Homeರಾಷ್ಟ್ರೀಯಶೃಂಗಸಭೆಗೆ ತೆರಳದಂತೆ ತಡೆ: ಲೆಫ್ಟಿನೆಂಟ್ ಗವರ್ನರ್‌ರನ್ನು ಧಿಕ್ಕರಿಸಿದ ಅರವಿಂದ್ ಕೇಜ್ರಿವಾಲ್!

ಶೃಂಗಸಭೆಗೆ ತೆರಳದಂತೆ ತಡೆ: ಲೆಫ್ಟಿನೆಂಟ್ ಗವರ್ನರ್‌ರನ್ನು ಧಿಕ್ಕರಿಸಿದ ಅರವಿಂದ್ ಕೇಜ್ರಿವಾಲ್!

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿದೇಶದಲ್ಲಿ ಶೃಂಗಸಭೆಯಲ್ಲಿ ಪಾಲ್ಗೊಳ್ಳದಂತೆ ರಾಜ್ಯದ ಲೆಫ್ಟಿನೆಂಟ್ ಗವರ್ನರ್‌ ವಿನಯ್ ಕುಮಾರ್‌ ಸಕ್ಸೇನಾ ಅವರು ಎರಡನೇ ಬಾರಿಗೆ ತಡೆದಿದ್ದಾರೆ. ಆದರೆ ತಾನು ಈ ಬಾರಿ ಶೃಂಗಸಭೆಯಲ್ಲಿ ಭಾಗವಹಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ.

ನಡೆಯುವ ಕಾರ್ಯಕ್ರಮವೂ ಮೇಯರ್‌ಗಳದ್ದಾಗಿದ್ದು, ಮುಖ್ಯಮಂತ್ರಿಗಳು ಅದಕ್ಕೆ ಹೋಗಬಾರದು ಎಂದು ಲೆಫ್ಟಿನೆಂಟ್ ಗವರ್ನರ್‌ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಈ ವಾದವೆ ಸರಿಯೆಂದಾದರೆ, ಪ್ರಧಾನಿ ಮೋದಿ ಅವರು ಕೂಡ ಎಲ್ಲಿಗೂ ಹೋಗಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಿದ್ದಾರೆ.

“ವಿಶ್ವ ನಗರಗಳ ಶೃಂಗಸಭೆ”ಗಾಗಿ ಕೇಜ್ರಿವಾಲ್ ಅವರನ್ನು ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಆಹ್ವಾನಿಸಿದ್ದರು. ಅವರು ಆಗಸ್ಟ್ 1 ರಂದು ನಡೆಯುವ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಮಂಜೂರಾತಿ ವಿಳಂಬವಾಗುತ್ತಿರುವುದರಿಂದ ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ‘‘ಮುಖ್ಯಮಂತ್ರಿಯೊಬ್ಬರು ಇಂತಹ ಮಹತ್ವದ ವೇದಿಕೆಗೆ ಭೇಟಿ ನೀಡುವುದನ್ನು ತಡೆಯುವುದು ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ’’ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಜಹಾಂಗೀರ್‌‌‌ಪುರಿ ಗಲಭೆ: 45 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸ್‌‌

“ಇದು ಮೇಯರ್‌ಗಳ ಕಾರ್ಯಕ್ರಮವಾಗಿದ್ದು, ಮುಖ್ಯಮಂತ್ರಿಗಳು ಅದಕ್ಕೆ ಹೋಗಬಾರದು” ಎಂದು ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ದೆಹಲಿ ಸರ್ಕಾರದ ಅನುಮತಿಗಾಗಿ ಬಂದಿರುವ ಮನವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದಕ್ಕೆ ಮತ್ತೆ ಪ್ರತ್ಯತ್ತರ ಬರೆದಿರುವ ಮುಖ್ಯಮಂತ್ರಿ, “ಸಂವಿಧಾನದ ಮೂರು ಪಟ್ಟಿಗಳಲ್ಲಿ ಉಲ್ಲೇಖಿಸಲಾದ ವಿಷಯಗಳಲ್ಲಿ ಮಾನವ ಜೀವನವನ್ನು ವಿಭಾಗಿಸಲಾಗಿಲ್ಲ. ನಮ್ಮ ದೇಶದ ಪ್ರತಿಯೊಂದು ಸಾಂವಿಧಾನಿಕ ಪ್ರಾಧಿಕಾರದ ಭೇಟಿಯನ್ನು ಆ ಪ್ರಾಧಿಕಾರದ ವ್ಯಾಪ್ತಿಯೊಳಗೆ ಯಾವ ವಿಷಯಗಳು ಬರುತ್ತವೆ ಎಂಬುದರ ಆಧಾರದ ಮೇಲೆ ನಿರ್ಧರಿಸಿದರೆ ಅದು ತಮಾಷೆಯ ಪರಿಸ್ಥತಿಯನ್ನು ಉಂಟು ಮಾಡುತ್ತದೆ” ಎಂದು ಹೇಳಿದ್ದಾರೆ.

