Homeಕರ್ನಾಟಕಮತಾಂತರ ತಡೆಯಿರಿ, ಮೂಲವನ್ನು ಉಳಿಸಿ: ದಲಿತ ಮಠಾಧೀಶರಿಗೆ RSS ಮುಖ್ಯಸ್ಥರ ಸೂಚನೆ

ಮತಾಂತರ ತಡೆಯಿರಿ, ಮೂಲವನ್ನು ಉಳಿಸಿ: ದಲಿತ ಮಠಾಧೀಶರಿಗೆ RSS ಮುಖ್ಯಸ್ಥರ ಸೂಚನೆ

- Advertisement -
- Advertisement -

ಚಿತ್ರದುರ್ಗ: ಧಾರ್ಮಿಕ ಮತಾಂತರಗಳಿಂದಾಗಿ ಜನರು ತಮ್ಮ ಮೂಲದಿಂದ ದೂರವಾಗುತ್ತಾರೆ. ಹೀಗಾಗಿ ಮತಾಂತರವನ್ನು ತಡೆಯಲು ಪ್ರಯತ್ನಿಸಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ದಲಿತ ಮತ್ತು ಹಿಂದುಳಿದ ವರ್ಗಗಳ ಸಮುದಾಯಗಳ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ಹೇಳಿದ್ದಾರೆ.

“ಧಾರ್ಮಿಕ ಪರಿವರ್ತನೆಗಳು ಪ್ರತ್ಯೇಕತೆಗೆ ಕಾರಣವಾಗುತ್ತವೆ. ಜನರನ್ನು ತಮ್ಮ ಬೇರುಗಳು ಮತ್ತು ಮೂಲಗಳಿಂದ ದೂರವಾಗಿಸುತ್ತವೆ. ಆದ್ದರಿಂದ ನಾವು ಮತಾಂತರವನ್ನು ತಡೆಯಲು ಪ್ರಯತ್ನಿಸಬೇಕು” ಎಂದು ಭಾಗವತ್ ಅವರು ಮಂಗಳವಾರ ಸಂಜೆ ಕರ್ನಾಟಕದ ಚಿತ್ರದುರ್ಗದ ಮಾದಾರ ಚೆನ್ನಯ್ಯ ಮಠದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಚ್ಚಿದ ಬಾಗಲಿನ ಈ ಕಾರ್ಯಕ್ರಮದಲ್ಲಿ ಮಾದಾರ ಚೆನ್ನಯ್ಯ ಆಶ್ರಮದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.

“ಜನರ ಮನಸ್ಸಿನಲ್ಲಿರುವ ಅಸಮಾನತೆಗಳನ್ನು ಹೋಗಲಾಡಿಸಲು ಹಿಂದೂ ಧರ್ಮ ಪ್ರಯತ್ನಿಸಬೇಕು” ಎಂದು ಭಾಗವತ್ ತಿಳಿಸಿದ್ದಾರೆ.

“ಹಿಂದೂ ಸಮಾಜದ ಮುಖ್ಯ ಸಮಸ್ಯೆಗಳಾದ ಅಸ್ಪೃಶ್ಯತೆ, ವಿಭಿನ್ನತೆ ಮತ್ತು ಅಸಮಾನತೆಗಳು ಮುಖ್ಯವಾಗಿ ಜನರ ಮನಸ್ಸಿನಲ್ಲಿವೆ. ಈ ಸಮಸ್ಯೆಗಳು ಧರ್ಮಗ್ರಂಥಗಳಲ್ಲಿ ಇಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ.

“ಈ ಸಮಸ್ಯೆಗಳು ಹಲವು ತಲೆಮಾರುಗಳಿಂದ ನಮ್ಮ ಮನಸ್ಸಿನಲ್ಲಿ ಅಸ್ತಿತ್ವದಲ್ಲಿವೆ. ಅವುಗಳ ಪರಿಹರಿಸಲು ಸಹ ಸಮಯ ತೆಗೆದುಕೊಳ್ಳುತ್ತದೆ. ಅವುಗಳನ್ನು ನಮ್ಮ ಮನಸ್ಸಿನಿಂದ ತೆಗೆದುಹಾಕಲು ನಾವು ನಿಧಾನವಾಗಿ ಕೆಲಸ ಮಾಡಬೇಕು” ಎಂದಿದ್ದಾರೆ.

