Homeಕರ್ನಾಟಕಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ಗೋಹತ್ಯೆ ನಿಷೇಧ ಮಸೂದೆ: ಆತಂಕ ವ್ಯಕ್ತಪಡಿಸಿದ ಮೃಗಾಲಯದ ಅಧಿಕಾರಿಗಳು!

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರತಿ ದಿನಕ್ಕೆ ಸುಮಾರು 600 ಕೆ.ಜಿ ಗೋಮಾಂಸ ಅಗತ್ಯವಿದ್ದರೆ, ಮೈಸೂರು ಮೃಗಾಲಯಕ್ಕೆ ಸುಮಾರು 350 ಕೆ.ಜಿ. ಗೋಮಾಂಸದ ಅಗತ್ಯವಿದೆ...

- Advertisement -
- Advertisement -

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಮತ್ತು ದನಗಳ ಸಂರಕ್ಷಣೆ ಮಸೂದೆ-2020 ವಿಧಾನ ಸಭೆಯಲ್ಲಿ ಬುಧವಾರ ಅಂಗೀಕಾರವಾಗಿದೆ. ಇದರ ಕುರಿತು ಕರ್ನಾಟಕದಲ್ಲಿನ ಮೃಗಾಲಯದ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. 1964 ರ ಗೋಹತ್ಯೆ ಕಾಯ್ದೆಯನ್ನು ಈ ಮಸೂದೆಯ ಮೂಲಕ ಪರಿಷ್ಕೃತಗೊಳಿಸಲಾಗಿದೆ.

“ಮಾಂಸಾಹಾರಿ ಪ್ರಾಣಿಗಳಿಗೆ ಗೋಮಾಂಸವನ್ನು ಸಂಗ್ರಹಿಸುವಾಗ ನಾವು ಇದೇ ರೀತಿಯ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇವೆ. ಹಾಲುಕರೆಯುವ ಹಸುಗಳನ್ನು ಸಂಗ್ರಹಿಸುತ್ತಿರಲಿಲ್ಲ. ಎಮ್ಮೆ ಮತ್ತು ಎತ್ತುಗಳ ಮಾಂಸವನ್ನು ಮಾತ್ರ ಪ್ರಾಣಿಗಳಿಗೆ ನೀಡುವುದಾಗಿ ಸಿರ್ಧರಿಸಲಾಗಿದೆ. ಇದನ್ನು ಈಗಲೂ ಅನುಸರಿಸಲಾಗುವುದು. ಆದಾಗ್ಯೂ, ಸರ್ಕಾರದಿಂದ ಮಾರ್ಗಸೂಚಿಗಾಗಿ ಕಾಯುತ್ತಿದ್ದೇವೆ” ಎಂದು ಕರ್ನಾಟಕದ ಮೃಗಾಲಯ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ, ಲವ್ ಜಿಹಾದ್ ತಡೆ ಕಾಯ್ದೆ ತರುವುದು ನೀತಿಸಂಹಿತೆಯ ಉಲ್ಲಂಘನೆ: ಸಿದ್ದರಾಮಯ್ಯ

ಹುಲಿಗಳು, ಸಿಂಹಗಳು ಮತ್ತು ಚಿರತೆಗಳನ್ನು ಪೋಷಿಸಲು ಪ್ರಾಣಿಸಂಗ್ರಹಾಲಯಗಳಿಗೆ ಪ್ರತಿದಿನ ದೊಡ್ಡ ಪ್ರಮಾಣದ ಗೋಮಾಂಸ ಬೇಕಾಗುತ್ತದೆ. ಎಲ್ಲಾ ಪ್ರಾಣಿಸಂಗ್ರಹಾಲಯಗಳು ವಾರದಲ್ಲಿ ಆರು ದಿನಗಳು (ಮಂಗಳವಾರ ಹೊರತುಪಡಿಸಿ) ಪ್ರಮಾಣೀಕೃತ ಪೂರೈಕೆದಾರರಿಂದ ಗೋಮಾಂಸವನ್ನು ಸಂಗ್ರಹಿಸುತ್ತವೆ. ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ದಿನಕ್ಕೆ ಸುಮಾರು 600 ಕೆ.ಜಿ ಗೋಮಾಂಸ ಅಗತ್ಯವಿದ್ದರೆ, ಮೈಸೂರು ಮೃಗಾಲಯಕ್ಕೆ ಸುಮಾರು 350 ಕೆ.ಜಿ. ಗೋಮಾಂಸದ ಅಗತ್ಯವಿದೆ.

