Homeಮುಖಪುಟಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ನಮ್ಮ ಸರ್ಕಾರವು ಮಧ್ಯಮ ವರ್ಗದವರ ಬಗ್ಗೆ ಸಂವೇದನಾಶೀಲಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ರಾಜಸ್ಥಾನದಲ್ಲಿ ಪೆಟ್ರೋಲ್ ಒಂದು ಲೀಟರ್‌ಗೆ 100 ರೂ.ಗಳು ದಾಟಿದ್ದು, ಭಾರತದಲ್ಲಿ ಸಾರ್ವಕಾಲಿಕ ಹೆಚ್ಚಳ ಕಂಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಇಂಧನದ ಬೆಲೆ ಹೆಚ್ಚಳಕ್ಕೆ ಹಿಂದೆ ಅಧಿಕಾರದಲ್ಲಿದ್ದ ಸರ್ಕಾರದತ್ತ ಕೈ ತೋರಿಸಿದ್ದಾರೆ. ಅವರು, “ಹಿಂದಿನ ಸರ್ಕಾರಗಳು ಇಂಧನ ಆಮದು ಪ್ರಮಾಣ ತಗ್ಗಿಸುವತ್ತ ಗಮನ ನೀಡಿದ್ದರೆ ಮಧ್ಯಮ ವರ್ಗಕ್ಕೆ ಹೊರೆ ಆಗುತ್ತಿರಲಿಲ್ಲ’’ ಎಂದು ತಿಳಿಸಿದ್ದಾರೆ.

ತಮಿಳುನಾಡಿನ ತೈಲ ಮತ್ತು ಅನಿಲ ಯೋಜನೆಗಳನ್ನು ಉದ್ಘಾಟಿಸುವ ಆನ್‌ಲೈನ್ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಮೋದಿ, “2019–20 ರಲ್ಲಿ ಭಾರತಕ್ಕೆ ಅಗತ್ಯವಿದ್ದ 85% ಕ್ಕಿಂತ ಹೆಚ್ಚಿನ ಪ್ರಮಾಣದ ತೈಲವನ್ನು ಆಮದು ಮಾಡಿಕೊಳ್ಳಲಾಯಿತು, ನೈಸರ್ಗಿಕ ಅನಿಲದ ಅಗತ್ಯತೆಯ ಶೇ 53ರಷ್ಟನ್ನು ಆಮದು ಮಾಡಿಕೊಳ್ಳಲಾಯಿತು” ಎಂದು ಹೇಳಿದ್ದಾರೆ.

ಆದರೆ ಅವರು ತಮ್ಮ ಮಾತಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳ ಆಗುತ್ತಿರುವುದರ ಬಗ್ಗೆ ಮಾತನಾಡಲಿಲ್ಲ.

ಇದನ್ನೂ ಓದಿ: ದೆಹಲಿ: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ

‘‘ನಮ್ಮಷ್ಟು ವೈವಿಧ್ಯತೆ ಹೊಂದಿರುವ, ಇಷ್ಟೊಂದು ಪ್ರತಿಭೆ ಹೊಂದಿರುವ ದೇಶವು ಇಂಧನದ ಅಗತ್ಯಗಳಿಗೆ ಈ ರೀತಿಯಲ್ಲಿ ಆಮದನ್ನು ಅವಲಂಬಿಸಿರಬೇಕೆ?. ನಾನು ಯಾರನ್ನೂ ಟೀಕಿಸಲು ಬಯಸುವುದಿಲ್ಲ. ಆದರೆ, ಈ ವಿಚಾರ ಇಂಧನ ಬೆಲೆ ಹೆಚ್ಚಳದ ಹೊಣೆಯನ್ನು ಹಿಂದಿನ ಸರ್ಕಾರದ ಮೇಲೆ ಹೊರಿಸಿದ್ದಾರೆ.

“ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಸಾಮೂಹಿಕ ಪ್ರಯತ್ನದ ಅಗತ್ಯವಿದೆ. ನಮ್ಮ ಸರ್ಕಾರವು ಮಧ್ಯಮ ವರ್ಗದವರ ಬಗ್ಗೆ ಸಂವೇದನಾಶೀಲಕಾರಿಯಾಗಿದೆ. ಹಾಗಾಗಿ ದೇಶವು ಇಂದು ಎಥೆನಾಲ್ ಬಳಕೆಗೆ ಆದ್ಯತೆ ನೀಡುತ್ತಿದೆ. ಇದು ಗ್ರಾಹಕರಿಗೂ ರೈತರಿಗೂ ಸಹಾಯ ಮಾಡುತ್ತದೆ. ಇಂಧನ ಆಮದನ್ನು ತಗ್ಗಿಸಲು ದೇಶ ಯತ್ನಿಸುತ್ತಿದೆ’’ ಎಂದು ಪ್ರಧಾನಿ ಹೇಳಿದ್ದಾರೆ.

“2014 ರಿಂದ, ನಾವು ತೈಲ ಮತ್ತು ಅನಿಲ ವಲಯದಾದ್ಯಂತ ವಿವಿಧ ಸುಧಾರಣೆಗಳನ್ನು ತಂದಿದ್ದೇವೆ. ಪರಿಶೋಧನೆ ಮತ್ತು ಉತ್ಪಾದನೆ, ನೈಸರ್ಗಿಕ ಅನಿಲ ಮಾರುಕಟ್ಟೆ ಮತ್ತು ವಿತರಣೆಯನ್ನು ಒಳಗೊಂಡಿದೆ. ಹೂಡಿಕೆದಾರ ಸ್ನೇಹಿ ಕ್ರಮಗಳ ಮೂಲಕ ದೇಶೀಯ ಮತ್ತು ಅಂತರರಾಷ್ಟ್ರೀಯ ಹೂಡಿಕೆಯನ್ನು ಆಕರ್ಷಿಸುವ ಕೆಲಸ ಮಾಡುತ್ತಿದ್ದೇವೆ. ಭಾರತದ ಶಕ್ತಿಯ ಮೇಲೆ ಹೂಡಿಕೆ ಮಾಡಬೇಕೆಂದು ಜಗತ್ತಿಗೆ ಹೇಳಲು ನಾನು ಬಯಸುತ್ತೇನೆ” ಎಂದು ಮೋದಿ ಹೇಳಿದ್ದಾರೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಪೆಟ್ರೋಲ್ ಬೆಲೆಯಲ್ಲಿ 60% ದಷ್ಟು ಹಾಗೂ ಡೀಸೆಲ್ ಬೆಲೆಯಲ್ಲಿ 54% ದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ವಿವಿಧ ಸುಂಕ, ತೆರಿಗೆಗಳಿಗೆ ಪಾವತಿಯಾಗುತ್ತವೆ.

ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...