“ಒಂದು ವೇಳೆ ಹಾಗೆ ನಿರ್ಧರಿಸಿದ್ದರೆ ಪ್ರಧಾನಿಯವರು ಎಲ್ಲಿಗೂ ಹೋಗಲು ಸಾಧ್ಯವಾಗುವುದಿಲ್ಲ. ಯಾಕೆಂದರೆ ಅವರ ಹೆಚ್ಚಿನ ಭೇಟಿಗಳಲ್ಲಿ ಅವರು ರಾಜ್ಯ ಪಟ್ಟಿಯಲ್ಲಿ ಬರುವ ಮತ್ತು ಅವರ ಅಧಿಕಾರ ವ್ಯಾಪ್ತಿಗೆ ಬರದ ವಿಷಯಗಳನ್ನು ಚರ್ಚಿಸುತ್ತಾರೆ” ಎಂದು ಕೇಜ್ರಿವಾಲ್ ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕಿದ ದೆಹಲಿ ಪೊಲೀಸರು!

ತಮ್ಮ ಪತ್ರದಲ್ಲಿ ಅವರು ಲೆಫ್ಟಿನೆಂಟ್ ಗವರ್ನರ್‌ಗೆ “ದಯವಿಟ್ಟು ಕೇಂದ್ರ ಸರ್ಕಾರದಿಂದ ರಾಜಕೀಯ ಅನುಮತಿಗಾಗಿ ಅರ್ಜಿ ಸಲ್ಲಿಸಿ” ಎಂದು ಸಲಹೆ ನೀಡಿದ್ದಾರೆ.

“ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ್ ಭೇಟಿಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್‌ ನಿರ್ಬಂಧಿಸಿದ ನಂತರ, ಸಿಎಂ ಈಗ ‘ರಾಜಕೀಯ ಕ್ಲಿಯರೆನ್ಸ್’ಗಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಭೇಟಿಯು ವಿಶ್ವ ನಗರಗಳ ಶೃಂಗಸಭೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡುತ್ತದೆಯಾದ್ದರಿಂದ ಕೇಂದ್ರವು ಈ ಅನುಮತಿಯನ್ನು ನೀಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಮೇಯರ್‌ಗಳ ಸಮ್ಮೇಳನವಾಗಿರುವುದರಿಂದ ಈ ಸಮಾವೇಶಕ್ಕೆ ಹಾಜರಾಗದಂತೆ ಎಲ್‌ಜಿ ಕೇಜ್ರಿವಾಲ್‌ಗೆ ಸೂಚಿಸಿದ್ದಾರೆ. ಈ ಹಿಂದೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಪ್ರಧಾನಿ ಕೂಡ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳಿಗೆ ಹೋಗುತ್ತಾರೆ. ಇದು ರಾಜಕೀಯ ಪ್ರೇರಿತ ಕೃತ್ಯವಾಗಿದೆ” ಎಂದು ಸಿಸೋಡಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ: ಭಿನ್ನ ತೀರ್ಪು ನೀಡಿದ ದೆಹಲಿ ಹೈಕೋರ್ಟ್‌‌!; ಸುಪ್ರೀಂ ಮೆಟ್ಟಿಲೇರಲಿರುವ ಅರ್ಜಿದಾರರು

2019 ರಲ್ಲಿ, ಮೇಯರ್‌ಗಳಿಗೆ ಮೀಸಲಾದ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸುವುದು ಯೋಗ್ಯವಲ್ಲ ಎಂದು ಹೇಳುವ ಮೂಲಕ ಒಕ್ಕೂಟ ಸರ್ಕಾರವೂ ಕೇಜ್ರಿವಾಲ್‌ಗೆ ಇದೇ ರೀತಿಯ ಭೇಟಿಗೆ ಅನುಮತಿಯನ್ನು ತಡೆಹಿಡಿದಿತ್ತು. ಅಂತಿಮವಾಗಿ ಕೇಜ್ರಿವಾಲ್ ಅವರು ಆನ್‌ಲೈನ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಬೇಕಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...