Homeಕರ್ನಾಟಕಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರತಿ ದಿನಕ್ಕೆ ಸುಮಾರು 600 ಕೆ.ಜಿ ಗೋಮಾಂಸ ಅಗತ್ಯವಿದ್ದರೆ, ಮೈಸೂರು ಮೃಗಾಲಯಕ್ಕೆ ಸುಮಾರು 350 ಕೆ.ಜಿ. ಗೋಮಾಂಸದ ಅಗತ್ಯವಿದೆ...

- Advertisement -
- Advertisement -

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಮತ್ತು ದನಗಳ ಸಂರಕ್ಷಣೆ ಮಸೂದೆ-2020 ವಿಧಾನ ಸಭೆಯಲ್ಲಿ ಬುಧವಾರ ಅಂಗೀಕಾರವಾಗಿದೆ. ಇದರ ಕುರಿತು ಕರ್ನಾಟಕದಲ್ಲಿನ ಮೃಗಾಲಯದ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. 1964 ರ ಗೋಹತ್ಯೆ ಕಾಯ್ದೆಯನ್ನು ಈ ಮಸೂದೆಯ ಮೂಲಕ ಪರಿಷ್ಕೃತಗೊಳಿಸಲಾಗಿದೆ.

“ಮಾಂಸಾಹಾರಿ ಪ್ರಾಣಿಗಳಿಗೆ ಗೋಮಾಂಸವನ್ನು ಸಂಗ್ರಹಿಸುವಾಗ ನಾವು ಇದೇ ರೀತಿಯ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ. ಹಾಲುಕರೆಯುವ ಹಸುಗಳನ್ನು ಸಂಗ್ರಹಿಸುತ್ತಿರಲಿಲ್ಲ. ಎಮ್ಮೆ ಮತ್ತು ಎತ್ತುಗಳ ಮಾಂಸವನ್ನು ಮಾತ್ರ ಪ್ರಾಣಿಗಳಿಗೆ ನೀಡುವುದಾಗಿ ಸಿರ್ಧರಿಸಲಾಗಿದೆ. ಇದನ್ನು ಈಗಲೂ ಅನುಸರಿಸಲಾಗುವುದು. ಆದಾಗ್ಯೂ, ಸರ್ಕಾರದಿಂದ ಮಾರ್ಗಸೂಚಿಗಾಗಿ ಕಾಯುತ್ತಿದ್ದೇವೆ” ಎಂದು ಕರ್ನಾಟಕದ ಮೃಗಾಲಯ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

ಹುಲಿಗಳು, ಸಿಂಹಗಳು ಮತ್ತು ಚಿರತೆಗಳನ್ನು ಪೋಷಿಸಲು ಪ್ರಾಣಿಸಂಗ್ರಹಾಲಯಗಳಿಗೆ ಪ್ರತಿದಿನ ದೊಡ್ಡ ಪ್ರಮಾಣದ ಗೋಮಾಂಸ ಬೇಕಾಗುತ್ತದೆ. ಎಲ್ಲಾ ಪ್ರಾಣಿಸಂಗ್ರಹಾಲಯಗಳು ವಾರದಲ್ಲಿ ಆರು ದಿನಗಳು (ಮಂಗಳವಾರ ಹೊರತುಪಡಿಸಿ) ಪ್ರಮಾಣೀಕೃತ ಪೂರೈಕೆದಾರರಿಂದ ಗೋಮಾಂಸವನ್ನು ಸಂಗ್ರಹಿಸುತ್ತವೆ. ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ದಿನಕ್ಕೆ ಸುಮಾರು 600 ಕೆ.ಜಿ ಗೋಮಾಂಸ ಅಗತ್ಯವಿದ್ದರೆ, ಮೈಸೂರು ಮೃಗಾಲಯಕ್ಕೆ ಸುಮಾರು 350 ಕೆ.ಜಿ. ಗೋಮಾಂಸದ ಅಗತ್ಯವಿದೆ.

ಇದನ್ನೂ ಓದಿ:  ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

“ಆದರೆ ಈ ಹೊಸ ಮಸೂದೆ ಕೆಲವು ತೊಡಕುಗಳಿಗೆ ಕಾರಣವಾಗಿದೆ. ಸರ್ಕಾರ ನಿಯಮಗಳನ್ನು ರೂಪಿಸುವವರೆಗೆ ನಾವು ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಉತ್ತರಿಸಲಾಗದ ಹಲವು ಪ್ರಶ್ನೆಗಳಿವೆ. ಹಾಗಾಗಿ ನಮಗೆ ಸ್ಪಷ್ಟತೆ ಬೇಕು” ಎಂದು ಅಧಿಕಾರಿ ಹೇಳಿದರು.

“ಗೋವನ್ನು ವಧಿಸ ಬೇಕಾದರೆ ಪಶುವೈದ್ಯರ ಅನುಮತಿಪಡೆಯಬೇಕು ಎನ್ನುವುದು ಕಳವಳಕಾರಿಯಾಗಿದೆ. ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಕಾರಣವಾಗಬಹುದು. ಮೃಗಾಲಯ ಪ್ರಾಧಿಕಾರ ಮತ್ತು ಪಶುಸಂಗೋಪನಾ ಇಲಾಖೆಯ ಕೆಲವು ಅಧಿಕಾರಿಗಳು ಪ್ರಮಾಣೀಕರಣದ ವಿಧಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.

ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.


ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...