Homeಕರ್ನಾಟಕಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರತಿ ದಿನಕ್ಕೆ ಸುಮಾರು 600 ಕೆ.ಜಿ ಗೋಮಾಂಸ ಅಗತ್ಯವಿದ್ದರೆ, ಮೈಸೂರು ಮೃಗಾಲಯಕ್ಕೆ ಸುಮಾರು 350 ಕೆ.ಜಿ. ಗೋಮಾಂಸದ ಅಗತ್ಯವಿದೆ...

- Advertisement -
- Advertisement -

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಮತ್ತು ದನಗಳ ಸಂರಕ್ಷಣೆ ಮಸೂದೆ-2020 ವಿಧಾನ ಸಭೆಯಲ್ಲಿ ಬುಧವಾರ ಅಂಗೀಕಾರವಾಗಿದೆ. ಇದರ ಕುರಿತು ಕರ್ನಾಟಕದಲ್ಲಿನ ಮೃಗಾಲಯದ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. 1964 ರ ಗೋಹತ್ಯೆ ಕಾಯ್ದೆಯನ್ನು ಈ ಮಸೂದೆಯ ಮೂಲಕ ಪರಿಷ್ಕೃತಗೊಳಿಸಲಾಗಿದೆ.

“ಮಾಂಸಾಹಾರಿ ಪ್ರಾಣಿಗಳಿಗೆ ಗೋಮಾಂಸವನ್ನು ಸಂಗ್ರಹಿಸುವಾಗ ನಾವು ಇದೇ ರೀತಿಯ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ. ಹಾಲುಕರೆಯುವ ಹಸುಗಳನ್ನು ಸಂಗ್ರಹಿಸುತ್ತಿರಲಿಲ್ಲ. ಎಮ್ಮೆ ಮತ್ತು ಎತ್ತುಗಳ ಮಾಂಸವನ್ನು ಮಾತ್ರ ಪ್ರಾಣಿಗಳಿಗೆ ನೀಡುವುದಾಗಿ ಸಿರ್ಧರಿಸಲಾಗಿದೆ. ಇದನ್ನು ಈಗಲೂ ಅನುಸರಿಸಲಾಗುವುದು. ಆದಾಗ್ಯೂ, ಸರ್ಕಾರದಿಂದ ಮಾರ್ಗಸೂಚಿಗಾಗಿ ಕಾಯುತ್ತಿದ್ದೇವೆ” ಎಂದು ಕರ್ನಾಟಕದ ಮೃಗಾಲಯ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

ಹುಲಿಗಳು, ಸಿಂಹಗಳು ಮತ್ತು ಚಿರತೆಗಳನ್ನು ಪೋಷಿಸಲು ಪ್ರಾಣಿಸಂಗ್ರಹಾಲಯಗಳಿಗೆ ಪ್ರತಿದಿನ ದೊಡ್ಡ ಪ್ರಮಾಣದ ಗೋಮಾಂಸ ಬೇಕಾಗುತ್ತದೆ. ಎಲ್ಲಾ ಪ್ರಾಣಿಸಂಗ್ರಹಾಲಯಗಳು ವಾರದಲ್ಲಿ ಆರು ದಿನಗಳು (ಮಂಗಳವಾರ ಹೊರತುಪಡಿಸಿ) ಪ್ರಮಾಣೀಕೃತ ಪೂರೈಕೆದಾರರಿಂದ ಗೋಮಾಂಸವನ್ನು ಸಂಗ್ರಹಿಸುತ್ತವೆ. ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ದಿನಕ್ಕೆ ಸುಮಾರು 600 ಕೆ.ಜಿ ಗೋಮಾಂಸ ಅಗತ್ಯವಿದ್ದರೆ, ಮೈಸೂರು ಮೃಗಾಲಯಕ್ಕೆ ಸುಮಾರು 350 ಕೆ.ಜಿ. ಗೋಮಾಂಸದ ಅಗತ್ಯವಿದೆ.

ಇದನ್ನೂ ಓದಿ:  ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

“ಆದರೆ ಈ ಹೊಸ ಮಸೂದೆ ಕೆಲವು ತೊಡಕುಗಳಿಗೆ ಕಾರಣವಾಗಿದೆ. ಸರ್ಕಾರ ನಿಯಮಗಳನ್ನು ರೂಪಿಸುವವರೆಗೆ ನಾವು ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಉತ್ತರಿಸಲಾಗದ ಹಲವು ಪ್ರಶ್ನೆಗಳಿವೆ. ಹಾಗಾಗಿ ನಮಗೆ ಸ್ಪಷ್ಟತೆ ಬೇಕು” ಎಂದು ಅಧಿಕಾರಿ ಹೇಳಿದರು.

“ಗೋವನ್ನು ವಧಿಸ ಬೇಕಾದರೆ ಪಶುವೈದ್ಯರ ಅನುಮತಿಪಡೆಯಬೇಕು ಎನ್ನುವುದು ಕಳವಳಕಾರಿಯಾಗಿದೆ. ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಕಾರಣವಾಗಬಹುದು. ಮೃಗಾಲಯ ಪ್ರಾಧಿಕಾರ ಮತ್ತು ಪಶುಸಂಗೋಪನಾ ಇಲಾಖೆಯ ಕೆಲವು ಅಧಿಕಾರಿಗಳು ಪ್ರಮಾಣೀಕರಣದ ವಿಧಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.

ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.


ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...