತ್ತಾರೆ. ಹೀಗಾಗಿ ಮತಾಂತರವನ್ನು ತಡೆಯಲು ಪ್ರಯತ್ನಿಸಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ದಲಿತ ಮತ್ತು ಹಿಂದುಳಿದ ವರ್ಗಗಳ ಸಮುದಾಯಗಳ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ಹೇಳಿದ್ದಾರೆ.

“ಧಾರ್ಮಿಕ ಪರಿವರ್ತನೆಗಳು ಪ್ರತ್ಯೇಕತೆಗೆ ಕಾರಣವಾಗುತ್ತವೆ. ಜನರನ್ನು ತಮ್ಮ ಬೇರುಗಳು ಮತ್ತು ಮೂಲಗಳಿಂದ ದೂರವಾಗಿಸುತ್ತವೆ. ಆದ್ದರಿಂದ ನಾವು ಮತಾಂತರವನ್ನು ತಡೆಯಲು ಪ್ರಯತ್ನಿಸಬೇಕು” ಎಂದು ಭಾಗವತ್ ಅವರು ಮಂಗಳವಾರ ಸಂಜೆ ಕರ್ನಾಟಕದ ಚಿತ್ರದುರ್ಗದ ಮಾದಾರ ಚೆನ್ನಯ್ಯ ಮಠದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಚ್ಚಿದ ಬಾಗಲಿನ ಈ ಕಾರ್ಯಕ್ರಮದಲ್ಲಿ ಮಾದಾರ ಚೆನ್ನಯ್ಯ ಆಶ್ರಮದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

“ಜನರ ಮನಸ್ಸಿನಲ್ಲಿರುವ ಅಸಮಾನತೆಗಳನ್ನು ಹೋಗಲಾಡಿಸಲು ಹಿಂದೂ ಧರ್ಮ ಪ್ರಯತ್ನಿಸಬೇಕು” ಎಂದು ಭಾಗವತ್ ತಿಳಿಸಿದ್ದಾರೆ.

“ಹಿಂದೂ ಸಮಾಜದ ಮುಖ್ಯ ಸಮಸ್ಯೆಗಳಾದ ಅಸ್ಪೃಶ್ಯತೆ, ವಿಭಿನ್ನತೆ ಮತ್ತು ಅಸಮಾನತೆಗಳು ಮುಖ್ಯವಾಗಿ ಜನರ ಮನಸ್ಸಿನಲ್ಲಿವೆ. ಈ ಸಮಸ್ಯೆಗಳು ಧರ್ಮಗ್ರಂಥಗಳಲ್ಲಿ ಇಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಈ ಸಮಸ್ಯೆಗಳು ಹಲವು ತಲೆಮಾರುಗಳಿಂದ ನಮ್ಮ ಮನಸ್ಸಿನಲ್ಲಿ ಅಸ್ತಿತ್ವದಲ್ಲಿವೆ. ಅವುಗಳ ಪರಿಹರಿಸಲು ಸಹ ಸಮಯ ತೆಗೆದುಕೊಳ್ಳುತ್ತದೆ. ಅವುಗಳನ್ನು ನಮ್ಮ ಮನಸ್ಸಿನಿಂದ ತೆಗೆದುಹಾಕಲು ನಾವು ನಿಧಾನವಾಗಿ ಕೆಲಸ ಮಾಡಬೇಕು” ಎಂದಿದ್ದಾರೆ.

ಹಿಂದೂ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಅದು ಹುಟ್ಟಿ ಹಾಕಿರುವ ಅಸಮಾನತೆಯ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿರಂತರ ಮಾತನಾಡುತ್ತಿರುವ ವಿದ್ಯಮಾನದ ನಡುವೆ ದಲಿತ ಸಮುದಾಯದ ಧಾರ್ಮಿಕ ಮುಖಂಡರನ್ನು ಉದ್ದೇಶಿಸಿ ಭಾಗವತ್ ಭಾಷಣ ಮಾಡಿದ್ದಾರೆ.