ಇದನ್ನೂ ಓದಿ:  ಉತ್ತರಪ್ರದೇಶ ಗೋಹತ್ಯೆ ನಿಷೇಧ ಕಾಯ್ದೆ ಅಮಾಯಕರನ್ನು ಸಿಲುಕಿಸಲು ಬಳಸಲಾಗುತ್ತಿದೆ: ಹೈಕೋರ್ಟ್

“ಆದರೆ ಈ ಹೊಸ ಮಸೂದೆ ಕೆಲವು ತೊಡಕುಗಳಿಗೆ ಕಾರಣವಾಗಿದೆ. ಸರ್ಕಾರ ನಿಯಮಗಳನ್ನು ರೂಪಿಸುವವರೆಗೆ ನಾವು ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಉತ್ತರಿಸಲಾಗದ ಹಲವು ಪ್ರಶ್ನೆಗಳಿವೆ. ಹಾಗಾಗಿ ನಮಗೆ ಸ್ಪಷ್ಟತೆ ಬೇಕು” ಎಂದು ಅಧಿಕಾರಿ ಹೇಳಿದರು.

“ಗೋವನ್ನು ವಧಿಸ ಬೇಕಾದರೆ ಪಶುವೈದ್ಯರ ಅನುಮತಿಪಡೆಯಬೇಕು ಎನ್ನುವುದು ಕಳವಳಕಾರಿಯಾಗಿದೆ. ಇದು ಕಾನೂನುಬಾಹಿರ ಚಟುವಟಿಕೆಗಳಿಗೆ ಕಾರಣವಾಗಬಹುದು. ಮೃಗಾಲಯ ಪ್ರಾಧಿಕಾರ ಮತ್ತು ಪಶುಸಂಗೋಪನಾ ಇಲಾಖೆಯ ಕೆಲವು ಅಧಿಕಾರಿಗಳು ಪ್ರಮಾಣೀಕರಣದ ವಿಧಾನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಗೋಮಾತೆಯ ಮೇಲೆ ಪ್ರಮಾಣ ಮಾಡಿ, ಸಚಿವರ ಬಳಿ ಆ ವಿಧೇಯಕದ ಪ್ರತಿ ಇತ್ತೇ – ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿರುವ 2020ನೆ ಸಾಲಿನ ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣಾ ವಿಧೇಯಕದ ಪ್ರಕಾರ, “13 ವರ್ಷದೊಳಗಿನ ಹಸು, ಹಸುವಿನ ಕರು ಮತ್ತು ಗೂಳಿ, ಎತ್ತು, ಎಮ್ಮೆ ಅಥವಾ ಕೋಣವನ್ನು ಹತ್ಯೆ ಮಾಡುವಂತಿಲ್ಲ. ಆದರೆ, ಸಾರ್ವಜನಿಕ ಹಿತಾಸಕ್ತಿಯಿಂದ ಅಥವಾ ಗುಣಪಡಿಸಲಾಗದಂತಹ ಕಾಯಿಲೆಯಿಂದ ಬಳಲುತ್ತಿರುವ 13 ವರ್ಷ ವಯಸ್ಸಿನ ಮೇಲ್ಪಟ್ಟ ಎಮ್ಮೆಯನ್ನು ಮಾತ್ರ ರಾಜ್ಯ ಸರಕಾರವು ಅಧಿಕೃತಗೊಳಿಸಿದ ಪಶುವೈದ್ಯಾಧಿಕಾರಿಯ ಪ್ರಮಾಣೀಕರಣದೊಂದಿಗೆ ವಧಿಸಲು ಅವಕಾಶ ಕಲ್ಪಿಸಬಹುದು.

ಇದನ್ನೂ ಓದಿ: ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ಯಾರಾದರೂ ಗೋಹತ್ಯೆ ಮಾಡಿದರೆ ಕನಿಷ್ಠ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಒಂದು ಜಾನುವಾರು ಹತ್ಯೆ ಮಾಡಿದರೆ ಕನಿಷ್ಠ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರಗೆ ದಂಡ ವಿಧಿಸಬಹುದು. ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳವರೆಗೆ ದಂಡದ ಜೊತೆಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.


ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....