Homeಕರ್ನಾಟಕಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರತಿ ದಿನಕ್ಕೆ ಸುಮಾರು 600 ಕೆ.ಜಿ ಗೋಮಾಂಸ ಅಗತ್ಯವಿದ್ದರೆ, ಮೈಸೂರು ಮೃಗಾಲಯಕ್ಕೆ ಸುಮಾರು 350 ಕೆ.ಜಿ. ಗೋಮಾಂಸದ ಅಗತ್ಯವಿದೆ...

- Advertisement -
- Advertisement -

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಮತ್ತು ದನಗಳ ಸಂರಕ್ಷಣೆ ಮಸೂದೆ-2020 ವಿಧಾನ ಸಭೆಯಲ್ಲಿ ಬುಧವಾರ ಅಂಗೀಕಾರವಾಗಿದೆ. ಇದರ ಕುರಿತು ಕರ್ನಾಟಕದಲ್ಲಿನ ಮೃಗಾಲಯದ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. 1964 ರ ಗೋಹತ್ಯೆ ಕಾಯ್ದೆಯನ್ನು ಈ ಮಸೂದೆಯ ಮೂಲಕ ಪರಿಷ್ಕೃತಗೊಳಿಸಲಾಗಿದೆ.

“ಮಾಂಸಾಹಾರಿ ಪ್ರಾಣಿಗಳಿಗೆ ಗೋಮಾಂಸವನ್ನು ಸಂಗ್ರಹಿಸುವಾಗ ನಾವು ಇದೇ ರೀತಿಯ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ. ಹಾಲುಕರೆಯುವ ಹಸುಗಳನ್ನು ಸಂಗ್ರಹಿಸುತ್ತಿರಲಿಲ್ಲ. ಎಮ್ಮೆ ಮತ್ತು ಎತ್ತುಗಳ ಮಾಂಸವನ್ನು ಮಾತ್ರ ಪ್ರಾಣಿಗಳಿಗೆ ನೀಡುವುದಾಗಿ ಸಿರ್ಧರಿಸಲಾಗಿದೆ. ಇದನ್ನು ಈಗಲೂ ಅನುಸರಿಸಲಾಗುವುದು. ಆದಾಗ್ಯೂ, ಸರ್ಕಾರದಿಂದ ಮಾರ್ಗಸೂಚಿಗಾಗಿ ಕಾಯುತ್ತಿದ್ದೇವೆ” ಎಂದು ಕರ್ನಾಟಕದ ಮೃಗಾಲಯ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

ಹುಲಿಗಳು, ಸಿಂಹಗಳು ಮತ್ತು ಚಿರತೆಗಳನ್ನು ಪೋಷಿಸಲು ಪ್ರಾಣಿಸಂಗ್ರಹಾಲಯಗಳಿಗೆ ಪ್ರತಿದಿನ ದೊಡ್ಡ ಪ್ರಮಾಣದ ಗೋಮಾಂಸ ಬೇಕಾಗುತ್ತದೆ. ಎಲ್ಲಾ ಪ್ರಾಣಿಸಂಗ್ರಹಾಲಯಗಳು ವಾರದಲ್ಲಿ ಆರು ದಿನಗಳು (ಮಂಗಳವಾರ ಹೊರತುಪಡಿಸಿ) ಪ್ರಮಾಣೀಕೃತ ಪೂರೈಕೆದಾರರಿಂದ ಗೋಮಾಂಸವನ್ನು ಸಂಗ್ರಹಿಸುತ್ತವೆ. ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ದಿನಕ್ಕೆ ಸುಮಾರು 600 ಕೆ.ಜಿ ಗೋಮಾಂಸ ಅಗತ್ಯವಿದ್ದರೆ, ಮೈಸೂರು ಮೃಗಾಲಯಕ್ಕೆ ಸುಮಾರು 350 ಕೆ.ಜಿ. ಗೋಮಾಂಸದ ಅಗತ್ಯವಿದೆ.

ಇದನ್ನೂ ಓದಿ:  ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

“ಆದರೆ ಈ ಹೊಸ ಮಸೂದೆ ಕೆಲವು ತೊಡಕುಗಳಿಗೆ ಕಾರಣವಾಗಿದೆ. ಸರ್ಕಾರ ನಿಯಮಗಳನ್ನು ರೂಪಿಸುವವರೆಗೆ ನಾವು ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಉತ್ತರಿಸಲಾಗದ ಹಲವು ಪ್ರಶ್ನೆಗಳಿವೆ. ಹಾಗಾಗಿ ನಮಗೆ ಸ್ಪಷ್ಟತೆ ಬೇಕು” ಎಂದು ಅಧಿಕಾರಿ ಹೇಳಿದರು.

“ಗೋವನ್ನು ವಧಿಸ ಬೇಕಾದರೆ ಪಶುವೈದ್ಯರ ಅನುಮತಿಪಡೆಯಬೇಕು ಎನ್ನುವುದು ಕಳವಳಕಾರಿಯಾಗಿದೆ. ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಕಾರಣವಾಗಬಹುದು. ಮೃಗಾಲಯ ಪ್ರಾಧಿಕಾರ ಮತ್ತು ಪಶುಸಂಗೋಪನಾ ಇಲಾಖೆಯ ಕೆಲವು ಅಧಿಕಾರಿಗಳು ಪ್ರಮಾಣೀಕರಣದ ವಿಧಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.

ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.


ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...