ಸಂಘವು ರಾಜಕೀಯಕ್ಕಿಂತ ಧರ್ಮ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ ಎಂದು ಭಾಗವತ್ ಹೇಳಿದ್ದಾರೆ. ಧಾರ್ಮಿಕ ಮುಖಂಡರು ರಾಜಕಾರಣಿಗಳಿಗಿಂತ ಆರ್‌ಎಸ್‌ಎಸ್‌ಗೆ ಹೆಚ್ಚು ಹತ್ತಿರವಾಗಿದ್ದಾರೆ ಎಂದು ತಿಳಿಸಿದ್ದಾರೆ.

“ಸಮಾಜದಲ್ಲಿ, ಕೆಲವು ವಿಭಾಗಗಳು ಸಂಪರ್ಕದ ಕೊರತೆಯಿಂದಾಗಿ ಹಿಂದುಳಿದಿವೆ. ಹಿಂದೂ ಸಮಾಜದ ಎಲ್ಲಾ ವಿಭಾಗಗಳನ್ನು ಸಮಗ್ರವಾಗಿ ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ. ಆಗಾಗ್ಗೆ ನಡೆಯುವ ಇಂತಹ ಸಭೆಗಳು ಈ ಪ್ರಯತ್ನವನ್ನು ಸುಗಮಗೊಳಿಸುತ್ತದೆ. ಇದನ್ನೇ ನಾವು ಸೌಹಾರ್ದತೆ ಎಂದು ಕರೆಯುತ್ತೇವೆ. ಸಂಘವು ಈ ಕೆಲಸ ಮಾಡಲು ಪ್ರಯತ್ನಿಸುತ್ತಿದೆ” ಎಂದು ಭಾಗವತ್ ಹೇಳಿದ್ದಾರೆ ಎಂದು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಇದನ್ನೂ ಓದಿರಿ: ಸುಗ್ರೀವಾಜ್ಞೆ ಮೂಲಕ ವಿವಾದಾತ್ಮಕ ‘ಮತಾಂತರ ವಿರೋಧಿ ಮಸೂದೆ’ ಅಂಗೀಕರಿಸಿದ ರಾಜ್ಯ ಸರ್ಕಾರ

ಮತಾಂತರ ತಡೆ ಹುನ್ನಾರದ ಸುತ್ತ ‘ಆರ್‌ಎಸ್‌ಎಸ್‌ ಆಳ ಮತ್ತು ಅಗಲ’

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಬರೆದಿರುವ ‘ಆರ್‌ಎಸ್‌ಎಸ್‌ ಆಳ ಮತ್ತು ಅಗಲ’ ಕೃತಿಯಲ್ಲಿ ‘ಮತಾಂತರ ತಡೆ ಕಾಯ್ದೆ’ಯ ಹುನ್ನಾರದ ಕುರಿತು ವಿಶೇಷವಾಗಿ ಚರ್ಚಿಸಲಾಗಿದೆ. ಈಗ ಭಾರೀ ಚರ್ಚೆಯಲ್ಲಿರುವ ಈ ಕೃತಿಯು, “ಆರ್‌ಎಸ್‌ಎಸ್‌ ಹೇಗೆ ಜಾತಿ ವ್ಯವಸ್ಥೆಯನ್ನು ಪೋಷಿಸುತ್ತದೆ” ಎಂದು ವಿವರಿಸಿದೆ.

“ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣೆ ಹೆಸರಿನಲ್ಲಿ ಜಾರಿಗೊಳಿಸಬೇಕೆಂದಿರುವ ಕಾಯ್ದೆಯಲ್ಲಿ ಸರ್ಕಾರ ಏನೆಲ್ಲ ಅಡೆತಡೆಗಳನ್ನು ಹಾಕಿದೆ ಎಂದರೆ, ಮತಾಂತರವಾಗಲು ಬಯಸುವ ವ್ಯಕ್ತಿ ಏಳು ಕೆರೆ ನೀರು ಕುಡಿಯಬೇಕಾಗುತ್ತದೆ. ಮತಾಂತರವಾಗಲು ಬಯಸುವವರು ಕನಿಷ್ಠ 30 ದಿವಸಗಳ ಮುಂಚಿತವಾಗಿ ಜಿಲ್ಲಾ ದಂಡಾಧಿಕಾರಿಯವರಿಗೆ ‘ನಮೂನೆ-I’ರಲ್ಲಿ ಘೋಷಣೆ ಮಾಡಬೇಕಂತೆ. ಮತಾಂತರದ ವಿಧಿ-ವಿಧಾನಗಳನ್ನು ನೆರವೇರಿಸುವ ಧಾರ್ಮಿಕ ಮುಖಂಡರು ಕೂಡ ‘ನಮೂನೆ-II’ರಲ್ಲಿ ನೋಟೀಸ್ ನೀಡಬೇಕಂತೆ. ಆ ಮೇಲೆ ಆಕ್ಷೇಪಣೆಗಳನ್ನೂ ಆಹ್ವಾನಿಸುತ್ತಾರೆ. ಯಾರಾದರೂ ನೆಂಟರಿಷ್ಟರು, ನೆರೆಹೊರೆಯವರು, ಸಹೋದ್ಯೋಗಿಗಳು ಆಕ್ಷೇಪಣೆ ಸಲ್ಲಿಸಬಹುದಂತೆ! ಇದೇನು ವಿಚಿತ್ರ? ಬಲವಂತವಾಗಿ ಆಮಿಷ ತೋರಿಸಿ ಮತಾಂತರವಾಗಿದ್ದರೆ ಅದಕ್ಕೆ ಆಕ್ಷೇಪಣೆ ಸಲ್ಲಿಸಬೇಕಾದವರು, ಯಾರು ಮತಾಂತರಗೊಂಡಿರುವರೋ ಅವರು ಮಾತ್ರವೇ ಅಲ್ಲವೇ? ಈ ಸರ್ಕಾರ ಜನರ ಜೀವನದ ಜೊತೆ ಹಾಗೂ ಭಾರತದ ಸಂವಿಧಾನದ ಜೊತೆ ಚೆಲ್ಲಾಟವಾಡುತ್ತಿದೆಯೇ ಹೇಗೆ?” ಎಂದು ದೇವನೂರರು ತಮ್ಮ ಕೃತಿಯಲ್ಲಿ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ದಲಿತ ಮಠಗಳ ಒಂದರ ಕೆಲಸ ಅಲ್ಲಾ ಇದು ,ಎಲ್ಲಾ ಮಠಗಳ ಮಠಾದೀಶರ ಕೆಲಸ ,ಹಿಂದೆ ಮಠಾದೀಶರನ್ನ ಗೌರವದಿಂದ ಕಾಣುವ ರೀತಿ ಇತ್ತು ಕಾರಣ ಅವರು ಧರ್ಮ ರಕ್ಷಣೆಗೆ ಸದಾ ಸಿದ್ದರಾಗಿದ್ದರು,ಆದರೆ ಈಗ ಮಠಾದೀಶರ ಸ್ವ ಹಿತಾಸಕ್ತಿ ಕಾರಣ ಮಠಾದೀರನ್ನ ಜನರು ಸಹ ಏಕ ವಚನದಲ್ಲಿ ಮಾತಾಡೋ ಹಾಗೆ ಅವರ ಗುಣ ಸ್ವಭಾವ ಬೆಳೆದಿದೆ ,ಅದಕ್ಕೆ ಅವರೇ ಹೊಣೆಗಾರರು ಈ ರೀತಿಯ ಹೇಳಿಕೆಗಳಿಂದಾಗಿ

  2. It’s good and give and take your higher casts girls with dalits and take their boys for your girls can you do this and first?Find a permanent solution for castism in in India then all are possible.Only meeting and eating food with Dalits doesn’t work out

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...