ಹಿಂದೂ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಅದು ಹುಟ್ಟಿ ಹಾಕಿರುವ ಅಸಮಾನತೆಯ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿರಂತರ ಮಾತನಾಡುತ್ತಿರುವ ವಿದ್ಯಮಾನದ ನಡುವೆ ದಲಿತ ಸಮುದಾಯದ ಧಾರ್ಮಿಕ ಮುಖಂಡರನ್ನು ಉದ್ದೇಶಿಸಿ ಭಾಗವತ್ ಭಾಷಣ ಮಾಡಿದ್ದಾರೆ.

ಸಂಘವು ರಾಜಕೀಯಕ್ಕಿಂತ ಧರ್ಮ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ ಎಂದು ಭಾಗವತ್ ಹೇಳಿದ್ದಾರೆ. ಧಾರ್ಮಿಕ ಮುಖಂಡರು ರಾಜಕಾರಣಿಗಳಿಗಿಂತ ಆರ್‌ಎಸ್‌ಎಸ್‌ಗೆ ಹೆಚ್ಚು ಹತ್ತಿರವಾಗಿದ್ದಾರೆ ಎಂದು ತಿಳಿಸಿದ್ದಾರೆ.

“ಸಮಾಜದಲ್ಲಿ, ಕೆಲವು ವಿಭಾಗಗಳು ಸಂಪರ್ಕದ ಕೊರತೆಯಿಂದಾಗಿ ಹಿಂದುಳಿದಿವೆ. ಹಿಂದೂ ಸಮಾಜದ ಎಲ್ಲಾ ವಿಭಾಗಗಳನ್ನು ಸಮಗ್ರವಾಗಿ ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ. ಆಗಾಗ್ಗೆ ನಡೆಯುವ ಇಂತಹ ಸಭೆಗಳು ಈ ಪ್ರಯತ್ನವನ್ನು ಸುಗಮಗೊಳಿಸುತ್ತದೆ. ಇದನ್ನೇ ನಾವು ಸೌಹಾರ್ದತೆ ಎಂದು ಕರೆಯುತ್ತೇವೆ. ಸಂಘವು ಈ ಕೆಲಸ ಮಾಡಲು ಪ್ರಯತ್ನಿಸುತ್ತಿದೆ” ಎಂದು ಭಾಗವತ್ ಹೇಳಿದ್ದಾರೆ ಎಂದು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಇದನ್ನೂ ಓದಿರಿ: ಸುಗ್ರೀವಾಜ್ಞೆ ಮೂಲಕ ವಿವಾದಾತ್ಮಕ ‘ಮತಾಂತರ ವಿರೋಧಿ ಮಸೂದೆ’ ಅಂಗೀಕರಿಸಿದ ರಾಜ್ಯ ಸರ್ಕಾರ

ಮತಾಂತರ ತಡೆ ಹುನ್ನಾರದ ಸುತ್ತ ‘ಆರ್‌ಎಸ್‌ಎಸ್‌ ಆಳ ಮತ್ತು ಅಗಲ’

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಬರೆದಿರುವ ‘ಆರ್‌ಎಸ್‌ಎಸ್‌ ಆಳ ಮತ್ತು ಅಗಲ’ ಕೃತಿಯಲ್ಲಿ ‘ಮತಾಂತರ ತಡೆ ಕಾಯ್ದೆ’ಯ ಹುನ್ನಾರದ ಕುರಿತು ವಿಶೇಷವಾಗಿ ಚರ್ಚಿಸಲಾಗಿದೆ. ಈಗ ಭಾರೀ ಚರ್ಚೆಯಲ್ಲಿರುವ ಈ ಕೃತಿಯು, “ಆರ್‌ಎಸ್‌ಎಸ್‌ ಹೇಗೆ ಜಾತಿ ವ್ಯವಸ್ಥೆಯನ್ನು ಪೋಷಿಸುತ್ತದೆ” ಎಂದು ವಿವರಿಸಿದೆ.

“ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣೆ ಹೆಸರಿನಲ್ಲಿ ಜಾರಿಗೊಳಿಸಬೇಕೆಂದಿರುವ ಕಾಯ್ದೆಯಲ್ಲಿ ಸರ್ಕಾರ ಏನೆಲ್ಲ ಅಡೆತಡೆಗಳನ್ನು ಹಾಕಿದೆ ಎಂದರೆ, ಮತಾಂತರವಾಗಲು ಬಯಸುವ ವ್ಯಕ್ತಿ ಏಳು ಕೆರೆ ನೀರು ಕುಡಿಯಬೇಕಾಗುತ್ತದೆ. ಮತಾಂತರವಾಗಲು ಬಯಸುವವರು ಕನಿಷ್ಠ 30 ದಿವಸಗಳ ಮುಂಚಿತವಾಗಿ ಜಿಲ್ಲಾ ದಂಡಾಧಿಕಾರಿಯವರಿಗೆ ‘ನಮೂನೆ-I’ರಲ್ಲಿ ಘೋಷಣೆ ಮಾಡಬೇಕಂತೆ. ಮತಾಂತರದ ವಿಧಿ-ವಿಧಾನಗಳನ್ನು ನೆರವೇರಿಸುವ ಧಾರ್ಮಿಕ ಮುಖಂಡರು ಕೂಡ ‘ನಮೂನೆ-II’ರಲ್ಲಿ ನೋಟೀಸ್ ನೀಡಬೇಕಂತೆ. ಆ ಮೇಲೆ ಆಕ್ಷೇಪಣೆಗಳನ್ನೂ ಆಹ್ವಾನಿಸುತ್ತಾರೆ. ಯಾರಾದರೂ ನೆಂಟರಿಷ್ಟರು, ನೆರೆಹೊರೆಯವರು, ಸಹೋದ್ಯೋಗಿಗಳು ಆಕ್ಷೇಪಣೆ ಸಲ್ಲಿಸಬಹುದಂತೆ! ಇದೇನು ವಿಚಿತ್ರ? ಬಲವಂತವಾಗಿ ಆಮಿಷ ತೋರಿಸಿ ಮತಾಂತರವಾಗಿದ್ದರೆ ಅದಕ್ಕೆ ಆಕ್ಷೇಪಣೆ ಸಲ್ಲಿಸಬೇಕಾದವರು, ಯಾರು ಮತಾಂತರಗೊಂಡಿರುವರೋ ಅವರು ಮಾತ್ರವೇ ಅಲ್ಲವೇ? ಈ ಸರ್ಕಾರ ಜನರ ಜೀವನದ ಜೊತೆ ಹಾಗೂ ಭಾರತದ ಸಂವಿಧಾನದ ಜೊತೆ ಚೆಲ್ಲಾಟವಾಡುತ್ತಿದೆಯೇ ಹೇಗೆ?” ಎಂದು ದೇವನೂರರು ತಮ್ಮ ಕೃತಿಯಲ್ಲಿ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ದಲಿತ ಮಠಗಳ ಒಂದರ ಕೆಲಸ ಅಲ್ಲಾ ಇದು ,ಎಲ್ಲಾ ಮಠಗಳ ಮಠಾದೀಶರ ಕೆಲಸ ,ಹಿಂದೆ ಮಠಾದೀಶರನ್ನ ಗೌರವದಿಂದ ಕಾಣುವ ರೀತಿ ಇತ್ತು ಕಾರಣ ಅವರು ಧರ್ಮ ರಕ್ಷಣೆಗೆ ಸದಾ ಸಿದ್ದರಾಗಿದ್ದರು,ಆದರೆ ಈಗ ಮಠಾದೀಶರ ಸ್ವ ಹಿತಾಸಕ್ತಿ ಕಾರಣ ಮಠಾದೀರನ್ನ ಜನರು ಸಹ ಏಕ ವಚನದಲ್ಲಿ ಮಾತಾಡೋ ಹಾಗೆ ಅವರ ಗುಣ ಸ್ವಭಾವ ಬೆಳೆದಿದೆ ,ಅದಕ್ಕೆ ಅವರೇ ಹೊಣೆಗಾರರು ಈ ರೀತಿಯ ಹೇಳಿಕೆಗಳಿಂದಾಗಿ

  2. It’s good and give and take your higher casts girls with dalits and take their boys for your girls can you do this and first?Find a permanent solution for castism in in India then all are possible.Only meeting and eating food with Dalits doesn’t work out

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...